Homeಮುಖಪುಟ'ಬಡ ಜನರ ಮತದಾನದ ಹಕ್ಕು ಕಿತ್ತುಕೊಳ್ಳುವ ಅಪಾಯವಿದೆ': ಬಿಹಾರದ ಎಸ್‌ಐಆರ್ ಕುರಿತು ಅಮರ್ತ್ಯ ಸೇನ್ ಕಳವಳ

‘ಬಡ ಜನರ ಮತದಾನದ ಹಕ್ಕು ಕಿತ್ತುಕೊಳ್ಳುವ ಅಪಾಯವಿದೆ’: ಬಿಹಾರದ ಎಸ್‌ಐಆರ್ ಕುರಿತು ಅಮರ್ತ್ಯ ಸೇನ್ ಕಳವಳ

- Advertisement -
- Advertisement -

ಬಿಹಾರದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಕಳವಳ ವ್ಯಕ್ತಪಡಿಸಿದ್ದು, ಈ ಪ್ರಕ್ರಿಯೆಯನ್ನು ಸೂಕ್ಷ್ಮವಾಗಿ ನಿರ್ವಹಿಸದಿದ್ದರೆ, ಹೆಚ್ಚಿನ ಸಂಖ್ಯೆಯ ಬಡವರು ಮತ್ತು ಅಂಚಿನಲ್ಲಿರುವ ಜನರು ‘ಮತದಾನದಿಂದ ವಂಚಿತರಾಗುವ’ ಸಾಧ್ಯತೆಯಿದೆ ಎಂದು ಎಚ್ಚರಿಸಿದ್ದಾರೆ.

ನಾಗರಿಕರು ಒದಗಿಸಲು ಸಾಧ್ಯವಾಗದ ದಾಖಲೆಗಳನ್ನು ಕೇಳಿರುವ ಆಡಳಿತ ವ್ಯವಸ್ಥೆಯ ಪ್ರಕ್ರಿಯೆಯ ನ್ಯಾಯಸಮ್ಮತತೆಯನ್ನು ಸೇನ್ ಪ್ರಶ್ನಿಸಿದ್ದಾರೆ.

ಆಡಳಿತಾತ್ಮಕ ಪ್ರಕ್ರಿಯೆಗಳು ಮತ್ತು ಆವರ್ತಕ ಪರಿಷ್ಕರಣೆಗಳು ಅಗತ್ಯ, ಆದರೆ ಇವು ಮೂಲಭೂತ ಹಕ್ಕುಗಳನ್ನು ಬಲಿಕೊಡಬಾರದು ಎಂದು ಅವರು ಹೇಳಿದ್ದಾರೆ.

“ಹೌದು, ಕಾಲಕಾಲಕ್ಕೆ ವಿವಿಧ ಕಾರ್ಯವಿಧಾನದ ಕೆಲಸಗಳನ್ನು ನಿರ್ವಹಿಸಬೇಕಾಗುತ್ತದೆ ಎಂಬುದು ನಿಜ. ಆದರೆ, ಬಡವರ ಹಕ್ಕುಗಳನ್ನು ತುಳಿದು ‘ಉತ್ತಮ ವ್ಯವಸ್ಥೆ’ಯನ್ನು ರಚಿಸಲು ಸಾಧ್ಯವಿಲ್ಲ” ಎಂದು ಸೇನ್ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡುವಾಗ ಹೇಳಿದ್ದಾರೆ.

ನ್ಯಾಯಯುತ ಮತ್ತು ಎಲ್ಲರನ್ನೂ ಒಳಗೊಳ್ಳುವ ವಿಧಾನದ ಮಹತ್ವವನ್ನು ಒತ್ತಿ ಹೇಳಿದ ಸೇನ್, “ಅನೇಕ ಜನರು ಇನ್ನೂ ಸರಿಯಾದ ದಾಖಲೆಗಳನ್ನು ಹೊಂದಿಲ್ಲ. ಹೀಗಿರುವಾಗ ಇಂತಹ ಕಠಿಣ ಪರಿಷ್ಕರಣೆಗಳು  ಚುನಾವಣಾ ಪ್ರಕ್ರಿಯೆಯಿಂದ ಆ ಜನರನ್ನು ಹೊರಗಿಡುತ್ತದೆ ಎಂದು ಸೇನ್ ತಿಳಿಸಿದ್ದಾರೆ.

“ಹಲವರ ಬಳಿ ದಾಖಲೆಗಳಿಲ್ಲ. ಹಲವರಿಗೆ ಮತ ಚಲಾಯಿಸಲು ಸಾಧ್ಯವಿಲ್ಲ. ಸ್ವಲ್ಪ ಸುಧಾರಿಸುವ ಹೆಸರಿನಲ್ಲಿ ಹಲವರಿಗೆ ಹಾನಿಯಾದರೆ, ಅದು ಗಂಭೀರ ತಪ್ಪಾಗುತ್ತದೆ” ಎಂದಿರುವ ಸೇನ್, “ಒಂದನ್ನು ಸರಿಪಡಿಸಲು ನೀವು ಏಳು ಹೊಸ ತಪ್ಪುಗಳನ್ನು ಸಮರ್ಥಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಸಾಕಷ್ಟು ಸುರಕ್ಷತಾ ಕ್ರಮಗಳಿಲ್ಲದೆ ಮಾಡುವ ಎಸ್‌ಐಆರ್, ಅರ್ಹ ಮತದಾರರನ್ನು ಪಟ್ಟಿಯಿಂದ ತೆಗೆದು ಹಾಕಲು ಕಾರಣವಾಗಬಹುದು ಎಂಬ ಕಳವಳಿಗೆ ಸೇನ್ ಧ್ವನಿಗೂಡಿಸಿದ್ದು, ಇದು ಪ್ರಜಾಪ್ರಭುತ್ವ ಭಾಗವಹಿಸುವಿಕೆಯ ಅಡಿಪಾಯವನ್ನೇ ಅಲುಗಾಡಿಸುತ್ತದೆ ಎಂದಿದ್ದಾರೆ.

“ನ್ಯಾಯಯುತ ವ್ಯವಸ್ಥೆಯು ಯಾವಾಗಲೂ ಹೆಚ್ಚು ದುರ್ಬಲರಾಗಿರುವವರನ್ನು ರಕ್ಷಿಸಬೇಕು. ಜನರ ಹಕ್ಕುಗಳನ್ನು ಕಿತ್ತುಕೊಳ್ಳುವಂತಿರಬಾರದು” ಎಂದು ಸೇನ್ ಹೇಳಿದ್ದಾರೆ.

“ಭಾರತದ ಯುವಜನರು: ಅವರಿಗೆ ಇರಬೇಕಾದ ಸಾಮಾಜಿಕ ಅವಕಾಶಗಳು” ಎಂಬ ವಿಷಯದ ಕುರಿತು ಸಾರ್ವಜನಿಕ ಚರ್ಚೆಯಲ್ಲಿ ಸೇನ್ ಮಾತನಾಡಿದ್ದಿ, ಕಾರ್ಯಕ್ರಮದಲ್ಲಿ ಅವರು ಪದವಿಪೂರ್ವ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಗುಂಪಿನೊಂದಿಗೆ ಸಂವಾದ ನಡೆಸಿದ್ದಾರೆ.

ಸಂವಾದದಲ್ಲಿ 91 ವರ್ಷದ ಸೇನ್ ಅವರು ಭಾರತವು ನಿಷ್ಕ್ರಿಯ ಸಹಿಷ್ಣುತೆಯನ್ನು ಮೀರಿ ಸಕ್ರಿಯ ಕೋಮು ಸಹಕಾರದ ಕಡೆಗೆ ಸಾಗುವ ತುರ್ತು ಅಗತ್ಯವನ್ನು ಒತ್ತಿ ಹೇಳಿದ್ದಾರೆ. ಇದನ್ನು ಅವರು “ಯುಕ್ತ ಸಾಧನ” ಅಥವಾ “ಜಂಟಿ ಅಭ್ಯಾಸ” ಎಂದು ಬಣ್ಣಿಸಿದ್ದಾರೆ.

ಐತಿಹಾಸಿಕ ಪೂರ್ವನಿದರ್ಶನಗಳನ್ನು ಉಲ್ಲೇಖಿಸಿದ ಅವರು, ಮೊಘಲ್ ಚಕ್ರವರ್ತಿ ಷಹಜಹಾನ್‌ ಅವರ  ಹಿರಿಯ ಮಗ ದಾರಾ ಶಿಕೋಹ್ ಅವರ ಕೊಡುಗೆಗಳನ್ನು ಕೊಂಡಾಡಿದ್ದು, ಶಿಕೋಹ್ ಅವರು ಐವತ್ತು ಉಪನಿಷತ್ತುಗಳನ್ನು ಸಂಸ್ಕೃತದಿಂದ ಪರ್ಷಿಯನ್ ಭಾಷೆಗೆ ಅನುವಾದಿಸಿದ್ದಾರೆ ಎಂದಿದ್ದಾರೆ.

ಈ ಮಹತ್ವದ ಕೃತಿಯು ಹಿಂದೂ ತತ್ವಶಾಸ್ತ್ರವನ್ನು ಜಾಗತೀಕರಣಗೊಳಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದೆ ಮತ್ತು ಜರ್ಮನ್‌ನಂತಹ ಭಾಷೆಗಳಿಗೆ ನಂತರದ ಅನುವಾದಗಳಿಗೆ ಆಧಾರವಾಗಿದೆ ಎಂದು ಅಮರ್ತ್ಯ ಸೇನ್ ಹೇಳಿದ್ದಾರೆ.

ರೂ. 2000 ಕೋಟಿ ಬ್ಯಾಂಕ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಮನೆ ಮೇಲೆ ಸಿಬಿಐ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...