Homeಮುಖಪುಟಕೊರೊನಾದಿಂದ ದೇಶ ತತ್ತರಿಸಿದ್ದರೂ ಫೋರ್ಬ್ಸ್-2022ರ ಶ್ರೀಮಂತ ಪಟ್ಟಿಯಲ್ಲಿ ಅಂಬಾನಿ, ಅದಾನಿ!

ಕೊರೊನಾದಿಂದ ದೇಶ ತತ್ತರಿಸಿದ್ದರೂ ಫೋರ್ಬ್ಸ್-2022ರ ಶ್ರೀಮಂತ ಪಟ್ಟಿಯಲ್ಲಿ ಅಂಬಾನಿ, ಅದಾನಿ!

- Advertisement -
- Advertisement -

ಕಳೆದ ವರ್ಷ ದೇಶವು ಕೊರೊನಾ ಸಾಂಕ್ರಮಿಕದಿಂದಾಗಿ ತತ್ತರಿಸಿದ್ದರೂ 36 ನೇ ವಾರ್ಷಿಕ ಬಿಲಿಯನೇರ್ ಶ್ರೇಯಾಂಕದಲ್ಲಿ ಭಾರತೀಯರು ಗಣನೀಯವಾಗಿ ಕಾಣಿಸಿಕೊಂಡಿದ್ದಾರೆ. ಫೋರ್ಬ್ಸ್‌ನ ಶ್ರೀಮಂತರ ಪಟ್ಟಿಯಲ್ಲಿ ಅಂಬಾನಿ, ಅದಾನಿಗಳು, ಮಿತ್ತಲ್‌ ಮತ್ತು ಬಿರ್ಲಾ ಸ್ಥಾನಪಡೆದ್ದಾರೆ.

ಟಾಪ್ 10 ಶ್ರೀಮಂತ ಭಾರತೀಯರು:

1. ಮುಖೇಶ್ ಅಂಬಾನಿ

90.7 ಬಿಲಿಯನ್ ಡಾಲರ್‌  ಸಂಪತ್ತಿನೊಂದಿಗೆ, ಅಂಬಾನಿ ಏಷ್ಯಾದ ಶ್ರೀಮಂತ ವ್ಯಕ್ತಿ ಮತ್ತು ವಿಶ್ವದ ಹತ್ತನೇ ಶ್ರೀಮಂತ ವ್ಯಕ್ತಿಯಾಗಿ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.

2. ಗೌತಮ್ ಅದಾನಿ ಮತ್ತು ಕುಟುಂಬ

ಪ್ರಸ್ತುತ ಏಷ್ಯಾದ ಎರಡನೇ ಅತಿ ಶ್ರೀಮಂತ ವ್ಯಕ್ತಿ ಗೌತಮ್ ಅದಾನಿಯಾಗಿದ್ದು, ವಿಶ್ವದ 11 ನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ.

3. ಶಿವ ನಾಡರ್

HCL ಟೆಕ್ನಾಲಜೀಸ್ ಲಿಮಿಟೆಡ್‌ನ ಸಂಸ್ಥಾಪಕ ನಾಡಾರ್ ಅವರು ತಮ್ಮ ಸಂಪತ್ತನ್ನು ಈ ವರ್ಷ 22% ದಷ್ಟು ಹೆಚ್ಚಿಸಿಕೊಂಡಿದ್ದಾರೆ. ಜೊತೆಗೆ 28.7 ಶತಕೋಟಿ ಡಾಲರ್‌  ಸಂಪತ್ತನ್ನು ಹೊಂದಿದ್ದಾರೆ ಎಂದು ಫೋರ್ಬ್ಸ್ ವರದಿ ಮಾಡಿದೆ. ಇವರು ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 47 ನೇ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ: ಹೆಚ್ಚಿದ ಕೋಮು ಉದ್ವಿಗ್ನತೆ ಹಿನ್ನಲೆ: ಕಂಪೆನಿಗಳನ್ನು ಕರ್ನಾಟಕದಿಂದ ತಮಿಳುನಾಡಿಗೆ ಸೆಳೆಯಲು ಪ್ರಯತ್ನಿಸುತ್ತಿರುವ ಡಿಎಂಕೆ ಸರ್ಕಾರ

4. ಸೈರಸ್ ಪೂನಾವಾಲ

ಪೂನಾವಾಲ ಅವರ ಸಂಪತ್ತು 24.3 ಶತಕೋಟಿ ಡಾಲರ್‌ಗೆ ತಲುಪಿದೆ. ಕೋವಿಶೀಲ್ಡ್ ಲಸಿಕೆಯನ್ನು ತಯಾರಿಸುವ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಅಧ್ಯಕ್ಷರಾದ ಪೂವಾವಾಲಾ ಅವರು ಕಳೆದ ಬಾರಿಗಿಂತ ನಾಲ್ಕು ಸ್ಥಾನಗಳು ಮೇಲಕ್ಕೆ ಏರಿದ್ದು, ವಿಶ್ವದ ಶ್ರೀಮಂತರ ಪಟ್ಟಿಯ 56 ನೇ ಸ್ಥಾನದಲ್ಲಿದ್ದಾರೆ.

5. ರಾಧಾಕಿಶನ್ ದಮಾನಿ

ರಾಧಾಕಿಶನ್ 20 ಶತಕೋಟಿ ಡಾಲರ್‌‌ ಆಸ್ತಿಯನ್ನು ಹೊಂದಿರುವ ಬಿಲಿಯನೇರ್. ಅವರು ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 81 ನೇ ಸ್ಥಾನದಲ್ಲಿದ್ದಾರೆ. ಇವರು ಅವೆನ್ಯೂ ಸೂಪರ್‌‌  ಮಾರ್ಕೆಟ್‌‌ಗಳನ್ನು ನಡೆಸುತ್ತಿದ್ದು, ಇದು ದೇಶಾದ್ಯಂತ ಡಿ-ಮಾರ್ಟ್ಸ್ ಅನ್ನು ನಿರ್ವಹಿಸುತ್ತದೆ.

6. ಲಕ್ಷ್ಮಿ ಮಿತ್ತಲ್

ಲಕ್ಷ್ಮಿ ಮಿತ್ತಲ್ ಅವರು ವಿಶ್ವದ ಅತಿದೊಡ್ಡ ಕಬ್ಬಿಣ ಮತ್ತು ಉಕ್ಕಿನ ಕಂಪನಿಯಾದ ಆರ್ಸೆಲರ್ ಮಿತ್ತಲ್‌ನ ಅಧ್ಯಕ್ಷರಾಗಿದ್ದಾರೆ. ಅವರ ಸಂಪತ್ತಿನ ಪ್ರಕಾರ ಅವರು ವಿಶ್ವದ ಶ್ರೀಮಂತರ ಪಟ್ಟಿಯ 89 ನೇ ಸ್ಥಾನದಲ್ಲಿದ್ದಾರೆ.

7. ಸಾವಿತ್ರಿ ಜಿಂದಾಲ್ ಮತ್ತು ಕುಟುಂಬ

ಒಪಿ ಜಿಂದಾಲ್ ಗ್ರೂಪ್‌ನ ಸಿಇಒ ಸಾವಿತ್ರಿ ಜಿಂದಾಲ್ ಅವರು 17.7 ಬಿಲಿಯನ್ ಡಾಲರ್ ಸಂಪತ್ತನ್ನು ಹೊಂದಿದ್ದಾರೆ. ಫೋರ್ಬ್ಸ್ ಪಟ್ಟಿಯಲ್ಲಿ ಅವರು 91 ನೇ ಸ್ಥಾನದಲ್ಲಿದ್ದಾರೆ. ಅವರು ಭಾರತದ ಟಾಪ್ 10 ಶ್ರೀಮಂತ ಭಾರತೀಯರಲ್ಲಿ ಏಕೈಕ ಮಹಿಳೆಯಾಗಿದ್ದು, ಬಿಲಿಯನೇರ್‌ಗಳ ಪಟ್ಟಿಯಲ್ಲಿರುವ 13 ಭಾರತೀಯ ಮಹಿಳೆಯರಲ್ಲಿ ಒಬ್ಬರಾಗಿದ್ದಾರೆ.

ಇದನ್ನೂ ಓದಿ: ಸುದರ್ಶನ್ ಟಿವಿ ಪತ್ರಕರ್ತೆಯನ್ನು ತರಾಟೆಗೆ ತೆಗೆದುಕೊಂಡ ಹಲ್ದಿರಾಮ್ಸ್ ಉದ್ಯೋಗಿ: ನೆಟ್ಟಿಗರ ಶ್ಲಾಘನೆ

8. ಕುಮಾರ್ ಬಿರ್ಲಾ

ಆದಿತ್ಯ ಬಿರ್ಲಾ ಗ್ರೂಪ್‌ನ ಅಧ್ಯಕ್ಷರಾಗಿರುವ ಕುಮಾರ್, ವಿಶ್ವದ ಶ್ರೀಮಂತ ವ್ಯಕ್ತಿಗಳ ಪಟ್ಟಿಯಲ್ಲಿ 109 ನೇ ಸ್ಥಾನದಲ್ಲಿದ್ದಾರೆ. ಅವರು 16.5 ಬಿಲಿಯನ್ ಡಾಲರ್‌ ಸಂಪತ್ತನ್ನು ಹೊಂದಿದ್ದಾರೆ.

9. ದಿಲೀಪ್ ಶಾಂಘ್ವಿ

ಶಾಂಘ್ವಿ ಅವರು ವಿಶ್ವದ ಅತಿದೊಡ್ಡ ಫಾರ್ಮಾ ಕಂಪನಿಗಳಲ್ಲಿ ಒಂದಾದ ಸನ್ ಫಾರ್ಮಾಸ್ಯುಟಿಕಲ್ಸ್‌ನ ಮಾಲೀಕರಾಗಿದ್ದಾರೆ. ಅವರು ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 115 ನೇ ಸ್ಥಾನದಲ್ಲಿದ್ದಾರೆ. ಅವರು 15.6 ಬಿಲಿಯನ್ ಡಾಲರ್‌ ಸಂಪತ್ತನ್ನು ಹೊಂದಿದ್ದಾರೆ.

10. ಉದಯ್ ಕೋಟಕ್

ಉದಯ್ ಕೋಟಕ್ ಅವರು ಕೋಟಕ್‌ ಮಹೀಂದ್ರಾ ಬ್ಯಾಂಕ್ ಅನ್ನು ನಿರ್ವಹಿಸುತ್ತಿದ್ದಾರೆ. ಫೋರ್ಬ್ಸ್‌ನಿಂದ “ಭಾರತದ ಅತ್ಯಂತ ಶ್ರೀಮಂತ ಸ್ವಯಂ ನಿರ್ಮಿತ ಬ್ಯಾಂಕರ್” ಎಂಬ ಉದಯ್ ಕೋಟಕ್‌ ಬಣ್ಣಿಸಲ್ಪಟ್ಟಿದ್ದಾರೆ. ಅವರ ಸಂಪತ್ತು 14.3 ಬಿಲಿಯನ್ ಡಾಲರ್‌ ಇದ್ದು, ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 129 ನೇ ಸ್ಥಾನದಲ್ಲಿದ್ದಾರೆ.

ಅಜೀಂ ಪ್ರೇಮ್‌ಜಿ, ಬಜಾಜ್ ಸಹೋದರರು, ರಾಕೇಶ್ ಜುಂಜುನ್‌ವಾಲಾ, ಫಲ್ಗುಣಿ ನಾಯರ್ ಸೇರಿದಂತೆ ಹಲವಾರು ಭಾರತೀಯರು ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಭಟ್ಕಳ-ಹೊನ್ನಾವರ: ಧರ್ಮಕಾರಣ ಮತ್ತು ಜಾತಿಕಾರಣದ ಜುಗಲ್‌ಬಂದಿಯ ಆಖಾಡ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...