Homeಮುಖಪುಟಅಮೇಜಾನ್, ನೆಟ್ ಫ್ಲಿಕ್ಸ್ ಥರ ಅಂಗೈಯಲ್ಲಿ ಸಿನೆಮಾ ತೋರಿಸುವುದು ಕೋಟಿ ವ್ಯವಹಾರ ಎಂಬುದು ನಿಮಗೆ ಗೊತ್ತಾ?

ಅಮೇಜಾನ್, ನೆಟ್ ಫ್ಲಿಕ್ಸ್ ಥರ ಅಂಗೈಯಲ್ಲಿ ಸಿನೆಮಾ ತೋರಿಸುವುದು ಕೋಟಿ ವ್ಯವಹಾರ ಎಂಬುದು ನಿಮಗೆ ಗೊತ್ತಾ?

- Advertisement -
- Advertisement -

ತಂತ್ರಜ್ಞಾನ ಬದಲಾದಂತೆ ಹೊಸ ಹೊಸ ಆವಿಷ್ಕಾರಗಳು ಆಗುತ್ತಿರುತ್ತವೆ .ಹಾಗೇಯೆ ಸಿನೆಮಾ ಮತ್ತು ದೃಶ್ಯ ಮಾಧ್ಯಮ ರಂಗದಲ್ಲಿಯೂ ಸಹ ಸಾಕಷ್ಟು ಬದಲಾವಣೆಗಳಾದವು. ಮೊದಲಿಗೆ ದೂರದರ್ಶನ ಬಂದಾಗ ಹಳ್ಳಿಗಳಲ್ಲಿ ಕೆಲವು ಶ್ರೀಮಂತರ ಮನೆಗಳಲ್ಲಿ ಮಾತ್ರ ಟಿವಿ ಇರುತ್ತಿತ್ತು. ಆಗ ಜನ ವಾರಕ್ಕೆ ಒಮ್ಮೆ ಬರುವ ಸಿನೆಮಾಗಾಗಿ ಕಾಯುತ್ತಿದ್ದರು. ಥೀಯೇಟರ್‍ ಗಳಿಗೆ ಹೋಗಲಾರದ ಜನ ವರ್ಷನು ಗಟ್ಟಲೇ ಹೊಸ ಸಿನೆಮಾ ಟಿವಿಯಲ್ಲಿ ಬರುವುದನ್ನು ಕಾಯುತ್ತಿದ್ದರು. ಈಗ ನಿರಂತರ 24/7 ಸುದ್ದಿವಾಹಿನಿಗಳ ಹಾಗೆ, ಸಿನೆಮಾ ಚಾನೆಲ್ ಗಳು ಸಹ ಬಂದಿದ್ದು ಸಾಕಷ್ಟು ಸಿನೆಮಾಗಳನ್ನು ನೋಡಬಹುದಾಗಿದೆ. ಆದರೆ ಈಗಲೂ ಬಿಡುಗಡೆಯಾದ ಹೊಸ ಸಿನೆಮಾ ಟಿವಿಯಲ್ಲಿ ಬರಲು ಸಾಕಷ್ಟು ತಿಂಗಳ ಸಮಯ ತೆಗೆದುಕೊಳ್ಳತ್ತಿದೆ. ಕೆಲವರು ತಮ್ಮ ನೆಚ್ಚಿನ ನಾಯಕರ ಸಿನೆಮಾಗಳನ್ನು ನೋಡಲೇಬೇಕೆಂದು ಪೈರೆಸಿ ಡಿವಿಡಿ, ಸಿಡಿ ನೋಡುತ್ತಿದ್ದರಾದರು ಅವು ಕ್ಯಾಮರ ಪ್ರಿಂಟ್ ಆಗಿದ್ದು ಗುಣಮಟ್ಟದ್ದಾಗಿರುತ್ತಿರಲಿಲ್ಲ.

ಅವರೆಲ್ಲರ ಸಮಸ್ಯೆ ನೀಗಿಸಿದ್ದೆ ನೆಟ್‍ಪ್ಲಿಕ್ಸ್, ಆಮೇಜಾನ್ ಪ್ರೈಮ್‍ನಂತಹ ಓವರ್ ದಿ ಟಾಪ್ (ಓಟಿಟಿ) ನಂತಹ ವೇದಿಕೆಗಳು. ಇವು ಚಿತ್ರಮಂದಿರದಲ್ಲಿ ಬಿಡುಗಡೆಯಾದ ಸಿನಿಮಾಗಳನ್ನು ಒಂದು ತಿಂಗಳ ಒಳಗೆ ಜನರಿಗೆ ತಲುಪಿಸುತ್ತಿವೆ. ರಾಷ್ಟ್ರೀಯ, ಅಂತರಾಷ್ಟ್ರೀಯ, ಮತ್ತು ಸ್ಥಳೀಯ ಸಿನೆಮಾಗಳೇ ಅಲ್ಲದೇ ವೆಬ್‍ಸೀರಿಸ್, ಕಿರುಚಿತ್ರ, ಡಾಕ್ಯುಮೆಂಟರಿ, ಧಾರವಾಹಿ ಇನ್ನೂ ವಿಭಿನ್ನವಾದ ಮನರಂಜನೆ, ಜ್ಞಾನ ಇವೆಲ್ಲವನ್ನು ಕೊಡುತ್ತಿವೆ. ಟಿವಿಯಲ್ಲಿ ಮತ್ತು ಮೋಬೈಲ್‍ನಲ್ಲೂ ಸಮಯವಿದ್ದಾಗ ನೋಡುವ ಅವಕಾಶವನ್ನು ಕಲ್ಪಿಸಿವೆ. ಆದರೆ ಒಂದೇ ಕಂಡಿಷನ್ ಏನಪ್ಪ ಅಂದ್ರೆ ಇವುಗಳಿಗೆ ಇಂತಿಷ್ಟು ಎಂದು ದುಡ್ಡು ಕೊಡಬೇಕು. ಇದಕ್ಕಿಂತ ಮುಂಚೆ ಯೂಟೂಬ್‍ನಲ್ಲಿ ಕೆಲವು ಸಿನೆಮಾಗಳು ಸಿಗುತ್ತಿದ್ದವು ಆದರೆ ಓಟಿಟಿ ವೇದಿಕೆಗಳು ಹೊಸತನಕ್ಕೆ ಹೆಚ್ಚು ಮಹತ್ವ ಕೊಟ್ಟಿರುವುದರಿಂದ ಹೆಚ್ಚು ಹೆಚ್ಚು ಜನಪ್ರಿಯವಾಗುತ್ತಿವೆ.

ಒಟಿಟಿ ಅಂದರೆ ನೇರವಾಗಿ ಕಂಟೆಂಟ್ (ಮೀಡಿಯಾ)ಗಳನ್ನು ಇಂಟರ್ ನೆಟ್ ಮೂಲಕ ಕೇಬಲ್, ಟೆಲಿಕಮ್ಯೂನಿಕೇಶ್ ಇತರ ತಡೆಗಳಿಲ್ಲದೆ ನೇರವಾಗಿ ಗ್ರಾಹಕರಿಗೆ ತಲುಪಿಸುವುದಾಗಿದೆ. ಇವುಗಳಲ್ಲಿ ಅಮೇಜಾನ್ ಪ್ರೈಮ್ ಮತ್ತು ನೆಟ್ ಫ್ಲಿಕ್ಸ್ ಗಳು ಇಂದು ಹೆಚ್ಚು ಪ್ರಸಿದ್ದವಾಗಿವೆ. ನೀವು ಒಂದು ಚಂದಾದಾರರಾದರೆ 5 ಟಿವಿ ಅಥವಾ ಮೊಬೈಲ್ ಗಳಲ್ಲಿ ಸೇವೆಯನ್ನು ಪಡೆಯಬಹುದಾಗಿದೆ. ನೂತನ ಚಲನಚಿತ್ರಗಳು, ರಿಯಾಲಿಟಿ ಶೋ ಗಳು, ಕ್ರೀಡೆ, ಧಾರವಾಹಿ, ವೆಬ್ ಸೀರೀಸ್ ಎಲ್ಲವೂ ಸಿಗುತ್ತವೆ. ಕೆಲವೊಂದು ಜಾಗತಿಕ ಸಿನೆಮಾಗಳು ನಿಮ್ಮೂರಿನ ಚಿತ್ರಮಂದಿರಕ್ಕೆ ಬರದೇ ಹೋಗಬಹುದು. ಆಗ ನೀವು ಚಿಂತಿಸಬೇಕಿಲ್ಲ. ಈ ಒಟಿಟಿಗಳ ಮೂಲಕ ಮನೆಯಿಂದಲೇ ವೀಕ್ಷಿಸಬಹುದಾಗಿದೆ.

ಅಂತರ್ಜಾಲದ ಯುಗದಲ್ಲಿ ಡಿಜಿಟಲ್ ಸೇವೆಗಳ ಉಪಯುಕ್ತತೆಗಳು ಶರವೇಗವಾಗಿ ವೃದ್ಧಿಸುತ್ತಿವೆ. 4ಜಿ ಸೇವೆಯ ರಂಗಪ್ರವೇಶದ ಜೊತೆ ಭಾರತದಲ್ಲಿ ಓಟಿಟಿ ವೇದಿಕೆಗಳ ಮೇಲೆ ಆನ್ ಡಿಮಾಂಡ್ ವಿಡಿಯೋ ಸೇವೆಗಳ ಬೇಡಿಕೆ ಹೆಚ್ಚಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಾಗಲಿದೆ ಎಂದು ಉದ್ಯಮಗಳು ಅಭಿಪ್ರಾಯಪಡುತ್ತಿವೆ. ಅಂತರಾಷ್ಟ್ರೀಯ ವೃತ್ತಿ ನೈಪುಣ್ಯ ಸೇವೆಗಳ ಕಂಪನಿ ಪ್ರೈಸ್ ವಾಟರ್‍ಹೌಸ್ ಕೂಪರ್ಸ್(ಪಿಡಬ್ಲೂಸಿ) ವರದಿಯ ಪ್ರಕಾರ 2018 ಮುಗಿಯುವ ವೇಳೆಗೆ ನಮ್ಮ ಭಾರತದಲ್ಲಿ ಓಟಿಟಿ ವಿಡಿಯೋ ಸೇವೆಗಳ ಮಾರುಕಟ್ಟೆ 63.8ಕೋಟಿ ಡಾಲರ್ (ಸುಮಾರು ರೂ 4,466 ಕೋಟಿ)ಗಳಿಗೆ ತಲುಪಿತ್ತು. 2023ರ ಹೊತ್ತಿಗೆ ವಾರ್ಷಿಕವಾಗಿ 21.8% ರಷ್ಟು ವೃದ್ದಿಯಿಂದ 170 ಕೋಟಿ ಡಾಲರ್ (ರೂ.11,900ಕೋಟಿಗಳಿಗೆ) ತಲುಪಲಿದೆ ಎಂದು ಪಿಡಬ್ಲೂಸಿ ಅಂದಾಜು ಮಾಡಿದೆ.

ವಿಡಿಯೋ ಆನ್ ಡಿಮಾಂಡ್‍ನ ಸಬ್‍ಸ್ಕ್ರಿಪ್ಶನ್ ಡಿಮಾಂಡ್ ವಾರ್ಷಿಕವಾಗಿ 23.3%ರಷ್ಟು ವೃದ್ದಿಯಾಗಿ 150 ಕೋಟಿ ಡಾಲರ್‍ಗಳಿಗೆ ತಲುಪಲಿದೆಯೆಂದು ಸಿಡಬ್ಲೂಸಿ ವರದಿಯಲ್ಲಿ ಹೇಳಿದೆ. ಅಂದರೆ 2023ರ ಹೊತ್ತಿಗೆ ಒಟಿಟಿ ಕಂಪನಿಗಳ ಒಟ್ಟು ಆದಾಯದಲ್ಲಿ ವಿಡಿಯೋಗಳ ಸಬ್‍ಸ್ಕ್ರಿಪ್ಶನ್ ನಿಂದ ಬರುವ ಪಾಲು 84%ರಷ್ಟಕ್ಕೆ ತಲುಪಲಿದೆ. ಈಗ ಜಾಹಿರಾತಿನಿಂದಲೇ ಹೆಚ್ಚು ಆದಾಯ ಬರುತ್ತಿದೆ. ಅಷ್ಟೇ ಅಲ್ಲದೇ ನಾಲ್ಕು ವರ್ಷಗಳಲ್ಲಿ ಭಾರತದ ಒಟಿಟಿ ಮಾರುಕಟ್ಟೆ ಕೋರಿಯಾ ದೇಶವನ್ನು ಮೀರಿಸಲಿದೆ. ಪ್ರಪಂಚದಲ್ಲೇ 8ನೇ ಅತಿದೊಡ್ಡ ಒಟಿಟಿ ಮಾರುಕಟ್ಟೆ ಆಗಲಿದೆಯೆಂದು ಸಿಡಬ್ಲೂಸಿ ವರದಿ ಹೇಳುತ್ತಿದೆ. 2023 ಕೊನೆಗೆ ಜಗತ್ತಿನ ಓಟಿಟಿ ಮಾರುಕಟ್ಟೆಯ ಪರಿಮಾಣ 7,280 ಕೋಟಿ ಡಾಲರ್‍ಗಳ ಮಟ್ಟಕ್ಕೆ ಬೆಳೆಯಲಿದೆ ಎಂದು ಅಂದಾಜಿಸಲಾಗಿದೆ.

ಮನರಂಜನೆಯ ಕ್ಷೇತ್ರದಲ್ಲಿ ಅತ್ಯಧಿಕ ವೃದ್ಧಿ ಓಟಿಟಿಯದೇ…

ಭವಿಷ್ಯತ್ತಿನಲ್ಲಿ ಮಾಧ್ಯಮ , ಮನರಂಜನೆ ರಂಗದಲ್ಲಿ ಓಟಿಟಿ ಸೇವೆಗಳೆ ಹೆಚ್ಚಾಗುತ್ತಿವೆಯೆಂದು ವಿಶ್ಲೇಷಕರು ಹೇಳುತ್ತಿದ್ದಾರೆ. ನಾಲ್ಕು ವರ್ಷದಲ್ಲಿ ಒಟಿಟಿ, ಆನಲೈನ್ ಗೇಮಿಂಗ್, ಅಂತರ್ಜಾಲ ಧಾರವಾಹಿ ವಿಭಾಗದಲ್ಲಿ ಅತ್ಯಧಿಕ ವೃಧ್ದಿಯನ್ನು ನಮೂದಿಸಿವೆ ಎಂದು ಹೇಳುತ್ತಿದೆ. ಎರ್ನೆಸ್ಟ್ ಅಂಡ್ ಯಂಗ್ ವರದಿಯ ಪ್ರಕಾರ 2020ರ ಹೊತ್ತಿಗೆ ದೇಶದಲ್ಲಿ ಒಟಿಟಿ ಸೇವೆಯ ವಿನಿಯೋಗದಾರರ ಸಂಖ್ಯೆ 50ಕೋಟಿಗಳಿಗೆ ತಲಪುವ ಅವಕಾಶವಿದೆ. ಪ್ರಸ್ತುತ ದೇಶದಲ್ಲಿ ಹಿಂದಿ, ಇಂಗ್ಲೀಷ್ ಸಿನೆಮಾಗಳು, ವೆಬ್‍ಸೀರಿಸ್‍ಗಳು, ಇತರ ವಿಡಿಯೋ ಕಂಟೆಂಟ್‍ಗಳನ್ನು ಕಲ್ಪಿಸುವ ಒಟಿಟಿ ಪ್ಲೇಯರ್‍ಗಳೇ ಅಧಿಕ, ಭವಿಷ್ಯತ್ತಿನಲ್ಲಿ ಪ್ರಾದೇಶಿಕ ಭಾಷೆಗಳಲ್ಲಿ ಆನ್ ಡಿಮಾಂಡ್ ವಿಡಿಯೋಗಳು ನೀಡುವ ಸಂಸ್ಥೆಗಳು ರಂಗಪ್ರವೇಶ ಮಾಡಲಿವೆ ಎಂದು ವಿಶ್ಲೇಷಕರು ಹೇಳುತ್ತಿದ್ದಾರೆ.

ಟಿವಿ ವಾಹಿನಿಗಳ ಹವಾ ಕಡಿಮೆಯಾಗಿಲ್ಲ

ಒಟಿಟಿ ಸೇವೆಗಳು ವೇಗವಾಗಿ ವೃದ್ಧಿ ಹೊಂದುತ್ತಿದ್ದರೂ ಸಹ ಕೇಬುಲ್, ಸೆಟಲೈಟ್ ಟಿವಿ ಚಾನೆಲ್ ಗಳ ಹವಾ ಮುಂದೆಯೂ ಸಹ ಇದೇ ರೀತಿ ಮುಂದುವರೆಯಲಿದೆ ಎಂದು ಮನರಂಜನೆಯ ಕ್ಷೇತ್ರದ ತಜ್ಞರ ಅಭಿಪ್ರಾಯವಾಗಿದೆ. ಕಳೆದ ವರ್ಷದ ಪೇ ಟಿವಿ ಸೇವೆಗಳ ಆದಾಯ 1000 ಕೋಟಿ ಡಾಲರ್ (70000ರೂ ಕೋಟಿ) ಗಳಿಗೆ ತಲುಪಲಿದೆ. 2023ಕ್ಕೆ ಭಾರತ ಜಗತ್ತಿನಲ್ಲೇ ಅತಿದೊಡ್ಡ ಟಿ.ವಿ ಜಾಹಿರಾತು ಮಾರುಕಟ್ಟೆಯಾಗಿ ಅವತರಿಸಲಿದೆ ಎಂದು ಸಿಡಬ್ಲೂಸಿ ಹೇಳುತ್ತಿದೆ. ಟಿವಿ ಜಾಹಿರಾತು ಮಾರುಕಟ್ಟೆ ವರ್ಷ ವರ್ಷ 10.7ರಷ್ಟು ವೃದ್ಧಿಸುತ್ತಿದ್ದು, ಬರುವ ನಾಲ್ಕು ವರ್ಷದಲ್ಲಿ 680 ಕೋಟಿ ಡಾಲರ್‍ಗಳಿಗೆ ತಲುಪಬಹುದೆಂದು ಅಂದಾಜು.

ಭಾರತದಲ್ಲಿ ಎಲ್ಲಾ ವರ್ಗದವರು ಸಿನೆಮಾಗಳನ್ನು ಇಷ್ಟಪಡುತ್ತಾರೆ. ಹಾಗಾಗಿ ಕಾಲಕಾಲಕ್ಕೆ ಹೊಚ್ಚಹೊಸ ಸಿನೆಮಾಗಳನ್ನು ಸಿಗುವಂತೆ ಮಾಡುವುದು ಕಷ್ಟ. ನಿರಂತರ ಅಧ್ಯಯನಗಳು, ಸಾಮಾಜಿಕ ಜಾಲತಾಣಗಳ ಮೂಲಕ ವಿನಿಯೋಗದಾರರು ಹಚ್ಚು ಇಷ್ಟಪಡುತ್ತಿರುವ ಸಿನೆಮಾಗಳ ಬಗ್ಗೆ ತಿಳಿದುಕೊಳ್ಳಲು ಪ್ರಯತ್ನಿಸುತ್ತೇವೆ ಎಂದು ಅಮೇಜಾನ್ ಪ್ರೈಮ್ ವಿಡಿಯೋ ಕಂಟೆಂಟ್ ವಿಭಾಗ ಅಧಿಪತಿ ವಿಜಯ್ ಸುಬ್ರಮಣ್ಯ ಹೇಳುತ್ತಾರೆ.

ಪ್ರಸ್ತುತ ದೇಶದಲ್ಲಿ ವಿಡಿಯೋ ಆನ್ ಡಿಮಾಂಡ್ ವ್ಯಾಪಾರಗಳಿಗೆ ಬಹುತೇಕ ಆದಾಯ ಜಾಹೀರಾತು ಮೂಲಕವೇ ಬರುತ್ತಿದೆ. ಭವಿಷ್ಯತ್ತಿನಲ್ಲಿ ಸಬ್‍ಸ್ಕ್ರಿಪಷನ್ ರೆವೆನ್ಯೂ ಭಾರಿ ಮೊತ್ತದಲ್ಲಿ ಬೆಳೆಯಲಿದೆ ಎಂದು ವೂಟ್ ವಿಡಿಯೋ ಆನ್ ಡಿಮಾಂಡ್ ವಿಭಾಗದ ಮುಖ್ಯಸ್ಥ ಆಕಾಶ್ ಬ್ಯಾನರ್ಜಿ ಅಭಿಪ್ರಾಯಪಡುತ್ತಾರೆ.

ನಮ್ಮ ದೇಶದಲ್ಲಿ ಸುಮಾರು 40 ಒಟಿಟಿ ಕಂಪೆನಿಗಳಿವೆ ಅವುಗಳಲ್ಲಿ ಪ್ರಮುಖವಾದವುಗಳೆಂದರೆ ನೆಟ್‍ಪ್ಲಿಕ್ಸ್, ಅಮೇಜಾನ್ ಪ್ರೈಮ್ ವಿಡಿಯೋ, ಹಾಟ್‍ಸ್ಟಾರ್, ಜೆಡ್‍ಈಈ5, ಹಿರೋಸ್ ನವ್, ವೋಟ್, ಸೋನಿ ಲೈವ್, ಏರಟೆಲ್ ಟಿವಿ, ವೊಡಾಫೋನ್ ಪ್ಲೇ, ಜೀಯೋ ಟಿವಿ, ವಯಾಕಾಮ್ 18 ಮುಂತಾದವು..

ಪ್ರಪಂಚಾದ್ಯಾಂತ ಸಿನಿಮಾಗಳನ್ನು ಎಲ್ಲರು ನೋಡತ್ತಾರೆ. ಕೆಲವರಿಗೆ ಆಕ್ಷನ್ ಇಷ್ಟ ಆಗಬಹುದು, ಕೆಲವರಿಗೆ ಯುದ್ದ ಆಧಾರಿತ, ಫಿಕ್ಷನ್, ಕಾಮಿಡಿ, ಹಾರರ್ ಈ ರೀತಿ ಇಷ್ಟ ಆಗಬಹುದು. ಮುಂಚೆ ಟಿವಿಗಳಲ್ಲಿ ಸಿನೆಮಾ ಮತ್ತು ಧಾರಾವಾಹಿ ಮಾತ್ರ ಇತ್ತು. ಈಗ ರಿಯಾಲಿಟಿ ಶೋಗಳು ಬಂದಿದಾವೆ ಆದರೆ ಅವೂ ಕೂಡ ಸತ್ವ ಕಳೆದುಕೊಳ್ಳುತ್ತಿರೋ ಸಮಯದಲ್ಲಿ ಈ ಒಟಿಟಿಗಳಲ್ಲಿ ಯಾವುದೇ ಜಾಹೀರಾತು ಇಲ್ಲದೇ ಕುಟುಂಬದ ಜೊತೆ ಕೂತು ನೋಡಬಹುದು. ತಿಂಗಳಿಗೆ 100 ರಿಂದ 200ರೂ ನಷ್ಟು ಖರ್ಚು ಬರುತ್ತದೆ ಅಷ್ಟೇ. ಅದೇ ನೀವು ಕುಟುಂಬದ ಜೊತೆ ಥೀಯೆಟರ್‍ಗೆ ಹೋದರೆ ಇನ್ನೂ ಜಾಸ್ತಿ ಖರ್ಚು ಆಗುತ್ತೆ. ಆನ್‍ಲೈನ್ ಸ್ಟ್ರೀಮಿಂಗ್ ನಲ್ಲಿರುವ ಪ್ರಯೋಜನ ಅಂದರೆ ನಾವು ಎಲ್ಲಿಯವರೆಗೂ ನೋಡಿ ನಿಲ್ಲಿಸಿರುತ್ತೇವೋ, ಮತ್ತೆ ಸಮಯ ಸಿಕ್ಕಾಗ ಮತ್ತೆ ಅಲ್ಲಿಂದಲೇ ನೋಡಬಹುದು. ಹಾಗೂ ಯಾವುದೇ ದೇಶದ ಭಾಷೆಯಾಗಲಿ ಡಬ್ಬಿಂಗ್ ಇಲ್ಲದಿದ್ದರೆ ಸಬ್‍ಟೈಟಲ್ ಹಾಕಿಕೊಂಡು ನೋಡಬಹುದು. ಸಿನೆಮಾಗಳು ಅಂದ್ರೆ ಬರೀ ಮನರಂಜನೆಯಲ್ಲ ಇದರಿಂದ ಇತಿಹಾಸ, ಜ್ಞಾನ ಎಲ್ಲವೂ ಸಿಗುತ್ತದೆ ಎನ್ನುತ್ತಾರೆ ಟ್ರಾವೆಲ್ ಅಡ್ವೈಸರ್, ಸಿನೆಮಾ ಪ್ರೇಮಿ ಮೋಹನ್ ಕುಮಾರ್ ರವರು. ಇವರು ಬೇರೆ ಬೇರೆ ಭಾಷೆಗಳ ಸಿನೆಮಾಗಳನ್ನು ನೋಡುತ್ತಾ ಸಾಮಾಜಿಕ ಜಾಲತಾಣದಲ್ಲಿ ಅವುಗಳನ್ನು ಪರಿಚಯಿಸುವ ಹವ್ಯಾಸ ಇಟ್ಟುಕೊಂಡಿದ್ದಾರೆ.

ಸೌಜನ್ಯ: ಆಂಧ್ರಜ್ಯೋತಿ ಬಿಸೆನೆಸ್ ಡೆಸ್ಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...