Homeಮುಖಪುಟಲಂಡನ್‌ನಲ್ಲಿ 300 ಎಕರೆ ಎಸ್ಟೇಟ್ ಖರೀದಿಸಿದ ಅಂಬಾನಿ: ಭಾರತ ಬಿಟ್ಟು ಹೋಗುವುದಿಲ್ಲ ಎಂದು ಸ್ಪಷ್ಟನೆ

ಲಂಡನ್‌ನಲ್ಲಿ 300 ಎಕರೆ ಎಸ್ಟೇಟ್ ಖರೀದಿಸಿದ ಅಂಬಾನಿ: ಭಾರತ ಬಿಟ್ಟು ಹೋಗುವುದಿಲ್ಲ ಎಂದು ಸ್ಪಷ್ಟನೆ

- Advertisement -
- Advertisement -

ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ನ ಮುಖ್ಯಸ್ಥ ಮುಖೇಶ್ ಅಂಬಾನಿ ಕುಟುಂಬ ಸಮೇತ ಲಂಡನ್‌ಗೆ ತೆರಳಿ ಅಲ್ಲಿಯೇ ವಾಸಿಸುವ ಸಾಧ್ಯತೆ ಇದೆ ಎಂಬ ಸುದ್ದಿ ಹಲವು ಕಡೆಗಳಿಂದ ಕೇಳಿಬಂದಿತ್ತು. ಈ ಸುದ್ದಿಯನ್ನು ಅಲ್ಲಗಳೆದಿರುವ ರಿಲಯನ್ಸ್‌ ಗ್ರೂಪ್‌ ಇದು ‘ಆಧಾರ ರಹಿತ’ ಎಂದು ಹೇಳಿಕೆ ನೀಡಿದೆ.

ರಿಲಯನ್ಸ್‌ ಗ್ರೂಪ್‌, ಶುಕ್ರವಾರ ಲಂಡನ್‌ನ ಸ್ಟೋಕ್‌ ಪಾರ್ಕ್‌ ಎಸ್ಟೇಟ್‌ ಅನ್ನು ಸ್ವಾಧೀನಪಡಿಸಿಕೊಂಡಿದ್ದು, ಅಂಬಾನಿ ಸ್ಥಳಾಂತರದ ಉಹಾಪೂಹಗಳಿಗೆ ತೆರೆ ಎಳೆದಿದೆ. ಅಂಬಾನಿ ಮತ್ತು ಅವರ ಕುಟುಂಬವು, ’ಲಂಡನ್ ಅಥವಾ ಪ್ರಪಂಚದ ಬೇರೆಲ್ಲಿಗೂ ಸ್ಥಳಾಂತರಗೊಳ್ಳುವ ಅಥವಾ ವಾಸಿಸುವ ಯಾವುದೇ ಯೋಜನೆಗಳನ್ನು ಹೊಂದಿಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇವೆ ಎಂದು ಕಂಪನಿ ಹೇಳಿದೆ.

ಇತ್ತೀಚೆಗೆ ಪತ್ರಿಕೆಯೊಂದರಲ್ಲಿ, ’ಅಂಬಾನಿ ಕುಟುಂಬವು ಲಂಡನ್‌ನ ಸ್ಟೋಕ್‌ ಪಾರ್ಕ್‌‌ನಲ್ಲಿ ಭಾಗಶಃ ವಾಸಿಸುವ ಯೋಜನೆಯಿದೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗಿದ್ದು, ಅನಗತ್ಯ ಮತ್ತು ಆಧಾರ ರಹಿತ ಉಹಾಪೋಹಗಳಿಗೆ ಕಾರಣವಾಗಿದೆ’ ಎಂದು ವರದಿಯಲ್ಲಿ ತಿಳಿಸಿತ್ತು.

ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾದ ಮುಖೇಶ್ ಅಂಬಾನಿ ಅವರು ತಮ್ಮ ಕುಟುಂಬದೊಂದಿಗೆ ಮಹಾರಾಷ್ಟ್ರದ ಮುಂಬೈನ ಅಲ್ಟಾಮೌಂಟ್ ರಸ್ತೆಯಲ್ಲಿರುವ 4,00,000 ಚದರ ಅಡಿ ವಿಸ್ತೀರ್ಣದ ಆಂಟಿಲ್ಲಾ ನಿವಾಸದಲ್ಲಿ ವಾಸಿಸುತ್ತಿದ್ದಾರೆ. ಸ್ಟೋಕ್ ಪಾರ್ಕ್‌ನ ಬಕಿಂಗ್‌ಹ್ಯಾಮ್‌ಶೈರ್‌ನಲ್ಲಿರುವ 300 ಎಕರೆ ಕಂಟ್ರಿ ಕ್ಲಬ್‌ ಅನ್ನು ಅಂಬಾನಿ ಕುಟುಂಬವು ತಮ್ಮ ಪ್ರಾಥಮಿಕ ನಿವಾಸವನ್ನಾಗಿ ಮಾಡುವ ನಿರೀಕ್ಷೆಯಿದೆ ಎಂದು ಇತ್ತೀಚಿನ ವರದಿಗಳು ತಿಳಿಸಿವೆ.

ರಿಲಯನ್ಸ್‌ ಸಮೂಹದ, ರಿಲಯನ್ಸ್‌ ಇಂಡಸ್ಟ್ರಿಯಲ್ ಇನ್‌ವೆಸ್ಟ್‌ಮೆಂಟ್‌ ಮತ್ತು ಹೋಲ್ಡಿಂಗ್ಸ್‌ ಲಿಮಿಟಡ್‌, ‘ಇತ್ತೀಚೆಗಷ್ಟೆ ಸ್ಟೋಕ್‌ ಪಾರ್ಕ್ ಎಸ್ಟೇಟ್‌ ಅನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಪಾರಂಪರಿಕ ಸ್ಥಳದಲ್ಲಿ ಪ್ರಧಾನವಾಗಿ ಗಾಲ್ಫಿಂಗ್‌ ಮತ್ತು ಕ್ರೀಡಾ ರೆಸಾರ್ಟ್‌ ನಿರ್ಮಿಸುವ ಗುರಿಯನ್ನು ಹೊಂದಿದೆ. ಸ್ಥಳೀಯ ನಿಬಂಧನೆಗಳನ್ನು ಸಂಪೂರ್ಣವಾಗಿ ಅನುಸರಿಸುತ್ತಾ ಯೋಜನಾ ಮಾರ್ಗಸೂಚಿಗಳನ್ನು ತಯಾರಿಸಲಾಗುವುದು’ ಎಂದು ಗ್ರೂಪ್ ಸ್ಪಷ್ಟಪಡಿಸಿದೆ.

ಅಂಬಾನಿ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದು, ಜಾಗತಿಕ ಬಿಲಿಯನೇರ್‌ಗಳ ಪಟ್ಟಿಯಲ್ಲಿ 10 ನೇ ಸ್ಥಾನದಲ್ಲಿದ್ದಾರೆ. ಅವರ ಆಸ್ತಿ ಅಂದಾಜು 84.5 ಬಿಲಿಯನ್ ಡಾಲರ್‌ಗಳಾಗಿದ್ದು, ಅವರು ವರ್ಷದ ಹಿಂದೆ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾದ ಚೀನಾದ ಜ್ಯಾಕ್ ಮಾ ಅವರನ್ನು ಹಿಂದಿಕ್ಕಿದ್ದಾರೆ” ಎಂದು ಫೋರ್ಬ್ಸ್ ಹೇಳಿದೆ.

ಭಾರತದ ಆರ್ಥಿಕತೆ ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಕುಸಿಯುತ್ತಿವೆ ಎಂದು ವರದಿಗಳು ಹೇಳುತ್ತಿವೆ. ಕೊರಾನಾ ಸಾಂಕ್ರಾಮಿಕದಿಂದ ಭಾರತದ ಆರ್ಥಿಕತೆ ಮತ್ತಷ್ಟು ಹದಗೆಟ್ಟಿದೆ. ಆದರೆ ಈ ಎರಡು ವರ್ಷಗಳಲ್ಲಿ ಮುಖೇಶ್ ಅಂಬಾನಿ ಆಸ್ತಿ ಮಾತ್ರ ನಿರಂತರ ಏರುಗತಿಯಲ್ಲಿದೆ. ಎಲ್ಲಾ ವಲಯಗಳು ನಷ್ಟಕ್ಕೀಡಾಗಿದ್ದರೂ ಅಂಬಾನಿ ಮತ್ತು ಗೌತಮ್ ಅದಾನಿ ಮಾತ್ರ ಹೇಗೆ ಲಾಭ ಮಾಡಲು ಸಾಧ್ಯ? ಸರ್ಕಾರದ ನೀತಿಗಳು ಜನರ ಪರವಾಗಿರುವ ಬದಲು ಇಂತಹ ಶ್ರೀಮಂತ ಉದ್ಯಮಿಗಳ ಪರವಾಗಿವೆ ಎಂಬ ಟೀಕೆಗಳು ಕೇಳಿಬಂದಿವೆ.


ಇದನ್ನು ಓದಿ: ಇನ್ನೆಂದೂ ಆಗಿರದಷ್ಟು ಬಡತನ ಕಳೆದ 8 ವರ್ಷಗಳಲ್ಲಿ ಭಾರತದಲ್ಲಿ ಹೆಚ್ಚಳ: ಅಧ್ಯಯನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...