Homeಮುಖಪುಟಇದು ಪ್ರಜಾಪ್ರಭುತ್ವದ ಬೇರುಗಳ ಮೇಲಿನ ದಾಳಿ: ಕಾಶ್ಮೀರ ವಿಚಾರದಲ್ಲಿ ಮೋದಿ ಸರ್ಕಾರವನ್ನು ಟೀಕಿಸಿದ ನೊಬೆಲ್ ಪುರಸ್ಕೃತ...

ಇದು ಪ್ರಜಾಪ್ರಭುತ್ವದ ಬೇರುಗಳ ಮೇಲಿನ ದಾಳಿ: ಕಾಶ್ಮೀರ ವಿಚಾರದಲ್ಲಿ ಮೋದಿ ಸರ್ಕಾರವನ್ನು ಟೀಕಿಸಿದ ನೊಬೆಲ್ ಪುರಸ್ಕೃತ ಅಮರ್ತ್ಯಸೇನ್

ಪ್ರಜಾಪ್ರಭುತ್ವದ ಹೊರತಾಗಿ ಬೇರಾವುದೆ ಮಾರ್ಗದಿಂದ ನಾವು ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವೇ ಇಲ್ಲವೆನ್ನುವುದು ನನ್ನ ನಂಬಿಕೆ ಎಂದ ಅಮರ್ತ್ಯ ಸೇನ್

- Advertisement -
- Advertisement -

ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ತ್ಯಸೇನ್‌ರು ಜಮ್ಮು-ಕಾಶ್ಮೀರವನ್ನು ಇಬ್ಬಾಗಿಸಿ ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ಕಟುವಾಗಿ ಟೀಕಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಪ್ರಜಾಪ್ರಭುತ್ವದ ಹೊರತಾಗಿ ಬೇರಾವುದೆ ಮಾರ್ಗದಿಂದ ನಾವು ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವೇ ಇಲ್ಲವೆನ್ನುವುದು ನನ್ನ ನಂಬಿಕೆ ಎಂದಿರುವ 85 ವಯಸ್ಸಿನ ಈ ಅನುಭವಿ ಆರ್ಥಿಕ ತಜ್ಞರು ಮಾನವಹಕ್ಕುಗಳ ರಕ್ಷಣೆಗೆ ವಿರುದ್ಧವಾದ ಕ್ರಮ ಇದು ಎಂದು ಕೇಂದ್ರದ ಕ್ರಮವನ್ನು ಖಂಡಿಸಿದ್ದಾರೆ.

ಒಬ್ಬ ಭಾರತೀಯನಾಗಿ ನನಗೆ ಈ ವಿಚಾರದ ಬಗ್ಗೆ ಹೆಮ್ಮೆ ಎನಿಸುವುದಿಲ್ಲ. ಪ್ರಜಾಪ್ರಭುತ್ವವನ್ನು ಅಳವಡಿಸಿಕೊಂಡ ಮೊದಲ ಪಶ್ಚಿಮೇತ್ತರ ದೇಶ ಎಂಬ ಹೆಗ್ಗಳಿಕೆಯೊಂದಿಗೆ, ಪ್ರಜಾತಾಂತ್ರಿಕ ನಡವಳಿಕೆಗಳು ಹೇಗಿರಬೇಕು ಎಂಬುದಕ್ಕೆ ಒಂದು ಮಾನದಂಡವಾಗಿ ರೂಪುಗೊಂಡಿತ್ತು ನನ್ನ ಭಾರತ. ಇದೀಗ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಈ ಕ್ರಮದಿಂದಾಗಿ ನಾವು ಆ ಘನತೆಯನ್ನೆ ಕಳೆದುಕೊಂಡಿದ್ದೇವೆ ಎಂದಿದ್ದಾರೆ ಸೇನ್. ಅದು ಕಾಶ್ಮೀರಿಗಳಿಗೆ ಸೇರಿರುವ ನೆಲದ ವಿಚಾರವಾಗಿರುವುದರಿಂದ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದಕ್ಕೆ ಕಾಶ್ಮೀರಿಗರಿಗೇ ಬಿಡಬೇಕು ಎಂಬ ಮಾತನ್ನೂ ಅವರು ಹೇಳಿದ್ದಾರೆ.

ಜೊತೆಗೆ, ಜಮ್ಮು-ಕಾಶ್ಮೀರದ ರಾಜಕೀಯ ನಾಯಕರನ್ನು ಬಂಧಿಸಿದ ಮತ್ತು ಗೃಹಬಂಧನದಲ್ಲಿರಿಸಿದ ಕೇಂದ್ರ ಸರ್ಕಾರದ ಕ್ರಮವನ್ನೂ ಅವರು ಟೀಕಿಸಿದ್ದಾರೆ. ಜನರ ಪ್ರತಿನಿಧಿಗಳೆನಿಸಿದ ಜನನಾಯಕರ ದನಿಗಳನ್ನು ಕೇಳಿಸಿಕೊಳ್ಳದೆ ನೀವು ಯಾವತ್ತಿಗೂ ನ್ಯಾಯಬದ್ಧ ತೀರ್ಮಾನಕ್ಕೆ ಬರಲಾರಿರಿ ಎಂಬುದು ನನ್ನ ದೃಢವಾದ ನಂಬಿಕೆ. ಹಿಂದೆಲ್ಲ ದೇಶವನ್ನು ಮುನ್ನಡೆಸಿದ ಹಾಗೂ ಸರ್ಕಾರಗಳನ್ನು ರಚಿಸಿದಂತಹ ನಾಯಕರುಗಳನ್ನು ನೀವು ಜೈಲಿನಲ್ಲಿ ಬಂಧಿಸಿಡುವುದರ ಅಥವಾ ಗೃಹಬಂಧನದಲ್ಲಿ ಇಡುವುದರ ಮೂಲಕ ಪ್ರಜಾಪ್ರಭುತ್ವದ ಗಟ್ಟಿಗೊಳಿಸಿದ ಬೇರುಗಳ ಮೇಲೆಯೇ ದಾಳಿ ಮಾಡಿದಂತಾಗಿದೆ ಎಂದವರು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಫರೂಕ್ ಅಬ್ದುಲ್ಲಾ ಮತ್ತು ಮೆಹಬೂಬ ಮುಫ್ತಿ ಸೇರಿದಂತೆ ಪೀಪಲ್ ಕಾನ್ಫರೆನ್ಸ್‌ನ ನಾಯಕರಾದ ಸಜದ್ ಲೋನ್, ಜಮ್ಮುಕಾಶ್ಮೀರ ಪೀಪಲ್ಸ್ ಮೂವ್‌ಮೆಂಟಿನ ನಾಯಕ ಶಾ ಫೇಸಲ್, ರಾಜ್ಯ ಕಾಂಗ್ರೆಸ್ ನಾಯಕ ಗುಲಾಂ ಅಹ್ಮದ್ ಮಿರ್ ಸೇರಿದಂತೆ ಹಲವಾರು ರಾಜಕೀಯ ನಾಯಕರುಗಳನ್ನು ಗೃಹಬಂಧನದಲ್ಲಿ ಇರಿಸಲಾಗಿದೆ.

ತನ್ನ ನಿರ್ಧಾರದ ವಿರುದ್ಧ ಭುಗಿಲೇಳಲಿದ್ದ ಪ್ರತಿಭಟನೆ ಮತ್ತು ಅದರಿಂದ ಉಂಟಾಗಲಿದ್ದ ಜೀವಹಾನಿ ಹಾಗು ಆಸ್ತಿಪಾಸ್ತಿ ನಷ್ಟವನ್ನು ತಪ್ಪಿಸುವ ಸಲುವಾಗಿ ಇಡೀ ರಾಜ್ಯವನ್ನು ಬೃಹತ್ ಸೇನಾ ಹೊದಿಕೆಯಡಿ ಮುಚ್ಚಿಹಾಕಿರುವ ಕೇಂದ್ರದ ಕ್ರಮವನ್ನು ಸೇನ್‌ರವರು ವಸಾಹತುಶಾಹಿ ಪ್ರಮಾದ ಎಂದು ಕರೆದಿದ್ದಾರೆ. ಬ್ರಿಟಿಷರು ಇನ್ನೂರು ವರ್ಷ ಭಾರತವನ್ನು ಆಳಿದ್ದು ಹೀಗೇ ಅಲ್ಲವೇ ಎಂದಿದ್ದಾರೆ.

ಇದನ್ನೂ ಓದಿ: ಓಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಮತ್ತು ಶಾ ಫೈಸಲ್ ಬಂಧನದ ಹಿಂದಿನ ನಿಜ ಕಾರಣಗಳೇನು ಗೊತ್ತೆ?

ಆಗಸ್ಟ್ ೫ರಂದು ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿ, ಅದನ್ನು ಜಮ್ಮು-ಕಾಶ್ಮೀರ ಹಾಗೂ ಲಡಾಕ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತ್ತು. ಸಂಸತ್ತಿನಲ್ಲಿ ಎಂಟು ಪಕ್ಷಗಳು ಸರ್ಕಾರದ ಈ ನಡೆಯನ್ನು ವಿರೋಧಿಸಿದ್ದವು. ಆದಾಗ್ಯೂ ಕಾಂಗ್ರೆಸ್ ನಾಯಕರುಗಳಾದ ಜ್ಯೋತಿರಾದಿತ್ಯ ಸಿಂಧಿಯಾ, ಜನಾರ್ಧನ್ ದ್ವಿವೇದಿ, ಕರಣ್ ಸಿಂಗ್, ಜೈವೀರ್ ಶೆರ್ಗಿಲ್, ಮಿಲಿಂದ್ ದಿಯೋರಾ, ಅದಿತಿ ಸಿಂಗ್ ಮತ್ತು ಭುಬನೇಶ್ವರ್ ಕಲಿತಾ ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...