Homeಮುಖಪುಟಲಂಡನ್‌ನಲ್ಲಿ 300 ಎಕರೆ ಎಸ್ಟೇಟ್ ಖರೀದಿಸಿದ ಅಂಬಾನಿ: ಭಾರತ ಬಿಟ್ಟು ಹೋಗುವುದಿಲ್ಲ ಎಂದು ಸ್ಪಷ್ಟನೆ

ಲಂಡನ್‌ನಲ್ಲಿ 300 ಎಕರೆ ಎಸ್ಟೇಟ್ ಖರೀದಿಸಿದ ಅಂಬಾನಿ: ಭಾರತ ಬಿಟ್ಟು ಹೋಗುವುದಿಲ್ಲ ಎಂದು ಸ್ಪಷ್ಟನೆ

- Advertisement -
- Advertisement -

ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ನ ಮುಖ್ಯಸ್ಥ ಮುಖೇಶ್ ಅಂಬಾನಿ ಕುಟುಂಬ ಸಮೇತ ಲಂಡನ್‌ಗೆ ತೆರಳಿ ಅಲ್ಲಿಯೇ ವಾಸಿಸುವ ಸಾಧ್ಯತೆ ಇದೆ ಎಂಬ ಸುದ್ದಿ ಹಲವು ಕಡೆಗಳಿಂದ ಕೇಳಿಬಂದಿತ್ತು. ಈ ಸುದ್ದಿಯನ್ನು ಅಲ್ಲಗಳೆದಿರುವ ರಿಲಯನ್ಸ್‌ ಗ್ರೂಪ್‌ ಇದು ‘ಆಧಾರ ರಹಿತ’ ಎಂದು ಹೇಳಿಕೆ ನೀಡಿದೆ.

ರಿಲಯನ್ಸ್‌ ಗ್ರೂಪ್‌, ಶುಕ್ರವಾರ ಲಂಡನ್‌ನ ಸ್ಟೋಕ್‌ ಪಾರ್ಕ್‌ ಎಸ್ಟೇಟ್‌ ಅನ್ನು ಸ್ವಾಧೀನಪಡಿಸಿಕೊಂಡಿದ್ದು, ಅಂಬಾನಿ ಸ್ಥಳಾಂತರದ ಉಹಾಪೂಹಗಳಿಗೆ ತೆರೆ ಎಳೆದಿದೆ. ಅಂಬಾನಿ ಮತ್ತು ಅವರ ಕುಟುಂಬವು, ’ಲಂಡನ್ ಅಥವಾ ಪ್ರಪಂಚದ ಬೇರೆಲ್ಲಿಗೂ ಸ್ಥಳಾಂತರಗೊಳ್ಳುವ ಅಥವಾ ವಾಸಿಸುವ ಯಾವುದೇ ಯೋಜನೆಗಳನ್ನು ಹೊಂದಿಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇವೆ ಎಂದು ಕಂಪನಿ ಹೇಳಿದೆ.

ಇತ್ತೀಚೆಗೆ ಪತ್ರಿಕೆಯೊಂದರಲ್ಲಿ, ’ಅಂಬಾನಿ ಕುಟುಂಬವು ಲಂಡನ್‌ನ ಸ್ಟೋಕ್‌ ಪಾರ್ಕ್‌‌ನಲ್ಲಿ ಭಾಗಶಃ ವಾಸಿಸುವ ಯೋಜನೆಯಿದೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗಿದ್ದು, ಅನಗತ್ಯ ಮತ್ತು ಆಧಾರ ರಹಿತ ಉಹಾಪೋಹಗಳಿಗೆ ಕಾರಣವಾಗಿದೆ’ ಎಂದು ವರದಿಯಲ್ಲಿ ತಿಳಿಸಿತ್ತು.

ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾದ ಮುಖೇಶ್ ಅಂಬಾನಿ ಅವರು ತಮ್ಮ ಕುಟುಂಬದೊಂದಿಗೆ ಮಹಾರಾಷ್ಟ್ರದ ಮುಂಬೈನ ಅಲ್ಟಾಮೌಂಟ್ ರಸ್ತೆಯಲ್ಲಿರುವ 4,00,000 ಚದರ ಅಡಿ ವಿಸ್ತೀರ್ಣದ ಆಂಟಿಲ್ಲಾ ನಿವಾಸದಲ್ಲಿ ವಾಸಿಸುತ್ತಿದ್ದಾರೆ. ಸ್ಟೋಕ್ ಪಾರ್ಕ್‌ನ ಬಕಿಂಗ್‌ಹ್ಯಾಮ್‌ಶೈರ್‌ನಲ್ಲಿರುವ 300 ಎಕರೆ ಕಂಟ್ರಿ ಕ್ಲಬ್‌ ಅನ್ನು ಅಂಬಾನಿ ಕುಟುಂಬವು ತಮ್ಮ ಪ್ರಾಥಮಿಕ ನಿವಾಸವನ್ನಾಗಿ ಮಾಡುವ ನಿರೀಕ್ಷೆಯಿದೆ ಎಂದು ಇತ್ತೀಚಿನ ವರದಿಗಳು ತಿಳಿಸಿವೆ.

ರಿಲಯನ್ಸ್‌ ಸಮೂಹದ, ರಿಲಯನ್ಸ್‌ ಇಂಡಸ್ಟ್ರಿಯಲ್ ಇನ್‌ವೆಸ್ಟ್‌ಮೆಂಟ್‌ ಮತ್ತು ಹೋಲ್ಡಿಂಗ್ಸ್‌ ಲಿಮಿಟಡ್‌, ‘ಇತ್ತೀಚೆಗಷ್ಟೆ ಸ್ಟೋಕ್‌ ಪಾರ್ಕ್ ಎಸ್ಟೇಟ್‌ ಅನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಪಾರಂಪರಿಕ ಸ್ಥಳದಲ್ಲಿ ಪ್ರಧಾನವಾಗಿ ಗಾಲ್ಫಿಂಗ್‌ ಮತ್ತು ಕ್ರೀಡಾ ರೆಸಾರ್ಟ್‌ ನಿರ್ಮಿಸುವ ಗುರಿಯನ್ನು ಹೊಂದಿದೆ. ಸ್ಥಳೀಯ ನಿಬಂಧನೆಗಳನ್ನು ಸಂಪೂರ್ಣವಾಗಿ ಅನುಸರಿಸುತ್ತಾ ಯೋಜನಾ ಮಾರ್ಗಸೂಚಿಗಳನ್ನು ತಯಾರಿಸಲಾಗುವುದು’ ಎಂದು ಗ್ರೂಪ್ ಸ್ಪಷ್ಟಪಡಿಸಿದೆ.

ಅಂಬಾನಿ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದು, ಜಾಗತಿಕ ಬಿಲಿಯನೇರ್‌ಗಳ ಪಟ್ಟಿಯಲ್ಲಿ 10 ನೇ ಸ್ಥಾನದಲ್ಲಿದ್ದಾರೆ. ಅವರ ಆಸ್ತಿ ಅಂದಾಜು 84.5 ಬಿಲಿಯನ್ ಡಾಲರ್‌ಗಳಾಗಿದ್ದು, ಅವರು ವರ್ಷದ ಹಿಂದೆ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾದ ಚೀನಾದ ಜ್ಯಾಕ್ ಮಾ ಅವರನ್ನು ಹಿಂದಿಕ್ಕಿದ್ದಾರೆ” ಎಂದು ಫೋರ್ಬ್ಸ್ ಹೇಳಿದೆ.

ಭಾರತದ ಆರ್ಥಿಕತೆ ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಕುಸಿಯುತ್ತಿವೆ ಎಂದು ವರದಿಗಳು ಹೇಳುತ್ತಿವೆ. ಕೊರಾನಾ ಸಾಂಕ್ರಾಮಿಕದಿಂದ ಭಾರತದ ಆರ್ಥಿಕತೆ ಮತ್ತಷ್ಟು ಹದಗೆಟ್ಟಿದೆ. ಆದರೆ ಈ ಎರಡು ವರ್ಷಗಳಲ್ಲಿ ಮುಖೇಶ್ ಅಂಬಾನಿ ಆಸ್ತಿ ಮಾತ್ರ ನಿರಂತರ ಏರುಗತಿಯಲ್ಲಿದೆ. ಎಲ್ಲಾ ವಲಯಗಳು ನಷ್ಟಕ್ಕೀಡಾಗಿದ್ದರೂ ಅಂಬಾನಿ ಮತ್ತು ಗೌತಮ್ ಅದಾನಿ ಮಾತ್ರ ಹೇಗೆ ಲಾಭ ಮಾಡಲು ಸಾಧ್ಯ? ಸರ್ಕಾರದ ನೀತಿಗಳು ಜನರ ಪರವಾಗಿರುವ ಬದಲು ಇಂತಹ ಶ್ರೀಮಂತ ಉದ್ಯಮಿಗಳ ಪರವಾಗಿವೆ ಎಂಬ ಟೀಕೆಗಳು ಕೇಳಿಬಂದಿವೆ.


ಇದನ್ನು ಓದಿ: ಇನ್ನೆಂದೂ ಆಗಿರದಷ್ಟು ಬಡತನ ಕಳೆದ 8 ವರ್ಷಗಳಲ್ಲಿ ಭಾರತದಲ್ಲಿ ಹೆಚ್ಚಳ: ಅಧ್ಯಯನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...