Homeಮುಖಪುಟವೆಸ್ಟ್‌ಲ್ಯಾಂಡ್‌ ಬುಕ್ಸ್‌ ಪ್ರಕಾಶನ ಸಂಸ್ಥೆಯನ್ನು ಶಾಶ್ವತವಾಗಿ ಮುಚ್ಚಿದ ಅಮೆಜಾನ್‌; ಲೇಖಕರು, ಓದುಗರಿಗೆ ಆಘಾತ

ವೆಸ್ಟ್‌ಲ್ಯಾಂಡ್‌ ಬುಕ್ಸ್‌ ಪ್ರಕಾಶನ ಸಂಸ್ಥೆಯನ್ನು ಶಾಶ್ವತವಾಗಿ ಮುಚ್ಚಿದ ಅಮೆಜಾನ್‌; ಲೇಖಕರು, ಓದುಗರಿಗೆ ಆಘಾತ

- Advertisement -
- Advertisement -

ಭಾರತದ ಹೆಸರಾಂತ ಪುಸ್ತಕ ಪ್ರಕಾಶನ ಕಂಪನಿ ವೆಸ್ಟ್‌ಲ್ಯಾಂಡ್ ಬುಕ್ಸ್ ಅನ್ನು ಮುಚ್ಚುವುದಾಗಿ ಅಮೆಜಾನ್ ಪ್ರಕಟಿಸಿದ್ದು, ಈ ನಿರ್ಧಾರವನ್ನು ಕಂಪನಿಯ ಹಿರಿಯ ಉದ್ಯೋಗಿಗಳಿಗೆ ಸಿಇಒ ಗೌತಮ್ ಪದ್ಮನಾಭನ್ ಮಂಗಳವಾರ ತಿಳಿಸಿದ್ದಾರೆ.

ಟಾಟಾ ಗ್ರೂಪ್‌ನ ಅಂಗಸಂಸ್ಥೆ ಟ್ರೆಂಟ್ ಲಿಮಿಟೆಡ್‌ನಿಂದ ವೆಸ್ಟ್‌ಲ್ಯಾಂಡ್ ಬುಕ್ಸ್ ಕಂಪನಿಯನ್ನು ಸ್ವಾಧೀನಪಡಿಸಿಕೊಂಡ ಐದು ವರ್ಷಗಳ ನಂತರ ಅಮೆಜಾನ್‌ ಪ್ರಕಟಿಸಿದ ಈ ತೀರ್ಮಾನ ಆಘಾತಕಾರಿ ಬೆಳವಣಿಗೆ ಎಂಬ ಅಭಿಪ್ರಾಯ ಪುಸ್ತಕ ಪ್ರೇಮಿಗಳು ಹಾಗೂ ಬರಹಗಾರರ ವಲಯದಲ್ಲಿ ವ್ಯಕ್ತವಾಗಿದೆ.

ಅಮೆಜಾನ್‌ 2016ರಲ್ಲಿ ವೆಸ್ಟ್‌ಲ್ಯಾಂಡ್ ಬುಕ್ಸ್ ಅನ್ನು ಖರೀದಿಸಿದಾಗ ಜಾಗತಿಕವಾಗಿ ನಡೆಸುತ್ತಿರುವ ತನ್ನ ಅಮೆಜಾನ್‌ ಪಬ್ಲಿಷಿಂಗ್‌ನ ಅಡಿ ಇ-ಕಾಮರ್ಸ್ ಮತ್ತು ಇಂಟರ್ನೆಟ್ ಸೇವೆಯ ಮೂಲಕ ಇದರ ಪುಸ್ತಕ ಪ್ರಕಾಶನ ಮಾಡುವ ನಿರೀಕ್ಷೆಯನ್ನು ವ್ಯಕ್ತಪಡಿಸಿತ್ತು.

ಅಮೆಜಾನ್, ವೆಸ್ಟ್‌ಲ್ಯಾಂಡ್‌ ಬುಕ್‌ ಪಬ್ಲಿಕೇಷನ್‌ ಅನ್ನು ಬೇರೆಯವರಿಗೆ ಮಾರಾಟ ಮಾಡದೇ ಮುಚ್ಚಲು ಉದ್ದೇಶಿಸಿರುವ ಬಗ್ಗೆ ಯಾವುದೇ ವಿವರಣೆ ನೀಡಿಲ್ಲ. ಅಲ್ಲದೇ ವೆಸ್ಟ್‌ಲ್ಯಾಂಡ್ ಬುಕ್ಸ್‌ನ ಉದ್ಯೋಗಿಗಳನ್ನು ಅಮೆಜಾನ್ ಸಂಸ್ಥೆಯ ಸಿಬ್ಬಂದಿಯನ್ನಾಗಿ ನೇಮಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುವುದು ಎಂಬ ಭರವಸೆ ನೀಡಿದೆ.

ಇದನ್ನೂ ಓದಿರಿ: ಕ್ಲಬ್‌ಹೌಸ್‌ನಲ್ಲಿ ಮಹಿಳೆಯರ ವಿರುದ್ಧ ದ್ವೇಷ ಪ್ರಕರಣ: ಮೂವರಲ್ಲಿ ಒಬ್ಬ ಆರೋಪಿಗೆ ಜಾಮೀನು

ಭಾರತ ಮೂಲದ ಪ್ರಕಾಶನ ಸಂಸ್ಥೆಯಾದ ವೆಸ್ಟ್‌ಲ್ಯಾಂಡ್‌ ಪಬ್ಲಿಕೇಶನ್‌ ರೂ. 30 ಕೋಟಿ ವಹಿವಾಟು ಹೊಂದಿತ್ತು. ಅಲ್ಲದೇ ಪುಸ್ತಕ ಪ್ರಕಾಶನ ಕ್ಷೇತ್ರದಲ್ಲಿ ಹೆಸರುವಾಸಿಯಾಗಿತ್ತು. ಖ್ಯಾತ ಬಹುರಾಷ್ಟ್ರೀಯ ಪ್ರಕಾಶನ ಸಂಸ್ಥೆಗಳಾದ ಪೆಂಗ್ವಿನ್ ರಾಂಡಮ್ ಹೌಸ್, ಹಾರ್ಪರ್‌ ಕಾಲಿನ್ಸ್ ಮತ್ತು ಹ್ಯಾಚೆಟ್ ಗ್ರೂಪ್‌ಗಳಿಗಿಂತ ವಿಭಿನ್ನವೆಂದು ಗುರ್ತಿಸಿಕೊಂಡಿತ್ತು.

ವೆಸ್ಟ್‌ಲ್ಯಾಂಡ್‌ ಪ್ರಕಾಶನ ಚೇತನ್ ಭಗತ್ ಮತ್ತು ಅಮಿಶ್ ತ್ರಿಪಾಠಿಯವರಂಥ ಹಲವು ಖ್ಯಾತ ಲೇಖಕರ ಪುಸ್ತಕಗಳನ್ನು ಪ್ರಕಟಿಸಿದೆ. ಈ ಲೇಖಕರ ಸ್ಥಳೀಯ ಭಾಷೆಯಲ್ಲಿ ಮುದ್ರಣಗೊಂಡ ಪುಸ್ತಕಗಳು ಅತಿ ಹೆಚ್ಚು ಮಾರಾಟವಾದ ನಿದರ್ಶನಗಳಿವೆ. ಆದರೆ ಕಳೆದ ಒಂದು ವರ್ಷದ ಅವಧಿಯಲ್ಲಿ ಬಂದ ಅಧ್ಯಯನ ಆಧಾರಿತ ಕೃತಿಗಳ ಹಿನ್ನೆಲೆಯಲ್ಲಿ ಪ್ರಕಾಶನ ಸಂಸ್ಥೆ ಮೇಲೆ ರಾಜಕೀಯ ಒತ್ತಡ ಸೃಷ್ಟಿಯಾಗಲು ಕಾರಣವಿರಬಹುದು ಎಂಬ ವಾದವು ಕೇಳಿಬಂದಿದೆ.

ಕಂಪ್ಯೂಟರ್‌ ವಿಜ್ಞಾನಿ ಅರವಿಂದ್‌ ನಾರಾಯಣ್‌ ಅವರ ಇಂಡಿಯಾಸ್‌ ಅನ್‌ ಡಿಕ್ಲೇರ್ಡ್‌ ಎಮೆರ್ಜೆನ್ಸಿ, ಆಕಾರ್‌ ಪಟೇಲ್‌ ಅವರ ಅವರ್‌ ಹಿಂದು ರಾಷ್ಟ್ರ, ಪ್ರೈಸ್‌ ಆಫ್‌ ದಿ ಮೋದಿ ಇಯರ್ಸ್‌, ಜೋಸಿ ಜೋಸೆಫ್‌ ಅವರ ದಿ ಸೈಲೆಂಟ್‌ ಕೂಪ್‌, ಕ್ರಿಸ್ಟೋಫ್‌ ಜಾಫರ್‌ ಲಾಟ್‌ ಅವರ ಮೋದೀಸ್‌ ಇಂಡಿಯಾ ಕೃತಿಗಳು ಪ್ರಸ್ತುತ ಸರ್ಕಾರದ ಆಡಳಿತ ವೈಖರಿ ಹಾಗೂ ಜನವಿರೋಧಿ ನಿಲುವುಗಳನ್ನು ಟೀಕಿಸಿದ್ದು ಪರೋಕ್ಷವಾಗಿ ಅಮೆಜಾನ್‌ ಈ ನಿರ್ಧಾರಕ್ಕೆ ಬರಲು ಕಾರಣವಿರಬಹುದೇ ಎಂದು ವಿಶ್ಲೇಷಿಸಲಾಗುತ್ತಿದೆ.

ಈ ಬೆಳವಣಿಗೆ ಹಿನ್ನೆಲೆಯಲ್ಲಿ ಪ್ರಕಾಶನ ಸಂಸ್ಥೆಯೊಂದಿಗೆ ಉತ್ತಮ ಸ್ನೇಹವಿಟ್ಟುಕೊಂಡಿದ್ದ ಹಲವು ಲೇಖಕರು ತಮ್ಮ ಅಭಿಪ್ರಾಯಗಳನ್ನು ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಲೇಖಕ ಆಕಾರ್‌ ಪಟೇಲ್‌ ಎಂಟುಎಂ ಮೀಡಿಯಾದೊಂದಿಗೆ ಮಾತನಾಡಿ, “ಹೌದು. ವೆಸ್ಟ್‌ಲ್ಯಾಂಡ್‌ ಪಬ್ಲಿಕೇಷನ್‌ ಮುಚ್ಚುತ್ತಿರುವುದು ನಿಜ. ವೆಸ್ಟ್‌ಲ್ಯಾಂಡ್‌ ಪಬ್ಲಿಕೇಷನ್‌ಗೆ ನಾನು ಪುಸ್ತಕವನ್ನು ಬರೆದಿದ್ದೇನೆ. ಸಂಸ್ಥೆಯೊಂದಿಗೆ ಉತ್ತಮ ಒಡನಾಟವಿತ್ತು. ಆದರೆ ಯಾವ ಕಾರಣಕ್ಕೆ ಪಬ್ಲಿಕೇಷನ್‌ ಅನ್ನು ಮುಚ್ಚುತ್ತಿದ್ದಾರೆಂಬುದು ನನಗೆ ತಿಳಿಸಿಲ್ಲ. ಆದರೆ ಸೂಕ್ತ ಕಾರಣಕ್ಕೆ ಮುಚ್ಚುತ್ತಿದ್ದಾರೆಂದು ನಾನು ನಂಬಿದ್ದೇನೆ” ಎಂದು ಹೇಳಿದ್ದಾರೆ.

ಡೆಸ್ಪೈಟ್‌ ದ ಸ್ಟೇಟ್‌ ಪುಸ್ತಕದ ಲೇಖಕ ಎಂ.ರಾಜಶೇಖರ್ ತಮ್ಮ ಟ್ವೀಟ್‌ನಲ್ಲಿ “ವ್ಯವಹಾರ ಲಾಭದಾಯಕವಾಗಿರದಿದ್ದರೆ ಇದಕ್ಕೆ ಬೇಕಿರುವ ಇತರ ಮಾರ್ಗಗಳನ್ನು ಕಂಡುಕೊಳ್ಳಬಹುದಿತ್ತು. ಅಥವಾ ಖರೀದಿದಾರರನ್ನು ಹುಡುಕಬಹುದಿತ್ತು. ಹೀಗೆ ವೆಸ್ಟ್‌ಲ್ಯಾಂಡ್‌ನ್ನು ಮುಚ್ಚುತ್ತಿರುವುದು ಸರಿಯಲ್ಲ. ಬೇಸರದ ಸಂಗತಿಯಾಗಿದ್ದು, ಒಂದು ರೀತಿಯ ಅನಿಶ್ಚಿತತೆಯನ್ನು ಸೃಷ್ಟಿಸಿದೆ ಮತ್ತು ಹಲವು ಯೋಜನೆಗಳನ್ನು ಹಾಳು ಮಾಡಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಪ್ರೀತಿ ಶೋನಿ ಎಂಬ ಲೇಖಕಿ, “ವೆಸ್ಟ್‌ಲ್ಯಾಂಡ್‌ ಬಂದ್‌ ವಿಚಾರ ಬೇಸರದ ಸಂಗತಿ. ಇದು ಭಾರತದ ಪ್ರಕಾಶನ ಕ್ಷೇತ್ರಕ್ಕಾಗುತ್ತಿರುವ ದೊಡ್ಡ ಹಾನಿ. ನನ್ನ 6 ಪುಸ್ತಕಗಳನ್ನು ಸಂಸ್ಥೆಯೊಂದಿಗೆ ಹೊರತರುವ ನಿರೀಕ್ಷೆಯಲ್ಲಿದ್ದೆ. ಆದರೆ ವೆಸ್ಟ್ ಲ್ಯಾಂಡ್ ತಂಡದೊಂದಿಗೆ ಕೆಲವು ಅದ್ಭುತ ನೆನಪುಗಳಿವೆ. ಅವರು ಬೇರೆ ಸಂಸ್ಥೆಗೆ ಹೋಗುವುದನ್ನು ಊಹಿಸಲು ಕಷ್ಟವಾಗುತ್ತದೆ” ಎಂದು ಟ್ವೀಟ್‌ ಮಾಡಿದ್ದಾರೆ.

ಮನು ಪಿಳ್ಳೈ ಎಂಬ ಲೇಖಕರು “ವೆಸ್ಟ್‌ಲ್ಯಾಂಡ್‌ ಹೊರತಂದ ಉತ್ತಮ ಪುಸ್ತಕಗಳ ದೊಡ್ಡ ಪಟ್ಟಿಯೇ ಇದ್ದು, ಆ ತಂಡದೊಂದಿಗೆ ಕೆಲಸ ಮಾಡಲು ಸಂತಸವಾಗುತ್ತಿತ್ತು. ಇಂಥ ಯಶಸ್ವಿ ಸಂಸ್ಥೆಯನ್ನು ಮುಚ್ಚುತ್ತಿರುವ ನಿಜವಾದ ಕಾರಣಗಳ ಹಿಂದಿರುವ ಸತ್ಯಗಳು ದೇವರಿಗಷ್ಟೇ ತಿಳಿದಿರಬೇಕು” ಎಂದು ಟ್ವೀಟ್‌ ಮಾಡಿದ್ದಾರೆ.

ಭಾರತದ ಇಂಗ್ಲಿಷ್‌ ಪ್ರಕಾಶನ ಸಂಸ್ಥೆಗಳ ಪೈಕಿ ಇದೇ ಮೊದಲ ಬಾರಿಗೆ ಮಾರಾಟ ಮಾಡದೇ ಶಾಶ್ವತವಾಗಿ ಮುಚ್ಚುತ್ತಿರುವುದು ಅಚ್ಚರಿ ಮೂಡಿಸಿದೆ. ಹಲವು ಜನಪ್ರಿಯ, ಮೆಚ್ಚುಗೆ ಪಡೆದ, ವಿಮರ್ಶಾತ್ಮಕ ಬರಹಗಳನ್ನೊಳಗೊಂಡ, ಗೌರವ ಮತ್ತು ಪ್ರಶಸ್ತಿ ಪಡೆದ ಕಾದಂಬರಿಗಳು, ಸಾಹಿತ್ಯ, ರಾಜಕೀಯ, ಸಮಾಜ, ಕಲೆ ಆಧಾರಿತ ಪುಸ್ತಕಗಳನ್ನು ಪ್ರಕಟಿಸಿದ ಕೀರ್ತಿಗೆ ಸಂಸ್ಥೆಗಿದೆ. ಅಮೆಜಾನ್‌ನ ದಿಢೀರ್‌ ನಿರ್ಧಾರವನ್ನು ಪುಸ್ತಕ ಲೋಕದ ಓದುಗ ಮತ್ತು ಲೇಖಕ ವರ್ಗ ಅರಗಿಸಿಕೊಳ್ಳಲು ಯತ್ನಿಸುತ್ತಿದೆ.

– ಅನಿತಾ


ಇದನ್ನೂ ಓದಿರಿ: ಶಬರಿಮಲೆ ಭ್ರಷ್ಟಾಚಾರ ಪ್ರಕರಣ: ಸ್ವಯಂ ದೂರು ದಾಖಲಿಸಿದ ಕೇರಳ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...