Homeಮುಖಪುಟಅಂಬೇಡ್ಕರ್‌ ಅನುಯಾಯಿಗಳು ಸಮಾಜವಾದಿ ಪಕ್ಷಕ್ಕೆ ಕೈಜೋಡಿಸಬೇಕು: ಅಖಿಲೇಶ್ ಯಾದವ್

ಅಂಬೇಡ್ಕರ್‌ ಅನುಯಾಯಿಗಳು ಸಮಾಜವಾದಿ ಪಕ್ಷಕ್ಕೆ ಕೈಜೋಡಿಸಬೇಕು: ಅಖಿಲೇಶ್ ಯಾದವ್

- Advertisement -
- Advertisement -

“ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯುವ ಸಮಾಜವಾದಿ ಪಕ್ಷದ ಪ್ರಯತ್ನಕ್ಕೆ ಡಾ. ಭೀಮ್ ರಾವ್ ಅಂಬೇಡ್ಕರ್ ಅವರ ಅನುಯಾಯಿಗಳು ಕೈಜೋಡಿಸಬೇಕು. ಇದರಿಂದಾಗಿ ಪ್ರಜಾಪ್ರಭುತ್ವವನ್ನು ಉಳಿಸಬಹುದು ಮತ್ತು ಜನರ ಹಕ್ಕನ್ನು ರಕ್ಷಿಸಬಹುದು” ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಹೇಳಿದ್ದಾರೆ.

ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ಅಧ್ಯಕ್ಷ ಜಯಂತ್ ಚೌಧರಿ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಅಖಿಲೇಶ್ ಯಾದವ್ ಈ ಬಗ್ಗೆ ಮಾತನಾಡಿದ್ದಾರೆ.

’ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ನಾವು ಉಳಿಸಬೇಕಾಗಿರುವುದರಿಂದ ಅಂಬೇಡ್ಕರ್‌ವಾದಿಗಳು (ಅಂಬೇಡ್ಕರ್‌ರ ಅನುಯಾಯಿಗಳು) ಸಮಾಜವಾದಿಗಳೊಂದಿಗೆ ಬರಬೇಕು. ಇವುಗಳನ್ನು ಉಳಿಸದಿದ್ದರೆ ನಮ್ಮ ಹಕ್ಕುಗಳಿಗೆ ಏನಾಗುತ್ತದೆ ಎಂದು ಯೋಚಿಸಿ’ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ: ಬಿಜೆಪಿ ಮೈತ್ರಿ ಆಹ್ವಾನ ತಿರಸ್ಕರಿಸಿದ RLD ಮುಖ್ಯಸ್ಥ ಜಯಂತ್ ಚೌಧರಿ

“ನಾವು ಬಹು ವರ್ಣದ ಜನರು. ಕೆಂಪು, ಹಸಿರು, ಬಿಳಿ ಮತ್ತು ನೀಲಿ ಎಲ್ಲವೂ ನಮ್ಮೊಂದಿಗಿದೆ. ಜೊತೆಗೆ ತಮ್ಮ ಸಂಘಟನೆಗೆ ಸಮಾಜದ ವಿವಿಧ ವರ್ಗಗಳನ್ನು ಪ್ರತಿನಿಧಿಸುವ ವಿವಿಧ ಪಕ್ಷಗಳ ಬೆಂಬಲವಿದೆ” ಎಂದು  ಹೇಳಿದ್ದಾರೆ.

ರಾಜ್ಯದಲ್ಲಿ ತಮ್ಮ ಪಕ್ಷವು ಸರ್ಕಾರ ರಚಿಸಿದರೆ, ಯುವಕರಿಗೆ ಉದ್ಯೋಗ ನೀಡಲಾಗುವುದು. ಪ್ರತಿಯೊಬ್ಬ ಯುವಕರು ತಮ್ಮ ಕೆಲಸ ಕಳೆದುಕೊಂಡಂತೆ ಈ ಬಾರಿ ಬಿಜೆಪಿಯನ್ನು ಸೋಲಿಸುತ್ತಾರೆ ಎಂದಿದ್ದಾರೆ.

ರಾಜ್ಯದಲ್ಲಿ ಅಧಿಕಾರದಲ್ಲಿರುವವರು ಎರಡೂ ಪಕ್ಷಗಳ (ಎಸ್‌ಪಿ-ಆರ್‌ಎಲ್‌ಡಿ) ನಡುವಿನ ಏಕತೆಯನ್ನು ನಾಶಪಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ರಾಷ್ಟ್ರೀಯ ಲೋಕದಳದ ಮುಖ್ಯಸ್ಥ ಜಯಂತ್ ಚೌಧರಿ ಆರೋಪಿಸಿದ್ದಾರೆ.

ನಮ್ಮ ತಂಡಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುತ್ತಿದ್ದಾರೆ. ಇದು ಬಿಜೆಪಿಗರ ಕೋಪವನ್ನು ಹೆಚ್ಚಿಸಿದೆ. ಮುಖ್ಯಮಂತ್ರಿ ಸ್ಥಾನದಲ್ಲಿರುವ ಯಾವುದೇ ವ್ಯಕ್ತಿ ಹಿಂದೆಂದೂ ಬಳಸದ ಭಾಷೆಯನ್ನು ಈ ಸಿಎಂ ಬಳಸುತ್ತಿದ್ದಾರೆ. ಯೋಗಿ ಆದಿತ್ಯನಾಥ್‌ ಪಶ್ಚಿಮ ಯುಪಿಯ ಮನಸ್ಥಿತಿಯನ್ನು ಅರ್ಥಮಾಡಿಕೊಳ್ಳಲಿಲ್ಲ ಎಂದು ತೋರುತ್ತದೆ. ಅವರು ನಮಗೆ ಎಷ್ಟು ಬೆದರಿಕೆ ಹಾಕುತ್ತಾರೋ, ನಾವು ಹೆಚ್ಚು ಸಂಘಟಿತರಾಗುತ್ತೇವೆ, ಶಕ್ತಿಶಾಲಿಯಾಗುತ್ತೇವೆ” ಎಂದು ಜಯಂತ್ ಚೌಧರಿ ಹೇಳಿದ್ದಾರೆ.


ಇದನ್ನೂ ಓದಿ: ಯುಪಿ ಚುನಾವಣೆ: ಅಯೋಧ್ಯೆಯಿಂದ ಪವನ್ ಪಾಂಡೆ ಎಸ್‌ಪಿ ಅಭ್ಯರ್ಥಿ, ಬಿಜೆಪಿ ಅಭ್ಯರ್ಥಿ ಬಗ್ಗೆ ಕುತೂಹಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...