Homeಮುಖಪುಟವೆಸ್ಟ್‌ಲ್ಯಾಂಡ್‌ ಬುಕ್ಸ್‌ ಪ್ರಕಾಶನ ಸಂಸ್ಥೆಯನ್ನು ಶಾಶ್ವತವಾಗಿ ಮುಚ್ಚಿದ ಅಮೆಜಾನ್‌; ಲೇಖಕರು, ಓದುಗರಿಗೆ ಆಘಾತ

ವೆಸ್ಟ್‌ಲ್ಯಾಂಡ್‌ ಬುಕ್ಸ್‌ ಪ್ರಕಾಶನ ಸಂಸ್ಥೆಯನ್ನು ಶಾಶ್ವತವಾಗಿ ಮುಚ್ಚಿದ ಅಮೆಜಾನ್‌; ಲೇಖಕರು, ಓದುಗರಿಗೆ ಆಘಾತ

- Advertisement -
- Advertisement -

ಭಾರತದ ಹೆಸರಾಂತ ಪುಸ್ತಕ ಪ್ರಕಾಶನ ಕಂಪನಿ ವೆಸ್ಟ್‌ಲ್ಯಾಂಡ್ ಬುಕ್ಸ್ ಅನ್ನು ಮುಚ್ಚುವುದಾಗಿ ಅಮೆಜಾನ್ ಪ್ರಕಟಿಸಿದ್ದು, ಈ ನಿರ್ಧಾರವನ್ನು ಕಂಪನಿಯ ಹಿರಿಯ ಉದ್ಯೋಗಿಗಳಿಗೆ ಸಿಇಒ ಗೌತಮ್ ಪದ್ಮನಾಭನ್ ಮಂಗಳವಾರ ತಿಳಿಸಿದ್ದಾರೆ.

ಟಾಟಾ ಗ್ರೂಪ್‌ನ ಅಂಗಸಂಸ್ಥೆ ಟ್ರೆಂಟ್ ಲಿಮಿಟೆಡ್‌ನಿಂದ ವೆಸ್ಟ್‌ಲ್ಯಾಂಡ್ ಬುಕ್ಸ್ ಕಂಪನಿಯನ್ನು ಸ್ವಾಧೀನಪಡಿಸಿಕೊಂಡ ಐದು ವರ್ಷಗಳ ನಂತರ ಅಮೆಜಾನ್‌ ಪ್ರಕಟಿಸಿದ ಈ ತೀರ್ಮಾನ ಆಘಾತಕಾರಿ ಬೆಳವಣಿಗೆ ಎಂಬ ಅಭಿಪ್ರಾಯ ಪುಸ್ತಕ ಪ್ರೇಮಿಗಳು ಹಾಗೂ ಬರಹಗಾರರ ವಲಯದಲ್ಲಿ ವ್ಯಕ್ತವಾಗಿದೆ.

ಅಮೆಜಾನ್‌ 2016ರಲ್ಲಿ ವೆಸ್ಟ್‌ಲ್ಯಾಂಡ್ ಬುಕ್ಸ್ ಅನ್ನು ಖರೀದಿಸಿದಾಗ ಜಾಗತಿಕವಾಗಿ ನಡೆಸುತ್ತಿರುವ ತನ್ನ ಅಮೆಜಾನ್‌ ಪಬ್ಲಿಷಿಂಗ್‌ನ ಅಡಿ ಇ-ಕಾಮರ್ಸ್ ಮತ್ತು ಇಂಟರ್ನೆಟ್ ಸೇವೆಯ ಮೂಲಕ ಇದರ ಪುಸ್ತಕ ಪ್ರಕಾಶನ ಮಾಡುವ ನಿರೀಕ್ಷೆಯನ್ನು ವ್ಯಕ್ತಪಡಿಸಿತ್ತು.

ಅಮೆಜಾನ್, ವೆಸ್ಟ್‌ಲ್ಯಾಂಡ್‌ ಬುಕ್‌ ಪಬ್ಲಿಕೇಷನ್‌ ಅನ್ನು ಬೇರೆಯವರಿಗೆ ಮಾರಾಟ ಮಾಡದೇ ಮುಚ್ಚಲು ಉದ್ದೇಶಿಸಿರುವ ಬಗ್ಗೆ ಯಾವುದೇ ವಿವರಣೆ ನೀಡಿಲ್ಲ. ಅಲ್ಲದೇ ವೆಸ್ಟ್‌ಲ್ಯಾಂಡ್ ಬುಕ್ಸ್‌ನ ಉದ್ಯೋಗಿಗಳನ್ನು ಅಮೆಜಾನ್ ಸಂಸ್ಥೆಯ ಸಿಬ್ಬಂದಿಯನ್ನಾಗಿ ನೇಮಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುವುದು ಎಂಬ ಭರವಸೆ ನೀಡಿದೆ.

ಇದನ್ನೂ ಓದಿರಿ: ಕ್ಲಬ್‌ಹೌಸ್‌ನಲ್ಲಿ ಮಹಿಳೆಯರ ವಿರುದ್ಧ ದ್ವೇಷ ಪ್ರಕರಣ: ಮೂವರಲ್ಲಿ ಒಬ್ಬ ಆರೋಪಿಗೆ ಜಾಮೀನು

ಭಾರತ ಮೂಲದ ಪ್ರಕಾಶನ ಸಂಸ್ಥೆಯಾದ ವೆಸ್ಟ್‌ಲ್ಯಾಂಡ್‌ ಪಬ್ಲಿಕೇಶನ್‌ ರೂ. 30 ಕೋಟಿ ವಹಿವಾಟು ಹೊಂದಿತ್ತು. ಅಲ್ಲದೇ ಪುಸ್ತಕ ಪ್ರಕಾಶನ ಕ್ಷೇತ್ರದಲ್ಲಿ ಹೆಸರುವಾಸಿಯಾಗಿತ್ತು. ಖ್ಯಾತ ಬಹುರಾಷ್ಟ್ರೀಯ ಪ್ರಕಾಶನ ಸಂಸ್ಥೆಗಳಾದ ಪೆಂಗ್ವಿನ್ ರಾಂಡಮ್ ಹೌಸ್, ಹಾರ್ಪರ್‌ ಕಾಲಿನ್ಸ್ ಮತ್ತು ಹ್ಯಾಚೆಟ್ ಗ್ರೂಪ್‌ಗಳಿಗಿಂತ ವಿಭಿನ್ನವೆಂದು ಗುರ್ತಿಸಿಕೊಂಡಿತ್ತು.

ವೆಸ್ಟ್‌ಲ್ಯಾಂಡ್‌ ಪ್ರಕಾಶನ ಚೇತನ್ ಭಗತ್ ಮತ್ತು ಅಮಿಶ್ ತ್ರಿಪಾಠಿಯವರಂಥ ಹಲವು ಖ್ಯಾತ ಲೇಖಕರ ಪುಸ್ತಕಗಳನ್ನು ಪ್ರಕಟಿಸಿದೆ. ಈ ಲೇಖಕರ ಸ್ಥಳೀಯ ಭಾಷೆಯಲ್ಲಿ ಮುದ್ರಣಗೊಂಡ ಪುಸ್ತಕಗಳು ಅತಿ ಹೆಚ್ಚು ಮಾರಾಟವಾದ ನಿದರ್ಶನಗಳಿವೆ. ಆದರೆ ಕಳೆದ ಒಂದು ವರ್ಷದ ಅವಧಿಯಲ್ಲಿ ಬಂದ ಅಧ್ಯಯನ ಆಧಾರಿತ ಕೃತಿಗಳ ಹಿನ್ನೆಲೆಯಲ್ಲಿ ಪ್ರಕಾಶನ ಸಂಸ್ಥೆ ಮೇಲೆ ರಾಜಕೀಯ ಒತ್ತಡ ಸೃಷ್ಟಿಯಾಗಲು ಕಾರಣವಿರಬಹುದು ಎಂಬ ವಾದವು ಕೇಳಿಬಂದಿದೆ.

ಕಂಪ್ಯೂಟರ್‌ ವಿಜ್ಞಾನಿ ಅರವಿಂದ್‌ ನಾರಾಯಣ್‌ ಅವರ ಇಂಡಿಯಾಸ್‌ ಅನ್‌ ಡಿಕ್ಲೇರ್ಡ್‌ ಎಮೆರ್ಜೆನ್ಸಿ, ಆಕಾರ್‌ ಪಟೇಲ್‌ ಅವರ ಅವರ್‌ ಹಿಂದು ರಾಷ್ಟ್ರ, ಪ್ರೈಸ್‌ ಆಫ್‌ ದಿ ಮೋದಿ ಇಯರ್ಸ್‌, ಜೋಸಿ ಜೋಸೆಫ್‌ ಅವರ ದಿ ಸೈಲೆಂಟ್‌ ಕೂಪ್‌, ಕ್ರಿಸ್ಟೋಫ್‌ ಜಾಫರ್‌ ಲಾಟ್‌ ಅವರ ಮೋದೀಸ್‌ ಇಂಡಿಯಾ ಕೃತಿಗಳು ಪ್ರಸ್ತುತ ಸರ್ಕಾರದ ಆಡಳಿತ ವೈಖರಿ ಹಾಗೂ ಜನವಿರೋಧಿ ನಿಲುವುಗಳನ್ನು ಟೀಕಿಸಿದ್ದು ಪರೋಕ್ಷವಾಗಿ ಅಮೆಜಾನ್‌ ಈ ನಿರ್ಧಾರಕ್ಕೆ ಬರಲು ಕಾರಣವಿರಬಹುದೇ ಎಂದು ವಿಶ್ಲೇಷಿಸಲಾಗುತ್ತಿದೆ.

ಈ ಬೆಳವಣಿಗೆ ಹಿನ್ನೆಲೆಯಲ್ಲಿ ಪ್ರಕಾಶನ ಸಂಸ್ಥೆಯೊಂದಿಗೆ ಉತ್ತಮ ಸ್ನೇಹವಿಟ್ಟುಕೊಂಡಿದ್ದ ಹಲವು ಲೇಖಕರು ತಮ್ಮ ಅಭಿಪ್ರಾಯಗಳನ್ನು ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಲೇಖಕ ಆಕಾರ್‌ ಪಟೇಲ್‌ ಎಂಟುಎಂ ಮೀಡಿಯಾದೊಂದಿಗೆ ಮಾತನಾಡಿ, “ಹೌದು. ವೆಸ್ಟ್‌ಲ್ಯಾಂಡ್‌ ಪಬ್ಲಿಕೇಷನ್‌ ಮುಚ್ಚುತ್ತಿರುವುದು ನಿಜ. ವೆಸ್ಟ್‌ಲ್ಯಾಂಡ್‌ ಪಬ್ಲಿಕೇಷನ್‌ಗೆ ನಾನು ಪುಸ್ತಕವನ್ನು ಬರೆದಿದ್ದೇನೆ. ಸಂಸ್ಥೆಯೊಂದಿಗೆ ಉತ್ತಮ ಒಡನಾಟವಿತ್ತು. ಆದರೆ ಯಾವ ಕಾರಣಕ್ಕೆ ಪಬ್ಲಿಕೇಷನ್‌ ಅನ್ನು ಮುಚ್ಚುತ್ತಿದ್ದಾರೆಂಬುದು ನನಗೆ ತಿಳಿಸಿಲ್ಲ. ಆದರೆ ಸೂಕ್ತ ಕಾರಣಕ್ಕೆ ಮುಚ್ಚುತ್ತಿದ್ದಾರೆಂದು ನಾನು ನಂಬಿದ್ದೇನೆ” ಎಂದು ಹೇಳಿದ್ದಾರೆ.

ಡೆಸ್ಪೈಟ್‌ ದ ಸ್ಟೇಟ್‌ ಪುಸ್ತಕದ ಲೇಖಕ ಎಂ.ರಾಜಶೇಖರ್ ತಮ್ಮ ಟ್ವೀಟ್‌ನಲ್ಲಿ “ವ್ಯವಹಾರ ಲಾಭದಾಯಕವಾಗಿರದಿದ್ದರೆ ಇದಕ್ಕೆ ಬೇಕಿರುವ ಇತರ ಮಾರ್ಗಗಳನ್ನು ಕಂಡುಕೊಳ್ಳಬಹುದಿತ್ತು. ಅಥವಾ ಖರೀದಿದಾರರನ್ನು ಹುಡುಕಬಹುದಿತ್ತು. ಹೀಗೆ ವೆಸ್ಟ್‌ಲ್ಯಾಂಡ್‌ನ್ನು ಮುಚ್ಚುತ್ತಿರುವುದು ಸರಿಯಲ್ಲ. ಬೇಸರದ ಸಂಗತಿಯಾಗಿದ್ದು, ಒಂದು ರೀತಿಯ ಅನಿಶ್ಚಿತತೆಯನ್ನು ಸೃಷ್ಟಿಸಿದೆ ಮತ್ತು ಹಲವು ಯೋಜನೆಗಳನ್ನು ಹಾಳು ಮಾಡಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಪ್ರೀತಿ ಶೋನಿ ಎಂಬ ಲೇಖಕಿ, “ವೆಸ್ಟ್‌ಲ್ಯಾಂಡ್‌ ಬಂದ್‌ ವಿಚಾರ ಬೇಸರದ ಸಂಗತಿ. ಇದು ಭಾರತದ ಪ್ರಕಾಶನ ಕ್ಷೇತ್ರಕ್ಕಾಗುತ್ತಿರುವ ದೊಡ್ಡ ಹಾನಿ. ನನ್ನ 6 ಪುಸ್ತಕಗಳನ್ನು ಸಂಸ್ಥೆಯೊಂದಿಗೆ ಹೊರತರುವ ನಿರೀಕ್ಷೆಯಲ್ಲಿದ್ದೆ. ಆದರೆ ವೆಸ್ಟ್ ಲ್ಯಾಂಡ್ ತಂಡದೊಂದಿಗೆ ಕೆಲವು ಅದ್ಭುತ ನೆನಪುಗಳಿವೆ. ಅವರು ಬೇರೆ ಸಂಸ್ಥೆಗೆ ಹೋಗುವುದನ್ನು ಊಹಿಸಲು ಕಷ್ಟವಾಗುತ್ತದೆ” ಎಂದು ಟ್ವೀಟ್‌ ಮಾಡಿದ್ದಾರೆ.

ಮನು ಪಿಳ್ಳೈ ಎಂಬ ಲೇಖಕರು “ವೆಸ್ಟ್‌ಲ್ಯಾಂಡ್‌ ಹೊರತಂದ ಉತ್ತಮ ಪುಸ್ತಕಗಳ ದೊಡ್ಡ ಪಟ್ಟಿಯೇ ಇದ್ದು, ಆ ತಂಡದೊಂದಿಗೆ ಕೆಲಸ ಮಾಡಲು ಸಂತಸವಾಗುತ್ತಿತ್ತು. ಇಂಥ ಯಶಸ್ವಿ ಸಂಸ್ಥೆಯನ್ನು ಮುಚ್ಚುತ್ತಿರುವ ನಿಜವಾದ ಕಾರಣಗಳ ಹಿಂದಿರುವ ಸತ್ಯಗಳು ದೇವರಿಗಷ್ಟೇ ತಿಳಿದಿರಬೇಕು” ಎಂದು ಟ್ವೀಟ್‌ ಮಾಡಿದ್ದಾರೆ.

ಭಾರತದ ಇಂಗ್ಲಿಷ್‌ ಪ್ರಕಾಶನ ಸಂಸ್ಥೆಗಳ ಪೈಕಿ ಇದೇ ಮೊದಲ ಬಾರಿಗೆ ಮಾರಾಟ ಮಾಡದೇ ಶಾಶ್ವತವಾಗಿ ಮುಚ್ಚುತ್ತಿರುವುದು ಅಚ್ಚರಿ ಮೂಡಿಸಿದೆ. ಹಲವು ಜನಪ್ರಿಯ, ಮೆಚ್ಚುಗೆ ಪಡೆದ, ವಿಮರ್ಶಾತ್ಮಕ ಬರಹಗಳನ್ನೊಳಗೊಂಡ, ಗೌರವ ಮತ್ತು ಪ್ರಶಸ್ತಿ ಪಡೆದ ಕಾದಂಬರಿಗಳು, ಸಾಹಿತ್ಯ, ರಾಜಕೀಯ, ಸಮಾಜ, ಕಲೆ ಆಧಾರಿತ ಪುಸ್ತಕಗಳನ್ನು ಪ್ರಕಟಿಸಿದ ಕೀರ್ತಿಗೆ ಸಂಸ್ಥೆಗಿದೆ. ಅಮೆಜಾನ್‌ನ ದಿಢೀರ್‌ ನಿರ್ಧಾರವನ್ನು ಪುಸ್ತಕ ಲೋಕದ ಓದುಗ ಮತ್ತು ಲೇಖಕ ವರ್ಗ ಅರಗಿಸಿಕೊಳ್ಳಲು ಯತ್ನಿಸುತ್ತಿದೆ.

– ಅನಿತಾ


ಇದನ್ನೂ ಓದಿರಿ: ಶಬರಿಮಲೆ ಭ್ರಷ್ಟಾಚಾರ ಪ್ರಕರಣ: ಸ್ವಯಂ ದೂರು ದಾಖಲಿಸಿದ ಕೇರಳ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...