Homeಕರೋನಾ ತಲ್ಲಣಕೊರೊನಾ ಸಂಕಷ್ಟದಲ್ಲೂ ವಸ್ತುಗಳ ಬೆಲೆ ಏರಿಸಿದ್ದ ಅಮೆಜಾನ್‌!

ಕೊರೊನಾ ಸಂಕಷ್ಟದಲ್ಲೂ ವಸ್ತುಗಳ ಬೆಲೆ ಏರಿಸಿದ್ದ ಅಮೆಜಾನ್‌!

ಕೊರೊನಾ ಸಮಯದಲ್ಲಿ ಅಮೆಜಾನ್ ಉತ್ಪನ್ನಗಳ ಬೆಲೆಯು ದೇಶದ ಹಲವು ರಾಜ್ಯಗಳ ಬೆಲೆ ನಿಗದಿ ಕಾನೂನುಗಳನ್ನು ಉಲ್ಲಂಘಿಸಿದೆ ಎಂದು ಪಬ್ಲಿಕ್ ಸಿಟಿಜನ್ ವರದಿ ತೋರಿಸಿದೆ.

- Advertisement -
- Advertisement -

ಕೊರೊನಾ ಸಂಕಷ್ಟದ ಸಮಯದಲ್ಲಿ ಜನ ಸಾಮಾನ್ಯರ ಸ್ಥಿತಿ ಹೇಳತೀರದ್ದು. ಹಣಕಾಸಿನ ಪರದಾಟ, ನಿರುದ್ಯೋಗ ತಾಂಡವವಾಡುತ್ತಿದೆ. ಆದರೆ ಅಮೆಜಾನ್ ಮಾತ್ರ ಕೊರೊನಾವನ್ನು ತನ್ನ ಲಾಭಕ್ಕೆ ಬಳಸಿಕೊಂಡಿದೆ. ಅಮೆಜಾನ್ ಶಾಪಿಂಗ್‌ನಲ್ಲಿ ಟಾಯ್ಲೆಟ್ ಪೇಪರ್ ಮತ್ತು ಹ್ಯಾಂಡ್ ಸ್ಯಾನಿಟೈಸರ್ ಸೇರಿದಂತೆ ಹಲವು ಅಗತ್ಯ ವಸ್ತುಗಳನ್ನು ದುಪ್ಪಟ್ಟು ದರದಲ್ಲಿ ಮಾರಾಟ ಮಾಡಿದೆ ಎಂದು ಅಮರಿಕಾ ಮೂಲದ ಗ್ರಾಹಕ ಹಕ್ಕುಗಳ ಗುಂಪು ಪಬ್ಲಿಕ್ ಸಿಟಿಜನ್ ವರದಿ ತಿಳಿಸಿದೆ.

ಈ ವಾರ ಬಿಡುಗಡೆಯಾದ ವರದಿ ಪ್ರಕಾರ ಕೊರೊನಾ ಸಮಯದಲ್ಲಿ ಅಮೆಜಾನ್ ಉತ್ಪನ್ನಗಳ ಬೆಲೆಯು ದೇಶದ ಹಲವು ರಾಜ್ಯಗಳ ಬೆಲೆ ನಿಗದಿ ಕಾನೂನುಗಳನ್ನು ಉಲ್ಲಂಘಿಸಿದೆ ಎಂದು ತೋರಿಸಿದೆ. ಜೊತೆಗೆ ಅಮೆಜಾನ್ ನೇರವಾಗಿ ಮಾರಾಟ ಮಾಡುವ ಅಗತ್ಯ ಉತ್ಪನ್ನಗಳಲ್ಲಿಯೂ ಬೆಲೆ ಏರಿಕೆಯಾಗಿರುವ ಹಲವಾರು ಉದಾಹರಣೆಗಳಿವೆ ಎಂದಿದೆ.

ಇದನ್ನೂ ಓದಿ: KRS ಪಕ್ಷದಿಂದ ‘ಚಲಿಸು ಕರ್ನಾಟಕ’ ಅಭಿಯಾನ: 2700 ಕಿ.ಮೀ. ವಿಶೇಷ ಸೈಕಲ್ ಯಾತ್ರೆ

ಬೆಲೆ ಏರಿಕೆಯನ್ನು ತಡೆಯಲು ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಅಮೆಜಾನ್ ಹೇಳಿಕೊಂಡಿದೆ ಎಂದು ವರದಿ ತಿಳಿಸಿದೆ. ಆದರೆ ಅಮೆಜಾನ್ ನೇರವಾಗಿ ಮಾರಾಟ ಮಾಡುವ ಅಗತ್ಯ ಉತ್ಪನ್ನಗಳ ಮೇಲೆ ಬೆಲೆ ಹೆಚ್ಚಳವಾಗಿರುವುದನ್ನು ನಾವು ಗಮನಿಸಿದ್ದೇವೆ. ಜೊತೆಗೆ ಮಧ್ಯವರ್ತಿ ಮಾರಾಟಗಾರರಿಂದ ಬೆಲೆ ಏರಿಕೆಯಾಗಿದೆ ಎಂದು ವರದಿಯಲ್ಲಿದೆ.

ಪಬ್ಲಿಕ್ ಸಿಟಿಜನ್ ವರದಿ ಪ್ರಕಾರ, ಅಮೆಜಾನ್.ಕಾಂನಲ್ಲಿಇತ್ತೀಚಿನ ಬೆಲೆಗಿಂತ ಕೊರೊನಾ ಹೆಚ್ಚಿದ್ದ ಮೇ ಮತ್ತು ಆಗಸ್ಟ್ ನಡುವೆ ಬೆಲೆ ಹೆಚ್ಚಾಗಿತ್ತು. ಆ ಸಮಯದಲ್ಲಿ ಮಾರಾಟ ಮಾಡಿದ್ದ 15 ಅಗತ್ಯ ಉತ್ಪನ್ನಗಳ ಜೊತೆಗೆ ಸಮೀಕರಿಸಲಾಗಿದೆ. ಇದು ರಾಷ್ಟ್ರೀಯ ಚಿಲ್ಲರೆ ವ್ಯಾಪಾರಿಗಳ ಇತ್ತಿಚಿನ ಬೆಲೆಗಿಂತ ದುಬಾರಿಯಾಗಿದೆ. ಮೇ ಮತ್ತು ಆಗಸ್ಟ್ ನಡುವೆ ಅನೇಕ ವಸ್ತುಗಳ ಬೆಲೆಗಳು ಅನೇಕ ಪಟ್ಟು ಹೆಚ್ಚಾಗಿದೆ ಎಂದು ವರದಿ ತೋರಿಸಿದೆ.

ಇದನ್ನೂ ಓದಿ: ಕೊರೊನಾ ಲಸಿಕೆ ಮುಂದಿನ ವರ್ಷಕ್ಕೆ ಸಿದ್ಧವಾಗಬಹುದು: ಕೇಂದ್ರ ಸಚಿವ ಹರ್ಷವರ್ಧನ್

“ನಮ್ಮ ವ್ಯವಸ್ಥೆ ಗ್ರಾಹಕರಿಗೆ ಉತ್ತಮವಾದ ಆನ್‌ಲೈನ್ ಬೆಲೆಯನ್ನು ನೀಡಲು ವಿನ್ಯಾಸಗೊಳಿಸಲಾಗಿದೆ. ಆದರೆ ಯಾವುದಾದರೂ ದೋಷ ಕಂಡರೆ, ಅದನ್ನು ಸರಿಪಡಿಸಲು ನಾವು ತ್ವರಿತವಾಗಿ ಕೆಲಸ ಮಾಡುತ್ತೇವೆ” ಎಂದು ಕಂಪನಿಯ ವಕ್ತಾರರು ಪಬ್ಲಿಕ್ ಸಿಟಿಜನ್ ವರದಿಗೆ ಪ್ರತಿಕ್ರಿಯಿಸಿದ್ದಾರೆ.

ಇ-ಕಾಮರ್ಸ್ ಬೆಲೆ ಏರಿಕೆಯನ್ನು ಸಹಿಸುವುದಿಲ್ಲ. ಜೊತೆಗೆ ದಲ್ಲಾಳಿಗಳು ಸಾಂಕ್ರಾಮಿಕ ರೋಗದ ಲಾಭವನ್ನು ಪಡೆಯುವುದನ್ನು ತಡೆಯುತ್ತೇವೆ ಎಂದು ಅಮೆಜಾನ್ ಸ್ಪಷ್ಟಪಡಿಸಿದೆ.

ದಲ್ಲಾಳಿಗಳು ಅಥವಾ ಮಧ್ಯವರ್ತಿ ಮಾರಾಟಗಾರರು ಬೆಲೆ ಏರಿಕೆಯಲ್ಲಿ ತೊಡಗಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಆದರೆ ಅಮೆಜಾನ್ ತಾನೇ ಮಾರಾಟಮಾಡುವ ಅಗತ್ಯ ಉತ್ಪನ್ನಗಳ ಬೆಲೆಯನ್ನು ಗಮನಾರ್ಹ ಏರಿಕೆಯಲ್ಲಿ ಮಾರಾಟ ಮಾಡುತ್ತಿದೆ. ಇದು ಅನೇಕ ಸಂದರ್ಭಗಳಲ್ಲಿ ಇತರ ರಾಷ್ಟ್ರೀಯ ಚಿಲ್ಲರೆ ವ್ಯಾಪಾರಿಗಳಿಗಿಂತ ದುಬಾರಿ ಬೆಲೆಗೆ ಮಾರಾಟವಾಗಿದೆ ಎಂದು ಪಬ್ಲಿಕ್ ಸಿಟಿಜನ್ ವರದಿ ತಿಳಿಸಿದೆ.


ಇದನ್ನೂ ಓದಿ: ಒಂದೇ ವಾರದಲ್ಲಿ ತಮಿಳುನಾಡಿನ ಐವರು ನೀಟ್ ಆಕಾಂಕ್ಷಿಗಳ ಆತ್ಮಹತ್ಯೆ!: ವಿದ್ಯಾರ್ಥಿಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...