Homeಮುಖಪುಟಲಂಡನ್‌ನಲ್ಲಿ 300 ಎಕರೆ ಎಸ್ಟೇಟ್ ಖರೀದಿಸಿದ ಅಂಬಾನಿ: ಭಾರತ ಬಿಟ್ಟು ಹೋಗುವುದಿಲ್ಲ ಎಂದು ಸ್ಪಷ್ಟನೆ

ಲಂಡನ್‌ನಲ್ಲಿ 300 ಎಕರೆ ಎಸ್ಟೇಟ್ ಖರೀದಿಸಿದ ಅಂಬಾನಿ: ಭಾರತ ಬಿಟ್ಟು ಹೋಗುವುದಿಲ್ಲ ಎಂದು ಸ್ಪಷ್ಟನೆ

- Advertisement -
- Advertisement -

ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ನ ಮುಖ್ಯಸ್ಥ ಮುಖೇಶ್ ಅಂಬಾನಿ ಕುಟುಂಬ ಸಮೇತ ಲಂಡನ್‌ಗೆ ತೆರಳಿ ಅಲ್ಲಿಯೇ ವಾಸಿಸುವ ಸಾಧ್ಯತೆ ಇದೆ ಎಂಬ ಸುದ್ದಿ ಹಲವು ಕಡೆಗಳಿಂದ ಕೇಳಿಬಂದಿತ್ತು. ಈ ಸುದ್ದಿಯನ್ನು ಅಲ್ಲಗಳೆದಿರುವ ರಿಲಯನ್ಸ್‌ ಗ್ರೂಪ್‌ ಇದು ‘ಆಧಾರ ರಹಿತ’ ಎಂದು ಹೇಳಿಕೆ ನೀಡಿದೆ.

ರಿಲಯನ್ಸ್‌ ಗ್ರೂಪ್‌, ಶುಕ್ರವಾರ ಲಂಡನ್‌ನ ಸ್ಟೋಕ್‌ ಪಾರ್ಕ್‌ ಎಸ್ಟೇಟ್‌ ಅನ್ನು ಸ್ವಾಧೀನಪಡಿಸಿಕೊಂಡಿದ್ದು, ಅಂಬಾನಿ ಸ್ಥಳಾಂತರದ ಉಹಾಪೂಹಗಳಿಗೆ ತೆರೆ ಎಳೆದಿದೆ. ಅಂಬಾನಿ ಮತ್ತು ಅವರ ಕುಟುಂಬವು, ’ಲಂಡನ್ ಅಥವಾ ಪ್ರಪಂಚದ ಬೇರೆಲ್ಲಿಗೂ ಸ್ಥಳಾಂತರಗೊಳ್ಳುವ ಅಥವಾ ವಾಸಿಸುವ ಯಾವುದೇ ಯೋಜನೆಗಳನ್ನು ಹೊಂದಿಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇವೆ ಎಂದು ಕಂಪನಿ ಹೇಳಿದೆ.

ಇತ್ತೀಚೆಗೆ ಪತ್ರಿಕೆಯೊಂದರಲ್ಲಿ, ’ಅಂಬಾನಿ ಕುಟುಂಬವು ಲಂಡನ್‌ನ ಸ್ಟೋಕ್‌ ಪಾರ್ಕ್‌‌ನಲ್ಲಿ ಭಾಗಶಃ ವಾಸಿಸುವ ಯೋಜನೆಯಿದೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗಿದ್ದು, ಅನಗತ್ಯ ಮತ್ತು ಆಧಾರ ರಹಿತ ಉಹಾಪೋಹಗಳಿಗೆ ಕಾರಣವಾಗಿದೆ’ ಎಂದು ವರದಿಯಲ್ಲಿ ತಿಳಿಸಿತ್ತು.

ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾದ ಮುಖೇಶ್ ಅಂಬಾನಿ ಅವರು ತಮ್ಮ ಕುಟುಂಬದೊಂದಿಗೆ ಮಹಾರಾಷ್ಟ್ರದ ಮುಂಬೈನ ಅಲ್ಟಾಮೌಂಟ್ ರಸ್ತೆಯಲ್ಲಿರುವ 4,00,000 ಚದರ ಅಡಿ ವಿಸ್ತೀರ್ಣದ ಆಂಟಿಲ್ಲಾ ನಿವಾಸದಲ್ಲಿ ವಾಸಿಸುತ್ತಿದ್ದಾರೆ. ಸ್ಟೋಕ್ ಪಾರ್ಕ್‌ನ ಬಕಿಂಗ್‌ಹ್ಯಾಮ್‌ಶೈರ್‌ನಲ್ಲಿರುವ 300 ಎಕರೆ ಕಂಟ್ರಿ ಕ್ಲಬ್‌ ಅನ್ನು ಅಂಬಾನಿ ಕುಟುಂಬವು ತಮ್ಮ ಪ್ರಾಥಮಿಕ ನಿವಾಸವನ್ನಾಗಿ ಮಾಡುವ ನಿರೀಕ್ಷೆಯಿದೆ ಎಂದು ಇತ್ತೀಚಿನ ವರದಿಗಳು ತಿಳಿಸಿವೆ.

ರಿಲಯನ್ಸ್‌ ಸಮೂಹದ, ರಿಲಯನ್ಸ್‌ ಇಂಡಸ್ಟ್ರಿಯಲ್ ಇನ್‌ವೆಸ್ಟ್‌ಮೆಂಟ್‌ ಮತ್ತು ಹೋಲ್ಡಿಂಗ್ಸ್‌ ಲಿಮಿಟಡ್‌, ‘ಇತ್ತೀಚೆಗಷ್ಟೆ ಸ್ಟೋಕ್‌ ಪಾರ್ಕ್ ಎಸ್ಟೇಟ್‌ ಅನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಪಾರಂಪರಿಕ ಸ್ಥಳದಲ್ಲಿ ಪ್ರಧಾನವಾಗಿ ಗಾಲ್ಫಿಂಗ್‌ ಮತ್ತು ಕ್ರೀಡಾ ರೆಸಾರ್ಟ್‌ ನಿರ್ಮಿಸುವ ಗುರಿಯನ್ನು ಹೊಂದಿದೆ. ಸ್ಥಳೀಯ ನಿಬಂಧನೆಗಳನ್ನು ಸಂಪೂರ್ಣವಾಗಿ ಅನುಸರಿಸುತ್ತಾ ಯೋಜನಾ ಮಾರ್ಗಸೂಚಿಗಳನ್ನು ತಯಾರಿಸಲಾಗುವುದು’ ಎಂದು ಗ್ರೂಪ್ ಸ್ಪಷ್ಟಪಡಿಸಿದೆ.

ಅಂಬಾನಿ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದು, ಜಾಗತಿಕ ಬಿಲಿಯನೇರ್‌ಗಳ ಪಟ್ಟಿಯಲ್ಲಿ 10 ನೇ ಸ್ಥಾನದಲ್ಲಿದ್ದಾರೆ. ಅವರ ಆಸ್ತಿ ಅಂದಾಜು 84.5 ಬಿಲಿಯನ್ ಡಾಲರ್‌ಗಳಾಗಿದ್ದು, ಅವರು ವರ್ಷದ ಹಿಂದೆ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾದ ಚೀನಾದ ಜ್ಯಾಕ್ ಮಾ ಅವರನ್ನು ಹಿಂದಿಕ್ಕಿದ್ದಾರೆ” ಎಂದು ಫೋರ್ಬ್ಸ್ ಹೇಳಿದೆ.

ಭಾರತದ ಆರ್ಥಿಕತೆ ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಕುಸಿಯುತ್ತಿವೆ ಎಂದು ವರದಿಗಳು ಹೇಳುತ್ತಿವೆ. ಕೊರಾನಾ ಸಾಂಕ್ರಾಮಿಕದಿಂದ ಭಾರತದ ಆರ್ಥಿಕತೆ ಮತ್ತಷ್ಟು ಹದಗೆಟ್ಟಿದೆ. ಆದರೆ ಈ ಎರಡು ವರ್ಷಗಳಲ್ಲಿ ಮುಖೇಶ್ ಅಂಬಾನಿ ಆಸ್ತಿ ಮಾತ್ರ ನಿರಂತರ ಏರುಗತಿಯಲ್ಲಿದೆ. ಎಲ್ಲಾ ವಲಯಗಳು ನಷ್ಟಕ್ಕೀಡಾಗಿದ್ದರೂ ಅಂಬಾನಿ ಮತ್ತು ಗೌತಮ್ ಅದಾನಿ ಮಾತ್ರ ಹೇಗೆ ಲಾಭ ಮಾಡಲು ಸಾಧ್ಯ? ಸರ್ಕಾರದ ನೀತಿಗಳು ಜನರ ಪರವಾಗಿರುವ ಬದಲು ಇಂತಹ ಶ್ರೀಮಂತ ಉದ್ಯಮಿಗಳ ಪರವಾಗಿವೆ ಎಂಬ ಟೀಕೆಗಳು ಕೇಳಿಬಂದಿವೆ.


ಇದನ್ನು ಓದಿ: ಇನ್ನೆಂದೂ ಆಗಿರದಷ್ಟು ಬಡತನ ಕಳೆದ 8 ವರ್ಷಗಳಲ್ಲಿ ಭಾರತದಲ್ಲಿ ಹೆಚ್ಚಳ: ಅಧ್ಯಯನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...