Homeಮುಖಪುಟವಿದೇಶಿಗರ ಆಕ್ರೋಶಕ್ಕೆ ಕಾರಣವಾದ ಅಂಬಾನಿ ಮಗನ 'ಪ್ರಿ ವೆಡ್ಡಿಂಗ್ ಕ್ರೂಸ್ ಪಾರ್ಟಿ'

ವಿದೇಶಿಗರ ಆಕ್ರೋಶಕ್ಕೆ ಕಾರಣವಾದ ಅಂಬಾನಿ ಮಗನ ‘ಪ್ರಿ ವೆಡ್ಡಿಂಗ್ ಕ್ರೂಸ್ ಪಾರ್ಟಿ’

- Advertisement -
- Advertisement -

ಉದ್ಯಮಿ ಮುಖೇಶ್ ಅಂಬಾನಿಯ ಪುತ್ರ ಅನಂತ್ ಅಂಬಾನಿಯ ‘ಪ್ರಿ ವೆಡ್ಡಿಂಗ್ ಕ್ರೂಸ್ ಪಾರ್ಟಿ’ (ವಿವಾಹ ಪೂರ್ವ ಕಾರ್ಯಕ್ರಮ) ವಿದೇಶಗರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಜುಲೈ 12, 2024ರಂದು ಉದ್ಯಮಿ ವಿರೇನ್ ಮರ್ಚೆಂಟ್ ಪುತ್ರಿ ರಾಧಿಕಾ ಮರ್ಚೆಂಟ್ ಜೊತೆ ಮುಖೇಶ್ ಅಂಬಾನಿಯ ಪುತ್ರ ಅನಂತ್ ಅಂಬಾನಿಯ ವಿವಾಹ ನಡೆಯಲಿದೆ. ಅದಕ್ಕೂ ಮುನ್ನ ವಿವಿಧ ರೀತಿಯಲ್ಲಿ ಅದ್ದೂರಿ ವಿವಾಹ ಪೂರ್ವ ಕಾರ್ಯಕ್ರಮಗಳನ್ನು ಅಯೋಜಿಸಲಾಗಿದೆ.

ಮೊದಲ ವಿವಾಹ ಪೂರ್ವ ಕಾರ್ಯಕ್ರಮ ಅಂಬಾನಿ ಕುಟುಂಬದ ಮೂಲ ಸ್ಥಳ ಗುಜರಾತ್‌ನ ಜಾಮಾನಗರದಲ್ಲಿ ಅದ್ದೂರಿಯಾಗಿನ ನಡೆದಿತ್ತು. ಇದಕ್ಕಾಗಿ ಭಾರತೀಯ ವಾಯುನೆಲೆಯ ಅತಿ ಸೂಕ್ಷ್ಮ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ದರ್ಜೆಗೇರಿಸಿ ದುರ್ಬಳಕೆ ಮಾಡಿಕೊಂಡಿರುವುದು ಗೊತ್ತೇ ಇದೆ.

ವರದಿಗಳ ಪ್ರಕಾರ, ಮೂರು ದಿನಗಳ ಕಾಲ ನಡೆದ ಈ ಕಾರ್ಯಕ್ರಮದಲ್ಲಿ 1,200ಕ್ಕೂ ಹೆಚ್ಚು ಅತಿಥಿಗಳು ಪಾಲ್ಗೊಂಡಿದ್ದರು. ಬೆಜ್ವೆಲ್ಡ್ ಆನೆಗಳು ಮತ್ತು ಅಮೆರಿಕನ್ ಗಾಯಕಿ ರಿಹಾನ್ನಾ ಅವರ ಪ್ರದರ್ಶನ ಸೇರಿದಂತೆ ವಿವಿಧ ರೀತಿಯಲ್ಲಿ ಈ ಕಾರ್ಯಕ್ರಮಕ್ಕೆ ಅಂಬಾನಿ ಸುಮಾರು 150 ಮಿಲಿಯನ್ ಡಾಲರ್ ಖರ್ಚು ಮಾಡಿದ್ದಾರೆ.

ಎರಡನೇ ಕಾರ್ಯಕ್ರಮ ‘ಕ್ರೂಸ್ ಪಾರ್ಟಿ’

ಜಾಮಾನಗರದಲ್ಲಿ ಒಂದು ವಿವಾಹ ಪೂರ್ವ ಕಾರ್ಯಕ್ರಮ ಮುಗಿಸಿದ್ದ ಅಂಬಾನಿ ಕುಟುಂಬ, ಮೆಡಿಟರೇನಿಯನ್ ಸಮುದ್ರದಲ್ಲಿ ಐಷರಾಮಿ ಕ್ರೂಸ್‌ನಲ್ಲಿ ಎರಡನೇ ಕಾರ್ಯಕ್ರಮ ಆಯೋಜಿಸಿತ್ತು. ಈ ಕ್ರೂಸ್ ವಿವಿಧ ದೇಶಗಳನ್ನು ಸುತ್ತಾಡಿದೆ.

ಇಟಲಿಯ ದ್ವೀಪ ಸಿಸಿಲಿಯ ರಾಜಧಾನಿಯಾದ ಪಲೆರ್ಮೊದಿಂದ ಫ್ರಾನ್ಸ್‌ನ ದಕ್ಷಿಣಕ್ಕೆ 4 ದಿನಗಳ ಕ್ರೂಸ್ ಪಾರ್ಟಿ ಆಯೋಜಿಸಲಾಗಿತ್ತು. ನಾಲ್ಕು ದಿನಗಳಲ್ಲಿ ರೋಮ್, ಪೋರ್ಟೊಫಿನೋ, ಜಿನೋವಾ ಮತ್ತು ಕೇನ್ಸ್‌ಗಳಲ್ಲಿ ಕ್ರೂಸ್‌ ಸಂಚರಿಸಿದೆ. ಅಲ್ಲಲ್ಲಿ ಕಡಲ ತೀರಗಳಲ್ಲಿ ಪಾರ್ಟಿ ನಡೆದಿದೆ.

ಮೇ 29ರಂದು ಪಲೆರ್ಮೊದಿಂದ ಹೊರಟ ಕ್ರೂಸ್, ಇಟಾಲಿಯನ್ ಬೇಸಿಗೆಯನ್ನು ಅನುಭವಿಸುವ ಗುರಿಯೊಂದಿಗೆ ‘ಲಾ ಡೊಲ್ಸ್ ವೀಟಾ’ ಎಂಬ ಶೀರ್ಷಿಕೆಯ ಪಾರ್ಟಿಗಾಗಿ ಜೂನ್ 1ರಂದು ಆಗ್ನೆಯ ಜಿನೋವಾದ ಪೋರ್ಟೊಫಿನೋ ಬಂದರಿಗೆ ತಲುಪಿತ್ತು.

ಪೋರ್ಟೊಫಿನೋದಲ್ಲಿ ನಡೆದ ಪಾರ್ಟಿಯ ವಿಡಿಯೋ ಎಲ್ಲೂ ಸೋರಿಕೆಯಾಗದಂತೆ ತಡೆಯಲು ಮೊಬೈಲ್ ಫೋನ್ ಸಂಪೂರ್ಣವಾಗಿ ನಿಷೇಧಿಸಲಾಗಿತ್ತು. ಆದರೂ, ಕೆಲವೊಂದು ವಿಡಿಯೋಗಳು ಸೋರಿಕೆಯಾಗಿವೆ. ಅದರ ಪ್ರಕಾರ, ಅಮೆರಿಕನ್ ಬ್ಯಾಂಡ್ ಬ್ಯಾಕ್‌ಸ್ಟ್ರೀಟ್ ಬಾಯ್ಸ್ ಮತ್ತು ಗಾಯಕಿ ಕೇಟಿ ಪೆರ್ರಿ ಕಾರ್ಯಕ್ರಮ ನಡೆಸಿಕೊಟ್ಟಿದ್ದರು. ಸುಮಾರು 800 ಜನರು ಇದರಲ್ಲಿ ಪಾಲ್ಗೊಂಡಿದ್ದರು.

ಕ್ರೂಸ್ ಪಾರ್ಟಿ ವಿರುದ್ದ ಆಕ್ರೋಶಗೊಂಡ ಸ್ಥಳೀಯ ಜನರು

ಅಂಬಾನಿ ಮಗನ ವಿವಾವ ಪೂರ್ವ ಕ್ರೂಸ್ ಪಾರ್ಟಿಯ ವಿರುದ್ದ ಪೋರ್ಟೊಫಿನೋದ ಸ್ಥಳೀಯರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ವಿದೇಶಿ ಮಾಧ್ಯಮಗಳು ವರದಿ ಮಾಡಿವೆ. ಇದಕ್ಕೆ ಕಾರಣ, ಕ್ರೂಸ್ ಪಾರ್ಟಿಯ ದಿನ ಅಲ್ಲಿನ ಸ್ಥಳೀಯ ನಿವಾಸಿಗಳು ಮತ್ತು ವ್ಯಾಪಾರಿಗಳು ತೀವ್ರ ಸಂಕಷ್ಟ ಅನುಭವಿಸಿದ್ದಾರೆ. ಐ‍‍‍‍‍ಷಾರಾಮಿ ಪಾರ್ಟಿಗಾಗಿ ಪೋರ್ಟೊಫಿನೋ ಬಂದರಿಗೆ ಜನರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು.

ಪೋರ್ಟೊಫಿನೋದಲ್ಲಿ ಈ ಹಿಂದೆಯೂ ಹಲವಾರು ಶ್ರೀಮಂತರ ಮದುವೆಗಳು ನಡೆದಿವೆ. ಆದರೆ, ಜನರಿಗೆ ತೊಂದರೆ ಕೊಟ್ಟಿರಲಿಲ್ಲ. ಆಸ್ಟ್ರೇಲಿಯನ್ ಗಾಯಕ ಸಿಯಾ ಮತ್ತು ರಿಯಾಲಿಟಿ ಟಿವಿ ತಾರೆ ಕೌರ್ಟ್ನಿ ಕಾರ್ಡಶಿಯಾನ್ ಇದೇ ಸ್ಥಳದಲ್ಲಿ ಮದುವೆ ಮಾಡಿಕೊಂಡಿದ್ದರು. ಆದರೆ, ಸ್ಥಳೀಯ ಜನರಿಗೆ ಯಾವುದೇ ತೊಂದರೆಯಾಗಿರಲಿಲ್ಲ.

ವರದಿಗಳ ಪ್ರಕಾರ, ಪೋರ್ಟೊಫಿನೋದ ಕಾರ್ಯಕ್ರಮದ ಆಹಾರಕ್ಕಾಗಿ ಅಲ್ಲಿನ ಸ್ಥಳೀಯ 10ಕ್ಕೂ ಹೆಚ್ಚು ರೆಸ್ಟೋರೆಂಟ್‌ಗಳಿಗೆ 7 ಸಾವಿರ ಡಾಲರ್‌ನಿಂದ 10 ಸಾವಿರ ಅಮೆರಿಕನ್ ಡಾಲರ್ ನೀಡಲಾಗಿದೆ.

ಅಂಬಾನಿ ಮಗನ ವಿವಾಹ ಪೂರ್ವ ಕಾರ್ಯಕ್ರಮದ ಕುರಿತು ಪೋರ್ಟೊಫಿನೋದ ಸ್ಥಳೀಯರು ಮತ್ತು ಪ್ರವಾಸಿಗರು ಸಾಮಾಜಿಕ ಜಾಲತಾಣಗಳಲ್ಲೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋರ್ಟೊಫಿನೋದಲ್ಲಿ ಇದುವರೆಗೆ ಹಲವಾರು ಸೆಲೆಬ್ರೆಟಿಗಳ ಮದುವೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆದಿವೆ. ಆದರೆ, ಇದುವರೆಗೆ ಯಾರೂ ಸ್ಥಳೀಯರಿಗೆ ತೊಂದರೆ ಕೊಟ್ಟಿಲ್ಲ. ಅಂಬಾನಿ ಕುಟುಂಬದ ಖಾಸಗಿ ಕಾರ್ಯಕ್ರಮಕ್ಕೆ ಇಡೀ ಪಟ್ಟಣವನ್ನು ಮುಚ್ಚಲಾಗಿತ್ತು. ಇದರಿಂದ ಜನರಿಗೆ ಬಹಳ ತೊಂದರೆಯಾಗಿದೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ಕ್ರೂಸ್ ಪಾರ್ಟಿಯಲ್ಲಿದ್ದವರು ನಡೆದುಕೊಂಡಿರುವ ಬಗ್ಗೆಯೂ ಆಕ್ರೋಶ ವ್ಯಕ್ತವಾಗಿದೆ. ಜೂನ್ 2ರಂದು ಇಡೀ ರಾತ್ರಿ ಜೋರಾಗಿ ಮ್ಯೂಸಿಕ್ ಇಟ್ಟು, ಕುಣಿದು ಕುಪ್ಪಳಿಸುವ ಮೂಲಕ ಪಾರ್ಟಿಯಲ್ಲಿದ್ದವರು ಕಿರಿ ಕಿರಿ ಉಂಟು ಮಾಡಿದ್ದಾರೆ ಎಂದು ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದಾರೆ.

‘tadkeshwari (@ladytadkeshwari) ಎಂಬ ಎಕ್ಸ್ ಬಳಕೆದಾರರೊಬ್ಬರು ಕಾರ್ಯಕ್ರಮದ ಕುರಿತ ಪತ್ರಿಕಾ ವರದಿಯನ್ನು ಹಂಚಿಕೊಂಡು “ಹಣದಿಂದ ಶಿಷ್ಟಾಚಾರ ಮತ್ತು ಗುಣನಡತೆಯನ್ನು ಖರೀದಿಸಲು ಸಾಧ್ಯವಿಲ್ಲ! ಶೇಮ್ ಶೇಮ್ ಶೇಮ್!” ಎಂದು ಬರೆದುಕೊಂಡಿದ್ದಾರೆ.

ಒಟ್ಟಿನಲ್ಲಿ, ವಿಭಿನ್ನವಾಗಿ ಐಷಾರಾಮಿ ಕ್ರೂಸ್ ಶಿಪ್‌ನಲ್ಲಿ ವಿವಾಹಪೂರ್ವ ಕಾರ್ಯಕ್ರಮ ಆಯೋಜಿಸಿದ್ದ ಅಂಬಾನಿ ಕುಟುಂಬ, ಸ್ಥಳೀಯರಿಗೆ ತೊಂದರೆ ಕೊಡುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಖಭಂಗ ಅನುಭವಿಸಿದೆ.

ಇದನ್ನೂ ಓದಿ : ಲೋಕಸಭೆ ಪ್ರವೇಶಿಸಿದ ಮುಸ್ಲಿಂ ಸಂಸದರ ಸಂಖ್ಯೆಯಲ್ಲಿ ಇಳಿಕೆ: ಈ ಭಾರಿ ಎಷ್ಟು ಮುಸ್ಲಿಂ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ? ಡಿಟೇಲ್ಸ್…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...