Homeಕರ್ನಾಟಕಒಳಮೀಸಲಾತಿಯ ಮುಂಚೂಣಿ ನಾಯಕ ಅಂಬಣ್ಣ, ಬಿ.ಗೋಪಾಲ್ ಸೇರಿದಂತೆ ಹಲವರು ಕಾಂಗ್ರೆಸ್ ಸೇರ್ಪಡೆ

ಒಳಮೀಸಲಾತಿಯ ಮುಂಚೂಣಿ ನಾಯಕ ಅಂಬಣ್ಣ, ಬಿ.ಗೋಪಾಲ್ ಸೇರಿದಂತೆ ಹಲವರು ಕಾಂಗ್ರೆಸ್ ಸೇರ್ಪಡೆ

ದಲಿತ ರಾಜಕೀಯದ ಕುರಿತು ಎದ್ದಿರುವ ಪ್ರಶ್ನೆಗಳಿಗೆ ಅಂಬಣ್ಣ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿದ್ದಾರೆ.

- Advertisement -
- Advertisement -

ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ನಡೆಯುತ್ತಿರುವ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ನಾಯಕರಾದ ಅಂಬಣ್ಣ ಅರೋಲಿಕರ್‌, ಬಿ.ಗೋಪಾಲ್ ಸೇರಿದಂತೆ ಹಲವು ದಲಿತ ಮುಖಂಡರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನ ಕ್ವೀನ್ಸ್‌ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಎಂಆರ್‌ಎಚ್‌ಎಸ್‌ನ ಅಂಬಣ್ಣ (ರಾಯಚೂರು) ಅವರೊಂದಿಗೆ, ಡಿಎಸ್‌ಎಸ್‌ ರಾಜ್ಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್ (ಬೆಂಗಳೂರು), ದಸಂಸ ಮುಖಂಡ ಮಾರೇಶ್‌ ನಾಗಣ್ಣನವರ್‌ (ಧಾರವಾಡ), ಅಲೆಮಾರಿ ಸಮುದಾಯದ ರಾಜ್ಯ ಮುಖಂಡ ಸಣ್ಣಮಾರಣ್ಣ (ವಿಜಯನಗರ), ಮಾದಿಗ ದಂಡೋರದ ವೆಂಕಟೇಶ್ ಆಲೂರ್‌ (ಯಾದಗಿರಿ), ಸ್ಲಂ ನಿವಾಸಿಗಳ ರಾಜ್ಯ ಸಂಚಾಲಕ ನರಸಿಂಹಮೂರ್ತಿ (ತುಮಕೂರು), ದಸಂಸ ಮುಖಂಡ ಮರಿಸ್ವಾಮಿ ಕೊಟ್ಟೂರು (ವಿಜಯನಗರ), ಯುವ ಮುಖಂಡರಾದ ಮುರಳೀಧರ ಮೇಲಿನಮನಿ (ಕೊಪ್ಪಳ), ಹತವಾಡಿ ಲಕ್ಷ್ಮಣ್‌ (ಬೆಂಗಳೂರು), ವಿಜಯಕುಮಾರ್‌ (ಬೀದರ್‌), ಎಂಆರ್‌ಎಚ್‌ಎಸ್‌ ರಾಯಚೂರು ಜಿಲ್ಲಾ ಮುಖಂಡ ತಿಮ್ಮಪ್ಪ ಆಲ್ಕೂರು, ರಾಜಣ್ಣ (ಚಿತ್ರದುರ್ಗ), ಉಡುಚಪ್ಪ ಯಲ್ಲಮ್ಮ ಮಳಗಿ (ಹಾವೇರಿ), ಆದಿಜಾಂಬಜ ಜನಸಂಘದ ರಾಜ್ಯ ಮುಖಂಡ ಮುನಿಕೃಷ್ಣಯ್ಯ (ಬೆಂಗಳೂರು), ದಸಂಸ ಮುಖಂಡ ಯಲ್ಲಪ್ಪ ಗೊರಮಗೊಲ್ಲ (ಬೆಳಗಾವಿ), ಮಾರುತಿ ಸಿದ್ದಪ್ಪ ರಂಗಪುರಿ (ಬೆಳಗಾವಿ), ಬಿಎಸ್‌ಪಿ ಮಾಜಿ ರಾಜ್ಯಾಧ್ಯಕ್ಷರಾದ ಬಿ.ಗೋಪಾಲ್‌, ದಾವಣಗೆರೆ ಜಿಲ್ಲಾ ದಸಂಸ ಮುಖಂಡ ಎ.ಡಿ.ಈಶ್ವರಪ್ಪ, ಅಂಬೇಡ್ಕರ್‌ ಸೇನೆ ರಾಜ್ಯ ಮುಖಂಡ ಪಂಡಿತ್‌ ಮುನಿವೆಂಕಟಪ್ಪ, ಬೆಳಗಾವಿ ಡಿಎಸ್‌ಎಸ್ ಲೀಡರ್‌ ಪ್ರಭಾಕರ್‌ ಚಲವಾದಿ ತೇರದಾಳ, ಹಾಸನದ ಶಿವಪ್ಪ ದಿಣ್ಣೇಕೆರೆ, ಎಚ್‌.ಪಿ.ಸುಧಾಮ್ ದಾಸ್‌ ಕಾಂಗ್ರೆಸ್ ಸೇರಿದ್ದಾರೆ.

ಮೂವತ್ತು ವರ್ಷಗಳ ಇತಿಹಾಸವಿರುವ ಒಳಮೀಸಲಾತಿ ಹೋರಾಟ ಕಳೆದ ಡಿಸೆಂಬರ್‌ನಲ್ಲಿ ಪುನಾರಂಭವಾಗಿತ್ತು. ಅದರ ಮುಂದಾಳತ್ವವನ್ನು ಅಂಬಣ್ಣ ವಹಿಸಿದ್ದಾರೆ. ಎಲ್ಲಾ ರಾಜಕೀಯ ಪಕ್ಷಗಳನ್ನು ಕಟುವಾಗಿ ಟೀಕಿಸುತ್ತಾ, ಹೊಲೆಯ ಮತ್ತು ಮಾದಿಗ ಸಮುದಾಯಕ್ಕೆ ಆಗಿರುವ ಅನ್ಯಾಯದ ಕುರಿತು ದನಿ ಎತ್ತುತ್ತಾ ಬಂದಿರುವ ಅಂಬಣ್ಣ ಕಾಂಗ್ರೆಸ್ ಸೇರುವ ಮೂಲಕ ಹಲವು ರಾಜಕೀಯ ಕುತೂಹಲಗಳಿಗೆ ಕಾರಣವಾಗಿದ್ದಾರೆ. ಜೊತೆಗೆ ಹಲವು ಪ್ರಶ್ನೆಗಳನ್ನು ಹುಟ್ಟಿಹಾಕಿದ್ದಾರೆ.

Ambanna Arolikar (@AmbannaArolikar) / Twitter
ಒಳಮೀಸಲಾತಿ ಜಾರಿಗಾಗಿ ನಡೆಯುತ್ತಿರುವ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಅಂಬಣ್ಣ ಅರೋಲಿಕರ್‌

ಹೊಲೆಯ ಹಾಗೂ ಮಾದಿಗ ಸಮುದಾಯದ ಮುಖಂಡರು ಕಾಂಗ್ರೆಸ್ ಸೇರ್ಪಡೆಯಾಗಿರುವ ಕುರಿತು ‘ನಾನುಗೌರಿ.ಕಾಂ’ಗೆ ಅಂಬಣ್ಣ ಅರೋಲಿಕರ್‌‌ ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ: ಎಲ್ಲಾ ರಾಜಕೀಯ ಪಕ್ಷಗಳನ್ನು ಸಮನಾಂತರವಾಗಿ ವಿರೋಧಿಸುತ್ತಾ ಬಂದಿದ್ದೀರಿ. ಈಗ ಕಾಂಗ್ರೆಸ್ ಸೇರಿದ್ದೀರಿ. ಒಳಮೀಸಲಾತಿ ಹೋರಾಟಕ್ಕೆ ಸಂಬಂಧಿಸಿದಂತೆ ಮುಂದೆ ಬರುವ ಪ್ರಶ್ನೆಗಳಿಗೆ ನಿಮ್ಮ ಪ್ರತಿಕ್ರಿಯೆ ಏನು? ನಿಮ್ಮ ಮುಂದಿನ ನಡೆ ಏನು?

ಅಂಬಣ್ಣ: ಒಳಮೀಸಲಾತಿ ಹೋರಾಟದ ಭಾಗವಾಗಿಯೇ ನಾವು ಪಕ್ಷ ಸೇರಿದ್ದೇವೆ. ರಾಜಕೀಯ ಪಕ್ಷಗಳನ್ನು ಪ್ರಶ್ನಿಸುವ ಕೆಲಸವನ್ನು ಇದುವರೆಗೂ ಮಾಡಿದ್ದೇವೆ. ಮುಂದೆಯೂ ಮಾಡುತ್ತೇವೆ. ಕಾಂಗ್ರೆಸ್‌ ಪಕ್ಷದ ಪ್ರತಿನಿಧಿಯಾಗಿ ಅಥವಾ ಜನಪ್ರತಿನಿಧಿಯಾಗಿ ಹೋರಾಟವನ್ನು ಮುಂದುವರಿಸುವ ಪ್ರಕ್ರಿಯೆ ಇದಾಗಿದೆ. ಪಕ್ಷ ಸೇರ್ಪಡೆ ಎಂಬುದು ರಾಜಕಾರಣಕ್ಕೆ ಹೋದಂತೆ ಅಲ್ಲ, ಇದು ಕೂಡ ಒಂದು ರೀತಿಯಲ್ಲಿ ಹೋರಾಟವಾಗಿದೆ. ರಾಜಕೀಯೇತರವಾಗಿ ಹೋರಾಟ ಮಾಡಿದ್ದರಿಂದ ಎರಡು ಪಕ್ಷಗಳು ಬೆಚ್ಚಿಬಿದ್ದಿವೆ. ಕೆಲವೇ ದಿನಗಳಲ್ಲಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಶಿಫಾರಸ್ಸು ಮಾಡಲು ನಿರ್ಧಾರವನ್ನು ಸರ್ಕಾರ ಕೈಗೊಳ್ಳುವ ಸಾಧ್ಯತೆ ಇದೆ.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷವು ಚಿತ್ರದುರ್ಗದಲ್ಲಿ ಸಮಾವೇಶ ಮಾಡಿ, ನಮ್ಮ ಬಗ್ಗೆ ತೀರ್ಮಾನ ತೆಗೆದುಕೊಂಡಿದೆ. ಒಳಮೀಸಲಾತಿ ಹೋರಾಟದ ಮತ್ತೊಂದು ಮುಖ್ಯ ಬೇಡಿಕೆಯನ್ನೂ ಗಮನಿಸಬೇಕು. ಹೊಲೆಯ, ಮಾದಿಗ ಸಮುದಾಯಗಳನ್ನು ಸೇರಿದಂತೆ ಮೂಲ ಅಸ್ಪೃಶ್ಯರಾಗಿರುವ 96 ಜಾತಿಗಳಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯವನ್ನು ನೀಡಬೇಕು. ಕನಿಷ್ಠ 28 ಕ್ಷೇತ್ರಗಳಲ್ಲಿ ಅಸ್ಪೃಶ್ಯ ಸಮುದಾಯಗಳಿಗೆ ಟಿಕೆಟ್ ನೀಡಬೇಕು. ಒಳಮೀಸಲಾತಿ ಹಂಚಿಕೆ ಸಿದ್ಧಾಂತವನ್ನು ಟಿಕೆಟ್ ವಿಚಾರದಲ್ಲೂ ನಾವು ಪ್ರತಿಪಾದಿಸುತ್ತಿದ್ದೇವೆ.

ಮಾದಿಗ ಸಮುದಾಯಕ್ಕೆ ಶೇ. 6ರಷ್ಟು, ಹೊಲೆಯ ಸಮುದಾಯಕ್ಕೆ ಶೇ. 5ರಷ್ಟು ಹಂಚಿಕೆ ಆಗಬೇಕಿದೆ. ನಾವು ಅಣ್ಣತಮ್ಮಂದಿರು ಐದೂವರೆ- ಐದೂವರೆ ಪಾಲನ್ನು ತೆಗೆದುಕೊಳ್ಳಲು ಒಪ್ಪಿಕೊಂಡಿದ್ದೇವೆ. ಹೀಗಾಗಿ 14 ಮೀಸಲು ಕ್ಷೇತ್ರಗಳಲ್ಲಿ ಹೊಲೆಯ ಸಮುದಾಯದ ಅಭ್ಯರ್ಥಿಗೆ, 14 ಕ್ಷೇತ್ರಗಳಲ್ಲಿ ಮಾದಿಗ ಸಮುದಾಯದ ಅಭ್ಯರ್ಥಿಗೆ ಟಿಕೆಟ್ ನೀಡಬೇಕು, ಪ್ರಥಮ ಅಧಿವೇಶನದಲ್ಲೇ ಒಳಮೀಸಲಾತಿಯನ್ನು ಜಾರಿಗೊಳಿಸಬೇಕು ಎಂಬುದು ನಮ್ಮ ಷರತ್ತಾಗಿದೆ.

2004ರಲ್ಲಿ ಸುಪ್ರೀಂಕೋರ್ಟ್‌ನಲ್ಲಿ ಒಳಮೀಸಲಾತಿ ವಿಚಾರ ರಿಜೆಕ್ಟ್ ಆಗಿತ್ತು. ಆ ಸಂದರ್ಭದಲ್ಲಿ ಕಾಂಗ್ರೆಸ್ ಸ್ವಯಂಪ್ರೇರಿತವಾಗಿ ಉಷಾ ಮೆಹ್ರಾ ಆಯೋಗವನ್ನು ಮಾಡಿತ್ತು. ಸಾಂವಿಧಾನಿಕವಾಗಿ ಅಖಿಲ ಭಾರತ ಮಟ್ಟದಲ್ಲಿ ಒಳಮೀಸಲಾತಿ ವಿಚಾರವನ್ನು ಚರ್ಚಿಸಲು ವೇದಿಕೆಯನ್ನು ಸಿದ್ಧಪಡಿಸಲಾಗಿದ್ದು, ಈ ಕಾರಣಕ್ಕಾಗಿ ನಾವು ನೇರವಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ಮುಂದಾಗಿದ್ದೇವೆ. ಇದು ಹೋರಾಟದ ಮುಂದುವರಿಕೆಯ ಭಾಗ. ಒಳಮೀಸಲಾತಿಯ ವಿಚಾರವನ್ನು ಎಲ್ಲಿ ಪ್ರತಿಪಾದಿಸಬೇಕೋ, ಅಲ್ಲಿ ಪ್ರತಿಪಾದಿಸಲು ಸಿದ್ಧರಾಗಿದ್ದೇವೆ. ನಾವು ಸ್ವಯಂಪ್ರೇರಿತವಾಗಿ ಹೋಗಿಲ್ಲ. ಕಾಂಗ್ರೆಸ್ ಪಕ್ಷವೇ ನಮ್ಮನ್ನು ಆಹ್ವಾನಿಸಿದೆ.

ಕಳೆದ 30 ವರ್ಷಗಳ ಹೋರಾಟದಲ್ಲಿ ಎಲ್ಲಾ ಪಕ್ಷಗಳನ್ನು ವಿರೋಧಿಸಿದ್ದೇವೆ. ಆದರೆ ನಮ್ಮ ಪರವಾಗಿ ಅಧಿಕೃತವಾಗಿ ಕಾಂಗ್ರೆಸ್ ಒಲುವು ತೋರಿದೆ. ನಮ್ಮ ಬೇಡಿಕೆಯನ್ನು ಒಪ್ಪಿಕೊಂಡಿದೆ. ಪಕ್ಷಕ್ಕೆ ಸೇರಿದ ಬಳಿಕ ಒಳಮೀಸಲಾತಿ ಹೋರಾಟವನ್ನು ಕೈಬಿಡುವ ಪ್ರಶ್ನೆಯೇ ಇಲ್ಲ. ಈ ಹೋರಾಟವನ್ನು ರಾಜಕೀಯವಾಗಿ ಹೇಗೆ ಮುಂದುವರಿಸಬೇಕು ಎನ್ನುವ ತಾಲೀಮು ಮಾಡುತ್ತಿದ್ದೇವೆ.

ಒಂದು ಪಕ್ಷವನ್ನು ಒಪ್ಪಿಕೊಳ್ಳುವುದರಿಂದ ಸಮುದಾಯಕ್ಕೆ ಒಳ್ಳೆಯದಾಗುತ್ತದೆ ಎನ್ನುವುದಾದರೆ, ಸಮುದಾಯದ ಮುಖಂಡರು ತಮ್ಮೊಂದಿಗೆ ಇರಬೇಕೆಂದು ಪಕ್ಷ ಬಯಸಿದಾಗ ಅದರೊಂದಿಗೆ ಹೋಗುವುದು ಸೂಕ್ತವೆನಿಸುತ್ತದೆ. ಹೊಲೆಯ ಮಾದಿಗ ಸಮುದಾಯಗಳಿಗೆ ಸಮನಾಂತರವಾಗಿ ಬಿ ಫಾರಂ ಕೊಡುತ್ತೇವೆ ಎಂದಾಗ, ಆರ್‌ಎಸ್‌ಎಸ್‌ ವ್ಯಕ್ತಿಯೇ ನೀನು ಎಂಬ ಪ್ರಶ್ನೆಗಳು ಬಂದಾಗ ಕಾಂಗ್ರೆಸ್ಅನ್ನು ಬಲವಂತವಾಗಿ ಒಪ್ಪಿಕೊಂಡಿದ್ದೇನೆ.

ಈವರೆಗೆ ನಾನು ಇವರಿಗೆ ಮತ ಹಾಕಿಲ್ಲ. ಹೀಗಿರುವವನು ಈ ಪಕ್ಷಕ್ಕೆ ಮತ ಹಾಕಿ ಎಂದು ಹೇಳಬೇಕೆಂದರೆ ಇಲ್ಲಿ ಬಲವಾದ ಸಿದ್ಧಾಂತವಿದೆ. ಹಂಚಿ ತಿನ್ನುವ ನ್ಯಾಯವಿದೆ. ಪ್ರಾಯೋಗಿಕವಾಗಿ ಈ ಸಿದ್ಧಾಂತವನ್ನು ಮುಂದುವರಿಸಬೇಕಿದೆ. ಚಳವಳಿಯ ಸಂಗಾತಿಗಳು ಬೀದಿ ಹೋರಾಟವನ್ನೂ ಮುಂದುವರಿಸುತ್ತಾರೆ. ಹೋರಾಟದ ಮುಂಚೂಣಿಯಲ್ಲಿರುವ ಕೆಲವೇ ಕೆಲವರು ಪಕ್ಷ ಸೇರಿದ್ದೇವೆ.

ನಮ್ಮ ಸ್ಥಿತಿ ಬಿಜೆಪಿ ಬಂದಾಗ ಬಿಜೆಪಿ, ಜೆಡಿಎಸ್ ಬಂದಾಗ ಜೆಡಿಎಸ್‌, ಕಾಂಗ್ರೆಸ್ ಬಂದಾಗ ಕಾಂಗ್ರೆಸ್ ಎಂಬಂತಾಗಿತ್ತು. ನಮ್ಮ ನಿಲುವು ಸ್ಪಷ್ಟವಾಗಿರಬೇಕಿತ್ತು. ಎಲ್ಲ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಇಬ್ಬಗೆ ನೀತಿ ಬೇಸರ ತರಿಸಿತು. ಎಲ್ಲರಿಂದಲೂ ನಿಷ್ಠುರವಾಗುವುದು ತಪ್ಪುತ್ತಿರಲಿಲ್ಲ, ಅದರಿಂದ ಸಮುದಾಯಕ್ಕೂ ಯಾವುದೇ ಲಾಭವೂ ಆಗಲಿಲ್ಲ. ಈ ವಾಸ್ತವವನ್ನು ಅರ್ಥಮಾಡಿಕೊಂಡು ಈ ನಿರ್ಧಾರ ತೆಗೆದುಕೊಂಡಿದ್ದೇವೆ.

ನಾನುಗೌರಿ: ನಿಮಗೆ ಟಿಕೆಟ್ ನೀಡುವ ಭರವಸೆಯನ್ನು ಕಾಂಗ್ರೆಸ್ ಪಕ್ಷ ನೀಡಿದೆಯೇ? 

ಅಂಬಣ್ಣ: ಒಳಮೀಸಲಾತಿ ಜಾರಿ ಮತ್ತು ಚುನಾವಣೆಯಲ್ಲಿ ಮಾದಿಗ ಸಮುದಾಯಕ್ಕೆ 14, ಹೊಲೆಯ ಸಮುದಾಯಕ್ಕೆ 14 ಬಿ ಫಾರಂ ನೀಡಬೇಕು ಎಂಬುದು ನಮ್ಮ ಷರತ್ತುಗಳಾಗಿವೆ. ದೊಡ್ಡ ಸಂಖ್ಯೆಯ ಮಾದಿಗ ಸಮುದಾಯವು ತಮ್ಮೊಂದಿಗೆ ಬರಲಿರುವುದರಿಂದ ಎಲ್ಲಾದರೂ ಟಿಕೆಟ್‌ ಕೊಡಬಹುದೆಂದು ವೈಯಕ್ತಿಕವಾಗಿ ಅನಿಸುತ್ತದೆ. ಅದರಲ್ಲಿ ನನಗೆ ಬಲವಾದ ನಂಬಿಕೆ ಇಲ್ಲ. ಈವರೆಗೆ ಪಕ್ಷದಲ್ಲಿ ಇರುವವರಿಗೆಯೇ ಟಿಕೆಟ್ ಸಿಗುವ ಸಾಧ್ಯತೆಗಳು ಕಡಿಮೆ ಇದೆ. ಪಕ್ಷದ ಸದಸ್ಯರಲ್ಲದ ನಮ್ಮಂಥವರನ್ನು ಹೇಗೆ ನೋಡುತ್ತಾರೆಂಬುದು ಸದ್ಯಕ್ಕೆ ತಿಳಿದಿಲ್ಲ. ಒಂದು ವೇಳೆ ಆ ರೀತಿಯಲ್ಲಿ ಪ್ರಿಯಾರಿಟಿ ನೀಡಿದರೆ, ರಾಜ್ಯದ 36 ಮೀಸಲು ಕ್ಷೇತ್ರಗಳಲ್ಲಿ ಎಲ್ಲಿ ಟಿಕೆಟ್ ನೀಡುತ್ತಾರೋ ಅಲ್ಲಿ ಚುನಾವಣೆ ಎದುರಿಸಬೇಕೆಂಬ ನಿರ್ಧಾರವನ್ನೂ ನಮ್ಮ ವೇದಿಕೆಯಿಂದ ಮಾಡಿಕೊಂಡಿದ್ದೇವೆ. ಕಾಂಗ್ರೆಸ್ ಬಹುದೊಡ್ಡ ಸಮುದ್ರವಾಗಿದ್ದು, ಟಿಕೆಟ್ ಸಿಗುತ್ತದೆ ಎಂಬುದು ನಮ್ಮ ನಿರೀಕ್ಷೆಗೆ ಮೀರಿರುವ ಮಾತು. ಪಾಲು ನೀಡುವ ತೀರ್ಮಾನವನ್ನು ಪಕ್ಷ ಮಾಡಿದರೆ ಸಕಾರಾತ್ಮಕವಾಗಿ ಸ್ವೀಕರಿಸುತ್ತೇವೆ.

ನಾನುಗೌರಿ: ಕಳೆದ ಮೂರು ತಿಂಗಳಿಂದ ನಡೆಯುತ್ತಿರುವ ಹೋರಾಟವು ಕಾಂಗ್ರೆಸ್ ಕೃಪಾಪೋಷಿತವಾಗಿತ್ತು ಎಂದು ಬಿಜೆಪಿ ಆರೋಪಿಸಲು ಈಗ ಅವಕಾಶ ನೀಡಿದಂತಾಗುತ್ತಿದೆಯಲ್ಲವೇ? 

ಅಂಬಣ್ಣ: ಒಳಮೀಸಲಾತಿಗಾಗಿ ಒಂದು ಆಯೋಗ ಮಾಡದೆ ಇರುವಂತಹ ಸಂದರ್ಭದಲ್ಲಿ, “ಮಾದಿಗರ ನೋವೇ ಕಾಂಗ್ರೆಸ್‌ನ ಸಾವು’’ ಎಂಬುದು ನಮ್ಮ ಘೋಷಣೆಯಾಗಿತ್ತು. ನಮ್ಮ ಬೇಡಿಕೆಗೆ ಸ್ಪಂದಿಸಿ ಆಯೋಗವನ್ನು ರಚಿಸಿದರು. ನಂತರದಲ್ಲಿ ಬಂದ ಬಿಜೆಪಿ, ಕಾಂಗ್ರೆಸ್‌ ಸರ್ಕಾರಗಳು ನಮಗೆ ಲಾಠಿ ಏಟು ಕೊಟ್ಟಿವೆ. ಯಾವ ಸಂದರ್ಭದಲ್ಲಿ ಯಾರ್‍ಯಾರನ್ನು ಸೋಲಿಸಬೇಕೋ ಅವರನ್ನು ಸೋಲಿಸಿದ್ದೇವೆ. ಈಗ ಕಾಂಗ್ರೆಸ್ ನಮ್ಮ ಬೇಡಿಕೆಯನ್ನು ಒಪ್ಪಿಕೊಂಡಿರುವುದರಿಂದ ಅವರ ಜೊತೆಯಲ್ಲಿ ಇರುವುದು ನಮ್ಮ ಆದ್ಯ ಕರ್ತವ್ಯವಾಗಿದೆ. ಅವರೊಂದಿಗೆ ಸೌಹಾರ್ದದಿಂದ ಇರುವುದು ತಪ್ಪಲ್ಲ. ನಮ್ಮ ಸಮುದಾಯ ಮಾತಿಗೆ ತಪ್ಪುವುದಿಲ್ಲ. ಕೃತಜ್ಞತೆಯನ್ನು ಮರೆಯದವರು ನಾವು. ನಿಯತ್ತಿನ ಜಾತಿಯ ವಾರಸುದಾರರಾಗಿರುವುದರಿಂದ ಕಾಂಗ್ರೆಸ್ ಪಕ್ಷವನ್ನು ಒಪ್ಪಿಕೊಂಡಿದ್ದೇವೆ.

ನಾನುಗೌರಿ: ಚಳವಳಿಯಲ್ಲಿದ್ದ ಬಿ.ಕೃಷ್ಣಪ್ಪನವರು ಬಿಎಸ್‌ಪಿಯನ್ನು ಅಪ್ಪಿಕೊಂಡಿದ್ದರಿಂದ ದಲಿತ ಸಂಘರ್ಷ ಸಮಿತಿ (ದಸಂಸ) ಒಡೆದು ಹೋಯಿತು ಎಂಬ ಮಾತುಗಳಿವೆ. ನಿಮ್ಮ ನಿರ್ಧಾರದಿಂದ ಚಳವಳಿಯಲ್ಲಿ ತೊಡಕು ಉಂಟಾಗಬಹುದೇ?

ಅಂಬಣ್ಣ: ರಾಜಕೀಯ ಮತ್ತು ಬೀದಿ ಹೋರಾಟ ಒಟ್ಟಿಗೆ ನಡೆಯಬೇಕು. ಅದು ನಿಂತು ಹೋಗಿತ್ತು. ಆದರೆ ಬೀದಿ ಹೋರಾಟಕ್ಕೆ ಪೂರಕವಾದ ಒಂದು ರಾಜಕೀಯ ಮೈತ್ರಿ ಅಗತ್ಯ ಎಂಬ ಪಾಠವನ್ನು ನಾವು ಕಲಿತ್ತಿದ್ದೇವೆ. ಇಲ್ಲವಾದರೆ ನಮ್ಮ ಗುರಿ ತಲುಪುದಿಲ್ಲ ಎಂಬುದು ಅರ್ಥವಾಗಿದೆ. ಈ ಹೋರಾಟದಲ್ಲಿ ಸಾವಿರಾರು ಭೀಮ ಸೈನಿಕರು, ಮಹಿಷಿ ಸೈನಿಕರು ಇದ್ದಾರೆ. ಹೀಗಾಗಿ ನಮ್ಮ ಹೋರಾಟ ದಿಕ್ಕು ತಪ್ಪುವುದಿಲ್ಲ. ಸಮುದಾಯದಲ್ಲಿ ರಾಜಕೀಯ ಪ್ರಜ್ಞೆ ಮೂಡಿದೆ. ಸಮುದಾಯದಲ್ಲಿ ದೊಡ್ಡ ಬದಲಾವಣೆಯನ್ನು ತರಬಹುದೆಂಬ ಭರವಸೆ ನಮಗೆ ಇದೆ. ಚಳವಳಿಗೆ ದ್ರೋಹವಾಗದಂತೆ, ರಾಜಕೀಯ ಪ್ರಾತಿನಿಧ್ಯಕ್ಕೂ ಚ್ಯುತಿ ಬಾರದಂತೆ ಮುಂದುವರಿಯುವ ಜವಾಬ್ದಾರಿ ನಮ್ಮ ಮೇಲಿದೆ ಎಂಬುದು ವಾಸ್ತವ.

ನಾನುಗೌರಿ: ಈಗ ಬಿಜೆಪಿ ಸರ್ಕಾರ ಜಸ್ಟೀಸ್ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದರೆ ನಿಮ್ಮ ನಿಲುವು ಏನಾಗುತ್ತದೆ?

ಅಂಬಣ್ಣ: ರಾಜ್ಯ ಬಿಜೆಪಿ ಸರ್ಕಾರ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತದೆ ಎಂಬ ಭರವಸೆ ನಮಗೆ ಇದೆ. ಆದರೆ 17 ಪರ್ಸೆಂಟ್‌ಗೆ ಹೆಚ್ಚಿಸಲಾಗಿರುವ ಮೀಸಲಾತಿಯಲ್ಲಿ ಎಲ್ಲ ಸಮುದಾಯಗಳಿಗೆ ಸಮನಾಗಿ ಹಂಚಿಕೆ ಮಾಡುವ ತೀರ್ಮಾನವನ್ನು ಅದು ಕೈಗೊಳ್ಳುತ್ತಿದೆ ಎಂಬ ಸುಳಿವು ಸಿಕ್ಕಿದೆ. ಇದು ಅಸಾಂವಿಧಾನಿಕ. ಮೀಸಲಾತಿ ಹೆಚ್ಚಿಸಿದ್ದೇವೆ ಎಂಬ ಡ್ರಾಮಾದ ಜೊತೆಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುವ ಮತ್ತೊಂದು ಡ್ರಾಮಾವನ್ನು ಮಾಡಲು ಬಿಜೆಪಿ ಸಿದ್ಧವಾಗಿದೆ. ನಮ್ಮ ಬಗ್ಗೆ ಬದ್ಧತೆ, ಕಾಳಜಿ ಇದ್ದರೆ ಒಂದೇ ತಿಂಗಳೊಳಗೆ ಇಡಬ್ಲ್ಯುಎಸ್‌ ರೀತಿಯಲ್ಲಿ ಸುಗ್ರೀವಾಜ್ಞೆ ಮಾಡಿದರೆ ಅದು ಸರಿಯಾದ ತೀರ್ಮಾನವಾಗುತ್ತದೆ. ಯಾವುದೇ ತಜ್ಞರ ಶಿಫಾರಸ್ಸು ಇಲ್ಲದೆ, ಆಯೋಗದ ವರದಿ ಇಲ್ಲದೆ ಇಡಬ್ಲ್ಯುಎಸ್ ಜಾರಿಗೊಳಿಸಿದ್ದಾರೆ. ನಾವು 30 ವರ್ಷ ಹೋರಾಟ ಮಾಡಿದ್ದರೂ ಒಳಮೀಸಲಾತಿ ಜಾರಿ ಯಾಕೆ ಸಾಧ್ಯವಾಗುತ್ತಿಲ್ಲ? ಸಮುದಾಯವನ್ನು ದಿಕ್ಕುತಪ್ಪಿಸುವ ಕುತಂತ್ರ ರಾಜಕಾರಣದ ವಿರುದ್ಧ ಯಶಸ್ವಿ ರಾಜಕಾರಣವನ್ನು ನಾವು ಮಾಡಬೇಕಿದೆ. ಕುತಂತ್ರವನ್ನು ವಿಫಲ ಮಾಡುವ ಭಾಗವಾಗಿ ನಾವು ಕಾಂಗ್ರೆಸ್ ಸೇರಿದ್ದೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...