Homeಮುಖಪುಟಕೊರೊನಾದಿಂದ ದೇಶ ತತ್ತರಿಸಿದ್ದರೂ ಫೋರ್ಬ್ಸ್-2022ರ ಶ್ರೀಮಂತ ಪಟ್ಟಿಯಲ್ಲಿ ಅಂಬಾನಿ, ಅದಾನಿ!

ಕೊರೊನಾದಿಂದ ದೇಶ ತತ್ತರಿಸಿದ್ದರೂ ಫೋರ್ಬ್ಸ್-2022ರ ಶ್ರೀಮಂತ ಪಟ್ಟಿಯಲ್ಲಿ ಅಂಬಾನಿ, ಅದಾನಿ!

- Advertisement -
- Advertisement -

ಕಳೆದ ವರ್ಷ ದೇಶವು ಕೊರೊನಾ ಸಾಂಕ್ರಮಿಕದಿಂದಾಗಿ ತತ್ತರಿಸಿದ್ದರೂ 36 ನೇ ವಾರ್ಷಿಕ ಬಿಲಿಯನೇರ್ ಶ್ರೇಯಾಂಕದಲ್ಲಿ ಭಾರತೀಯರು ಗಣನೀಯವಾಗಿ ಕಾಣಿಸಿಕೊಂಡಿದ್ದಾರೆ. ಫೋರ್ಬ್ಸ್‌ನ ಶ್ರೀಮಂತರ ಪಟ್ಟಿಯಲ್ಲಿ ಅಂಬಾನಿ, ಅದಾನಿಗಳು, ಮಿತ್ತಲ್‌ ಮತ್ತು ಬಿರ್ಲಾ ಸ್ಥಾನಪಡೆದ್ದಾರೆ.

ಟಾಪ್ 10 ಶ್ರೀಮಂತ ಭಾರತೀಯರು:

1. ಮುಖೇಶ್ ಅಂಬಾನಿ

90.7 ಬಿಲಿಯನ್ ಡಾಲರ್‌  ಸಂಪತ್ತಿನೊಂದಿಗೆ, ಅಂಬಾನಿ ಏಷ್ಯಾದ ಶ್ರೀಮಂತ ವ್ಯಕ್ತಿ ಮತ್ತು ವಿಶ್ವದ ಹತ್ತನೇ ಶ್ರೀಮಂತ ವ್ಯಕ್ತಿಯಾಗಿ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.

2. ಗೌತಮ್ ಅದಾನಿ ಮತ್ತು ಕುಟುಂಬ

ಪ್ರಸ್ತುತ ಏಷ್ಯಾದ ಎರಡನೇ ಅತಿ ಶ್ರೀಮಂತ ವ್ಯಕ್ತಿ ಗೌತಮ್ ಅದಾನಿಯಾಗಿದ್ದು, ವಿಶ್ವದ 11 ನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ.

3. ಶಿವ ನಾಡರ್

HCL ಟೆಕ್ನಾಲಜೀಸ್ ಲಿಮಿಟೆಡ್‌ನ ಸಂಸ್ಥಾಪಕ ನಾಡಾರ್ ಅವರು ತಮ್ಮ ಸಂಪತ್ತನ್ನು ಈ ವರ್ಷ 22% ದಷ್ಟು ಹೆಚ್ಚಿಸಿಕೊಂಡಿದ್ದಾರೆ. ಜೊತೆಗೆ 28.7 ಶತಕೋಟಿ ಡಾಲರ್‌  ಸಂಪತ್ತನ್ನು ಹೊಂದಿದ್ದಾರೆ ಎಂದು ಫೋರ್ಬ್ಸ್ ವರದಿ ಮಾಡಿದೆ. ಇವರು ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 47 ನೇ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ: ಹೆಚ್ಚಿದ ಕೋಮು ಉದ್ವಿಗ್ನತೆ ಹಿನ್ನಲೆ: ಕಂಪೆನಿಗಳನ್ನು ಕರ್ನಾಟಕದಿಂದ ತಮಿಳುನಾಡಿಗೆ ಸೆಳೆಯಲು ಪ್ರಯತ್ನಿಸುತ್ತಿರುವ ಡಿಎಂಕೆ ಸರ್ಕಾರ

4. ಸೈರಸ್ ಪೂನಾವಾಲ

ಪೂನಾವಾಲ ಅವರ ಸಂಪತ್ತು 24.3 ಶತಕೋಟಿ ಡಾಲರ್‌ಗೆ ತಲುಪಿದೆ. ಕೋವಿಶೀಲ್ಡ್ ಲಸಿಕೆಯನ್ನು ತಯಾರಿಸುವ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಅಧ್ಯಕ್ಷರಾದ ಪೂವಾವಾಲಾ ಅವರು ಕಳೆದ ಬಾರಿಗಿಂತ ನಾಲ್ಕು ಸ್ಥಾನಗಳು ಮೇಲಕ್ಕೆ ಏರಿದ್ದು, ವಿಶ್ವದ ಶ್ರೀಮಂತರ ಪಟ್ಟಿಯ 56 ನೇ ಸ್ಥಾನದಲ್ಲಿದ್ದಾರೆ.

5. ರಾಧಾಕಿಶನ್ ದಮಾನಿ

ರಾಧಾಕಿಶನ್ 20 ಶತಕೋಟಿ ಡಾಲರ್‌‌ ಆಸ್ತಿಯನ್ನು ಹೊಂದಿರುವ ಬಿಲಿಯನೇರ್. ಅವರು ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 81 ನೇ ಸ್ಥಾನದಲ್ಲಿದ್ದಾರೆ. ಇವರು ಅವೆನ್ಯೂ ಸೂಪರ್‌‌  ಮಾರ್ಕೆಟ್‌‌ಗಳನ್ನು ನಡೆಸುತ್ತಿದ್ದು, ಇದು ದೇಶಾದ್ಯಂತ ಡಿ-ಮಾರ್ಟ್ಸ್ ಅನ್ನು ನಿರ್ವಹಿಸುತ್ತದೆ.

6. ಲಕ್ಷ್ಮಿ ಮಿತ್ತಲ್

ಲಕ್ಷ್ಮಿ ಮಿತ್ತಲ್ ಅವರು ವಿಶ್ವದ ಅತಿದೊಡ್ಡ ಕಬ್ಬಿಣ ಮತ್ತು ಉಕ್ಕಿನ ಕಂಪನಿಯಾದ ಆರ್ಸೆಲರ್ ಮಿತ್ತಲ್‌ನ ಅಧ್ಯಕ್ಷರಾಗಿದ್ದಾರೆ. ಅವರ ಸಂಪತ್ತಿನ ಪ್ರಕಾರ ಅವರು ವಿಶ್ವದ ಶ್ರೀಮಂತರ ಪಟ್ಟಿಯ 89 ನೇ ಸ್ಥಾನದಲ್ಲಿದ್ದಾರೆ.

7. ಸಾವಿತ್ರಿ ಜಿಂದಾಲ್ ಮತ್ತು ಕುಟುಂಬ

ಒಪಿ ಜಿಂದಾಲ್ ಗ್ರೂಪ್‌ನ ಸಿಇಒ ಸಾವಿತ್ರಿ ಜಿಂದಾಲ್ ಅವರು 17.7 ಬಿಲಿಯನ್ ಡಾಲರ್ ಸಂಪತ್ತನ್ನು ಹೊಂದಿದ್ದಾರೆ. ಫೋರ್ಬ್ಸ್ ಪಟ್ಟಿಯಲ್ಲಿ ಅವರು 91 ನೇ ಸ್ಥಾನದಲ್ಲಿದ್ದಾರೆ. ಅವರು ಭಾರತದ ಟಾಪ್ 10 ಶ್ರೀಮಂತ ಭಾರತೀಯರಲ್ಲಿ ಏಕೈಕ ಮಹಿಳೆಯಾಗಿದ್ದು, ಬಿಲಿಯನೇರ್‌ಗಳ ಪಟ್ಟಿಯಲ್ಲಿರುವ 13 ಭಾರತೀಯ ಮಹಿಳೆಯರಲ್ಲಿ ಒಬ್ಬರಾಗಿದ್ದಾರೆ.

ಇದನ್ನೂ ಓದಿ: ಸುದರ್ಶನ್ ಟಿವಿ ಪತ್ರಕರ್ತೆಯನ್ನು ತರಾಟೆಗೆ ತೆಗೆದುಕೊಂಡ ಹಲ್ದಿರಾಮ್ಸ್ ಉದ್ಯೋಗಿ: ನೆಟ್ಟಿಗರ ಶ್ಲಾಘನೆ

8. ಕುಮಾರ್ ಬಿರ್ಲಾ

ಆದಿತ್ಯ ಬಿರ್ಲಾ ಗ್ರೂಪ್‌ನ ಅಧ್ಯಕ್ಷರಾಗಿರುವ ಕುಮಾರ್, ವಿಶ್ವದ ಶ್ರೀಮಂತ ವ್ಯಕ್ತಿಗಳ ಪಟ್ಟಿಯಲ್ಲಿ 109 ನೇ ಸ್ಥಾನದಲ್ಲಿದ್ದಾರೆ. ಅವರು 16.5 ಬಿಲಿಯನ್ ಡಾಲರ್‌ ಸಂಪತ್ತನ್ನು ಹೊಂದಿದ್ದಾರೆ.

9. ದಿಲೀಪ್ ಶಾಂಘ್ವಿ

ಶಾಂಘ್ವಿ ಅವರು ವಿಶ್ವದ ಅತಿದೊಡ್ಡ ಫಾರ್ಮಾ ಕಂಪನಿಗಳಲ್ಲಿ ಒಂದಾದ ಸನ್ ಫಾರ್ಮಾಸ್ಯುಟಿಕಲ್ಸ್‌ನ ಮಾಲೀಕರಾಗಿದ್ದಾರೆ. ಅವರು ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 115 ನೇ ಸ್ಥಾನದಲ್ಲಿದ್ದಾರೆ. ಅವರು 15.6 ಬಿಲಿಯನ್ ಡಾಲರ್‌ ಸಂಪತ್ತನ್ನು ಹೊಂದಿದ್ದಾರೆ.

10. ಉದಯ್ ಕೋಟಕ್

ಉದಯ್ ಕೋಟಕ್ ಅವರು ಕೋಟಕ್‌ ಮಹೀಂದ್ರಾ ಬ್ಯಾಂಕ್ ಅನ್ನು ನಿರ್ವಹಿಸುತ್ತಿದ್ದಾರೆ. ಫೋರ್ಬ್ಸ್‌ನಿಂದ “ಭಾರತದ ಅತ್ಯಂತ ಶ್ರೀಮಂತ ಸ್ವಯಂ ನಿರ್ಮಿತ ಬ್ಯಾಂಕರ್” ಎಂಬ ಉದಯ್ ಕೋಟಕ್‌ ಬಣ್ಣಿಸಲ್ಪಟ್ಟಿದ್ದಾರೆ. ಅವರ ಸಂಪತ್ತು 14.3 ಬಿಲಿಯನ್ ಡಾಲರ್‌ ಇದ್ದು, ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 129 ನೇ ಸ್ಥಾನದಲ್ಲಿದ್ದಾರೆ.

ಅಜೀಂ ಪ್ರೇಮ್‌ಜಿ, ಬಜಾಜ್ ಸಹೋದರರು, ರಾಕೇಶ್ ಜುಂಜುನ್‌ವಾಲಾ, ಫಲ್ಗುಣಿ ನಾಯರ್ ಸೇರಿದಂತೆ ಹಲವಾರು ಭಾರತೀಯರು ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಭಟ್ಕಳ-ಹೊನ್ನಾವರ: ಧರ್ಮಕಾರಣ ಮತ್ತು ಜಾತಿಕಾರಣದ ಜುಗಲ್‌ಬಂದಿಯ ಆಖಾಡ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...