Homeಮುಖಪುಟವಿದೇಶಿಗರ ಆಕ್ರೋಶಕ್ಕೆ ಕಾರಣವಾದ ಅಂಬಾನಿ ಮಗನ 'ಪ್ರಿ ವೆಡ್ಡಿಂಗ್ ಕ್ರೂಸ್ ಪಾರ್ಟಿ'

ವಿದೇಶಿಗರ ಆಕ್ರೋಶಕ್ಕೆ ಕಾರಣವಾದ ಅಂಬಾನಿ ಮಗನ ‘ಪ್ರಿ ವೆಡ್ಡಿಂಗ್ ಕ್ರೂಸ್ ಪಾರ್ಟಿ’

- Advertisement -
- Advertisement -

ಉದ್ಯಮಿ ಮುಖೇಶ್ ಅಂಬಾನಿಯ ಪುತ್ರ ಅನಂತ್ ಅಂಬಾನಿಯ ‘ಪ್ರಿ ವೆಡ್ಡಿಂಗ್ ಕ್ರೂಸ್ ಪಾರ್ಟಿ’ (ವಿವಾಹ ಪೂರ್ವ ಕಾರ್ಯಕ್ರಮ) ವಿದೇಶಗರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಜುಲೈ 12, 2024ರಂದು ಉದ್ಯಮಿ ವಿರೇನ್ ಮರ್ಚೆಂಟ್ ಪುತ್ರಿ ರಾಧಿಕಾ ಮರ್ಚೆಂಟ್ ಜೊತೆ ಮುಖೇಶ್ ಅಂಬಾನಿಯ ಪುತ್ರ ಅನಂತ್ ಅಂಬಾನಿಯ ವಿವಾಹ ನಡೆಯಲಿದೆ. ಅದಕ್ಕೂ ಮುನ್ನ ವಿವಿಧ ರೀತಿಯಲ್ಲಿ ಅದ್ದೂರಿ ವಿವಾಹ ಪೂರ್ವ ಕಾರ್ಯಕ್ರಮಗಳನ್ನು ಅಯೋಜಿಸಲಾಗಿದೆ.

ಮೊದಲ ವಿವಾಹ ಪೂರ್ವ ಕಾರ್ಯಕ್ರಮ ಅಂಬಾನಿ ಕುಟುಂಬದ ಮೂಲ ಸ್ಥಳ ಗುಜರಾತ್‌ನ ಜಾಮಾನಗರದಲ್ಲಿ ಅದ್ದೂರಿಯಾಗಿನ ನಡೆದಿತ್ತು. ಇದಕ್ಕಾಗಿ ಭಾರತೀಯ ವಾಯುನೆಲೆಯ ಅತಿ ಸೂಕ್ಷ್ಮ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ದರ್ಜೆಗೇರಿಸಿ ದುರ್ಬಳಕೆ ಮಾಡಿಕೊಂಡಿರುವುದು ಗೊತ್ತೇ ಇದೆ.

ವರದಿಗಳ ಪ್ರಕಾರ, ಮೂರು ದಿನಗಳ ಕಾಲ ನಡೆದ ಈ ಕಾರ್ಯಕ್ರಮದಲ್ಲಿ 1,200ಕ್ಕೂ ಹೆಚ್ಚು ಅತಿಥಿಗಳು ಪಾಲ್ಗೊಂಡಿದ್ದರು. ಬೆಜ್ವೆಲ್ಡ್ ಆನೆಗಳು ಮತ್ತು ಅಮೆರಿಕನ್ ಗಾಯಕಿ ರಿಹಾನ್ನಾ ಅವರ ಪ್ರದರ್ಶನ ಸೇರಿದಂತೆ ವಿವಿಧ ರೀತಿಯಲ್ಲಿ ಈ ಕಾರ್ಯಕ್ರಮಕ್ಕೆ ಅಂಬಾನಿ ಸುಮಾರು 150 ಮಿಲಿಯನ್ ಡಾಲರ್ ಖರ್ಚು ಮಾಡಿದ್ದಾರೆ.

ಎರಡನೇ ಕಾರ್ಯಕ್ರಮ ‘ಕ್ರೂಸ್ ಪಾರ್ಟಿ’

ಜಾಮಾನಗರದಲ್ಲಿ ಒಂದು ವಿವಾಹ ಪೂರ್ವ ಕಾರ್ಯಕ್ರಮ ಮುಗಿಸಿದ್ದ ಅಂಬಾನಿ ಕುಟುಂಬ, ಮೆಡಿಟರೇನಿಯನ್ ಸಮುದ್ರದಲ್ಲಿ ಐಷರಾಮಿ ಕ್ರೂಸ್‌ನಲ್ಲಿ ಎರಡನೇ ಕಾರ್ಯಕ್ರಮ ಆಯೋಜಿಸಿತ್ತು. ಈ ಕ್ರೂಸ್ ವಿವಿಧ ದೇಶಗಳನ್ನು ಸುತ್ತಾಡಿದೆ.

ಇಟಲಿಯ ದ್ವೀಪ ಸಿಸಿಲಿಯ ರಾಜಧಾನಿಯಾದ ಪಲೆರ್ಮೊದಿಂದ ಫ್ರಾನ್ಸ್‌ನ ದಕ್ಷಿಣಕ್ಕೆ 4 ದಿನಗಳ ಕ್ರೂಸ್ ಪಾರ್ಟಿ ಆಯೋಜಿಸಲಾಗಿತ್ತು. ನಾಲ್ಕು ದಿನಗಳಲ್ಲಿ ರೋಮ್, ಪೋರ್ಟೊಫಿನೋ, ಜಿನೋವಾ ಮತ್ತು ಕೇನ್ಸ್‌ಗಳಲ್ಲಿ ಕ್ರೂಸ್‌ ಸಂಚರಿಸಿದೆ. ಅಲ್ಲಲ್ಲಿ ಕಡಲ ತೀರಗಳಲ್ಲಿ ಪಾರ್ಟಿ ನಡೆದಿದೆ.

ಮೇ 29ರಂದು ಪಲೆರ್ಮೊದಿಂದ ಹೊರಟ ಕ್ರೂಸ್, ಇಟಾಲಿಯನ್ ಬೇಸಿಗೆಯನ್ನು ಅನುಭವಿಸುವ ಗುರಿಯೊಂದಿಗೆ ‘ಲಾ ಡೊಲ್ಸ್ ವೀಟಾ’ ಎಂಬ ಶೀರ್ಷಿಕೆಯ ಪಾರ್ಟಿಗಾಗಿ ಜೂನ್ 1ರಂದು ಆಗ್ನೆಯ ಜಿನೋವಾದ ಪೋರ್ಟೊಫಿನೋ ಬಂದರಿಗೆ ತಲುಪಿತ್ತು.

ಪೋರ್ಟೊಫಿನೋದಲ್ಲಿ ನಡೆದ ಪಾರ್ಟಿಯ ವಿಡಿಯೋ ಎಲ್ಲೂ ಸೋರಿಕೆಯಾಗದಂತೆ ತಡೆಯಲು ಮೊಬೈಲ್ ಫೋನ್ ಸಂಪೂರ್ಣವಾಗಿ ನಿಷೇಧಿಸಲಾಗಿತ್ತು. ಆದರೂ, ಕೆಲವೊಂದು ವಿಡಿಯೋಗಳು ಸೋರಿಕೆಯಾಗಿವೆ. ಅದರ ಪ್ರಕಾರ, ಅಮೆರಿಕನ್ ಬ್ಯಾಂಡ್ ಬ್ಯಾಕ್‌ಸ್ಟ್ರೀಟ್ ಬಾಯ್ಸ್ ಮತ್ತು ಗಾಯಕಿ ಕೇಟಿ ಪೆರ್ರಿ ಕಾರ್ಯಕ್ರಮ ನಡೆಸಿಕೊಟ್ಟಿದ್ದರು. ಸುಮಾರು 800 ಜನರು ಇದರಲ್ಲಿ ಪಾಲ್ಗೊಂಡಿದ್ದರು.

ಕ್ರೂಸ್ ಪಾರ್ಟಿ ವಿರುದ್ದ ಆಕ್ರೋಶಗೊಂಡ ಸ್ಥಳೀಯ ಜನರು

ಅಂಬಾನಿ ಮಗನ ವಿವಾವ ಪೂರ್ವ ಕ್ರೂಸ್ ಪಾರ್ಟಿಯ ವಿರುದ್ದ ಪೋರ್ಟೊಫಿನೋದ ಸ್ಥಳೀಯರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ವಿದೇಶಿ ಮಾಧ್ಯಮಗಳು ವರದಿ ಮಾಡಿವೆ. ಇದಕ್ಕೆ ಕಾರಣ, ಕ್ರೂಸ್ ಪಾರ್ಟಿಯ ದಿನ ಅಲ್ಲಿನ ಸ್ಥಳೀಯ ನಿವಾಸಿಗಳು ಮತ್ತು ವ್ಯಾಪಾರಿಗಳು ತೀವ್ರ ಸಂಕಷ್ಟ ಅನುಭವಿಸಿದ್ದಾರೆ. ಐ‍‍‍‍‍ಷಾರಾಮಿ ಪಾರ್ಟಿಗಾಗಿ ಪೋರ್ಟೊಫಿನೋ ಬಂದರಿಗೆ ಜನರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು.

ಪೋರ್ಟೊಫಿನೋದಲ್ಲಿ ಈ ಹಿಂದೆಯೂ ಹಲವಾರು ಶ್ರೀಮಂತರ ಮದುವೆಗಳು ನಡೆದಿವೆ. ಆದರೆ, ಜನರಿಗೆ ತೊಂದರೆ ಕೊಟ್ಟಿರಲಿಲ್ಲ. ಆಸ್ಟ್ರೇಲಿಯನ್ ಗಾಯಕ ಸಿಯಾ ಮತ್ತು ರಿಯಾಲಿಟಿ ಟಿವಿ ತಾರೆ ಕೌರ್ಟ್ನಿ ಕಾರ್ಡಶಿಯಾನ್ ಇದೇ ಸ್ಥಳದಲ್ಲಿ ಮದುವೆ ಮಾಡಿಕೊಂಡಿದ್ದರು. ಆದರೆ, ಸ್ಥಳೀಯ ಜನರಿಗೆ ಯಾವುದೇ ತೊಂದರೆಯಾಗಿರಲಿಲ್ಲ.

ವರದಿಗಳ ಪ್ರಕಾರ, ಪೋರ್ಟೊಫಿನೋದ ಕಾರ್ಯಕ್ರಮದ ಆಹಾರಕ್ಕಾಗಿ ಅಲ್ಲಿನ ಸ್ಥಳೀಯ 10ಕ್ಕೂ ಹೆಚ್ಚು ರೆಸ್ಟೋರೆಂಟ್‌ಗಳಿಗೆ 7 ಸಾವಿರ ಡಾಲರ್‌ನಿಂದ 10 ಸಾವಿರ ಅಮೆರಿಕನ್ ಡಾಲರ್ ನೀಡಲಾಗಿದೆ.

ಅಂಬಾನಿ ಮಗನ ವಿವಾಹ ಪೂರ್ವ ಕಾರ್ಯಕ್ರಮದ ಕುರಿತು ಪೋರ್ಟೊಫಿನೋದ ಸ್ಥಳೀಯರು ಮತ್ತು ಪ್ರವಾಸಿಗರು ಸಾಮಾಜಿಕ ಜಾಲತಾಣಗಳಲ್ಲೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋರ್ಟೊಫಿನೋದಲ್ಲಿ ಇದುವರೆಗೆ ಹಲವಾರು ಸೆಲೆಬ್ರೆಟಿಗಳ ಮದುವೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆದಿವೆ. ಆದರೆ, ಇದುವರೆಗೆ ಯಾರೂ ಸ್ಥಳೀಯರಿಗೆ ತೊಂದರೆ ಕೊಟ್ಟಿಲ್ಲ. ಅಂಬಾನಿ ಕುಟುಂಬದ ಖಾಸಗಿ ಕಾರ್ಯಕ್ರಮಕ್ಕೆ ಇಡೀ ಪಟ್ಟಣವನ್ನು ಮುಚ್ಚಲಾಗಿತ್ತು. ಇದರಿಂದ ಜನರಿಗೆ ಬಹಳ ತೊಂದರೆಯಾಗಿದೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ಕ್ರೂಸ್ ಪಾರ್ಟಿಯಲ್ಲಿದ್ದವರು ನಡೆದುಕೊಂಡಿರುವ ಬಗ್ಗೆಯೂ ಆಕ್ರೋಶ ವ್ಯಕ್ತವಾಗಿದೆ. ಜೂನ್ 2ರಂದು ಇಡೀ ರಾತ್ರಿ ಜೋರಾಗಿ ಮ್ಯೂಸಿಕ್ ಇಟ್ಟು, ಕುಣಿದು ಕುಪ್ಪಳಿಸುವ ಮೂಲಕ ಪಾರ್ಟಿಯಲ್ಲಿದ್ದವರು ಕಿರಿ ಕಿರಿ ಉಂಟು ಮಾಡಿದ್ದಾರೆ ಎಂದು ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದಾರೆ.

‘tadkeshwari (@ladytadkeshwari) ಎಂಬ ಎಕ್ಸ್ ಬಳಕೆದಾರರೊಬ್ಬರು ಕಾರ್ಯಕ್ರಮದ ಕುರಿತ ಪತ್ರಿಕಾ ವರದಿಯನ್ನು ಹಂಚಿಕೊಂಡು “ಹಣದಿಂದ ಶಿಷ್ಟಾಚಾರ ಮತ್ತು ಗುಣನಡತೆಯನ್ನು ಖರೀದಿಸಲು ಸಾಧ್ಯವಿಲ್ಲ! ಶೇಮ್ ಶೇಮ್ ಶೇಮ್!” ಎಂದು ಬರೆದುಕೊಂಡಿದ್ದಾರೆ.

ಒಟ್ಟಿನಲ್ಲಿ, ವಿಭಿನ್ನವಾಗಿ ಐಷಾರಾಮಿ ಕ್ರೂಸ್ ಶಿಪ್‌ನಲ್ಲಿ ವಿವಾಹಪೂರ್ವ ಕಾರ್ಯಕ್ರಮ ಆಯೋಜಿಸಿದ್ದ ಅಂಬಾನಿ ಕುಟುಂಬ, ಸ್ಥಳೀಯರಿಗೆ ತೊಂದರೆ ಕೊಡುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಖಭಂಗ ಅನುಭವಿಸಿದೆ.

ಇದನ್ನೂ ಓದಿ : ಲೋಕಸಭೆ ಪ್ರವೇಶಿಸಿದ ಮುಸ್ಲಿಂ ಸಂಸದರ ಸಂಖ್ಯೆಯಲ್ಲಿ ಇಳಿಕೆ: ಈ ಭಾರಿ ಎಷ್ಟು ಮುಸ್ಲಿಂ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ? ಡಿಟೇಲ್ಸ್…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...