Homeಮುಖಪುಟಕೊರೊನಾದಿಂದ ದೇಶ ತತ್ತರಿಸಿದ್ದರೂ ಫೋರ್ಬ್ಸ್-2022ರ ಶ್ರೀಮಂತ ಪಟ್ಟಿಯಲ್ಲಿ ಅಂಬಾನಿ, ಅದಾನಿ!

ಕೊರೊನಾದಿಂದ ದೇಶ ತತ್ತರಿಸಿದ್ದರೂ ಫೋರ್ಬ್ಸ್-2022ರ ಶ್ರೀಮಂತ ಪಟ್ಟಿಯಲ್ಲಿ ಅಂಬಾನಿ, ಅದಾನಿ!

- Advertisement -
- Advertisement -

ಕಳೆದ ವರ್ಷ ದೇಶವು ಕೊರೊನಾ ಸಾಂಕ್ರಮಿಕದಿಂದಾಗಿ ತತ್ತರಿಸಿದ್ದರೂ 36 ನೇ ವಾರ್ಷಿಕ ಬಿಲಿಯನೇರ್ ಶ್ರೇಯಾಂಕದಲ್ಲಿ ಭಾರತೀಯರು ಗಣನೀಯವಾಗಿ ಕಾಣಿಸಿಕೊಂಡಿದ್ದಾರೆ. ಫೋರ್ಬ್ಸ್‌ನ ಶ್ರೀಮಂತರ ಪಟ್ಟಿಯಲ್ಲಿ ಅಂಬಾನಿ, ಅದಾನಿಗಳು, ಮಿತ್ತಲ್‌ ಮತ್ತು ಬಿರ್ಲಾ ಸ್ಥಾನಪಡೆದ್ದಾರೆ.

ಟಾಪ್ 10 ಶ್ರೀಮಂತ ಭಾರತೀಯರು:

1. ಮುಖೇಶ್ ಅಂಬಾನಿ

90.7 ಬಿಲಿಯನ್ ಡಾಲರ್‌  ಸಂಪತ್ತಿನೊಂದಿಗೆ, ಅಂಬಾನಿ ಏಷ್ಯಾದ ಶ್ರೀಮಂತ ವ್ಯಕ್ತಿ ಮತ್ತು ವಿಶ್ವದ ಹತ್ತನೇ ಶ್ರೀಮಂತ ವ್ಯಕ್ತಿಯಾಗಿ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.

2. ಗೌತಮ್ ಅದಾನಿ ಮತ್ತು ಕುಟುಂಬ

ಪ್ರಸ್ತುತ ಏಷ್ಯಾದ ಎರಡನೇ ಅತಿ ಶ್ರೀಮಂತ ವ್ಯಕ್ತಿ ಗೌತಮ್ ಅದಾನಿಯಾಗಿದ್ದು, ವಿಶ್ವದ 11 ನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ.

3. ಶಿವ ನಾಡರ್

HCL ಟೆಕ್ನಾಲಜೀಸ್ ಲಿಮಿಟೆಡ್‌ನ ಸಂಸ್ಥಾಪಕ ನಾಡಾರ್ ಅವರು ತಮ್ಮ ಸಂಪತ್ತನ್ನು ಈ ವರ್ಷ 22% ದಷ್ಟು ಹೆಚ್ಚಿಸಿಕೊಂಡಿದ್ದಾರೆ. ಜೊತೆಗೆ 28.7 ಶತಕೋಟಿ ಡಾಲರ್‌  ಸಂಪತ್ತನ್ನು ಹೊಂದಿದ್ದಾರೆ ಎಂದು ಫೋರ್ಬ್ಸ್ ವರದಿ ಮಾಡಿದೆ. ಇವರು ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 47 ನೇ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ: ಹೆಚ್ಚಿದ ಕೋಮು ಉದ್ವಿಗ್ನತೆ ಹಿನ್ನಲೆ: ಕಂಪೆನಿಗಳನ್ನು ಕರ್ನಾಟಕದಿಂದ ತಮಿಳುನಾಡಿಗೆ ಸೆಳೆಯಲು ಪ್ರಯತ್ನಿಸುತ್ತಿರುವ ಡಿಎಂಕೆ ಸರ್ಕಾರ

4. ಸೈರಸ್ ಪೂನಾವಾಲ

ಪೂನಾವಾಲ ಅವರ ಸಂಪತ್ತು 24.3 ಶತಕೋಟಿ ಡಾಲರ್‌ಗೆ ತಲುಪಿದೆ. ಕೋವಿಶೀಲ್ಡ್ ಲಸಿಕೆಯನ್ನು ತಯಾರಿಸುವ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಅಧ್ಯಕ್ಷರಾದ ಪೂವಾವಾಲಾ ಅವರು ಕಳೆದ ಬಾರಿಗಿಂತ ನಾಲ್ಕು ಸ್ಥಾನಗಳು ಮೇಲಕ್ಕೆ ಏರಿದ್ದು, ವಿಶ್ವದ ಶ್ರೀಮಂತರ ಪಟ್ಟಿಯ 56 ನೇ ಸ್ಥಾನದಲ್ಲಿದ್ದಾರೆ.

5. ರಾಧಾಕಿಶನ್ ದಮಾನಿ

ರಾಧಾಕಿಶನ್ 20 ಶತಕೋಟಿ ಡಾಲರ್‌‌ ಆಸ್ತಿಯನ್ನು ಹೊಂದಿರುವ ಬಿಲಿಯನೇರ್. ಅವರು ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 81 ನೇ ಸ್ಥಾನದಲ್ಲಿದ್ದಾರೆ. ಇವರು ಅವೆನ್ಯೂ ಸೂಪರ್‌‌  ಮಾರ್ಕೆಟ್‌‌ಗಳನ್ನು ನಡೆಸುತ್ತಿದ್ದು, ಇದು ದೇಶಾದ್ಯಂತ ಡಿ-ಮಾರ್ಟ್ಸ್ ಅನ್ನು ನಿರ್ವಹಿಸುತ್ತದೆ.

6. ಲಕ್ಷ್ಮಿ ಮಿತ್ತಲ್

ಲಕ್ಷ್ಮಿ ಮಿತ್ತಲ್ ಅವರು ವಿಶ್ವದ ಅತಿದೊಡ್ಡ ಕಬ್ಬಿಣ ಮತ್ತು ಉಕ್ಕಿನ ಕಂಪನಿಯಾದ ಆರ್ಸೆಲರ್ ಮಿತ್ತಲ್‌ನ ಅಧ್ಯಕ್ಷರಾಗಿದ್ದಾರೆ. ಅವರ ಸಂಪತ್ತಿನ ಪ್ರಕಾರ ಅವರು ವಿಶ್ವದ ಶ್ರೀಮಂತರ ಪಟ್ಟಿಯ 89 ನೇ ಸ್ಥಾನದಲ್ಲಿದ್ದಾರೆ.

7. ಸಾವಿತ್ರಿ ಜಿಂದಾಲ್ ಮತ್ತು ಕುಟುಂಬ

ಒಪಿ ಜಿಂದಾಲ್ ಗ್ರೂಪ್‌ನ ಸಿಇಒ ಸಾವಿತ್ರಿ ಜಿಂದಾಲ್ ಅವರು 17.7 ಬಿಲಿಯನ್ ಡಾಲರ್ ಸಂಪತ್ತನ್ನು ಹೊಂದಿದ್ದಾರೆ. ಫೋರ್ಬ್ಸ್ ಪಟ್ಟಿಯಲ್ಲಿ ಅವರು 91 ನೇ ಸ್ಥಾನದಲ್ಲಿದ್ದಾರೆ. ಅವರು ಭಾರತದ ಟಾಪ್ 10 ಶ್ರೀಮಂತ ಭಾರತೀಯರಲ್ಲಿ ಏಕೈಕ ಮಹಿಳೆಯಾಗಿದ್ದು, ಬಿಲಿಯನೇರ್‌ಗಳ ಪಟ್ಟಿಯಲ್ಲಿರುವ 13 ಭಾರತೀಯ ಮಹಿಳೆಯರಲ್ಲಿ ಒಬ್ಬರಾಗಿದ್ದಾರೆ.

ಇದನ್ನೂ ಓದಿ: ಸುದರ್ಶನ್ ಟಿವಿ ಪತ್ರಕರ್ತೆಯನ್ನು ತರಾಟೆಗೆ ತೆಗೆದುಕೊಂಡ ಹಲ್ದಿರಾಮ್ಸ್ ಉದ್ಯೋಗಿ: ನೆಟ್ಟಿಗರ ಶ್ಲಾಘನೆ

8. ಕುಮಾರ್ ಬಿರ್ಲಾ

ಆದಿತ್ಯ ಬಿರ್ಲಾ ಗ್ರೂಪ್‌ನ ಅಧ್ಯಕ್ಷರಾಗಿರುವ ಕುಮಾರ್, ವಿಶ್ವದ ಶ್ರೀಮಂತ ವ್ಯಕ್ತಿಗಳ ಪಟ್ಟಿಯಲ್ಲಿ 109 ನೇ ಸ್ಥಾನದಲ್ಲಿದ್ದಾರೆ. ಅವರು 16.5 ಬಿಲಿಯನ್ ಡಾಲರ್‌ ಸಂಪತ್ತನ್ನು ಹೊಂದಿದ್ದಾರೆ.

9. ದಿಲೀಪ್ ಶಾಂಘ್ವಿ

ಶಾಂಘ್ವಿ ಅವರು ವಿಶ್ವದ ಅತಿದೊಡ್ಡ ಫಾರ್ಮಾ ಕಂಪನಿಗಳಲ್ಲಿ ಒಂದಾದ ಸನ್ ಫಾರ್ಮಾಸ್ಯುಟಿಕಲ್ಸ್‌ನ ಮಾಲೀಕರಾಗಿದ್ದಾರೆ. ಅವರು ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 115 ನೇ ಸ್ಥಾನದಲ್ಲಿದ್ದಾರೆ. ಅವರು 15.6 ಬಿಲಿಯನ್ ಡಾಲರ್‌ ಸಂಪತ್ತನ್ನು ಹೊಂದಿದ್ದಾರೆ.

10. ಉದಯ್ ಕೋಟಕ್

ಉದಯ್ ಕೋಟಕ್ ಅವರು ಕೋಟಕ್‌ ಮಹೀಂದ್ರಾ ಬ್ಯಾಂಕ್ ಅನ್ನು ನಿರ್ವಹಿಸುತ್ತಿದ್ದಾರೆ. ಫೋರ್ಬ್ಸ್‌ನಿಂದ “ಭಾರತದ ಅತ್ಯಂತ ಶ್ರೀಮಂತ ಸ್ವಯಂ ನಿರ್ಮಿತ ಬ್ಯಾಂಕರ್” ಎಂಬ ಉದಯ್ ಕೋಟಕ್‌ ಬಣ್ಣಿಸಲ್ಪಟ್ಟಿದ್ದಾರೆ. ಅವರ ಸಂಪತ್ತು 14.3 ಬಿಲಿಯನ್ ಡಾಲರ್‌ ಇದ್ದು, ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 129 ನೇ ಸ್ಥಾನದಲ್ಲಿದ್ದಾರೆ.

ಅಜೀಂ ಪ್ರೇಮ್‌ಜಿ, ಬಜಾಜ್ ಸಹೋದರರು, ರಾಕೇಶ್ ಜುಂಜುನ್‌ವಾಲಾ, ಫಲ್ಗುಣಿ ನಾಯರ್ ಸೇರಿದಂತೆ ಹಲವಾರು ಭಾರತೀಯರು ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಭಟ್ಕಳ-ಹೊನ್ನಾವರ: ಧರ್ಮಕಾರಣ ಮತ್ತು ಜಾತಿಕಾರಣದ ಜುಗಲ್‌ಬಂದಿಯ ಆಖಾಡ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...