Homeಮುಖಪುಟಅಂಬೇಡ್ಕರ್‌ ಅನುಯಾಯಿಗಳು ಸಮಾಜವಾದಿ ಪಕ್ಷಕ್ಕೆ ಕೈಜೋಡಿಸಬೇಕು: ಅಖಿಲೇಶ್ ಯಾದವ್

ಅಂಬೇಡ್ಕರ್‌ ಅನುಯಾಯಿಗಳು ಸಮಾಜವಾದಿ ಪಕ್ಷಕ್ಕೆ ಕೈಜೋಡಿಸಬೇಕು: ಅಖಿಲೇಶ್ ಯಾದವ್

- Advertisement -
- Advertisement -

“ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯುವ ಸಮಾಜವಾದಿ ಪಕ್ಷದ ಪ್ರಯತ್ನಕ್ಕೆ ಡಾ. ಭೀಮ್ ರಾವ್ ಅಂಬೇಡ್ಕರ್ ಅವರ ಅನುಯಾಯಿಗಳು ಕೈಜೋಡಿಸಬೇಕು. ಇದರಿಂದಾಗಿ ಪ್ರಜಾಪ್ರಭುತ್ವವನ್ನು ಉಳಿಸಬಹುದು ಮತ್ತು ಜನರ ಹಕ್ಕನ್ನು ರಕ್ಷಿಸಬಹುದು” ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಹೇಳಿದ್ದಾರೆ.

ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ಅಧ್ಯಕ್ಷ ಜಯಂತ್ ಚೌಧರಿ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಅಖಿಲೇಶ್ ಯಾದವ್ ಈ ಬಗ್ಗೆ ಮಾತನಾಡಿದ್ದಾರೆ.

’ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ನಾವು ಉಳಿಸಬೇಕಾಗಿರುವುದರಿಂದ ಅಂಬೇಡ್ಕರ್‌ವಾದಿಗಳು (ಅಂಬೇಡ್ಕರ್‌ರ ಅನುಯಾಯಿಗಳು) ಸಮಾಜವಾದಿಗಳೊಂದಿಗೆ ಬರಬೇಕು. ಇವುಗಳನ್ನು ಉಳಿಸದಿದ್ದರೆ ನಮ್ಮ ಹಕ್ಕುಗಳಿಗೆ ಏನಾಗುತ್ತದೆ ಎಂದು ಯೋಚಿಸಿ’ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ: ಬಿಜೆಪಿ ಮೈತ್ರಿ ಆಹ್ವಾನ ತಿರಸ್ಕರಿಸಿದ RLD ಮುಖ್ಯಸ್ಥ ಜಯಂತ್ ಚೌಧರಿ

“ನಾವು ಬಹು ವರ್ಣದ ಜನರು. ಕೆಂಪು, ಹಸಿರು, ಬಿಳಿ ಮತ್ತು ನೀಲಿ ಎಲ್ಲವೂ ನಮ್ಮೊಂದಿಗಿದೆ. ಜೊತೆಗೆ ತಮ್ಮ ಸಂಘಟನೆಗೆ ಸಮಾಜದ ವಿವಿಧ ವರ್ಗಗಳನ್ನು ಪ್ರತಿನಿಧಿಸುವ ವಿವಿಧ ಪಕ್ಷಗಳ ಬೆಂಬಲವಿದೆ” ಎಂದು  ಹೇಳಿದ್ದಾರೆ.

ರಾಜ್ಯದಲ್ಲಿ ತಮ್ಮ ಪಕ್ಷವು ಸರ್ಕಾರ ರಚಿಸಿದರೆ, ಯುವಕರಿಗೆ ಉದ್ಯೋಗ ನೀಡಲಾಗುವುದು. ಪ್ರತಿಯೊಬ್ಬ ಯುವಕರು ತಮ್ಮ ಕೆಲಸ ಕಳೆದುಕೊಂಡಂತೆ ಈ ಬಾರಿ ಬಿಜೆಪಿಯನ್ನು ಸೋಲಿಸುತ್ತಾರೆ ಎಂದಿದ್ದಾರೆ.

ರಾಜ್ಯದಲ್ಲಿ ಅಧಿಕಾರದಲ್ಲಿರುವವರು ಎರಡೂ ಪಕ್ಷಗಳ (ಎಸ್‌ಪಿ-ಆರ್‌ಎಲ್‌ಡಿ) ನಡುವಿನ ಏಕತೆಯನ್ನು ನಾಶಪಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ರಾಷ್ಟ್ರೀಯ ಲೋಕದಳದ ಮುಖ್ಯಸ್ಥ ಜಯಂತ್ ಚೌಧರಿ ಆರೋಪಿಸಿದ್ದಾರೆ.

ನಮ್ಮ ತಂಡಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುತ್ತಿದ್ದಾರೆ. ಇದು ಬಿಜೆಪಿಗರ ಕೋಪವನ್ನು ಹೆಚ್ಚಿಸಿದೆ. ಮುಖ್ಯಮಂತ್ರಿ ಸ್ಥಾನದಲ್ಲಿರುವ ಯಾವುದೇ ವ್ಯಕ್ತಿ ಹಿಂದೆಂದೂ ಬಳಸದ ಭಾಷೆಯನ್ನು ಈ ಸಿಎಂ ಬಳಸುತ್ತಿದ್ದಾರೆ. ಯೋಗಿ ಆದಿತ್ಯನಾಥ್‌ ಪಶ್ಚಿಮ ಯುಪಿಯ ಮನಸ್ಥಿತಿಯನ್ನು ಅರ್ಥಮಾಡಿಕೊಳ್ಳಲಿಲ್ಲ ಎಂದು ತೋರುತ್ತದೆ. ಅವರು ನಮಗೆ ಎಷ್ಟು ಬೆದರಿಕೆ ಹಾಕುತ್ತಾರೋ, ನಾವು ಹೆಚ್ಚು ಸಂಘಟಿತರಾಗುತ್ತೇವೆ, ಶಕ್ತಿಶಾಲಿಯಾಗುತ್ತೇವೆ” ಎಂದು ಜಯಂತ್ ಚೌಧರಿ ಹೇಳಿದ್ದಾರೆ.


ಇದನ್ನೂ ಓದಿ: ಯುಪಿ ಚುನಾವಣೆ: ಅಯೋಧ್ಯೆಯಿಂದ ಪವನ್ ಪಾಂಡೆ ಎಸ್‌ಪಿ ಅಭ್ಯರ್ಥಿ, ಬಿಜೆಪಿ ಅಭ್ಯರ್ಥಿ ಬಗ್ಗೆ ಕುತೂಹಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...