Homeಮುಖಪುಟವಿದೇಶಿಗರ ಆಕ್ರೋಶಕ್ಕೆ ಕಾರಣವಾದ ಅಂಬಾನಿ ಮಗನ 'ಪ್ರಿ ವೆಡ್ಡಿಂಗ್ ಕ್ರೂಸ್ ಪಾರ್ಟಿ'

ವಿದೇಶಿಗರ ಆಕ್ರೋಶಕ್ಕೆ ಕಾರಣವಾದ ಅಂಬಾನಿ ಮಗನ ‘ಪ್ರಿ ವೆಡ್ಡಿಂಗ್ ಕ್ರೂಸ್ ಪಾರ್ಟಿ’

- Advertisement -
- Advertisement -

ಉದ್ಯಮಿ ಮುಖೇಶ್ ಅಂಬಾನಿಯ ಪುತ್ರ ಅನಂತ್ ಅಂಬಾನಿಯ ‘ಪ್ರಿ ವೆಡ್ಡಿಂಗ್ ಕ್ರೂಸ್ ಪಾರ್ಟಿ’ (ವಿವಾಹ ಪೂರ್ವ ಕಾರ್ಯಕ್ರಮ) ವಿದೇಶಗರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಜುಲೈ 12, 2024ರಂದು ಉದ್ಯಮಿ ವಿರೇನ್ ಮರ್ಚೆಂಟ್ ಪುತ್ರಿ ರಾಧಿಕಾ ಮರ್ಚೆಂಟ್ ಜೊತೆ ಮುಖೇಶ್ ಅಂಬಾನಿಯ ಪುತ್ರ ಅನಂತ್ ಅಂಬಾನಿಯ ವಿವಾಹ ನಡೆಯಲಿದೆ. ಅದಕ್ಕೂ ಮುನ್ನ ವಿವಿಧ ರೀತಿಯಲ್ಲಿ ಅದ್ದೂರಿ ವಿವಾಹ ಪೂರ್ವ ಕಾರ್ಯಕ್ರಮಗಳನ್ನು ಅಯೋಜಿಸಲಾಗಿದೆ.

ಮೊದಲ ವಿವಾಹ ಪೂರ್ವ ಕಾರ್ಯಕ್ರಮ ಅಂಬಾನಿ ಕುಟುಂಬದ ಮೂಲ ಸ್ಥಳ ಗುಜರಾತ್‌ನ ಜಾಮಾನಗರದಲ್ಲಿ ಅದ್ದೂರಿಯಾಗಿನ ನಡೆದಿತ್ತು. ಇದಕ್ಕಾಗಿ ಭಾರತೀಯ ವಾಯುನೆಲೆಯ ಅತಿ ಸೂಕ್ಷ್ಮ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ದರ್ಜೆಗೇರಿಸಿ ದುರ್ಬಳಕೆ ಮಾಡಿಕೊಂಡಿರುವುದು ಗೊತ್ತೇ ಇದೆ.

ವರದಿಗಳ ಪ್ರಕಾರ, ಮೂರು ದಿನಗಳ ಕಾಲ ನಡೆದ ಈ ಕಾರ್ಯಕ್ರಮದಲ್ಲಿ 1,200ಕ್ಕೂ ಹೆಚ್ಚು ಅತಿಥಿಗಳು ಪಾಲ್ಗೊಂಡಿದ್ದರು. ಬೆಜ್ವೆಲ್ಡ್ ಆನೆಗಳು ಮತ್ತು ಅಮೆರಿಕನ್ ಗಾಯಕಿ ರಿಹಾನ್ನಾ ಅವರ ಪ್ರದರ್ಶನ ಸೇರಿದಂತೆ ವಿವಿಧ ರೀತಿಯಲ್ಲಿ ಈ ಕಾರ್ಯಕ್ರಮಕ್ಕೆ ಅಂಬಾನಿ ಸುಮಾರು 150 ಮಿಲಿಯನ್ ಡಾಲರ್ ಖರ್ಚು ಮಾಡಿದ್ದಾರೆ.

ಎರಡನೇ ಕಾರ್ಯಕ್ರಮ ‘ಕ್ರೂಸ್ ಪಾರ್ಟಿ’

ಜಾಮಾನಗರದಲ್ಲಿ ಒಂದು ವಿವಾಹ ಪೂರ್ವ ಕಾರ್ಯಕ್ರಮ ಮುಗಿಸಿದ್ದ ಅಂಬಾನಿ ಕುಟುಂಬ, ಮೆಡಿಟರೇನಿಯನ್ ಸಮುದ್ರದಲ್ಲಿ ಐಷರಾಮಿ ಕ್ರೂಸ್‌ನಲ್ಲಿ ಎರಡನೇ ಕಾರ್ಯಕ್ರಮ ಆಯೋಜಿಸಿತ್ತು. ಈ ಕ್ರೂಸ್ ವಿವಿಧ ದೇಶಗಳನ್ನು ಸುತ್ತಾಡಿದೆ.

ಇಟಲಿಯ ದ್ವೀಪ ಸಿಸಿಲಿಯ ರಾಜಧಾನಿಯಾದ ಪಲೆರ್ಮೊದಿಂದ ಫ್ರಾನ್ಸ್‌ನ ದಕ್ಷಿಣಕ್ಕೆ 4 ದಿನಗಳ ಕ್ರೂಸ್ ಪಾರ್ಟಿ ಆಯೋಜಿಸಲಾಗಿತ್ತು. ನಾಲ್ಕು ದಿನಗಳಲ್ಲಿ ರೋಮ್, ಪೋರ್ಟೊಫಿನೋ, ಜಿನೋವಾ ಮತ್ತು ಕೇನ್ಸ್‌ಗಳಲ್ಲಿ ಕ್ರೂಸ್‌ ಸಂಚರಿಸಿದೆ. ಅಲ್ಲಲ್ಲಿ ಕಡಲ ತೀರಗಳಲ್ಲಿ ಪಾರ್ಟಿ ನಡೆದಿದೆ.

ಮೇ 29ರಂದು ಪಲೆರ್ಮೊದಿಂದ ಹೊರಟ ಕ್ರೂಸ್, ಇಟಾಲಿಯನ್ ಬೇಸಿಗೆಯನ್ನು ಅನುಭವಿಸುವ ಗುರಿಯೊಂದಿಗೆ ‘ಲಾ ಡೊಲ್ಸ್ ವೀಟಾ’ ಎಂಬ ಶೀರ್ಷಿಕೆಯ ಪಾರ್ಟಿಗಾಗಿ ಜೂನ್ 1ರಂದು ಆಗ್ನೆಯ ಜಿನೋವಾದ ಪೋರ್ಟೊಫಿನೋ ಬಂದರಿಗೆ ತಲುಪಿತ್ತು.

ಪೋರ್ಟೊಫಿನೋದಲ್ಲಿ ನಡೆದ ಪಾರ್ಟಿಯ ವಿಡಿಯೋ ಎಲ್ಲೂ ಸೋರಿಕೆಯಾಗದಂತೆ ತಡೆಯಲು ಮೊಬೈಲ್ ಫೋನ್ ಸಂಪೂರ್ಣವಾಗಿ ನಿಷೇಧಿಸಲಾಗಿತ್ತು. ಆದರೂ, ಕೆಲವೊಂದು ವಿಡಿಯೋಗಳು ಸೋರಿಕೆಯಾಗಿವೆ. ಅದರ ಪ್ರಕಾರ, ಅಮೆರಿಕನ್ ಬ್ಯಾಂಡ್ ಬ್ಯಾಕ್‌ಸ್ಟ್ರೀಟ್ ಬಾಯ್ಸ್ ಮತ್ತು ಗಾಯಕಿ ಕೇಟಿ ಪೆರ್ರಿ ಕಾರ್ಯಕ್ರಮ ನಡೆಸಿಕೊಟ್ಟಿದ್ದರು. ಸುಮಾರು 800 ಜನರು ಇದರಲ್ಲಿ ಪಾಲ್ಗೊಂಡಿದ್ದರು.

ಕ್ರೂಸ್ ಪಾರ್ಟಿ ವಿರುದ್ದ ಆಕ್ರೋಶಗೊಂಡ ಸ್ಥಳೀಯ ಜನರು

ಅಂಬಾನಿ ಮಗನ ವಿವಾವ ಪೂರ್ವ ಕ್ರೂಸ್ ಪಾರ್ಟಿಯ ವಿರುದ್ದ ಪೋರ್ಟೊಫಿನೋದ ಸ್ಥಳೀಯರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ವಿದೇಶಿ ಮಾಧ್ಯಮಗಳು ವರದಿ ಮಾಡಿವೆ. ಇದಕ್ಕೆ ಕಾರಣ, ಕ್ರೂಸ್ ಪಾರ್ಟಿಯ ದಿನ ಅಲ್ಲಿನ ಸ್ಥಳೀಯ ನಿವಾಸಿಗಳು ಮತ್ತು ವ್ಯಾಪಾರಿಗಳು ತೀವ್ರ ಸಂಕಷ್ಟ ಅನುಭವಿಸಿದ್ದಾರೆ. ಐ‍‍‍‍‍ಷಾರಾಮಿ ಪಾರ್ಟಿಗಾಗಿ ಪೋರ್ಟೊಫಿನೋ ಬಂದರಿಗೆ ಜನರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು.

ಪೋರ್ಟೊಫಿನೋದಲ್ಲಿ ಈ ಹಿಂದೆಯೂ ಹಲವಾರು ಶ್ರೀಮಂತರ ಮದುವೆಗಳು ನಡೆದಿವೆ. ಆದರೆ, ಜನರಿಗೆ ತೊಂದರೆ ಕೊಟ್ಟಿರಲಿಲ್ಲ. ಆಸ್ಟ್ರೇಲಿಯನ್ ಗಾಯಕ ಸಿಯಾ ಮತ್ತು ರಿಯಾಲಿಟಿ ಟಿವಿ ತಾರೆ ಕೌರ್ಟ್ನಿ ಕಾರ್ಡಶಿಯಾನ್ ಇದೇ ಸ್ಥಳದಲ್ಲಿ ಮದುವೆ ಮಾಡಿಕೊಂಡಿದ್ದರು. ಆದರೆ, ಸ್ಥಳೀಯ ಜನರಿಗೆ ಯಾವುದೇ ತೊಂದರೆಯಾಗಿರಲಿಲ್ಲ.

ವರದಿಗಳ ಪ್ರಕಾರ, ಪೋರ್ಟೊಫಿನೋದ ಕಾರ್ಯಕ್ರಮದ ಆಹಾರಕ್ಕಾಗಿ ಅಲ್ಲಿನ ಸ್ಥಳೀಯ 10ಕ್ಕೂ ಹೆಚ್ಚು ರೆಸ್ಟೋರೆಂಟ್‌ಗಳಿಗೆ 7 ಸಾವಿರ ಡಾಲರ್‌ನಿಂದ 10 ಸಾವಿರ ಅಮೆರಿಕನ್ ಡಾಲರ್ ನೀಡಲಾಗಿದೆ.

ಅಂಬಾನಿ ಮಗನ ವಿವಾಹ ಪೂರ್ವ ಕಾರ್ಯಕ್ರಮದ ಕುರಿತು ಪೋರ್ಟೊಫಿನೋದ ಸ್ಥಳೀಯರು ಮತ್ತು ಪ್ರವಾಸಿಗರು ಸಾಮಾಜಿಕ ಜಾಲತಾಣಗಳಲ್ಲೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋರ್ಟೊಫಿನೋದಲ್ಲಿ ಇದುವರೆಗೆ ಹಲವಾರು ಸೆಲೆಬ್ರೆಟಿಗಳ ಮದುವೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆದಿವೆ. ಆದರೆ, ಇದುವರೆಗೆ ಯಾರೂ ಸ್ಥಳೀಯರಿಗೆ ತೊಂದರೆ ಕೊಟ್ಟಿಲ್ಲ. ಅಂಬಾನಿ ಕುಟುಂಬದ ಖಾಸಗಿ ಕಾರ್ಯಕ್ರಮಕ್ಕೆ ಇಡೀ ಪಟ್ಟಣವನ್ನು ಮುಚ್ಚಲಾಗಿತ್ತು. ಇದರಿಂದ ಜನರಿಗೆ ಬಹಳ ತೊಂದರೆಯಾಗಿದೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ಕ್ರೂಸ್ ಪಾರ್ಟಿಯಲ್ಲಿದ್ದವರು ನಡೆದುಕೊಂಡಿರುವ ಬಗ್ಗೆಯೂ ಆಕ್ರೋಶ ವ್ಯಕ್ತವಾಗಿದೆ. ಜೂನ್ 2ರಂದು ಇಡೀ ರಾತ್ರಿ ಜೋರಾಗಿ ಮ್ಯೂಸಿಕ್ ಇಟ್ಟು, ಕುಣಿದು ಕುಪ್ಪಳಿಸುವ ಮೂಲಕ ಪಾರ್ಟಿಯಲ್ಲಿದ್ದವರು ಕಿರಿ ಕಿರಿ ಉಂಟು ಮಾಡಿದ್ದಾರೆ ಎಂದು ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದಾರೆ.

‘tadkeshwari (@ladytadkeshwari) ಎಂಬ ಎಕ್ಸ್ ಬಳಕೆದಾರರೊಬ್ಬರು ಕಾರ್ಯಕ್ರಮದ ಕುರಿತ ಪತ್ರಿಕಾ ವರದಿಯನ್ನು ಹಂಚಿಕೊಂಡು “ಹಣದಿಂದ ಶಿಷ್ಟಾಚಾರ ಮತ್ತು ಗುಣನಡತೆಯನ್ನು ಖರೀದಿಸಲು ಸಾಧ್ಯವಿಲ್ಲ! ಶೇಮ್ ಶೇಮ್ ಶೇಮ್!” ಎಂದು ಬರೆದುಕೊಂಡಿದ್ದಾರೆ.

ಒಟ್ಟಿನಲ್ಲಿ, ವಿಭಿನ್ನವಾಗಿ ಐಷಾರಾಮಿ ಕ್ರೂಸ್ ಶಿಪ್‌ನಲ್ಲಿ ವಿವಾಹಪೂರ್ವ ಕಾರ್ಯಕ್ರಮ ಆಯೋಜಿಸಿದ್ದ ಅಂಬಾನಿ ಕುಟುಂಬ, ಸ್ಥಳೀಯರಿಗೆ ತೊಂದರೆ ಕೊಡುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಖಭಂಗ ಅನುಭವಿಸಿದೆ.

ಇದನ್ನೂ ಓದಿ : ಲೋಕಸಭೆ ಪ್ರವೇಶಿಸಿದ ಮುಸ್ಲಿಂ ಸಂಸದರ ಸಂಖ್ಯೆಯಲ್ಲಿ ಇಳಿಕೆ: ಈ ಭಾರಿ ಎಷ್ಟು ಮುಸ್ಲಿಂ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ? ಡಿಟೇಲ್ಸ್…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುತ್ತಿಗೆ ಕಾರ್ಮಿಕ ಪದ್ಧತಿ ರದ್ದುಪಡಿಸಿ, ನೇರ ವೇತನ ಪಾವತಿ ಜಾರಿಗೊಳಿಸಿ, ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿಸಲು ಆಗ್ರಹಿಸಿ ಎಐಸಿಸಿಟಿಯು ಪ್ರತಿಭಟನೆ

ಬೆಂಗಳೂರು: ರಾಜ್ಯಾದ್ಯಂತ ವಿವಿಧ ವಲಯಗಳಲ್ಲಿ ದುಡಿಯುತ್ತಿರುವ ಗುತ್ತಿಗೆ, ಹೊರಗುತ್ತಿಗೆ, ದಿನಗೂಲಿ ಹಾಗೂ ತಾತ್ಕಾಲಿಕ ಕಾರ್ಮಿಕರ ಶೋಷಣೆ ತಡೆಗಟ್ಟಿ, ಅವರಿಗೆ ಉದ್ಯೋಗ ಭದ್ರತೆ ಮತ್ತು ಸಾಮಾಜಿಕ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ...

ಯುಜಿಸಿ ಇಕ್ವಿಟಿ ನಿಯಮಗಳು ಮರುಪರಿಶೀಲನೆಯಲ್ಲಿವೆ: ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ ಸರ್ಕಾರ

ಕ್ಯಾಂಪಸ್‌ಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟುವ ಕುರಿತಾದ 2026 ರ ವಿಶ್ವವಿದ್ಯಾಲಯ ಅನುದಾನ ಆಯೋಗದ ಇಕ್ವಿಟಿ ನಿಯಮಗಳು ಮರುಪರಿಶೀಲನೆಯಲ್ಲಿವೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಜನವರಿ 29 ರಂದು, ಸುಪ್ರೀಂ...

ಅಲ್ಪಸಂಖ್ಯಾತರ ಮೇಲಿನ ದಾಳಿ ಹಿನ್ನೆಲೆ: ಭಾಗವತ್ ಭೇಟಿಗೂ ಮುನ್ನ ಆರ್‌ಎಸ್‌ಎಸ್ ನಾಯಕರನ್ನು ದೂರವಿಡುವಂತೆ ವಾಷಿಂಗ್ಟನ್‌ಗೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ ಒತ್ತಾಯ

ವಾಷಿಂಗ್ಟನ್: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಅಮೆರಿಕ ಭೇಟಿಗೆ ಮುನ್ನ, ಅವರೊಂದಿಗೆ ಉನ್ನತ ಮಟ್ಟದ ರಾಜತಾಂತ್ರಿಕ ಮಾತುಕತೆಗಳನ್ನು ತಡೆಹಿಡಿಯಬೇಕು ಮತ್ತು ಸಂಘದ ಪ್ರಮುಖ ನಾಯಕರ ವಿರುದ್ಧ ನಿರ್ಬಂಧಗಳನ್ನು...

ಮೋಹನ್ ಭಾಗವತ್‌ ಅಮೆರಿಕ ಪ್ರವಾಸಕ್ಕೆ ವಿರೋಧ: RSSಗೆ ನಿರ್ಬಂಧದ ಭೀತಿ

ಆರ್‌ಎಸ್‌ಎಸ್ (RSS) ಸಂಘಟನೆಯ ವಿರುದ್ಧ ನಿರ್ಬಂಧಗಳನ್ನು ವಿಧಿಸುವಂತೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಕುರಿತ ಸಲಹಾ ಮಂಡಳಿಯ (USCIRF) ಅಧಿಕಾರಿಗಳು ಅಮೆರಿಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಶೀಘ್ರದಲ್ಲೇ ಅಮೆರಿಕಕ್ಕೆ ಭೇಟಿ ನೀಡಲಿರುವ RSS ಸರಸಂಘಚಾಲಕ ಮೋಹನ್ ಭಾಗವತ್...

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಕೇರಳದ ಟ್ರಾನ್ಸ್ ಜೆಂಡರ್ ಮೇಕಪ್ ಕಲಾವಿದೆ ಜಾನ್ಮೋನಿ ದಾಸ್ ಬಂಧನ

ಕೋಝಿಕ್ಕೋಡ್: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಸಾರ್ವಜನಿಕವಾಗಿ ಅವಮಾನಕಾರಿ ಹಾಗೂ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇರೆಗೆ ಕೇರಳದ ಪ್ರಸಿದ್ಧ ಸೆಲೆಬ್ರಿಟಿ ಮೇಕಪ್ ಆರ್ಟಿಸ್ಟ್ ಹಾಗೂ ಬಿಗ್ ಬಾಸ್ ಮಾಜಿ...

ಎರಡು ಚರಣಗಳ ‘ವಂದೇ ಮಾತರಂ’ ನಿಲುವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್

ವಂದೇ ಮಾತರಂ ವಿವಾದ ತೀವ್ರಗೊಳ್ಳುತ್ತಿರುವಂತೆಯೇ, ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ತೀವ್ರ ಟೀಕೆಗಳ ನಡುವೆಯೂ ಕಾಂಗ್ರೆಸ್ ಪಕ್ಷವು ತನ್ನ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆಯ ಮೊದಲ ಎರಡು ಚರಣಗಳನ್ನು ಹಾಡುವ ತನ್ನ ದೀರ್ಘಕಾಲದ ಪದ್ಧತಿಯನ್ನು...

31ನೇ ದಕ್ಷಿಣ ವಲಯ ಮಂಡಳಿ ಸಭೆ : ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ನ್ಯಾಯಯುತ ಅನುದಾನ ನೀಡುವಂತೆ ಸಿಎಂ ಡಿ.ಕೆ ಶಿವಕುಮಾರ್ ಒತ್ತಾಯ

ಕರ್ನಾಟಕ ಬಲಿಷ್ಠವಾದಾಗ, ದಕ್ಷಿಣ ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ದಕ್ಷಿಣ ಭಾರತ ಬಲಿಷ್ಠವಾದಾಗ, ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ನಾವು ಭಾರತದ ಅಭಿವೃದ್ಧಿಯ ಪಾಲುದಾರರು. ನಮಗೆ ನಮ್ಮ ನಿಧಿಗಳಲ್ಲಿ, ನಮ್ಮ ಧ್ವನಿಯಲ್ಲಿ ನ್ಯಾಯ ಬೇಕು. ನಮಗೆ...

ರಾಯಚೂರು| ಬಾವಿಯಲ್ಲಿ ದಲಿತ ಯುವತಿ ಮೃತದೇಹ ಪತ್ತೆ; ಅತ್ಯಾಚಾರ-ಕೊಲೆ ಶಂಕೆ

ನಿನ್ನೆ ರಾತ್ರಿ ಬಯಲು ಶೌಚಾಲಯಕ್ಕೆಂದು ಮನೆಯಿಂದ ಹೊರಹೋಗಿದ್ದ ಯುವತಿಯೊಬ್ಬಳು ನಾಪತ್ತೆಯಾಗಿದ್ದು, ಇಂದು ಬೆಳಗ್ಗೆ ಜಮೀನಿನಲ್ಲಿದ್ದ ಬಾವಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಕ್ರಾಣಿ ಗ್ರಾಮದಲ್ಲಿ ಘಟನೆ ನಡೆಸಿದ್ದು, ಮೃತ...

ನಕಲಿ ಔಷಧ ಜಾಲದ ಸುಳಿವು ನೀಡಿದವರಿಗೆ ₹50,000 ನಗದು ಬಹುಮಾನ: ಆರೋಗ್ಯ ಇಲಾಖೆ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ನಕಲಿ ಔಷಧ ಜಾಲದ ವಿರುದ್ಧ ಆರೋಗ್ಯ ಇಲಾಖೆ ಸಮರ ಸಾರಿದೆ. ರಾಜ್ಯದಲ್ಲಿ ನಕಲಿ ಔಷಧಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಹಾಗೂ ಪೂರೈಕೆ ಕುರಿತು ನಿಖರ ಮಾಹಿತಿ ನೀಡುವ...

ಎಬಿವಿಪಿ ಮತ್ತು ಎಡಪಂಥೀಯ ಗುಂಪುಗಳ ನಡುವೆ ವಾಗ್ವಾದ: ಮಧ್ಯರಾತ್ರಿ ಜಾದವ್‌ಪುರ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಳಿ ನಡೆಸಿದ ಹಿಂದುತ್ವವಾದಿ ಗುಂಪು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಪ್ರತಿಷ್ಠಿತ ಜಾದವ್‌ಪುರ ವಿಶ್ವವಿದ್ಯಾಲಯದ (ಜೆ ಯು) ಕ್ಯಾಂಪಸ್‌ ಮೇಲೆ ತಡರಾತ್ರಿ ಹಿಂದುತ್ವವಾದಿ ಸಂಘಟನೆಗೆ ಸೇರಿದ ಗುಂಪೊಂದು ಭೀಕರ ದಾಳಿ ನಡೆಸಿದ್ದು, ವಿಶ್ವವಿದ್ಯಾಲಯದ ಆಸ್ತಿಪಾಸ್ತಿ ಧ್ವಂಸಗೊಳಿಸಿ ಹಲವು ವಿದ್ಯಾರ್ಥಿಗಳನ್ನು ತೀವ್ರವಾಗಿ...