Homeಮುಖಪುಟ'ಬಡ ಜನರ ಮತದಾನದ ಹಕ್ಕು ಕಿತ್ತುಕೊಳ್ಳುವ ಅಪಾಯವಿದೆ': ಬಿಹಾರದ ಎಸ್‌ಐಆರ್ ಕುರಿತು ಅಮರ್ತ್ಯ ಸೇನ್ ಕಳವಳ

‘ಬಡ ಜನರ ಮತದಾನದ ಹಕ್ಕು ಕಿತ್ತುಕೊಳ್ಳುವ ಅಪಾಯವಿದೆ’: ಬಿಹಾರದ ಎಸ್‌ಐಆರ್ ಕುರಿತು ಅಮರ್ತ್ಯ ಸೇನ್ ಕಳವಳ

- Advertisement -
- Advertisement -

ಬಿಹಾರದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಕಳವಳ ವ್ಯಕ್ತಪಡಿಸಿದ್ದು, ಈ ಪ್ರಕ್ರಿಯೆಯನ್ನು ಸೂಕ್ಷ್ಮವಾಗಿ ನಿರ್ವಹಿಸದಿದ್ದರೆ, ಹೆಚ್ಚಿನ ಸಂಖ್ಯೆಯ ಬಡವರು ಮತ್ತು ಅಂಚಿನಲ್ಲಿರುವ ಜನರು ‘ಮತದಾನದಿಂದ ವಂಚಿತರಾಗುವ’ ಸಾಧ್ಯತೆಯಿದೆ ಎಂದು ಎಚ್ಚರಿಸಿದ್ದಾರೆ.

ನಾಗರಿಕರು ಒದಗಿಸಲು ಸಾಧ್ಯವಾಗದ ದಾಖಲೆಗಳನ್ನು ಕೇಳಿರುವ ಆಡಳಿತ ವ್ಯವಸ್ಥೆಯ ಪ್ರಕ್ರಿಯೆಯ ನ್ಯಾಯಸಮ್ಮತತೆಯನ್ನು ಸೇನ್ ಪ್ರಶ್ನಿಸಿದ್ದಾರೆ.

ಆಡಳಿತಾತ್ಮಕ ಪ್ರಕ್ರಿಯೆಗಳು ಮತ್ತು ಆವರ್ತಕ ಪರಿಷ್ಕರಣೆಗಳು ಅಗತ್ಯ, ಆದರೆ ಇವು ಮೂಲಭೂತ ಹಕ್ಕುಗಳನ್ನು ಬಲಿಕೊಡಬಾರದು ಎಂದು ಅವರು ಹೇಳಿದ್ದಾರೆ.

“ಹೌದು, ಕಾಲಕಾಲಕ್ಕೆ ವಿವಿಧ ಕಾರ್ಯವಿಧಾನದ ಕೆಲಸಗಳನ್ನು ನಿರ್ವಹಿಸಬೇಕಾಗುತ್ತದೆ ಎಂಬುದು ನಿಜ. ಆದರೆ, ಬಡವರ ಹಕ್ಕುಗಳನ್ನು ತುಳಿದು ‘ಉತ್ತಮ ವ್ಯವಸ್ಥೆ’ಯನ್ನು ರಚಿಸಲು ಸಾಧ್ಯವಿಲ್ಲ” ಎಂದು ಸೇನ್ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡುವಾಗ ಹೇಳಿದ್ದಾರೆ.

ನ್ಯಾಯಯುತ ಮತ್ತು ಎಲ್ಲರನ್ನೂ ಒಳಗೊಳ್ಳುವ ವಿಧಾನದ ಮಹತ್ವವನ್ನು ಒತ್ತಿ ಹೇಳಿದ ಸೇನ್, “ಅನೇಕ ಜನರು ಇನ್ನೂ ಸರಿಯಾದ ದಾಖಲೆಗಳನ್ನು ಹೊಂದಿಲ್ಲ. ಹೀಗಿರುವಾಗ ಇಂತಹ ಕಠಿಣ ಪರಿಷ್ಕರಣೆಗಳು  ಚುನಾವಣಾ ಪ್ರಕ್ರಿಯೆಯಿಂದ ಆ ಜನರನ್ನು ಹೊರಗಿಡುತ್ತದೆ ಎಂದು ಸೇನ್ ತಿಳಿಸಿದ್ದಾರೆ.

“ಹಲವರ ಬಳಿ ದಾಖಲೆಗಳಿಲ್ಲ. ಹಲವರಿಗೆ ಮತ ಚಲಾಯಿಸಲು ಸಾಧ್ಯವಿಲ್ಲ. ಸ್ವಲ್ಪ ಸುಧಾರಿಸುವ ಹೆಸರಿನಲ್ಲಿ ಹಲವರಿಗೆ ಹಾನಿಯಾದರೆ, ಅದು ಗಂಭೀರ ತಪ್ಪಾಗುತ್ತದೆ” ಎಂದಿರುವ ಸೇನ್, “ಒಂದನ್ನು ಸರಿಪಡಿಸಲು ನೀವು ಏಳು ಹೊಸ ತಪ್ಪುಗಳನ್ನು ಸಮರ್ಥಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಸಾಕಷ್ಟು ಸುರಕ್ಷತಾ ಕ್ರಮಗಳಿಲ್ಲದೆ ಮಾಡುವ ಎಸ್‌ಐಆರ್, ಅರ್ಹ ಮತದಾರರನ್ನು ಪಟ್ಟಿಯಿಂದ ತೆಗೆದು ಹಾಕಲು ಕಾರಣವಾಗಬಹುದು ಎಂಬ ಕಳವಳಿಗೆ ಸೇನ್ ಧ್ವನಿಗೂಡಿಸಿದ್ದು, ಇದು ಪ್ರಜಾಪ್ರಭುತ್ವ ಭಾಗವಹಿಸುವಿಕೆಯ ಅಡಿಪಾಯವನ್ನೇ ಅಲುಗಾಡಿಸುತ್ತದೆ ಎಂದಿದ್ದಾರೆ.

“ನ್ಯಾಯಯುತ ವ್ಯವಸ್ಥೆಯು ಯಾವಾಗಲೂ ಹೆಚ್ಚು ದುರ್ಬಲರಾಗಿರುವವರನ್ನು ರಕ್ಷಿಸಬೇಕು. ಜನರ ಹಕ್ಕುಗಳನ್ನು ಕಿತ್ತುಕೊಳ್ಳುವಂತಿರಬಾರದು” ಎಂದು ಸೇನ್ ಹೇಳಿದ್ದಾರೆ.

“ಭಾರತದ ಯುವಜನರು: ಅವರಿಗೆ ಇರಬೇಕಾದ ಸಾಮಾಜಿಕ ಅವಕಾಶಗಳು” ಎಂಬ ವಿಷಯದ ಕುರಿತು ಸಾರ್ವಜನಿಕ ಚರ್ಚೆಯಲ್ಲಿ ಸೇನ್ ಮಾತನಾಡಿದ್ದಿ, ಕಾರ್ಯಕ್ರಮದಲ್ಲಿ ಅವರು ಪದವಿಪೂರ್ವ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಗುಂಪಿನೊಂದಿಗೆ ಸಂವಾದ ನಡೆಸಿದ್ದಾರೆ.

ಸಂವಾದದಲ್ಲಿ 91 ವರ್ಷದ ಸೇನ್ ಅವರು ಭಾರತವು ನಿಷ್ಕ್ರಿಯ ಸಹಿಷ್ಣುತೆಯನ್ನು ಮೀರಿ ಸಕ್ರಿಯ ಕೋಮು ಸಹಕಾರದ ಕಡೆಗೆ ಸಾಗುವ ತುರ್ತು ಅಗತ್ಯವನ್ನು ಒತ್ತಿ ಹೇಳಿದ್ದಾರೆ. ಇದನ್ನು ಅವರು “ಯುಕ್ತ ಸಾಧನ” ಅಥವಾ “ಜಂಟಿ ಅಭ್ಯಾಸ” ಎಂದು ಬಣ್ಣಿಸಿದ್ದಾರೆ.

ಐತಿಹಾಸಿಕ ಪೂರ್ವನಿದರ್ಶನಗಳನ್ನು ಉಲ್ಲೇಖಿಸಿದ ಅವರು, ಮೊಘಲ್ ಚಕ್ರವರ್ತಿ ಷಹಜಹಾನ್‌ ಅವರ  ಹಿರಿಯ ಮಗ ದಾರಾ ಶಿಕೋಹ್ ಅವರ ಕೊಡುಗೆಗಳನ್ನು ಕೊಂಡಾಡಿದ್ದು, ಶಿಕೋಹ್ ಅವರು ಐವತ್ತು ಉಪನಿಷತ್ತುಗಳನ್ನು ಸಂಸ್ಕೃತದಿಂದ ಪರ್ಷಿಯನ್ ಭಾಷೆಗೆ ಅನುವಾದಿಸಿದ್ದಾರೆ ಎಂದಿದ್ದಾರೆ.

ಈ ಮಹತ್ವದ ಕೃತಿಯು ಹಿಂದೂ ತತ್ವಶಾಸ್ತ್ರವನ್ನು ಜಾಗತೀಕರಣಗೊಳಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದೆ ಮತ್ತು ಜರ್ಮನ್‌ನಂತಹ ಭಾಷೆಗಳಿಗೆ ನಂತರದ ಅನುವಾದಗಳಿಗೆ ಆಧಾರವಾಗಿದೆ ಎಂದು ಅಮರ್ತ್ಯ ಸೇನ್ ಹೇಳಿದ್ದಾರೆ.

ರೂ. 2000 ಕೋಟಿ ಬ್ಯಾಂಕ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಮನೆ ಮೇಲೆ ಸಿಬಿಐ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...