Homeಮುಖಪುಟಕೊರೊನಾದಿಂದ ದೇಶ ತತ್ತರಿಸಿದ್ದರೂ ಫೋರ್ಬ್ಸ್-2022ರ ಶ್ರೀಮಂತ ಪಟ್ಟಿಯಲ್ಲಿ ಅಂಬಾನಿ, ಅದಾನಿ!

ಕೊರೊನಾದಿಂದ ದೇಶ ತತ್ತರಿಸಿದ್ದರೂ ಫೋರ್ಬ್ಸ್-2022ರ ಶ್ರೀಮಂತ ಪಟ್ಟಿಯಲ್ಲಿ ಅಂಬಾನಿ, ಅದಾನಿ!

- Advertisement -
- Advertisement -

ಕಳೆದ ವರ್ಷ ದೇಶವು ಕೊರೊನಾ ಸಾಂಕ್ರಮಿಕದಿಂದಾಗಿ ತತ್ತರಿಸಿದ್ದರೂ 36 ನೇ ವಾರ್ಷಿಕ ಬಿಲಿಯನೇರ್ ಶ್ರೇಯಾಂಕದಲ್ಲಿ ಭಾರತೀಯರು ಗಣನೀಯವಾಗಿ ಕಾಣಿಸಿಕೊಂಡಿದ್ದಾರೆ. ಫೋರ್ಬ್ಸ್‌ನ ಶ್ರೀಮಂತರ ಪಟ್ಟಿಯಲ್ಲಿ ಅಂಬಾನಿ, ಅದಾನಿಗಳು, ಮಿತ್ತಲ್‌ ಮತ್ತು ಬಿರ್ಲಾ ಸ್ಥಾನಪಡೆದ್ದಾರೆ.

ಟಾಪ್ 10 ಶ್ರೀಮಂತ ಭಾರತೀಯರು:

1. ಮುಖೇಶ್ ಅಂಬಾನಿ

90.7 ಬಿಲಿಯನ್ ಡಾಲರ್‌  ಸಂಪತ್ತಿನೊಂದಿಗೆ, ಅಂಬಾನಿ ಏಷ್ಯಾದ ಶ್ರೀಮಂತ ವ್ಯಕ್ತಿ ಮತ್ತು ವಿಶ್ವದ ಹತ್ತನೇ ಶ್ರೀಮಂತ ವ್ಯಕ್ತಿಯಾಗಿ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.

2. ಗೌತಮ್ ಅದಾನಿ ಮತ್ತು ಕುಟುಂಬ

ಪ್ರಸ್ತುತ ಏಷ್ಯಾದ ಎರಡನೇ ಅತಿ ಶ್ರೀಮಂತ ವ್ಯಕ್ತಿ ಗೌತಮ್ ಅದಾನಿಯಾಗಿದ್ದು, ವಿಶ್ವದ 11 ನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ.

3. ಶಿವ ನಾಡರ್

HCL ಟೆಕ್ನಾಲಜೀಸ್ ಲಿಮಿಟೆಡ್‌ನ ಸಂಸ್ಥಾಪಕ ನಾಡಾರ್ ಅವರು ತಮ್ಮ ಸಂಪತ್ತನ್ನು ಈ ವರ್ಷ 22% ದಷ್ಟು ಹೆಚ್ಚಿಸಿಕೊಂಡಿದ್ದಾರೆ. ಜೊತೆಗೆ 28.7 ಶತಕೋಟಿ ಡಾಲರ್‌  ಸಂಪತ್ತನ್ನು ಹೊಂದಿದ್ದಾರೆ ಎಂದು ಫೋರ್ಬ್ಸ್ ವರದಿ ಮಾಡಿದೆ. ಇವರು ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 47 ನೇ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ: ಹೆಚ್ಚಿದ ಕೋಮು ಉದ್ವಿಗ್ನತೆ ಹಿನ್ನಲೆ: ಕಂಪೆನಿಗಳನ್ನು ಕರ್ನಾಟಕದಿಂದ ತಮಿಳುನಾಡಿಗೆ ಸೆಳೆಯಲು ಪ್ರಯತ್ನಿಸುತ್ತಿರುವ ಡಿಎಂಕೆ ಸರ್ಕಾರ

4. ಸೈರಸ್ ಪೂನಾವಾಲ

ಪೂನಾವಾಲ ಅವರ ಸಂಪತ್ತು 24.3 ಶತಕೋಟಿ ಡಾಲರ್‌ಗೆ ತಲುಪಿದೆ. ಕೋವಿಶೀಲ್ಡ್ ಲಸಿಕೆಯನ್ನು ತಯಾರಿಸುವ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಅಧ್ಯಕ್ಷರಾದ ಪೂವಾವಾಲಾ ಅವರು ಕಳೆದ ಬಾರಿಗಿಂತ ನಾಲ್ಕು ಸ್ಥಾನಗಳು ಮೇಲಕ್ಕೆ ಏರಿದ್ದು, ವಿಶ್ವದ ಶ್ರೀಮಂತರ ಪಟ್ಟಿಯ 56 ನೇ ಸ್ಥಾನದಲ್ಲಿದ್ದಾರೆ.

5. ರಾಧಾಕಿಶನ್ ದಮಾನಿ

ರಾಧಾಕಿಶನ್ 20 ಶತಕೋಟಿ ಡಾಲರ್‌‌ ಆಸ್ತಿಯನ್ನು ಹೊಂದಿರುವ ಬಿಲಿಯನೇರ್. ಅವರು ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 81 ನೇ ಸ್ಥಾನದಲ್ಲಿದ್ದಾರೆ. ಇವರು ಅವೆನ್ಯೂ ಸೂಪರ್‌‌  ಮಾರ್ಕೆಟ್‌‌ಗಳನ್ನು ನಡೆಸುತ್ತಿದ್ದು, ಇದು ದೇಶಾದ್ಯಂತ ಡಿ-ಮಾರ್ಟ್ಸ್ ಅನ್ನು ನಿರ್ವಹಿಸುತ್ತದೆ.

6. ಲಕ್ಷ್ಮಿ ಮಿತ್ತಲ್

ಲಕ್ಷ್ಮಿ ಮಿತ್ತಲ್ ಅವರು ವಿಶ್ವದ ಅತಿದೊಡ್ಡ ಕಬ್ಬಿಣ ಮತ್ತು ಉಕ್ಕಿನ ಕಂಪನಿಯಾದ ಆರ್ಸೆಲರ್ ಮಿತ್ತಲ್‌ನ ಅಧ್ಯಕ್ಷರಾಗಿದ್ದಾರೆ. ಅವರ ಸಂಪತ್ತಿನ ಪ್ರಕಾರ ಅವರು ವಿಶ್ವದ ಶ್ರೀಮಂತರ ಪಟ್ಟಿಯ 89 ನೇ ಸ್ಥಾನದಲ್ಲಿದ್ದಾರೆ.

7. ಸಾವಿತ್ರಿ ಜಿಂದಾಲ್ ಮತ್ತು ಕುಟುಂಬ

ಒಪಿ ಜಿಂದಾಲ್ ಗ್ರೂಪ್‌ನ ಸಿಇಒ ಸಾವಿತ್ರಿ ಜಿಂದಾಲ್ ಅವರು 17.7 ಬಿಲಿಯನ್ ಡಾಲರ್ ಸಂಪತ್ತನ್ನು ಹೊಂದಿದ್ದಾರೆ. ಫೋರ್ಬ್ಸ್ ಪಟ್ಟಿಯಲ್ಲಿ ಅವರು 91 ನೇ ಸ್ಥಾನದಲ್ಲಿದ್ದಾರೆ. ಅವರು ಭಾರತದ ಟಾಪ್ 10 ಶ್ರೀಮಂತ ಭಾರತೀಯರಲ್ಲಿ ಏಕೈಕ ಮಹಿಳೆಯಾಗಿದ್ದು, ಬಿಲಿಯನೇರ್‌ಗಳ ಪಟ್ಟಿಯಲ್ಲಿರುವ 13 ಭಾರತೀಯ ಮಹಿಳೆಯರಲ್ಲಿ ಒಬ್ಬರಾಗಿದ್ದಾರೆ.

ಇದನ್ನೂ ಓದಿ: ಸುದರ್ಶನ್ ಟಿವಿ ಪತ್ರಕರ್ತೆಯನ್ನು ತರಾಟೆಗೆ ತೆಗೆದುಕೊಂಡ ಹಲ್ದಿರಾಮ್ಸ್ ಉದ್ಯೋಗಿ: ನೆಟ್ಟಿಗರ ಶ್ಲಾಘನೆ

8. ಕುಮಾರ್ ಬಿರ್ಲಾ

ಆದಿತ್ಯ ಬಿರ್ಲಾ ಗ್ರೂಪ್‌ನ ಅಧ್ಯಕ್ಷರಾಗಿರುವ ಕುಮಾರ್, ವಿಶ್ವದ ಶ್ರೀಮಂತ ವ್ಯಕ್ತಿಗಳ ಪಟ್ಟಿಯಲ್ಲಿ 109 ನೇ ಸ್ಥಾನದಲ್ಲಿದ್ದಾರೆ. ಅವರು 16.5 ಬಿಲಿಯನ್ ಡಾಲರ್‌ ಸಂಪತ್ತನ್ನು ಹೊಂದಿದ್ದಾರೆ.

9. ದಿಲೀಪ್ ಶಾಂಘ್ವಿ

ಶಾಂಘ್ವಿ ಅವರು ವಿಶ್ವದ ಅತಿದೊಡ್ಡ ಫಾರ್ಮಾ ಕಂಪನಿಗಳಲ್ಲಿ ಒಂದಾದ ಸನ್ ಫಾರ್ಮಾಸ್ಯುಟಿಕಲ್ಸ್‌ನ ಮಾಲೀಕರಾಗಿದ್ದಾರೆ. ಅವರು ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 115 ನೇ ಸ್ಥಾನದಲ್ಲಿದ್ದಾರೆ. ಅವರು 15.6 ಬಿಲಿಯನ್ ಡಾಲರ್‌ ಸಂಪತ್ತನ್ನು ಹೊಂದಿದ್ದಾರೆ.

10. ಉದಯ್ ಕೋಟಕ್

ಉದಯ್ ಕೋಟಕ್ ಅವರು ಕೋಟಕ್‌ ಮಹೀಂದ್ರಾ ಬ್ಯಾಂಕ್ ಅನ್ನು ನಿರ್ವಹಿಸುತ್ತಿದ್ದಾರೆ. ಫೋರ್ಬ್ಸ್‌ನಿಂದ “ಭಾರತದ ಅತ್ಯಂತ ಶ್ರೀಮಂತ ಸ್ವಯಂ ನಿರ್ಮಿತ ಬ್ಯಾಂಕರ್” ಎಂಬ ಉದಯ್ ಕೋಟಕ್‌ ಬಣ್ಣಿಸಲ್ಪಟ್ಟಿದ್ದಾರೆ. ಅವರ ಸಂಪತ್ತು 14.3 ಬಿಲಿಯನ್ ಡಾಲರ್‌ ಇದ್ದು, ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 129 ನೇ ಸ್ಥಾನದಲ್ಲಿದ್ದಾರೆ.

ಅಜೀಂ ಪ್ರೇಮ್‌ಜಿ, ಬಜಾಜ್ ಸಹೋದರರು, ರಾಕೇಶ್ ಜುಂಜುನ್‌ವಾಲಾ, ಫಲ್ಗುಣಿ ನಾಯರ್ ಸೇರಿದಂತೆ ಹಲವಾರು ಭಾರತೀಯರು ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಭಟ್ಕಳ-ಹೊನ್ನಾವರ: ಧರ್ಮಕಾರಣ ಮತ್ತು ಜಾತಿಕಾರಣದ ಜುಗಲ್‌ಬಂದಿಯ ಆಖಾಡ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...