Homeಕರೋನಾ ತಲ್ಲಣಕೊರೊನಾ ಸಂಕಷ್ಟದಲ್ಲೂ ವಸ್ತುಗಳ ಬೆಲೆ ಏರಿಸಿದ್ದ ಅಮೆಜಾನ್‌!

ಕೊರೊನಾ ಸಂಕಷ್ಟದಲ್ಲೂ ವಸ್ತುಗಳ ಬೆಲೆ ಏರಿಸಿದ್ದ ಅಮೆಜಾನ್‌!

ಕೊರೊನಾ ಸಮಯದಲ್ಲಿ ಅಮೆಜಾನ್ ಉತ್ಪನ್ನಗಳ ಬೆಲೆಯು ದೇಶದ ಹಲವು ರಾಜ್ಯಗಳ ಬೆಲೆ ನಿಗದಿ ಕಾನೂನುಗಳನ್ನು ಉಲ್ಲಂಘಿಸಿದೆ ಎಂದು ಪಬ್ಲಿಕ್ ಸಿಟಿಜನ್ ವರದಿ ತೋರಿಸಿದೆ.

- Advertisement -
- Advertisement -

ಕೊರೊನಾ ಸಂಕಷ್ಟದ ಸಮಯದಲ್ಲಿ ಜನ ಸಾಮಾನ್ಯರ ಸ್ಥಿತಿ ಹೇಳತೀರದ್ದು. ಹಣಕಾಸಿನ ಪರದಾಟ, ನಿರುದ್ಯೋಗ ತಾಂಡವವಾಡುತ್ತಿದೆ. ಆದರೆ ಅಮೆಜಾನ್ ಮಾತ್ರ ಕೊರೊನಾವನ್ನು ತನ್ನ ಲಾಭಕ್ಕೆ ಬಳಸಿಕೊಂಡಿದೆ. ಅಮೆಜಾನ್ ಶಾಪಿಂಗ್‌ನಲ್ಲಿ ಟಾಯ್ಲೆಟ್ ಪೇಪರ್ ಮತ್ತು ಹ್ಯಾಂಡ್ ಸ್ಯಾನಿಟೈಸರ್ ಸೇರಿದಂತೆ ಹಲವು ಅಗತ್ಯ ವಸ್ತುಗಳನ್ನು ದುಪ್ಪಟ್ಟು ದರದಲ್ಲಿ ಮಾರಾಟ ಮಾಡಿದೆ ಎಂದು ಅಮರಿಕಾ ಮೂಲದ ಗ್ರಾಹಕ ಹಕ್ಕುಗಳ ಗುಂಪು ಪಬ್ಲಿಕ್ ಸಿಟಿಜನ್ ವರದಿ ತಿಳಿಸಿದೆ.

ಈ ವಾರ ಬಿಡುಗಡೆಯಾದ ವರದಿ ಪ್ರಕಾರ ಕೊರೊನಾ ಸಮಯದಲ್ಲಿ ಅಮೆಜಾನ್ ಉತ್ಪನ್ನಗಳ ಬೆಲೆಯು ದೇಶದ ಹಲವು ರಾಜ್ಯಗಳ ಬೆಲೆ ನಿಗದಿ ಕಾನೂನುಗಳನ್ನು ಉಲ್ಲಂಘಿಸಿದೆ ಎಂದು ತೋರಿಸಿದೆ. ಜೊತೆಗೆ ಅಮೆಜಾನ್ ನೇರವಾಗಿ ಮಾರಾಟ ಮಾಡುವ ಅಗತ್ಯ ಉತ್ಪನ್ನಗಳಲ್ಲಿಯೂ ಬೆಲೆ ಏರಿಕೆಯಾಗಿರುವ ಹಲವಾರು ಉದಾಹರಣೆಗಳಿವೆ ಎಂದಿದೆ.

ಇದನ್ನೂ ಓದಿ: KRS ಪಕ್ಷದಿಂದ ‘ಚಲಿಸು ಕರ್ನಾಟಕ’ ಅಭಿಯಾನ: 2700 ಕಿ.ಮೀ. ವಿಶೇಷ ಸೈಕಲ್ ಯಾತ್ರೆ

ಬೆಲೆ ಏರಿಕೆಯನ್ನು ತಡೆಯಲು ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಅಮೆಜಾನ್ ಹೇಳಿಕೊಂಡಿದೆ ಎಂದು ವರದಿ ತಿಳಿಸಿದೆ. ಆದರೆ ಅಮೆಜಾನ್ ನೇರವಾಗಿ ಮಾರಾಟ ಮಾಡುವ ಅಗತ್ಯ ಉತ್ಪನ್ನಗಳ ಮೇಲೆ ಬೆಲೆ ಹೆಚ್ಚಳವಾಗಿರುವುದನ್ನು ನಾವು ಗಮನಿಸಿದ್ದೇವೆ. ಜೊತೆಗೆ ಮಧ್ಯವರ್ತಿ ಮಾರಾಟಗಾರರಿಂದ ಬೆಲೆ ಏರಿಕೆಯಾಗಿದೆ ಎಂದು ವರದಿಯಲ್ಲಿದೆ.

ಪಬ್ಲಿಕ್ ಸಿಟಿಜನ್ ವರದಿ ಪ್ರಕಾರ, ಅಮೆಜಾನ್.ಕಾಂನಲ್ಲಿಇತ್ತೀಚಿನ ಬೆಲೆಗಿಂತ ಕೊರೊನಾ ಹೆಚ್ಚಿದ್ದ ಮೇ ಮತ್ತು ಆಗಸ್ಟ್ ನಡುವೆ ಬೆಲೆ ಹೆಚ್ಚಾಗಿತ್ತು. ಆ ಸಮಯದಲ್ಲಿ ಮಾರಾಟ ಮಾಡಿದ್ದ 15 ಅಗತ್ಯ ಉತ್ಪನ್ನಗಳ ಜೊತೆಗೆ ಸಮೀಕರಿಸಲಾಗಿದೆ. ಇದು ರಾಷ್ಟ್ರೀಯ ಚಿಲ್ಲರೆ ವ್ಯಾಪಾರಿಗಳ ಇತ್ತಿಚಿನ ಬೆಲೆಗಿಂತ ದುಬಾರಿಯಾಗಿದೆ. ಮೇ ಮತ್ತು ಆಗಸ್ಟ್ ನಡುವೆ ಅನೇಕ ವಸ್ತುಗಳ ಬೆಲೆಗಳು ಅನೇಕ ಪಟ್ಟು ಹೆಚ್ಚಾಗಿದೆ ಎಂದು ವರದಿ ತೋರಿಸಿದೆ.

ಇದನ್ನೂ ಓದಿ: ಕೊರೊನಾ ಲಸಿಕೆ ಮುಂದಿನ ವರ್ಷಕ್ಕೆ ಸಿದ್ಧವಾಗಬಹುದು: ಕೇಂದ್ರ ಸಚಿವ ಹರ್ಷವರ್ಧನ್

“ನಮ್ಮ ವ್ಯವಸ್ಥೆ ಗ್ರಾಹಕರಿಗೆ ಉತ್ತಮವಾದ ಆನ್‌ಲೈನ್ ಬೆಲೆಯನ್ನು ನೀಡಲು ವಿನ್ಯಾಸಗೊಳಿಸಲಾಗಿದೆ. ಆದರೆ ಯಾವುದಾದರೂ ದೋಷ ಕಂಡರೆ, ಅದನ್ನು ಸರಿಪಡಿಸಲು ನಾವು ತ್ವರಿತವಾಗಿ ಕೆಲಸ ಮಾಡುತ್ತೇವೆ” ಎಂದು ಕಂಪನಿಯ ವಕ್ತಾರರು ಪಬ್ಲಿಕ್ ಸಿಟಿಜನ್ ವರದಿಗೆ ಪ್ರತಿಕ್ರಿಯಿಸಿದ್ದಾರೆ.

ಇ-ಕಾಮರ್ಸ್ ಬೆಲೆ ಏರಿಕೆಯನ್ನು ಸಹಿಸುವುದಿಲ್ಲ. ಜೊತೆಗೆ ದಲ್ಲಾಳಿಗಳು ಸಾಂಕ್ರಾಮಿಕ ರೋಗದ ಲಾಭವನ್ನು ಪಡೆಯುವುದನ್ನು ತಡೆಯುತ್ತೇವೆ ಎಂದು ಅಮೆಜಾನ್ ಸ್ಪಷ್ಟಪಡಿಸಿದೆ.

ದಲ್ಲಾಳಿಗಳು ಅಥವಾ ಮಧ್ಯವರ್ತಿ ಮಾರಾಟಗಾರರು ಬೆಲೆ ಏರಿಕೆಯಲ್ಲಿ ತೊಡಗಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಆದರೆ ಅಮೆಜಾನ್ ತಾನೇ ಮಾರಾಟಮಾಡುವ ಅಗತ್ಯ ಉತ್ಪನ್ನಗಳ ಬೆಲೆಯನ್ನು ಗಮನಾರ್ಹ ಏರಿಕೆಯಲ್ಲಿ ಮಾರಾಟ ಮಾಡುತ್ತಿದೆ. ಇದು ಅನೇಕ ಸಂದರ್ಭಗಳಲ್ಲಿ ಇತರ ರಾಷ್ಟ್ರೀಯ ಚಿಲ್ಲರೆ ವ್ಯಾಪಾರಿಗಳಿಗಿಂತ ದುಬಾರಿ ಬೆಲೆಗೆ ಮಾರಾಟವಾಗಿದೆ ಎಂದು ಪಬ್ಲಿಕ್ ಸಿಟಿಜನ್ ವರದಿ ತಿಳಿಸಿದೆ.


ಇದನ್ನೂ ಓದಿ: ಒಂದೇ ವಾರದಲ್ಲಿ ತಮಿಳುನಾಡಿನ ಐವರು ನೀಟ್ ಆಕಾಂಕ್ಷಿಗಳ ಆತ್ಮಹತ್ಯೆ!: ವಿದ್ಯಾರ್ಥಿಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...