Homeಕರೋನಾ ತಲ್ಲಣಕೊರೊನಾ ಸಂಕಷ್ಟದಲ್ಲೂ ವಸ್ತುಗಳ ಬೆಲೆ ಏರಿಸಿದ್ದ ಅಮೆಜಾನ್‌!

ಕೊರೊನಾ ಸಂಕಷ್ಟದಲ್ಲೂ ವಸ್ತುಗಳ ಬೆಲೆ ಏರಿಸಿದ್ದ ಅಮೆಜಾನ್‌!

ಕೊರೊನಾ ಸಮಯದಲ್ಲಿ ಅಮೆಜಾನ್ ಉತ್ಪನ್ನಗಳ ಬೆಲೆಯು ದೇಶದ ಹಲವು ರಾಜ್ಯಗಳ ಬೆಲೆ ನಿಗದಿ ಕಾನೂನುಗಳನ್ನು ಉಲ್ಲಂಘಿಸಿದೆ ಎಂದು ಪಬ್ಲಿಕ್ ಸಿಟಿಜನ್ ವರದಿ ತೋರಿಸಿದೆ.

- Advertisement -
- Advertisement -

ಕೊರೊನಾ ಸಂಕಷ್ಟದ ಸಮಯದಲ್ಲಿ ಜನ ಸಾಮಾನ್ಯರ ಸ್ಥಿತಿ ಹೇಳತೀರದ್ದು. ಹಣಕಾಸಿನ ಪರದಾಟ, ನಿರುದ್ಯೋಗ ತಾಂಡವವಾಡುತ್ತಿದೆ. ಆದರೆ ಅಮೆಜಾನ್ ಮಾತ್ರ ಕೊರೊನಾವನ್ನು ತನ್ನ ಲಾಭಕ್ಕೆ ಬಳಸಿಕೊಂಡಿದೆ. ಅಮೆಜಾನ್ ಶಾಪಿಂಗ್‌ನಲ್ಲಿ ಟಾಯ್ಲೆಟ್ ಪೇಪರ್ ಮತ್ತು ಹ್ಯಾಂಡ್ ಸ್ಯಾನಿಟೈಸರ್ ಸೇರಿದಂತೆ ಹಲವು ಅಗತ್ಯ ವಸ್ತುಗಳನ್ನು ದುಪ್ಪಟ್ಟು ದರದಲ್ಲಿ ಮಾರಾಟ ಮಾಡಿದೆ ಎಂದು ಅಮರಿಕಾ ಮೂಲದ ಗ್ರಾಹಕ ಹಕ್ಕುಗಳ ಗುಂಪು ಪಬ್ಲಿಕ್ ಸಿಟಿಜನ್ ವರದಿ ತಿಳಿಸಿದೆ.

ಈ ವಾರ ಬಿಡುಗಡೆಯಾದ ವರದಿ ಪ್ರಕಾರ ಕೊರೊನಾ ಸಮಯದಲ್ಲಿ ಅಮೆಜಾನ್ ಉತ್ಪನ್ನಗಳ ಬೆಲೆಯು ದೇಶದ ಹಲವು ರಾಜ್ಯಗಳ ಬೆಲೆ ನಿಗದಿ ಕಾನೂನುಗಳನ್ನು ಉಲ್ಲಂಘಿಸಿದೆ ಎಂದು ತೋರಿಸಿದೆ. ಜೊತೆಗೆ ಅಮೆಜಾನ್ ನೇರವಾಗಿ ಮಾರಾಟ ಮಾಡುವ ಅಗತ್ಯ ಉತ್ಪನ್ನಗಳಲ್ಲಿಯೂ ಬೆಲೆ ಏರಿಕೆಯಾಗಿರುವ ಹಲವಾರು ಉದಾಹರಣೆಗಳಿವೆ ಎಂದಿದೆ.

ಇದನ್ನೂ ಓದಿ: KRS ಪಕ್ಷದಿಂದ ‘ಚಲಿಸು ಕರ್ನಾಟಕ’ ಅಭಿಯಾನ: 2700 ಕಿ.ಮೀ. ವಿಶೇಷ ಸೈಕಲ್ ಯಾತ್ರೆ

ಬೆಲೆ ಏರಿಕೆಯನ್ನು ತಡೆಯಲು ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಅಮೆಜಾನ್ ಹೇಳಿಕೊಂಡಿದೆ ಎಂದು ವರದಿ ತಿಳಿಸಿದೆ. ಆದರೆ ಅಮೆಜಾನ್ ನೇರವಾಗಿ ಮಾರಾಟ ಮಾಡುವ ಅಗತ್ಯ ಉತ್ಪನ್ನಗಳ ಮೇಲೆ ಬೆಲೆ ಹೆಚ್ಚಳವಾಗಿರುವುದನ್ನು ನಾವು ಗಮನಿಸಿದ್ದೇವೆ. ಜೊತೆಗೆ ಮಧ್ಯವರ್ತಿ ಮಾರಾಟಗಾರರಿಂದ ಬೆಲೆ ಏರಿಕೆಯಾಗಿದೆ ಎಂದು ವರದಿಯಲ್ಲಿದೆ.

ಪಬ್ಲಿಕ್ ಸಿಟಿಜನ್ ವರದಿ ಪ್ರಕಾರ, ಅಮೆಜಾನ್.ಕಾಂನಲ್ಲಿಇತ್ತೀಚಿನ ಬೆಲೆಗಿಂತ ಕೊರೊನಾ ಹೆಚ್ಚಿದ್ದ ಮೇ ಮತ್ತು ಆಗಸ್ಟ್ ನಡುವೆ ಬೆಲೆ ಹೆಚ್ಚಾಗಿತ್ತು. ಆ ಸಮಯದಲ್ಲಿ ಮಾರಾಟ ಮಾಡಿದ್ದ 15 ಅಗತ್ಯ ಉತ್ಪನ್ನಗಳ ಜೊತೆಗೆ ಸಮೀಕರಿಸಲಾಗಿದೆ. ಇದು ರಾಷ್ಟ್ರೀಯ ಚಿಲ್ಲರೆ ವ್ಯಾಪಾರಿಗಳ ಇತ್ತಿಚಿನ ಬೆಲೆಗಿಂತ ದುಬಾರಿಯಾಗಿದೆ. ಮೇ ಮತ್ತು ಆಗಸ್ಟ್ ನಡುವೆ ಅನೇಕ ವಸ್ತುಗಳ ಬೆಲೆಗಳು ಅನೇಕ ಪಟ್ಟು ಹೆಚ್ಚಾಗಿದೆ ಎಂದು ವರದಿ ತೋರಿಸಿದೆ.

ಇದನ್ನೂ ಓದಿ: ಕೊರೊನಾ ಲಸಿಕೆ ಮುಂದಿನ ವರ್ಷಕ್ಕೆ ಸಿದ್ಧವಾಗಬಹುದು: ಕೇಂದ್ರ ಸಚಿವ ಹರ್ಷವರ್ಧನ್

“ನಮ್ಮ ವ್ಯವಸ್ಥೆ ಗ್ರಾಹಕರಿಗೆ ಉತ್ತಮವಾದ ಆನ್‌ಲೈನ್ ಬೆಲೆಯನ್ನು ನೀಡಲು ವಿನ್ಯಾಸಗೊಳಿಸಲಾಗಿದೆ. ಆದರೆ ಯಾವುದಾದರೂ ದೋಷ ಕಂಡರೆ, ಅದನ್ನು ಸರಿಪಡಿಸಲು ನಾವು ತ್ವರಿತವಾಗಿ ಕೆಲಸ ಮಾಡುತ್ತೇವೆ” ಎಂದು ಕಂಪನಿಯ ವಕ್ತಾರರು ಪಬ್ಲಿಕ್ ಸಿಟಿಜನ್ ವರದಿಗೆ ಪ್ರತಿಕ್ರಿಯಿಸಿದ್ದಾರೆ.

ಇ-ಕಾಮರ್ಸ್ ಬೆಲೆ ಏರಿಕೆಯನ್ನು ಸಹಿಸುವುದಿಲ್ಲ. ಜೊತೆಗೆ ದಲ್ಲಾಳಿಗಳು ಸಾಂಕ್ರಾಮಿಕ ರೋಗದ ಲಾಭವನ್ನು ಪಡೆಯುವುದನ್ನು ತಡೆಯುತ್ತೇವೆ ಎಂದು ಅಮೆಜಾನ್ ಸ್ಪಷ್ಟಪಡಿಸಿದೆ.

ದಲ್ಲಾಳಿಗಳು ಅಥವಾ ಮಧ್ಯವರ್ತಿ ಮಾರಾಟಗಾರರು ಬೆಲೆ ಏರಿಕೆಯಲ್ಲಿ ತೊಡಗಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಆದರೆ ಅಮೆಜಾನ್ ತಾನೇ ಮಾರಾಟಮಾಡುವ ಅಗತ್ಯ ಉತ್ಪನ್ನಗಳ ಬೆಲೆಯನ್ನು ಗಮನಾರ್ಹ ಏರಿಕೆಯಲ್ಲಿ ಮಾರಾಟ ಮಾಡುತ್ತಿದೆ. ಇದು ಅನೇಕ ಸಂದರ್ಭಗಳಲ್ಲಿ ಇತರ ರಾಷ್ಟ್ರೀಯ ಚಿಲ್ಲರೆ ವ್ಯಾಪಾರಿಗಳಿಗಿಂತ ದುಬಾರಿ ಬೆಲೆಗೆ ಮಾರಾಟವಾಗಿದೆ ಎಂದು ಪಬ್ಲಿಕ್ ಸಿಟಿಜನ್ ವರದಿ ತಿಳಿಸಿದೆ.


ಇದನ್ನೂ ಓದಿ: ಒಂದೇ ವಾರದಲ್ಲಿ ತಮಿಳುನಾಡಿನ ಐವರು ನೀಟ್ ಆಕಾಂಕ್ಷಿಗಳ ಆತ್ಮಹತ್ಯೆ!: ವಿದ್ಯಾರ್ಥಿಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...