Homeಅಂತರಾಷ್ಟ್ರೀಯನೇಪಾಳಿ ಪ್ರಜೆಗೆ ಹಿಂಸೆ: ಯುಪಿ ಸಿಎಂ ಆದಿತ್ಯನಾಥ್‌ರೊಂದಿಗೆ ಮಾತನಾಡಿದ ನೇಪಾಳದ ರಾಯಭಾರಿ

ನೇಪಾಳಿ ಪ್ರಜೆಗೆ ಹಿಂಸೆ: ಯುಪಿ ಸಿಎಂ ಆದಿತ್ಯನಾಥ್‌ರೊಂದಿಗೆ ಮಾತನಾಡಿದ ನೇಪಾಳದ ರಾಯಭಾರಿ

ನೇಪಾಳ ವಿರೋಧಿ ಪೋಸ್ಟರ್‌ಗಳ ವರದಿಗಳು ಮತ್ತು ವಾರಣಾಸಿಯಲ್ಲಿ ನೇಪಾಳಿ ಪ್ರಜೆಯೊಬ್ಬರ ಮೇಲೆ ನಡೆದ ದೌರ್ಜನ್ಯದ ಕುರಿತು ನೇಪಾಳದ ರಾಯಭಾರಿ ಮುಖ್ಯಮಂತ್ರಯೊಂದಿಗೆ ಮಾತನಾಡಿದ್ದಾರೆ.

- Advertisement -
- Advertisement -

ನೇಪಾಳ ವಿರೋಧಿ ಪೋಸ್ಟರ್‌ಗಳ ವರದಿಗಳು ಮತ್ತು ವಾರಣಾಸಿಯಲ್ಲಿ ನೇಪಾಳಿ ಪ್ರಜೆಯೊಬ್ಬರ ಮೇಲೆ ನಡೆದ ದೌರ್ಜನ್ಯದ ನಂತರ ನೇಪಾಳದ ರಾಯಭಾರಿ ನೀಲಾಮಾಬರ್ ಆಚಾರ್ಯ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರೊಂದಿಗೆ ಮಾತನಾಡಿ ರಾಜ್ಯದಲ್ಲಿರುವ ನೇಪಾಳ ಪ್ರಜೆಗಳ ಸುರಕ್ಷತೆಯ ಬಗ್ಗೆ ಕೇಳಿದ್ದಾರೆ.

ದಿನಗಳ ಹಿಂದೆಯಷ್ಟೇ ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಒಲಿ ರಾಮನ ಜನ್ಮಸ್ಥಳ ನೇಪಾಳದಲ್ಲಿದೆ ಎಂದು ಹೇಳಿಕೊಂಡಿದ್ದರು.

ಒಂದು ದಿನದ ನಂತರ ನೇಪಾಳ ವಿದೇಶಾಂಗ ಸಚಿವಾಲಯವು ಪ್ರಧಾನಿಯ ಮಾತುಗಳು ಭಾವನೆಗಳನ್ನು ನೋಯಿಸುವಂತಿಲ್ಲ. ರಾಮಾಯಣದ ‘ಸಾಂಸ್ಕೃತಿಕ ಭೌಗೋಳಿಕತೆ’ ಕುರಿತು ಹೆಚ್ಚಿನ ಸಂಶೋಧನೆಗೆ ಒತ್ತಾಯಿಸಿದೆ ಎಂದು ಸ್ಪಷ್ಟನೆ ನೀಡಲಾಯಿತು.

ವಾರಣಾಸಿ ನಗರವು ನೇಪಾಳದೊಂದಿಗೆ ನಿಕಟ ಸಂಪರ್ಕವನ್ನು ಹೊಂದಿದ್ದು, ಅಲ್ಲಿ ನೇಪಾಳಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿದ್ದಾರೆ. ಅವರಲ್ಲಿ ಅನೇಕರು ದೇವಾಲಯಗಳಲ್ಲಿ ಕೆಲಸ ಮಾಡುತ್ತಾರೆ.

ನೇಪಾಳದ ರಾಯಭಾರಿ ಆಚಾರ್ಯ ಅವರು ಕಳೆದ ಸಂಜೆ ವಾರಣಾಸಿಯ ಲಲಿತಾ ಘಾಟ್‌ನ ಪಶುಪತಿನಾಥ್ ದೇವಸ್ಥಾನದಲ್ಲಿ ಪ್ರಧಾನಿ ಒಲಿ ಹಾಗೂ ಭಾರತದಲ್ಲಿ ಇರುವ ನೇಪಾಳಿ ಪ್ರಜೆಗಳಿಗೆ ಬೆದರಿಕೆಯನ್ನು ಹಾಕಿ ಪೋಸ್ಟರುಗಳನ್ನು ಹಾಕಲಾಗಿದೆ ಎಂದು ಮಾಹಿತಿ ನೀಡಲಾಗಿದೆ ಎಂದು ಹೇಳಿದ್ದಾರೆ.

ಅಲ್ಲದೆ ಈ ಗುಂಪಿನ ಮುಖ್ಯಸ್ಥ ಅರುಣ್ ಪಾಠಕ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ವೀಡಿಯೊವನ್ನು ಅಪ್‌ಲೋಡ್ ಮಾಡಿದ್ದಾರೆ. ಇದರಲ್ಲಿ ಅಪರಿಚಿತ ನೇಪಾಳಿ ಪ್ರಜೆಯ ತಲೆಯ ಮೇಲೆ ಜೈಶ್ರೀರಾಮ್ ಎಂದು ಬರೆಯಲಾಗಿದ್ದು, ಅವರನ್ನು ಜೈಶ್ರೀರಾಮ್ ಹಾಗೂ ಭಾರತ್ ಮಾತಾಕಿ ಜೈ ಎಂದು ಕೂಗಲು ಒತ್ತಾಯಿಸಿಲಾಗಿದೆ.

ನೇಪಾಳಿ ರಾಯಭಾರಿ ಆಚಾರ್ಯ, ತಾನು ಬೆಳಿಗ್ಗೆ ಉತ್ತರ ಪ್ರದೇಶದ ಸಿಎಂ ಅವರೊಂದಿಗೆ ಮಾತನಾಡಿದ್ದೇನೆ ಹಾಗೂ ನೇಪಾಳದ ಪ್ರಜೆಗಳಿಗೆ ಅಸುರಕ್ಷಿತ ಭಾವನೆ ಬರದಂತೆ ನೋಡಿಕೊಳ್ಳಬೇಕೆಂದು ಕೇಳಿಕೊಂಡಿದ್ದೇನೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಕೈಗೊಂಡ ಕ್ರಮದಿಂದ ತೃಪ್ತಿ ಹೊಂದಿದ್ದೇನೆ ಎಂದು ಅವರು ಹೇಳಿದ್ದಾರೆ.

ಪ್ರಕರಣದ ಕುರಿತು ಭೆಲಾಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ವಾರಣಾಸಿ ಪೊಲೀಸರು ಹೇಳಿದ್ದಾರೆ.


ಓದಿ:ನೇಪಾಳಿ ಯುವಕನ ತಲೆ ಬೋಳಿಸಿ ಜೈಶ್ರೀರಾಮ್ ಹೇಳುವಂತೆ ಒತ್ತಾಯಿಸಿದ ಹಿಂದುತ್ವವಾದಿಗಳು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...