Homeಚಳವಳಿಅಂಬೇಡ್ಕರ್ ಜನ್ಮದಿನ ವಿಶೇ‍ಷ: ಅಂಬೇಡ್ಕರ್ ಪರಿಭಾವಿಸಿದ ಭಾರತ V/s ವರ್ತಮಾನ ಭಾರತ

ಅಂಬೇಡ್ಕರ್ ಜನ್ಮದಿನ ವಿಶೇ‍ಷ: ಅಂಬೇಡ್ಕರ್ ಪರಿಭಾವಿಸಿದ ಭಾರತ V/s ವರ್ತಮಾನ ಭಾರತ

ಭಾರತದ ಪ್ರತಿಯೊಂದು ಶೋಷಿತ ಸಮುದಾಯದ ಹಕ್ಕುಗಳ ಬಗ್ಗೆಯೂ ಇಷ್ಟೊಂದು ಕಳಕಳಿವಹಿಸಿ ಚಿಂತಿಸಿದ ಮತ್ತು ಹೋರಾಡಿದ ಇನ್ನೊಂದು ಜೀವ ಈ ದೇಶದಲ್ಲಿ ಹುಟ್ಟಿರಲಿಕ್ಕಿಲ್ಲ....

- Advertisement -
- Advertisement -

ಸುದೀರ್ಘ ಕಾಲ ವಿಸ್ಮೃತಿಯೇ ತಾವಾಗಿಹೋಗಿದ್ದ ಈ ದೇಶದ ದೊಡ್ಡ ಸಂಖ್ಯೆಯ ಶೋಷಿತ ಸಮುದಾಯದ ಎದೆಗಳಲ್ಲಿ ಸ್ವಾಭಿಮಾನದ ಕಿಡಿ ಹೊತ್ತಿಸಿ, ಅರಿವಿನ ದೀಪ ಮತ್ತು ಸಂಘಟನೆಯ ಶಕ್ತಿಗಳನ್ನು ಕೈಗಿತ್ತಿದ್ದು ಬಾಬಾಸಾಹೇಬರು. ಆ ಶಕ್ತಿಗಳೊಂದಿಗೆ ಮುಂದಿನ ದಾರಿ ಹುಡುಕಿಕೊಳ್ಳಿರೆಂದು ಬೀಳ್ಕೊಂಡ ಅದಮ್ಯ ಚೇತನ ಡಾ. ಅಂಬೇಡ್ಕರ್ ಅವರ ಮತ್ತೊಂದು ಜಯಂತಿಯ ಬೆಳಕಿನಲ್ಲಿ ಕೆಲವು ಸಂಗತಿಗಳನ್ನು ದಾಖಲಿಸಬೇಕೆನಿಸಿತು.

ಸ್ವಲ್ಪ ಸಮಯದ ಹಿಂದೆ ಅಂಬೇಡ್ಕರ್ ಪರಿಭಾವಿಸಿದ ಭಾರತದ ಬಗ್ಗೆ ಮಾತನಾಡಲಿಕ್ಕಾಗಿ ಟಿಪ್ಪಣಿ ಮಾಡಿಕೊಳ್ಳುತ್ತಾ, ಅವರ ಕೆಲವು ಬರಹಗಳನ್ನು ಮತ್ತೊಮ್ಮೆ ತಿರುವಿ ಹಾಕುತ್ತಿದ್ದಾಗ, ಭಾರತದ ಪ್ರತಿಯೊಂದು ಶೋಷಿತ ಸಮುದಾಯದ ಹಕ್ಕುಗಳ ಬಗ್ಗೆಯೂ ಇಷ್ಟೊಂದು ಕಳಕಳಿವಹಿಸಿ ಚಿಂತಿಸಿದ ಮತ್ತು ಹೋರಾಡಿದ ಇನ್ನೊಂದು ಜೀವ ಈ ದೇಶದಲ್ಲಿ ಹುಟ್ಟಿರಲಿಕ್ಕಿಲ್ಲ ಎನಿಸಿತ್ತು. ಅನೇಕ ಮಹಾನುಭಾವರು ಮತ್ತು ಮಹಾನುಭಾವೆಯರು ಇತಿಹಾಸದಲ್ಲಿ ತಮ್ಮ ಕೈಚಾಚಲು ಸಾಧ್ಯವಾದಷ್ಟು ಅಗಲಕ್ಕೂ ಮಾನವತೆಯ ತಂಪನ್ನು ಹರಡಲು ನೋಡಿದವರು ನಮ್ಮ ಇತಿಹಾಸದಲ್ಲಿದ್ದಾರೆ; ಆದರೆ ಹೀಗೆ ಎಲ್ಲ ಕೋನಗಳಿಂದ, ಎಲ್ಲ ದಿಕ್ಕುಗಳಿಂದಲೂ ಆಲೋಚಿಸಿದವರು? ಜಾತಿಯಿಂದಲೋ, ವರ್ಗದಿಂದಲೋ, ಲಿಂಗದಿಂದಲೋ ಅಥವಾ ಇನ್ಯಾವುದೇ ಮಾನದಂಡವನ್ನು ತೆಗದುಕೊಂಡು ನೋಡಿದಾಗಲೂ ಕಡುಹಿಂದುಳಿದವರೆಂದು ಕಂಡುಬಂದ ಎಲ್ಲ ವರ್ಗ-ಸಮುದಾಯಗಳನ್ನು ಅಂಬೇಡ್ಕರ್ ಅವರು ತನ್ನ ಮಡಿಲಿಗೆಳೆದುಕೊಂಡಿದ್ದಾರೆ. ಭವಿಷ್ಯದ ಭಾರತದಲ್ಲಿ ಅಂತಹ ಎಲ್ಲರ ಸಾಮಾಜಿಕ, ಆರ್ಥಿಕ, ರಾಜಕೀಯ ಹಕ್ಕುಗಳು ಖಾತ್ರಿಯಾಗಬೇಕೆಂದು ಅವಿರತವಾಗಿ ಇನ್ನಿಲ್ಲದಂತೆ ಶ್ರಮಿಸಿದ್ದಾರೆ. ಅವರು ಬಯಸಿದ್ದು:

• ಹುಟ್ಟಿನ ಆಧಾರದಲ್ಲಿ ತಾರತಮ್ಯ ಮಾಡದಂತಹ ಸಾಮಾಜಿಕ ವ್ಯವಸ್ಥೆ
• ದೇಶದ ಪ್ರತಿಯೊಬ್ಬರಿಗೂ ಸಮಾನವಾದ ಅವಕಾಶಗಳು, ಸವಲತ್ತುಗಳು, ನ್ಯಾಯ ಮತ್ತು ಹಕ್ಕುಗಳು
• ಸರ್ಕಾರದ ಕಡೆಯಿಂದ ಸಾಮಾಜಿಕ-ಆರ್ಥಿಕ ಅಸಮಾನತೆಯನ್ನು ಕಡಿಮೆ ಮಾಡಲು ಅಗತ್ಯವಿರುವಂತಹ ನೀತಿಗಳು- ಭಾರತದ ಸಮಾಜದ ಮೂಲಸ್ವರೂಪವನ್ನು ಬದಲಿಸುವ ಶಕ್ತಿ ಹೊಂದಿರುವ ಭೂಮಿಯ ಹಂಚಿಕೆ ಮತ್ತು ಸಹಕಾರಿ ಬೇಸಾಯ ಪದ್ಧತಿ, ಉದ್ಯೋಗಗಳಲ್ಲಿ ಅತ್ಯಂತ ಶೋಷಿತ ಸಮುದಾಯಕ್ಕೆ ಮೀಸಲಾತಿ, 14 ವರ್ಷದವರೆಗೆ ಉಚಿತ, ಕಡ್ಡಾಯ ಶಿಕ್ಷಣ, ಕಾರ್ಮಿಕರಿಗೆ ಕೆಲಸದ ಸ್ಥಳದಲ್ಲಿ ಹಕ್ಕುಗಳು…………. ಇಂತಹ ಇನ್ನೂ ಎಷ್ಟೋ ಕ್ರಮಗಳು
• ದೇಶದ ಪ್ರತಿಯೊಬ್ಬ ಪ್ರಜೆಯೂ ಗೌರವ ಮತ್ತು ಘನತೆಯಿಂದ ಬದುಕಲು ಬೇಕಿರುವಂತಹ ಮೂಲಭೂತ ಹಕ್ಕುಗಳು
• ಎಲ್ಲ ಸಮುದಾಯಗಳನ್ನು ಪ್ರಾತಿನಿಧಿಕವಾಗಿ ಒಳಗೊಳ್ಳಬಲ್ಲ ಚುನಾವಣಾ ವ್ಯವಸ್ಥೆ
• ಜನರ ಮನಸ್ಸಿನಾಳದಲ್ಲಿ ಬೇರೂರಿರುವ ಜಾತಿ-ಅಸ್ಪೃಶ್ಯತೆಯ ವಿಷವನ್ನು ತೊಳೆದು ನಿರ್ಮಲಗೊಳಿಸಲು ಬೇಕಿರುವ, ಪ್ರತಿಯೊಬ್ಬ ಮನುಷ್ಯನಲ್ಲೂ ಇರುವ ಒಳದನಿಯನ್ನು ಜಾಗೃತಗೊಳಿಸಿ ನಿಜವಾದ ಮನುಷ್ಯರನ್ನಾಗಿಸಬಲ್ಲ ಆಧ್ಯಾತ್ಮಿಕ (ಧರ್ಮ) ಸಂರಚನೆ

ಇಂತಹ ರಚನೆಗಳನ್ನು ರೂಪಿಸಿಕೊಂಡ ಭಾರತ ಮಾತ್ರ ಸದೃಢವಾಗಿಯೂ, ಸಮಾನವಾಗಿಯೂ ಮತ್ತು ನಿಜಕ್ಕೂ ಆಧುನಿಕವಾಗಿಯೂ ಬೆಳೆದು ಅಭಿವೃದ್ಧಿ ಹೊಂದಲು ಸಾಧ್ಯ; ಹಾಗಿಲ್ಲವಾದರೆ ಭಾರತವನ್ನು ಸೋಲಿಸಲು ಹೊರಗಿನ ಯಾವ ಶತ್ರುವೂ ಬೇಕಿಲ್ಲ, ಇಲ್ಲಿರುವ ಶೋಷಣೆ, ತಾರತಮ್ಯ, ಅಸಮಾನತೆಗಳೇ ಸಾಕು ಈ ದೇಶವನ್ನು ಹಿಂದೆ ತಳ್ಳಲು ಎಂಬ ಬಗ್ಗೆ ಅವರಿಗೆ ಖಚಿತವಾದ ಅಭಿಪ್ರಾಯವಿತ್ತು.

ಆದ್ದರಿಂದಲೇ, ಸಂವಿಧಾನದಲ್ಲಾಗಲೀ, ಅದಕ್ಕೂ ಮೊದಲೇ ಬರೆದಿದ್ದ ‘ಸ್ಟೇಟ್ಸ್ ಅಂಡ್ ಮೈನಾರಿಟೀಸ್’ ಎಂಬ ತಮ್ಮ ದೀರ್ಘ ಪ್ರಬಂಧದಲ್ಲಾಗಲೀ ಸಾಮಾಜಿಕ, ಆರ್ಥಿಕ, ರಾಜಕೀಯ, ಸಾಂಸ್ಕೃತಿಕ ಸಮಾನತೆಗೆ ಅಂಬೇಡ್ಕರ್ ಅವರು ಅಷ್ಟು ಪ್ರಾಮುಖ್ಯತೆ ನೀಡಿದ್ದರು.

ಆದರೆ, ಸಮಾನವಾದ, ಮಾನವತೆಯ ಮೇಲೆ ನಿಂತಿರುವ ದೇಶವೊಂದನ್ನು ಕನಸುತ್ತಾ ಅದಕ್ಕಾಗಿ ಹೋರಾಟ ಮತ್ತು ಶಾಸನಾತ್ಮಕ ಪ್ರಯತ್ನಗಳಲ್ಲಿ ತೊಡಗಿರುವಾಗಲೇ, ಅವರಿಗೆ ತಾನು ಪರಿಭಾವಿಸುತ್ತಿರುವ ಭಾರತ ವಾಸ್ತವದಲ್ಲಿ ಸಾಕಾರಗೊಳ್ಳುತ್ತಿಲ್ಲ ಎಂಬ ಆತಂಕ ಮನದಾಳದಲ್ಲಿ ಮನೆ ಮಾಡಿತ್ತೇ? ತನ್ನ ಕಣ್ಣೆದುರು ಸ್ವಾತಂತ್ರ್ಯಾನಂತರ ಕಟ್ಟಲ್ಪಡುತ್ತಿದ್ದದ್ದು ತಾನು ಬಯಸಿದ್ದ ದೇಶವಲ್ಲ ಎಂದು ಅವರು ಪರಿಭಾವಿಸಿದ್ದರೇ? ಈ ಪ್ರಶ್ನೆ ಹುಟ್ಟಿ, ಖಚಿತ ಉತ್ತರವಿಲ್ಲದೆ ಹಾಗೆಯೇ ಉಳಿದುಬಿಡುತ್ತದೆ!

ಅಂದರೆ, ಅಂಬೇಡ್ಕರ್ ಅವರು ಆತಂಕದೊಂದಿಗೆ ಮುಂದೆ ಏನಾಗಲಿದೆಯೆಂದು ಊಹಿಸಿದ್ದರೋ ಅದೇ ಭಾರತ ಇಂದು ನಮ್ಮ ಕಣ್ಣಮುಂದಿದೆಯೇ?

“ಸಮಾನತೆಯಿಲ್ಲದ ಸ್ವಾತಂತ್ರ್ಯ ಅರ್ಥಹೀನ” ಎಂದು ಅಂಬೇಡ್ಕರ್ ಅವರು ಹೇಳಿದ್ದಂತೆಯೇ, ಪ್ರಜಾತಂತ್ರವೆಂದು ಕರೆಯಲು ಕಷ್ಟವಾಗುವಂತಹ ಸಮಾಜವೊಂದರಲ್ಲಿ ಬದುಕುತ್ತಿದ್ದೇವೆ. ಅದರಲ್ಲೂ ಈ ಒಂದೆರಡು ದಶಕಗಳಂತೂ, ಎಲ್ಲ ಬಗೆಯ ಕಾನೂನುಗಳನ್ನು, ನೀತಿ-ನಿಯಮಗಳನ್ನೂ ಗಾಳಿಗೆ ತೂರುತ್ತಾ, ತಮ್ಮ ಅಜೆಂಡಾದಲ್ಲಿದ್ದ ಹಿಂದಿನ ಶೋಷಣೆ, ದಬ್ಬಾಳಿಕೆ, ದಮನಗಳ ಸಾಮಾಜಿಕ ವ್ಯವಸ್ಥೆಯನ್ನೇ ಪುನರ್ ಸ್ಥಾಪಿಸಲು ಬಯಸುವ ಮನುವಾದಿ ಬಿಜೆಪಿಯ ಕಪಿಮುಷ್ಟಿಯೊಳಕ್ಕೆ ಈ ದೇಶ ಸಿಲುಕುತ್ತಿರುವುದಕ್ಕೆ ಸಾಕ್ಷಿಯಾಗಿವೆ. ಈ ಐದು ವರ್ಷಗಳು, ಸುಮಾರು ನೂರು ವರ್ಷಗಳ ನಡಿಗೆಯ ಗುರುತುಗಳನ್ನು ಅಳಿಸಿಹಾಕಿ ದೇಶವನ್ನು ಹಿಂದಕ್ಕೆಳೆದಿದೆ. ಎರಡು ವಿಶ್ವಯುದ್ಧಗಳಿಗಿಂತ ಮುಂಚೆ ಬದುಕಿದ್ದ ಸಮಾಜದ ಯುವಜನರು ಮುಗ್ಧವಾಗಿ ಯೋಚಿಸಬಹುದಾಗಿದ್ದಂತೆ, ಇಂದಿನ ತಲೆಮಾರಿಗೆ ಯುದ್ಧವೆಂಬುದು ಆತಂಕವನ್ನಲ್ಲ ಬದಲಿಗೆ ಸಂಭ್ರಮೋತ್ಸಾಹವನ್ನು ತರುತ್ತಿದೆ. ಇನ್ನೊಂದು ಸಮುದಾಯವನ್ನು ದಮನಿಸಿ, ತಲೆ ಎತ್ತಲಾಗದಂತೆ ಮುಗಿಸಿಬಿಡುವುದೆಂದರೆ, ವರ್ತಮಾನದ ಸಾಮಾನ್ಯ ಜನರಿಗೆ ತಮ್ಮ ಸ್ವಾಭಾವಿಕ ಹಕ್ಕುಗಳ ಮರುಸ್ಥಾಪನೆಯಂತೆ ಕಾಣುತ್ತಿದೆ. ಇತರರ ನಂಬಿಕೆಗಳನ್ನು ಗೌರವಿಸುವುದು ಬಲಹೀನತೆಯಾಗಿಯೂ, ಪ್ರಶ್ನಿಸುವುದು ಮತ್ತು ಟೀಕಿಸುವುದು ದೇಶದ್ರೋಹವಾಗಿಯೂ ಬಿಂಬಿಸಲ್ಪಟ್ಟಿದೆ.

ತಮ್ಮ ಕುಟುಂಬದ ಯುವಜನರಿಗೆ ಉದ್ಯೋಗ ಸಿಗದಿರುವುದು ಮೀಸಲಾತಿ ನೀತಿಯ ‘ಹುನ್ನಾರ’ವಾಗಿ (ಸ್ವತಃ ತಾವೇ ಮೀಸಲಾತಿಯ ಪರಿಧಿಯೊಳಗಡೆಯೇ ಇದ್ದರೂ ಕೂಡಾ) ವಿವರಿಸಲ್ಪಟ್ಟಿದೆಯೇ ಹೊರತು, ಸರ್ಕಾರದ ಕುಟಿಲ ನೀತಿಯ ಪರಿಣಾಮವೆಂದಲ್ಲ. ಇಳಿಯುತ್ತಿರುವ ತಲಾ ಆದಾಯ, ಏರುತ್ತಿರುವ ಬೆಲೆಗಳು ಆ ಕ್ಷಣಕ್ಕೆ ಚಿಂತೆ ಮೂಡಿಸಿದರೂ, ಅವುಗಳಿಗೂ ಆಳುತ್ತಿರುವ ಸರ್ಕಾರಕ್ಕೂ ಸಂಬಂಧವಿದೆಯೆಂಬ ಅರಿವಿನ ತಂತುಗಳು ಕಡಿದುಹೋಗಿವೆ. ‘20ನೇ ಶತಮಾನದ ಫ್ಯಾಸಿಸಂ ಕಾಲದ ಟಿವಿ ಆಂಕರ್’ ಗೋಬೆಲ್ಸ್‌ನ ಸಿದ್ಧಾಂತವನ್ನೇ ನಂಬಿ ಬೆಳೆಯುತ್ತಿರುವ ಇಂದಿನ ಮಾಧ್ಯಮಗಳ ಗಿಳಿಪಾಠವೇ ಇಂದು ಜಗತ್ತಿನ ಆತ್ಯಂತಿಕ ಸತ್ಯವಾಗಿ ಹೋಗಿರುವ ವಿಪರ್ಯಾಸವನ್ನು ನಮ್ಮ ಶುಷ್ಕ ಕಣ್ಣುಗಳು ನೋಡುತ್ತಿವೆ.

ಮತ್ತೊಮ್ಮೆ ಶೋಷಿತ ಜಗತ್ತು ವಿಸ್ಮೃತಿಯ ವಿಷದೊಳಕ್ಕೆ ಜಾರಿಸಲ್ಪಡುತ್ತಿದೆ……….. ಜಾರುವಿಕೆ ವೇಗವನ್ನು ತಡೆದು ನಿಲ್ಲಿಸಲು ಶಕ್ತಿ ಸಾಲದೆ ನೊಂದ ಕಾಲುಗಳು ಮತ್ತು ಮನಸ್ಸಿನೊಂದಿಗೆ ಚಳುವಳಿಗಳು ನಿಂತಂತಿದೆ.
ನನ್ನ ಪ್ರಕಾರ, ಅಂಬೇಡ್ಕರ್ ಪರಿಭಾವಿಸಿದ್ದು ಒಂದು ಭಾರತವನ್ನಲ್ಲ!! ಅವರ ದಾರ್ಶನಿಕ ಕಣ್ಣುಗಳ ಎದುರಿಗಿದ್ದದ್ದು ಎರಡು ಭಾರತಗಳು; ತಮ್ಮ ಹಕ್ಕುಗಳಿಗಾಗಿ ಎಚ್ಚರವಾಗಿದ್ದು ಎಲ್ಲ ಶೋಷಿತ, ದಮನಿತ ಸಮುದಾಯಗಳು ಸೇರಿ ಹೋರಾಡಿದ್ದೇ ಆದಲ್ಲಿ ಮೂಡಿಬರಬಹುದಾಗಿದ್ದ ಸಮಾನ ಭಾರತ ಮತ್ತು ಹಾಗಿಲ್ಲದೆ ಮತ್ತೆ ಮೋಸದ ಜಾಲದೊಳಕ್ಕೆ ಬಿದ್ದು ತಮ್ಮ ಐಕ್ಯತೆಯನ್ನು ಒಡೆದುಕೊಂಡು ಜನಸಾಮಾನ್ಯರು ದಿಕ್ಕುತಪ್ಪಿದ್ದೇ ಆದಲ್ಲಿ ಮೂಡಬಹುದಾಗಿದ್ದ ‘ಮಸಾಣ’ ಭಾರತ!! ಇಂದು ನಮ್ಮ ಪಯಣ ವೇಗವಾಗಿ ಸಾಗುತ್ತಿರುವುದು ಈ ಎರಡನೇ ಭಾರತದೆಡೆಗೆ………………..

ಅಂಬೇಡ್ಕರ್ ಅವರೇ ಈ ಅರಿವು ರಹಿತ ಸ್ಥಿತಿಯಿಂದ ಹೊರಬರಲು ಕೆಲವು ಹತಾರಗಳನ್ನೂ ನೀಡಿದ್ದಾರೆ. ಚಿಂತನೆಗಳಿಂದ ನಾವು ಪಡೆಯಬೇಲಾದ ಅನೇಕ ಸಂಗತಿಗಳಿದ್ದರೂ, ಬಹಳ ಮುಖ್ಯವಾಗಿ, ಸದಾ ಅರಿವು, ಐಕ್ಯತೆ ಮತ್ತು ಪ್ರಯತ್ನಶೀಲತೆಯನ್ನು ಉಳಿಸಿಕೊಂಡಿರಬೇಕೆಂಬ ಅವರ ಮೂಲಮಂತ್ರಗಳು; ಅವರ ಬದುಕು ಮತ್ತು ಆಚರಣೆಯಿಂದ ಕಲಿಯಬೇಕಾದ್ದು, ತನ್ನ ಮೂಲ ಆಶಯಕ್ಕಾಗಿ ಎಂದೂ ದಣಿವರಿಯದ ದುಡಿಮೆ, ನಂಬಿದ ತತ್ವಕ್ಕಾಗಿ ಭಾರೀ ಪ್ರಯೋಗಗಳಿಗಿಳಿಯುವ ದಿಟ್ಟತನ ಮತ್ತು ಆಶಾವಾದ.

ಇಂದು, ಈ ಕಾಲ ನಮ್ಮೆದುರು ದೀರ್ಘ ನಡಿಗೆಯ ಸವಾಲನ್ನು ಇರಿಸಿದೆ. ಸವಾಲನ್ನು ಸ್ವೀಕರಿಸಿ ಮುನ್ನಡೆಯಲು ಅಂಬೇಡ್ಕರ್ ಎಂಬ ಚೇತನದಿಂದ ಸ್ಪೂರ್ತಿ ಮತ್ತು ವಿಶ್ವಾಸವನ್ನು ಕಡ ಪಡೆದುಕೊಳ್ಳೋಣ; ಉತ್ತಮ ನಾಳೆಗಳನ್ನು ಕಟ್ಟಿಕೊಂಡು ಮರಳಿಸುವ ವಾಗ್ದಾನದೊಂದಿಗೆ!

ಆತಂಕದ ತೂಗುಯ್ಯಾಲೆಯಲ್ಲಿರುವ ಎಲ್ಲ ಜೀವಪರ ಮನಸ್ಸುಗಳಿಗೆ ಅಂಬೇಡ್ಕರ್ ದಿನಾಚರಣೆಯ ಆಶಾವಾದಿ ಶುಭಾಶಯಗಳು.

  • ಮಲ್ಲಿಗೆ ಸಿರಿಮನೆ

(ಸಾಮಾಜಿಕ ಹೋರಾಟಗಾರ್ತಿ, ಕರ್ನಾಟಕ ಜನಶಕ್ತಿಯ ಪ್ರಧಾನ ಕಾರ್ಯದರ್ಶಿ)


ಇದನ್ನೂ ಓದಿ:  ವಿಕಿಪೀಡಿಯಾದಲ್ಲಿ ಕನ್ನಡಿಗರು ಅತಿ ಹೆಚ್ಚು ಹುಡುಕಿದ್ದು ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ!

ನಾನಕ್ ಚಂದ್ ರತ್ತುರವರ ’ಬಾಬಾ ಸಾಹೇಬರ ಕೊನೆ ದಿನಗಳು’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...