Homeಕರೋನಾ ತಲ್ಲಣಕೊರೊನಾ ಸಂಕಷ್ಟದಲ್ಲೂ ವಸ್ತುಗಳ ಬೆಲೆ ಏರಿಸಿದ್ದ ಅಮೆಜಾನ್‌!

ಕೊರೊನಾ ಸಂಕಷ್ಟದಲ್ಲೂ ವಸ್ತುಗಳ ಬೆಲೆ ಏರಿಸಿದ್ದ ಅಮೆಜಾನ್‌!

ಕೊರೊನಾ ಸಮಯದಲ್ಲಿ ಅಮೆಜಾನ್ ಉತ್ಪನ್ನಗಳ ಬೆಲೆಯು ದೇಶದ ಹಲವು ರಾಜ್ಯಗಳ ಬೆಲೆ ನಿಗದಿ ಕಾನೂನುಗಳನ್ನು ಉಲ್ಲಂಘಿಸಿದೆ ಎಂದು ಪಬ್ಲಿಕ್ ಸಿಟಿಜನ್ ವರದಿ ತೋರಿಸಿದೆ.

- Advertisement -
- Advertisement -

ಕೊರೊನಾ ಸಂಕಷ್ಟದ ಸಮಯದಲ್ಲಿ ಜನ ಸಾಮಾನ್ಯರ ಸ್ಥಿತಿ ಹೇಳತೀರದ್ದು. ಹಣಕಾಸಿನ ಪರದಾಟ, ನಿರುದ್ಯೋಗ ತಾಂಡವವಾಡುತ್ತಿದೆ. ಆದರೆ ಅಮೆಜಾನ್ ಮಾತ್ರ ಕೊರೊನಾವನ್ನು ತನ್ನ ಲಾಭಕ್ಕೆ ಬಳಸಿಕೊಂಡಿದೆ. ಅಮೆಜಾನ್ ಶಾಪಿಂಗ್‌ನಲ್ಲಿ ಟಾಯ್ಲೆಟ್ ಪೇಪರ್ ಮತ್ತು ಹ್ಯಾಂಡ್ ಸ್ಯಾನಿಟೈಸರ್ ಸೇರಿದಂತೆ ಹಲವು ಅಗತ್ಯ ವಸ್ತುಗಳನ್ನು ದುಪ್ಪಟ್ಟು ದರದಲ್ಲಿ ಮಾರಾಟ ಮಾಡಿದೆ ಎಂದು ಅಮರಿಕಾ ಮೂಲದ ಗ್ರಾಹಕ ಹಕ್ಕುಗಳ ಗುಂಪು ಪಬ್ಲಿಕ್ ಸಿಟಿಜನ್ ವರದಿ ತಿಳಿಸಿದೆ.

ಈ ವಾರ ಬಿಡುಗಡೆಯಾದ ವರದಿ ಪ್ರಕಾರ ಕೊರೊನಾ ಸಮಯದಲ್ಲಿ ಅಮೆಜಾನ್ ಉತ್ಪನ್ನಗಳ ಬೆಲೆಯು ದೇಶದ ಹಲವು ರಾಜ್ಯಗಳ ಬೆಲೆ ನಿಗದಿ ಕಾನೂನುಗಳನ್ನು ಉಲ್ಲಂಘಿಸಿದೆ ಎಂದು ತೋರಿಸಿದೆ. ಜೊತೆಗೆ ಅಮೆಜಾನ್ ನೇರವಾಗಿ ಮಾರಾಟ ಮಾಡುವ ಅಗತ್ಯ ಉತ್ಪನ್ನಗಳಲ್ಲಿಯೂ ಬೆಲೆ ಏರಿಕೆಯಾಗಿರುವ ಹಲವಾರು ಉದಾಹರಣೆಗಳಿವೆ ಎಂದಿದೆ.

ಇದನ್ನೂ ಓದಿ: KRS ಪಕ್ಷದಿಂದ ‘ಚಲಿಸು ಕರ್ನಾಟಕ’ ಅಭಿಯಾನ: 2700 ಕಿ.ಮೀ. ವಿಶೇಷ ಸೈಕಲ್ ಯಾತ್ರೆ

ಬೆಲೆ ಏರಿಕೆಯನ್ನು ತಡೆಯಲು ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಅಮೆಜಾನ್ ಹೇಳಿಕೊಂಡಿದೆ ಎಂದು ವರದಿ ತಿಳಿಸಿದೆ. ಆದರೆ ಅಮೆಜಾನ್ ನೇರವಾಗಿ ಮಾರಾಟ ಮಾಡುವ ಅಗತ್ಯ ಉತ್ಪನ್ನಗಳ ಮೇಲೆ ಬೆಲೆ ಹೆಚ್ಚಳವಾಗಿರುವುದನ್ನು ನಾವು ಗಮನಿಸಿದ್ದೇವೆ. ಜೊತೆಗೆ ಮಧ್ಯವರ್ತಿ ಮಾರಾಟಗಾರರಿಂದ ಬೆಲೆ ಏರಿಕೆಯಾಗಿದೆ ಎಂದು ವರದಿಯಲ್ಲಿದೆ.

ಪಬ್ಲಿಕ್ ಸಿಟಿಜನ್ ವರದಿ ಪ್ರಕಾರ, ಅಮೆಜಾನ್.ಕಾಂನಲ್ಲಿಇತ್ತೀಚಿನ ಬೆಲೆಗಿಂತ ಕೊರೊನಾ ಹೆಚ್ಚಿದ್ದ ಮೇ ಮತ್ತು ಆಗಸ್ಟ್ ನಡುವೆ ಬೆಲೆ ಹೆಚ್ಚಾಗಿತ್ತು. ಆ ಸಮಯದಲ್ಲಿ ಮಾರಾಟ ಮಾಡಿದ್ದ 15 ಅಗತ್ಯ ಉತ್ಪನ್ನಗಳ ಜೊತೆಗೆ ಸಮೀಕರಿಸಲಾಗಿದೆ. ಇದು ರಾಷ್ಟ್ರೀಯ ಚಿಲ್ಲರೆ ವ್ಯಾಪಾರಿಗಳ ಇತ್ತಿಚಿನ ಬೆಲೆಗಿಂತ ದುಬಾರಿಯಾಗಿದೆ. ಮೇ ಮತ್ತು ಆಗಸ್ಟ್ ನಡುವೆ ಅನೇಕ ವಸ್ತುಗಳ ಬೆಲೆಗಳು ಅನೇಕ ಪಟ್ಟು ಹೆಚ್ಚಾಗಿದೆ ಎಂದು ವರದಿ ತೋರಿಸಿದೆ.

ಇದನ್ನೂ ಓದಿ: ಕೊರೊನಾ ಲಸಿಕೆ ಮುಂದಿನ ವರ್ಷಕ್ಕೆ ಸಿದ್ಧವಾಗಬಹುದು: ಕೇಂದ್ರ ಸಚಿವ ಹರ್ಷವರ್ಧನ್

“ನಮ್ಮ ವ್ಯವಸ್ಥೆ ಗ್ರಾಹಕರಿಗೆ ಉತ್ತಮವಾದ ಆನ್‌ಲೈನ್ ಬೆಲೆಯನ್ನು ನೀಡಲು ವಿನ್ಯಾಸಗೊಳಿಸಲಾಗಿದೆ. ಆದರೆ ಯಾವುದಾದರೂ ದೋಷ ಕಂಡರೆ, ಅದನ್ನು ಸರಿಪಡಿಸಲು ನಾವು ತ್ವರಿತವಾಗಿ ಕೆಲಸ ಮಾಡುತ್ತೇವೆ” ಎಂದು ಕಂಪನಿಯ ವಕ್ತಾರರು ಪಬ್ಲಿಕ್ ಸಿಟಿಜನ್ ವರದಿಗೆ ಪ್ರತಿಕ್ರಿಯಿಸಿದ್ದಾರೆ.

ಇ-ಕಾಮರ್ಸ್ ಬೆಲೆ ಏರಿಕೆಯನ್ನು ಸಹಿಸುವುದಿಲ್ಲ. ಜೊತೆಗೆ ದಲ್ಲಾಳಿಗಳು ಸಾಂಕ್ರಾಮಿಕ ರೋಗದ ಲಾಭವನ್ನು ಪಡೆಯುವುದನ್ನು ತಡೆಯುತ್ತೇವೆ ಎಂದು ಅಮೆಜಾನ್ ಸ್ಪಷ್ಟಪಡಿಸಿದೆ.

ದಲ್ಲಾಳಿಗಳು ಅಥವಾ ಮಧ್ಯವರ್ತಿ ಮಾರಾಟಗಾರರು ಬೆಲೆ ಏರಿಕೆಯಲ್ಲಿ ತೊಡಗಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಆದರೆ ಅಮೆಜಾನ್ ತಾನೇ ಮಾರಾಟಮಾಡುವ ಅಗತ್ಯ ಉತ್ಪನ್ನಗಳ ಬೆಲೆಯನ್ನು ಗಮನಾರ್ಹ ಏರಿಕೆಯಲ್ಲಿ ಮಾರಾಟ ಮಾಡುತ್ತಿದೆ. ಇದು ಅನೇಕ ಸಂದರ್ಭಗಳಲ್ಲಿ ಇತರ ರಾಷ್ಟ್ರೀಯ ಚಿಲ್ಲರೆ ವ್ಯಾಪಾರಿಗಳಿಗಿಂತ ದುಬಾರಿ ಬೆಲೆಗೆ ಮಾರಾಟವಾಗಿದೆ ಎಂದು ಪಬ್ಲಿಕ್ ಸಿಟಿಜನ್ ವರದಿ ತಿಳಿಸಿದೆ.


ಇದನ್ನೂ ಓದಿ: ಒಂದೇ ವಾರದಲ್ಲಿ ತಮಿಳುನಾಡಿನ ಐವರು ನೀಟ್ ಆಕಾಂಕ್ಷಿಗಳ ಆತ್ಮಹತ್ಯೆ!: ವಿದ್ಯಾರ್ಥಿಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...