Homeಮುಖಪುಟವಿದೇಶಿಗರ ಆಕ್ರೋಶಕ್ಕೆ ಕಾರಣವಾದ ಅಂಬಾನಿ ಮಗನ 'ಪ್ರಿ ವೆಡ್ಡಿಂಗ್ ಕ್ರೂಸ್ ಪಾರ್ಟಿ'

ವಿದೇಶಿಗರ ಆಕ್ರೋಶಕ್ಕೆ ಕಾರಣವಾದ ಅಂಬಾನಿ ಮಗನ ‘ಪ್ರಿ ವೆಡ್ಡಿಂಗ್ ಕ್ರೂಸ್ ಪಾರ್ಟಿ’

- Advertisement -
- Advertisement -

ಉದ್ಯಮಿ ಮುಖೇಶ್ ಅಂಬಾನಿಯ ಪುತ್ರ ಅನಂತ್ ಅಂಬಾನಿಯ ‘ಪ್ರಿ ವೆಡ್ಡಿಂಗ್ ಕ್ರೂಸ್ ಪಾರ್ಟಿ’ (ವಿವಾಹ ಪೂರ್ವ ಕಾರ್ಯಕ್ರಮ) ವಿದೇಶಗರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಜುಲೈ 12, 2024ರಂದು ಉದ್ಯಮಿ ವಿರೇನ್ ಮರ್ಚೆಂಟ್ ಪುತ್ರಿ ರಾಧಿಕಾ ಮರ್ಚೆಂಟ್ ಜೊತೆ ಮುಖೇಶ್ ಅಂಬಾನಿಯ ಪುತ್ರ ಅನಂತ್ ಅಂಬಾನಿಯ ವಿವಾಹ ನಡೆಯಲಿದೆ. ಅದಕ್ಕೂ ಮುನ್ನ ವಿವಿಧ ರೀತಿಯಲ್ಲಿ ಅದ್ದೂರಿ ವಿವಾಹ ಪೂರ್ವ ಕಾರ್ಯಕ್ರಮಗಳನ್ನು ಅಯೋಜಿಸಲಾಗಿದೆ.

ಮೊದಲ ವಿವಾಹ ಪೂರ್ವ ಕಾರ್ಯಕ್ರಮ ಅಂಬಾನಿ ಕುಟುಂಬದ ಮೂಲ ಸ್ಥಳ ಗುಜರಾತ್‌ನ ಜಾಮಾನಗರದಲ್ಲಿ ಅದ್ದೂರಿಯಾಗಿನ ನಡೆದಿತ್ತು. ಇದಕ್ಕಾಗಿ ಭಾರತೀಯ ವಾಯುನೆಲೆಯ ಅತಿ ಸೂಕ್ಷ್ಮ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ದರ್ಜೆಗೇರಿಸಿ ದುರ್ಬಳಕೆ ಮಾಡಿಕೊಂಡಿರುವುದು ಗೊತ್ತೇ ಇದೆ.

ವರದಿಗಳ ಪ್ರಕಾರ, ಮೂರು ದಿನಗಳ ಕಾಲ ನಡೆದ ಈ ಕಾರ್ಯಕ್ರಮದಲ್ಲಿ 1,200ಕ್ಕೂ ಹೆಚ್ಚು ಅತಿಥಿಗಳು ಪಾಲ್ಗೊಂಡಿದ್ದರು. ಬೆಜ್ವೆಲ್ಡ್ ಆನೆಗಳು ಮತ್ತು ಅಮೆರಿಕನ್ ಗಾಯಕಿ ರಿಹಾನ್ನಾ ಅವರ ಪ್ರದರ್ಶನ ಸೇರಿದಂತೆ ವಿವಿಧ ರೀತಿಯಲ್ಲಿ ಈ ಕಾರ್ಯಕ್ರಮಕ್ಕೆ ಅಂಬಾನಿ ಸುಮಾರು 150 ಮಿಲಿಯನ್ ಡಾಲರ್ ಖರ್ಚು ಮಾಡಿದ್ದಾರೆ.

ಎರಡನೇ ಕಾರ್ಯಕ್ರಮ ‘ಕ್ರೂಸ್ ಪಾರ್ಟಿ’

ಜಾಮಾನಗರದಲ್ಲಿ ಒಂದು ವಿವಾಹ ಪೂರ್ವ ಕಾರ್ಯಕ್ರಮ ಮುಗಿಸಿದ್ದ ಅಂಬಾನಿ ಕುಟುಂಬ, ಮೆಡಿಟರೇನಿಯನ್ ಸಮುದ್ರದಲ್ಲಿ ಐಷರಾಮಿ ಕ್ರೂಸ್‌ನಲ್ಲಿ ಎರಡನೇ ಕಾರ್ಯಕ್ರಮ ಆಯೋಜಿಸಿತ್ತು. ಈ ಕ್ರೂಸ್ ವಿವಿಧ ದೇಶಗಳನ್ನು ಸುತ್ತಾಡಿದೆ.

ಇಟಲಿಯ ದ್ವೀಪ ಸಿಸಿಲಿಯ ರಾಜಧಾನಿಯಾದ ಪಲೆರ್ಮೊದಿಂದ ಫ್ರಾನ್ಸ್‌ನ ದಕ್ಷಿಣಕ್ಕೆ 4 ದಿನಗಳ ಕ್ರೂಸ್ ಪಾರ್ಟಿ ಆಯೋಜಿಸಲಾಗಿತ್ತು. ನಾಲ್ಕು ದಿನಗಳಲ್ಲಿ ರೋಮ್, ಪೋರ್ಟೊಫಿನೋ, ಜಿನೋವಾ ಮತ್ತು ಕೇನ್ಸ್‌ಗಳಲ್ಲಿ ಕ್ರೂಸ್‌ ಸಂಚರಿಸಿದೆ. ಅಲ್ಲಲ್ಲಿ ಕಡಲ ತೀರಗಳಲ್ಲಿ ಪಾರ್ಟಿ ನಡೆದಿದೆ.

ಮೇ 29ರಂದು ಪಲೆರ್ಮೊದಿಂದ ಹೊರಟ ಕ್ರೂಸ್, ಇಟಾಲಿಯನ್ ಬೇಸಿಗೆಯನ್ನು ಅನುಭವಿಸುವ ಗುರಿಯೊಂದಿಗೆ ‘ಲಾ ಡೊಲ್ಸ್ ವೀಟಾ’ ಎಂಬ ಶೀರ್ಷಿಕೆಯ ಪಾರ್ಟಿಗಾಗಿ ಜೂನ್ 1ರಂದು ಆಗ್ನೆಯ ಜಿನೋವಾದ ಪೋರ್ಟೊಫಿನೋ ಬಂದರಿಗೆ ತಲುಪಿತ್ತು.

ಪೋರ್ಟೊಫಿನೋದಲ್ಲಿ ನಡೆದ ಪಾರ್ಟಿಯ ವಿಡಿಯೋ ಎಲ್ಲೂ ಸೋರಿಕೆಯಾಗದಂತೆ ತಡೆಯಲು ಮೊಬೈಲ್ ಫೋನ್ ಸಂಪೂರ್ಣವಾಗಿ ನಿಷೇಧಿಸಲಾಗಿತ್ತು. ಆದರೂ, ಕೆಲವೊಂದು ವಿಡಿಯೋಗಳು ಸೋರಿಕೆಯಾಗಿವೆ. ಅದರ ಪ್ರಕಾರ, ಅಮೆರಿಕನ್ ಬ್ಯಾಂಡ್ ಬ್ಯಾಕ್‌ಸ್ಟ್ರೀಟ್ ಬಾಯ್ಸ್ ಮತ್ತು ಗಾಯಕಿ ಕೇಟಿ ಪೆರ್ರಿ ಕಾರ್ಯಕ್ರಮ ನಡೆಸಿಕೊಟ್ಟಿದ್ದರು. ಸುಮಾರು 800 ಜನರು ಇದರಲ್ಲಿ ಪಾಲ್ಗೊಂಡಿದ್ದರು.

ಕ್ರೂಸ್ ಪಾರ್ಟಿ ವಿರುದ್ದ ಆಕ್ರೋಶಗೊಂಡ ಸ್ಥಳೀಯ ಜನರು

ಅಂಬಾನಿ ಮಗನ ವಿವಾವ ಪೂರ್ವ ಕ್ರೂಸ್ ಪಾರ್ಟಿಯ ವಿರುದ್ದ ಪೋರ್ಟೊಫಿನೋದ ಸ್ಥಳೀಯರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ವಿದೇಶಿ ಮಾಧ್ಯಮಗಳು ವರದಿ ಮಾಡಿವೆ. ಇದಕ್ಕೆ ಕಾರಣ, ಕ್ರೂಸ್ ಪಾರ್ಟಿಯ ದಿನ ಅಲ್ಲಿನ ಸ್ಥಳೀಯ ನಿವಾಸಿಗಳು ಮತ್ತು ವ್ಯಾಪಾರಿಗಳು ತೀವ್ರ ಸಂಕಷ್ಟ ಅನುಭವಿಸಿದ್ದಾರೆ. ಐ‍‍‍‍‍ಷಾರಾಮಿ ಪಾರ್ಟಿಗಾಗಿ ಪೋರ್ಟೊಫಿನೋ ಬಂದರಿಗೆ ಜನರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು.

ಪೋರ್ಟೊಫಿನೋದಲ್ಲಿ ಈ ಹಿಂದೆಯೂ ಹಲವಾರು ಶ್ರೀಮಂತರ ಮದುವೆಗಳು ನಡೆದಿವೆ. ಆದರೆ, ಜನರಿಗೆ ತೊಂದರೆ ಕೊಟ್ಟಿರಲಿಲ್ಲ. ಆಸ್ಟ್ರೇಲಿಯನ್ ಗಾಯಕ ಸಿಯಾ ಮತ್ತು ರಿಯಾಲಿಟಿ ಟಿವಿ ತಾರೆ ಕೌರ್ಟ್ನಿ ಕಾರ್ಡಶಿಯಾನ್ ಇದೇ ಸ್ಥಳದಲ್ಲಿ ಮದುವೆ ಮಾಡಿಕೊಂಡಿದ್ದರು. ಆದರೆ, ಸ್ಥಳೀಯ ಜನರಿಗೆ ಯಾವುದೇ ತೊಂದರೆಯಾಗಿರಲಿಲ್ಲ.

ವರದಿಗಳ ಪ್ರಕಾರ, ಪೋರ್ಟೊಫಿನೋದ ಕಾರ್ಯಕ್ರಮದ ಆಹಾರಕ್ಕಾಗಿ ಅಲ್ಲಿನ ಸ್ಥಳೀಯ 10ಕ್ಕೂ ಹೆಚ್ಚು ರೆಸ್ಟೋರೆಂಟ್‌ಗಳಿಗೆ 7 ಸಾವಿರ ಡಾಲರ್‌ನಿಂದ 10 ಸಾವಿರ ಅಮೆರಿಕನ್ ಡಾಲರ್ ನೀಡಲಾಗಿದೆ.

ಅಂಬಾನಿ ಮಗನ ವಿವಾಹ ಪೂರ್ವ ಕಾರ್ಯಕ್ರಮದ ಕುರಿತು ಪೋರ್ಟೊಫಿನೋದ ಸ್ಥಳೀಯರು ಮತ್ತು ಪ್ರವಾಸಿಗರು ಸಾಮಾಜಿಕ ಜಾಲತಾಣಗಳಲ್ಲೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋರ್ಟೊಫಿನೋದಲ್ಲಿ ಇದುವರೆಗೆ ಹಲವಾರು ಸೆಲೆಬ್ರೆಟಿಗಳ ಮದುವೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆದಿವೆ. ಆದರೆ, ಇದುವರೆಗೆ ಯಾರೂ ಸ್ಥಳೀಯರಿಗೆ ತೊಂದರೆ ಕೊಟ್ಟಿಲ್ಲ. ಅಂಬಾನಿ ಕುಟುಂಬದ ಖಾಸಗಿ ಕಾರ್ಯಕ್ರಮಕ್ಕೆ ಇಡೀ ಪಟ್ಟಣವನ್ನು ಮುಚ್ಚಲಾಗಿತ್ತು. ಇದರಿಂದ ಜನರಿಗೆ ಬಹಳ ತೊಂದರೆಯಾಗಿದೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ಕ್ರೂಸ್ ಪಾರ್ಟಿಯಲ್ಲಿದ್ದವರು ನಡೆದುಕೊಂಡಿರುವ ಬಗ್ಗೆಯೂ ಆಕ್ರೋಶ ವ್ಯಕ್ತವಾಗಿದೆ. ಜೂನ್ 2ರಂದು ಇಡೀ ರಾತ್ರಿ ಜೋರಾಗಿ ಮ್ಯೂಸಿಕ್ ಇಟ್ಟು, ಕುಣಿದು ಕುಪ್ಪಳಿಸುವ ಮೂಲಕ ಪಾರ್ಟಿಯಲ್ಲಿದ್ದವರು ಕಿರಿ ಕಿರಿ ಉಂಟು ಮಾಡಿದ್ದಾರೆ ಎಂದು ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದಾರೆ.

‘tadkeshwari (@ladytadkeshwari) ಎಂಬ ಎಕ್ಸ್ ಬಳಕೆದಾರರೊಬ್ಬರು ಕಾರ್ಯಕ್ರಮದ ಕುರಿತ ಪತ್ರಿಕಾ ವರದಿಯನ್ನು ಹಂಚಿಕೊಂಡು “ಹಣದಿಂದ ಶಿಷ್ಟಾಚಾರ ಮತ್ತು ಗುಣನಡತೆಯನ್ನು ಖರೀದಿಸಲು ಸಾಧ್ಯವಿಲ್ಲ! ಶೇಮ್ ಶೇಮ್ ಶೇಮ್!” ಎಂದು ಬರೆದುಕೊಂಡಿದ್ದಾರೆ.

ಒಟ್ಟಿನಲ್ಲಿ, ವಿಭಿನ್ನವಾಗಿ ಐಷಾರಾಮಿ ಕ್ರೂಸ್ ಶಿಪ್‌ನಲ್ಲಿ ವಿವಾಹಪೂರ್ವ ಕಾರ್ಯಕ್ರಮ ಆಯೋಜಿಸಿದ್ದ ಅಂಬಾನಿ ಕುಟುಂಬ, ಸ್ಥಳೀಯರಿಗೆ ತೊಂದರೆ ಕೊಡುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಖಭಂಗ ಅನುಭವಿಸಿದೆ.

ಇದನ್ನೂ ಓದಿ : ಲೋಕಸಭೆ ಪ್ರವೇಶಿಸಿದ ಮುಸ್ಲಿಂ ಸಂಸದರ ಸಂಖ್ಯೆಯಲ್ಲಿ ಇಳಿಕೆ: ಈ ಭಾರಿ ಎಷ್ಟು ಮುಸ್ಲಿಂ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ? ಡಿಟೇಲ್ಸ್…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...