Homeಅಂತರಾಷ್ಟ್ರೀಯನೇಪಾಳಿ ಪ್ರಜೆಗೆ ಹಿಂಸೆ: ಯುಪಿ ಸಿಎಂ ಆದಿತ್ಯನಾಥ್‌ರೊಂದಿಗೆ ಮಾತನಾಡಿದ ನೇಪಾಳದ ರಾಯಭಾರಿ

ನೇಪಾಳಿ ಪ್ರಜೆಗೆ ಹಿಂಸೆ: ಯುಪಿ ಸಿಎಂ ಆದಿತ್ಯನಾಥ್‌ರೊಂದಿಗೆ ಮಾತನಾಡಿದ ನೇಪಾಳದ ರಾಯಭಾರಿ

ನೇಪಾಳ ವಿರೋಧಿ ಪೋಸ್ಟರ್‌ಗಳ ವರದಿಗಳು ಮತ್ತು ವಾರಣಾಸಿಯಲ್ಲಿ ನೇಪಾಳಿ ಪ್ರಜೆಯೊಬ್ಬರ ಮೇಲೆ ನಡೆದ ದೌರ್ಜನ್ಯದ ಕುರಿತು ನೇಪಾಳದ ರಾಯಭಾರಿ ಮುಖ್ಯಮಂತ್ರಯೊಂದಿಗೆ ಮಾತನಾಡಿದ್ದಾರೆ.

- Advertisement -
- Advertisement -

ನೇಪಾಳ ವಿರೋಧಿ ಪೋಸ್ಟರ್‌ಗಳ ವರದಿಗಳು ಮತ್ತು ವಾರಣಾಸಿಯಲ್ಲಿ ನೇಪಾಳಿ ಪ್ರಜೆಯೊಬ್ಬರ ಮೇಲೆ ನಡೆದ ದೌರ್ಜನ್ಯದ ನಂತರ ನೇಪಾಳದ ರಾಯಭಾರಿ ನೀಲಾಮಾಬರ್ ಆಚಾರ್ಯ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರೊಂದಿಗೆ ಮಾತನಾಡಿ ರಾಜ್ಯದಲ್ಲಿರುವ ನೇಪಾಳ ಪ್ರಜೆಗಳ ಸುರಕ್ಷತೆಯ ಬಗ್ಗೆ ಕೇಳಿದ್ದಾರೆ.

ದಿನಗಳ ಹಿಂದೆಯಷ್ಟೇ ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಒಲಿ ರಾಮನ ಜನ್ಮಸ್ಥಳ ನೇಪಾಳದಲ್ಲಿದೆ ಎಂದು ಹೇಳಿಕೊಂಡಿದ್ದರು.

ಒಂದು ದಿನದ ನಂತರ ನೇಪಾಳ ವಿದೇಶಾಂಗ ಸಚಿವಾಲಯವು ಪ್ರಧಾನಿಯ ಮಾತುಗಳು ಭಾವನೆಗಳನ್ನು ನೋಯಿಸುವಂತಿಲ್ಲ. ರಾಮಾಯಣದ ‘ಸಾಂಸ್ಕೃತಿಕ ಭೌಗೋಳಿಕತೆ’ ಕುರಿತು ಹೆಚ್ಚಿನ ಸಂಶೋಧನೆಗೆ ಒತ್ತಾಯಿಸಿದೆ ಎಂದು ಸ್ಪಷ್ಟನೆ ನೀಡಲಾಯಿತು.

ವಾರಣಾಸಿ ನಗರವು ನೇಪಾಳದೊಂದಿಗೆ ನಿಕಟ ಸಂಪರ್ಕವನ್ನು ಹೊಂದಿದ್ದು, ಅಲ್ಲಿ ನೇಪಾಳಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿದ್ದಾರೆ. ಅವರಲ್ಲಿ ಅನೇಕರು ದೇವಾಲಯಗಳಲ್ಲಿ ಕೆಲಸ ಮಾಡುತ್ತಾರೆ.

ನೇಪಾಳದ ರಾಯಭಾರಿ ಆಚಾರ್ಯ ಅವರು ಕಳೆದ ಸಂಜೆ ವಾರಣಾಸಿಯ ಲಲಿತಾ ಘಾಟ್‌ನ ಪಶುಪತಿನಾಥ್ ದೇವಸ್ಥಾನದಲ್ಲಿ ಪ್ರಧಾನಿ ಒಲಿ ಹಾಗೂ ಭಾರತದಲ್ಲಿ ಇರುವ ನೇಪಾಳಿ ಪ್ರಜೆಗಳಿಗೆ ಬೆದರಿಕೆಯನ್ನು ಹಾಕಿ ಪೋಸ್ಟರುಗಳನ್ನು ಹಾಕಲಾಗಿದೆ ಎಂದು ಮಾಹಿತಿ ನೀಡಲಾಗಿದೆ ಎಂದು ಹೇಳಿದ್ದಾರೆ.

ಅಲ್ಲದೆ ಈ ಗುಂಪಿನ ಮುಖ್ಯಸ್ಥ ಅರುಣ್ ಪಾಠಕ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ವೀಡಿಯೊವನ್ನು ಅಪ್‌ಲೋಡ್ ಮಾಡಿದ್ದಾರೆ. ಇದರಲ್ಲಿ ಅಪರಿಚಿತ ನೇಪಾಳಿ ಪ್ರಜೆಯ ತಲೆಯ ಮೇಲೆ ಜೈಶ್ರೀರಾಮ್ ಎಂದು ಬರೆಯಲಾಗಿದ್ದು, ಅವರನ್ನು ಜೈಶ್ರೀರಾಮ್ ಹಾಗೂ ಭಾರತ್ ಮಾತಾಕಿ ಜೈ ಎಂದು ಕೂಗಲು ಒತ್ತಾಯಿಸಿಲಾಗಿದೆ.

ನೇಪಾಳಿ ರಾಯಭಾರಿ ಆಚಾರ್ಯ, ತಾನು ಬೆಳಿಗ್ಗೆ ಉತ್ತರ ಪ್ರದೇಶದ ಸಿಎಂ ಅವರೊಂದಿಗೆ ಮಾತನಾಡಿದ್ದೇನೆ ಹಾಗೂ ನೇಪಾಳದ ಪ್ರಜೆಗಳಿಗೆ ಅಸುರಕ್ಷಿತ ಭಾವನೆ ಬರದಂತೆ ನೋಡಿಕೊಳ್ಳಬೇಕೆಂದು ಕೇಳಿಕೊಂಡಿದ್ದೇನೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಕೈಗೊಂಡ ಕ್ರಮದಿಂದ ತೃಪ್ತಿ ಹೊಂದಿದ್ದೇನೆ ಎಂದು ಅವರು ಹೇಳಿದ್ದಾರೆ.

ಪ್ರಕರಣದ ಕುರಿತು ಭೆಲಾಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ವಾರಣಾಸಿ ಪೊಲೀಸರು ಹೇಳಿದ್ದಾರೆ.


ಓದಿ:ನೇಪಾಳಿ ಯುವಕನ ತಲೆ ಬೋಳಿಸಿ ಜೈಶ್ರೀರಾಮ್ ಹೇಳುವಂತೆ ಒತ್ತಾಯಿಸಿದ ಹಿಂದುತ್ವವಾದಿಗಳು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...