Homeಮುಖಪುಟಲಂಡನ್‌ನಲ್ಲಿ 300 ಎಕರೆ ಎಸ್ಟೇಟ್ ಖರೀದಿಸಿದ ಅಂಬಾನಿ: ಭಾರತ ಬಿಟ್ಟು ಹೋಗುವುದಿಲ್ಲ ಎಂದು ಸ್ಪಷ್ಟನೆ

ಲಂಡನ್‌ನಲ್ಲಿ 300 ಎಕರೆ ಎಸ್ಟೇಟ್ ಖರೀದಿಸಿದ ಅಂಬಾನಿ: ಭಾರತ ಬಿಟ್ಟು ಹೋಗುವುದಿಲ್ಲ ಎಂದು ಸ್ಪಷ್ಟನೆ

- Advertisement -
- Advertisement -

ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ನ ಮುಖ್ಯಸ್ಥ ಮುಖೇಶ್ ಅಂಬಾನಿ ಕುಟುಂಬ ಸಮೇತ ಲಂಡನ್‌ಗೆ ತೆರಳಿ ಅಲ್ಲಿಯೇ ವಾಸಿಸುವ ಸಾಧ್ಯತೆ ಇದೆ ಎಂಬ ಸುದ್ದಿ ಹಲವು ಕಡೆಗಳಿಂದ ಕೇಳಿಬಂದಿತ್ತು. ಈ ಸುದ್ದಿಯನ್ನು ಅಲ್ಲಗಳೆದಿರುವ ರಿಲಯನ್ಸ್‌ ಗ್ರೂಪ್‌ ಇದು ‘ಆಧಾರ ರಹಿತ’ ಎಂದು ಹೇಳಿಕೆ ನೀಡಿದೆ.

ರಿಲಯನ್ಸ್‌ ಗ್ರೂಪ್‌, ಶುಕ್ರವಾರ ಲಂಡನ್‌ನ ಸ್ಟೋಕ್‌ ಪಾರ್ಕ್‌ ಎಸ್ಟೇಟ್‌ ಅನ್ನು ಸ್ವಾಧೀನಪಡಿಸಿಕೊಂಡಿದ್ದು, ಅಂಬಾನಿ ಸ್ಥಳಾಂತರದ ಉಹಾಪೂಹಗಳಿಗೆ ತೆರೆ ಎಳೆದಿದೆ. ಅಂಬಾನಿ ಮತ್ತು ಅವರ ಕುಟುಂಬವು, ’ಲಂಡನ್ ಅಥವಾ ಪ್ರಪಂಚದ ಬೇರೆಲ್ಲಿಗೂ ಸ್ಥಳಾಂತರಗೊಳ್ಳುವ ಅಥವಾ ವಾಸಿಸುವ ಯಾವುದೇ ಯೋಜನೆಗಳನ್ನು ಹೊಂದಿಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇವೆ ಎಂದು ಕಂಪನಿ ಹೇಳಿದೆ.

ಇತ್ತೀಚೆಗೆ ಪತ್ರಿಕೆಯೊಂದರಲ್ಲಿ, ’ಅಂಬಾನಿ ಕುಟುಂಬವು ಲಂಡನ್‌ನ ಸ್ಟೋಕ್‌ ಪಾರ್ಕ್‌‌ನಲ್ಲಿ ಭಾಗಶಃ ವಾಸಿಸುವ ಯೋಜನೆಯಿದೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗಿದ್ದು, ಅನಗತ್ಯ ಮತ್ತು ಆಧಾರ ರಹಿತ ಉಹಾಪೋಹಗಳಿಗೆ ಕಾರಣವಾಗಿದೆ’ ಎಂದು ವರದಿಯಲ್ಲಿ ತಿಳಿಸಿತ್ತು.

ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾದ ಮುಖೇಶ್ ಅಂಬಾನಿ ಅವರು ತಮ್ಮ ಕುಟುಂಬದೊಂದಿಗೆ ಮಹಾರಾಷ್ಟ್ರದ ಮುಂಬೈನ ಅಲ್ಟಾಮೌಂಟ್ ರಸ್ತೆಯಲ್ಲಿರುವ 4,00,000 ಚದರ ಅಡಿ ವಿಸ್ತೀರ್ಣದ ಆಂಟಿಲ್ಲಾ ನಿವಾಸದಲ್ಲಿ ವಾಸಿಸುತ್ತಿದ್ದಾರೆ. ಸ್ಟೋಕ್ ಪಾರ್ಕ್‌ನ ಬಕಿಂಗ್‌ಹ್ಯಾಮ್‌ಶೈರ್‌ನಲ್ಲಿರುವ 300 ಎಕರೆ ಕಂಟ್ರಿ ಕ್ಲಬ್‌ ಅನ್ನು ಅಂಬಾನಿ ಕುಟುಂಬವು ತಮ್ಮ ಪ್ರಾಥಮಿಕ ನಿವಾಸವನ್ನಾಗಿ ಮಾಡುವ ನಿರೀಕ್ಷೆಯಿದೆ ಎಂದು ಇತ್ತೀಚಿನ ವರದಿಗಳು ತಿಳಿಸಿವೆ.

ರಿಲಯನ್ಸ್‌ ಸಮೂಹದ, ರಿಲಯನ್ಸ್‌ ಇಂಡಸ್ಟ್ರಿಯಲ್ ಇನ್‌ವೆಸ್ಟ್‌ಮೆಂಟ್‌ ಮತ್ತು ಹೋಲ್ಡಿಂಗ್ಸ್‌ ಲಿಮಿಟಡ್‌, ‘ಇತ್ತೀಚೆಗಷ್ಟೆ ಸ್ಟೋಕ್‌ ಪಾರ್ಕ್ ಎಸ್ಟೇಟ್‌ ಅನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಪಾರಂಪರಿಕ ಸ್ಥಳದಲ್ಲಿ ಪ್ರಧಾನವಾಗಿ ಗಾಲ್ಫಿಂಗ್‌ ಮತ್ತು ಕ್ರೀಡಾ ರೆಸಾರ್ಟ್‌ ನಿರ್ಮಿಸುವ ಗುರಿಯನ್ನು ಹೊಂದಿದೆ. ಸ್ಥಳೀಯ ನಿಬಂಧನೆಗಳನ್ನು ಸಂಪೂರ್ಣವಾಗಿ ಅನುಸರಿಸುತ್ತಾ ಯೋಜನಾ ಮಾರ್ಗಸೂಚಿಗಳನ್ನು ತಯಾರಿಸಲಾಗುವುದು’ ಎಂದು ಗ್ರೂಪ್ ಸ್ಪಷ್ಟಪಡಿಸಿದೆ.

ಅಂಬಾನಿ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದು, ಜಾಗತಿಕ ಬಿಲಿಯನೇರ್‌ಗಳ ಪಟ್ಟಿಯಲ್ಲಿ 10 ನೇ ಸ್ಥಾನದಲ್ಲಿದ್ದಾರೆ. ಅವರ ಆಸ್ತಿ ಅಂದಾಜು 84.5 ಬಿಲಿಯನ್ ಡಾಲರ್‌ಗಳಾಗಿದ್ದು, ಅವರು ವರ್ಷದ ಹಿಂದೆ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾದ ಚೀನಾದ ಜ್ಯಾಕ್ ಮಾ ಅವರನ್ನು ಹಿಂದಿಕ್ಕಿದ್ದಾರೆ” ಎಂದು ಫೋರ್ಬ್ಸ್ ಹೇಳಿದೆ.

ಭಾರತದ ಆರ್ಥಿಕತೆ ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಕುಸಿಯುತ್ತಿವೆ ಎಂದು ವರದಿಗಳು ಹೇಳುತ್ತಿವೆ. ಕೊರಾನಾ ಸಾಂಕ್ರಾಮಿಕದಿಂದ ಭಾರತದ ಆರ್ಥಿಕತೆ ಮತ್ತಷ್ಟು ಹದಗೆಟ್ಟಿದೆ. ಆದರೆ ಈ ಎರಡು ವರ್ಷಗಳಲ್ಲಿ ಮುಖೇಶ್ ಅಂಬಾನಿ ಆಸ್ತಿ ಮಾತ್ರ ನಿರಂತರ ಏರುಗತಿಯಲ್ಲಿದೆ. ಎಲ್ಲಾ ವಲಯಗಳು ನಷ್ಟಕ್ಕೀಡಾಗಿದ್ದರೂ ಅಂಬಾನಿ ಮತ್ತು ಗೌತಮ್ ಅದಾನಿ ಮಾತ್ರ ಹೇಗೆ ಲಾಭ ಮಾಡಲು ಸಾಧ್ಯ? ಸರ್ಕಾರದ ನೀತಿಗಳು ಜನರ ಪರವಾಗಿರುವ ಬದಲು ಇಂತಹ ಶ್ರೀಮಂತ ಉದ್ಯಮಿಗಳ ಪರವಾಗಿವೆ ಎಂಬ ಟೀಕೆಗಳು ಕೇಳಿಬಂದಿವೆ.


ಇದನ್ನು ಓದಿ: ಇನ್ನೆಂದೂ ಆಗಿರದಷ್ಟು ಬಡತನ ಕಳೆದ 8 ವರ್ಷಗಳಲ್ಲಿ ಭಾರತದಲ್ಲಿ ಹೆಚ್ಚಳ: ಅಧ್ಯಯನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...