Homeಕರೋನಾ ತಲ್ಲಣಕೊರೊನಾ ಸಂಕಷ್ಟದಲ್ಲೂ ವಸ್ತುಗಳ ಬೆಲೆ ಏರಿಸಿದ್ದ ಅಮೆಜಾನ್‌!

ಕೊರೊನಾ ಸಂಕಷ್ಟದಲ್ಲೂ ವಸ್ತುಗಳ ಬೆಲೆ ಏರಿಸಿದ್ದ ಅಮೆಜಾನ್‌!

ಕೊರೊನಾ ಸಮಯದಲ್ಲಿ ಅಮೆಜಾನ್ ಉತ್ಪನ್ನಗಳ ಬೆಲೆಯು ದೇಶದ ಹಲವು ರಾಜ್ಯಗಳ ಬೆಲೆ ನಿಗದಿ ಕಾನೂನುಗಳನ್ನು ಉಲ್ಲಂಘಿಸಿದೆ ಎಂದು ಪಬ್ಲಿಕ್ ಸಿಟಿಜನ್ ವರದಿ ತೋರಿಸಿದೆ.

- Advertisement -
- Advertisement -

ಕೊರೊನಾ ಸಂಕಷ್ಟದ ಸಮಯದಲ್ಲಿ ಜನ ಸಾಮಾನ್ಯರ ಸ್ಥಿತಿ ಹೇಳತೀರದ್ದು. ಹಣಕಾಸಿನ ಪರದಾಟ, ನಿರುದ್ಯೋಗ ತಾಂಡವವಾಡುತ್ತಿದೆ. ಆದರೆ ಅಮೆಜಾನ್ ಮಾತ್ರ ಕೊರೊನಾವನ್ನು ತನ್ನ ಲಾಭಕ್ಕೆ ಬಳಸಿಕೊಂಡಿದೆ. ಅಮೆಜಾನ್ ಶಾಪಿಂಗ್‌ನಲ್ಲಿ ಟಾಯ್ಲೆಟ್ ಪೇಪರ್ ಮತ್ತು ಹ್ಯಾಂಡ್ ಸ್ಯಾನಿಟೈಸರ್ ಸೇರಿದಂತೆ ಹಲವು ಅಗತ್ಯ ವಸ್ತುಗಳನ್ನು ದುಪ್ಪಟ್ಟು ದರದಲ್ಲಿ ಮಾರಾಟ ಮಾಡಿದೆ ಎಂದು ಅಮರಿಕಾ ಮೂಲದ ಗ್ರಾಹಕ ಹಕ್ಕುಗಳ ಗುಂಪು ಪಬ್ಲಿಕ್ ಸಿಟಿಜನ್ ವರದಿ ತಿಳಿಸಿದೆ.

ಈ ವಾರ ಬಿಡುಗಡೆಯಾದ ವರದಿ ಪ್ರಕಾರ ಕೊರೊನಾ ಸಮಯದಲ್ಲಿ ಅಮೆಜಾನ್ ಉತ್ಪನ್ನಗಳ ಬೆಲೆಯು ದೇಶದ ಹಲವು ರಾಜ್ಯಗಳ ಬೆಲೆ ನಿಗದಿ ಕಾನೂನುಗಳನ್ನು ಉಲ್ಲಂಘಿಸಿದೆ ಎಂದು ತೋರಿಸಿದೆ. ಜೊತೆಗೆ ಅಮೆಜಾನ್ ನೇರವಾಗಿ ಮಾರಾಟ ಮಾಡುವ ಅಗತ್ಯ ಉತ್ಪನ್ನಗಳಲ್ಲಿಯೂ ಬೆಲೆ ಏರಿಕೆಯಾಗಿರುವ ಹಲವಾರು ಉದಾಹರಣೆಗಳಿವೆ ಎಂದಿದೆ.

ಇದನ್ನೂ ಓದಿ: KRS ಪಕ್ಷದಿಂದ ‘ಚಲಿಸು ಕರ್ನಾಟಕ’ ಅಭಿಯಾನ: 2700 ಕಿ.ಮೀ. ವಿಶೇಷ ಸೈಕಲ್ ಯಾತ್ರೆ

ಬೆಲೆ ಏರಿಕೆಯನ್ನು ತಡೆಯಲು ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಅಮೆಜಾನ್ ಹೇಳಿಕೊಂಡಿದೆ ಎಂದು ವರದಿ ತಿಳಿಸಿದೆ. ಆದರೆ ಅಮೆಜಾನ್ ನೇರವಾಗಿ ಮಾರಾಟ ಮಾಡುವ ಅಗತ್ಯ ಉತ್ಪನ್ನಗಳ ಮೇಲೆ ಬೆಲೆ ಹೆಚ್ಚಳವಾಗಿರುವುದನ್ನು ನಾವು ಗಮನಿಸಿದ್ದೇವೆ. ಜೊತೆಗೆ ಮಧ್ಯವರ್ತಿ ಮಾರಾಟಗಾರರಿಂದ ಬೆಲೆ ಏರಿಕೆಯಾಗಿದೆ ಎಂದು ವರದಿಯಲ್ಲಿದೆ.

ಪಬ್ಲಿಕ್ ಸಿಟಿಜನ್ ವರದಿ ಪ್ರಕಾರ, ಅಮೆಜಾನ್.ಕಾಂನಲ್ಲಿಇತ್ತೀಚಿನ ಬೆಲೆಗಿಂತ ಕೊರೊನಾ ಹೆಚ್ಚಿದ್ದ ಮೇ ಮತ್ತು ಆಗಸ್ಟ್ ನಡುವೆ ಬೆಲೆ ಹೆಚ್ಚಾಗಿತ್ತು. ಆ ಸಮಯದಲ್ಲಿ ಮಾರಾಟ ಮಾಡಿದ್ದ 15 ಅಗತ್ಯ ಉತ್ಪನ್ನಗಳ ಜೊತೆಗೆ ಸಮೀಕರಿಸಲಾಗಿದೆ. ಇದು ರಾಷ್ಟ್ರೀಯ ಚಿಲ್ಲರೆ ವ್ಯಾಪಾರಿಗಳ ಇತ್ತಿಚಿನ ಬೆಲೆಗಿಂತ ದುಬಾರಿಯಾಗಿದೆ. ಮೇ ಮತ್ತು ಆಗಸ್ಟ್ ನಡುವೆ ಅನೇಕ ವಸ್ತುಗಳ ಬೆಲೆಗಳು ಅನೇಕ ಪಟ್ಟು ಹೆಚ್ಚಾಗಿದೆ ಎಂದು ವರದಿ ತೋರಿಸಿದೆ.

ಇದನ್ನೂ ಓದಿ: ಕೊರೊನಾ ಲಸಿಕೆ ಮುಂದಿನ ವರ್ಷಕ್ಕೆ ಸಿದ್ಧವಾಗಬಹುದು: ಕೇಂದ್ರ ಸಚಿವ ಹರ್ಷವರ್ಧನ್

“ನಮ್ಮ ವ್ಯವಸ್ಥೆ ಗ್ರಾಹಕರಿಗೆ ಉತ್ತಮವಾದ ಆನ್‌ಲೈನ್ ಬೆಲೆಯನ್ನು ನೀಡಲು ವಿನ್ಯಾಸಗೊಳಿಸಲಾಗಿದೆ. ಆದರೆ ಯಾವುದಾದರೂ ದೋಷ ಕಂಡರೆ, ಅದನ್ನು ಸರಿಪಡಿಸಲು ನಾವು ತ್ವರಿತವಾಗಿ ಕೆಲಸ ಮಾಡುತ್ತೇವೆ” ಎಂದು ಕಂಪನಿಯ ವಕ್ತಾರರು ಪಬ್ಲಿಕ್ ಸಿಟಿಜನ್ ವರದಿಗೆ ಪ್ರತಿಕ್ರಿಯಿಸಿದ್ದಾರೆ.

ಇ-ಕಾಮರ್ಸ್ ಬೆಲೆ ಏರಿಕೆಯನ್ನು ಸಹಿಸುವುದಿಲ್ಲ. ಜೊತೆಗೆ ದಲ್ಲಾಳಿಗಳು ಸಾಂಕ್ರಾಮಿಕ ರೋಗದ ಲಾಭವನ್ನು ಪಡೆಯುವುದನ್ನು ತಡೆಯುತ್ತೇವೆ ಎಂದು ಅಮೆಜಾನ್ ಸ್ಪಷ್ಟಪಡಿಸಿದೆ.

ದಲ್ಲಾಳಿಗಳು ಅಥವಾ ಮಧ್ಯವರ್ತಿ ಮಾರಾಟಗಾರರು ಬೆಲೆ ಏರಿಕೆಯಲ್ಲಿ ತೊಡಗಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಆದರೆ ಅಮೆಜಾನ್ ತಾನೇ ಮಾರಾಟಮಾಡುವ ಅಗತ್ಯ ಉತ್ಪನ್ನಗಳ ಬೆಲೆಯನ್ನು ಗಮನಾರ್ಹ ಏರಿಕೆಯಲ್ಲಿ ಮಾರಾಟ ಮಾಡುತ್ತಿದೆ. ಇದು ಅನೇಕ ಸಂದರ್ಭಗಳಲ್ಲಿ ಇತರ ರಾಷ್ಟ್ರೀಯ ಚಿಲ್ಲರೆ ವ್ಯಾಪಾರಿಗಳಿಗಿಂತ ದುಬಾರಿ ಬೆಲೆಗೆ ಮಾರಾಟವಾಗಿದೆ ಎಂದು ಪಬ್ಲಿಕ್ ಸಿಟಿಜನ್ ವರದಿ ತಿಳಿಸಿದೆ.


ಇದನ್ನೂ ಓದಿ: ಒಂದೇ ವಾರದಲ್ಲಿ ತಮಿಳುನಾಡಿನ ಐವರು ನೀಟ್ ಆಕಾಂಕ್ಷಿಗಳ ಆತ್ಮಹತ್ಯೆ!: ವಿದ್ಯಾರ್ಥಿಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...