Homeಕರ್ನಾಟಕಅಂಬೇಡ್ಕರ್ ಇಡೀ ಜೀವನವನ್ನು ಸಾಮಾಜಿಕ ಹೋರಾಟ-ಸಮಾಜದ ಪರಿವರ್ತನೆಗಾಗಿ ತೊಡಗಿಸಿಕೊಂಡಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಂಬೇಡ್ಕರ್ ಇಡೀ ಜೀವನವನ್ನು ಸಾಮಾಜಿಕ ಹೋರಾಟ-ಸಮಾಜದ ಪರಿವರ್ತನೆಗಾಗಿ ತೊಡಗಿಸಿಕೊಂಡಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ

- Advertisement -
- Advertisement -

ದೇಶದಲ್ಲಿ ಬಸವಣ್ಣ, ಬುದ್ಧನ ನಂತರ ಸಮಾನತೆಗಾಗಿ ಹೋರಾಡಿದವರು ಬಾಬಾ ಸಾಹೇಬ್ ಅಂಬೇಡ್ಕರ್; ಅವರು ತಮ್ಮ ಇಡೀ ಜೀವನವನ್ನು ಸಾಮಾಜಿಕ ಹೋರಾಟ-ಸಮಾಜದ ಪರಿವರ್ತನೆಗಾಗಿ ತೊಡಗಿಸಿಕೊಂಡಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದ ಮುಂಭಾಗದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಸಂವಿಧಾನಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ್ ಡಾ. ಬಿಆರ್ ಅಂಬೇಡ್ಕರ್ ರವರ 68ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

“ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪರಿನಿರ್ವಾಣ ದಿನದಂದು ಪುಷ್ಪಾರ್ಚನೆ ಮೂಲಕ ಅವರನ್ನು ಗೌರವಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು 1956 ಡಿಸೆಂಬರ್ 6 ರಂದು ನಮ್ಮನ್ನೆಲ್ಲಾ ಅಗಲಿದರು. ಆ ದಿನವನ್ನೇ ಪರಿನಿರ್ವಾಣ ದಿನಾಚರಣೆ ಎಂದು ಆಚರಿಸಲಾಗುತ್ತದೆ” ಎಂದರು

“ಜಗತ್ತಿನಲ್ಲಿಯೇ ಶ್ರೇಷ್ಠ ಲಿಖಿತ ಸಂವಿಧಾನ ನೀಡಿದ್ದಾರೆ; ಅವರು ತಮ್ಮ ಬದುಕನ್ನು ಸಾಮಾಜಿಕ ಹೋರಾಟದಲ್ಲಿ ಹಾಗೂ ಸಮಾಜದ ಪರಿವರ್ತನೆಗಾಗಿ ತೊಡಗಿಸಿಕೊಂಡರು. ಅಂಬೇಡ್ಕರ್ ಅವರು ಈ ದೇಶಕ್ಕೆ ಹಾಗೂ ನಮ್ಮ ಸಾಮಾಜಿಕ ಬದುಕಿಗೆ ಅಗತ್ಯವಾದಂತಹ ಸಂವಿಧಾನವನ್ನು ಕೊಟ್ಟಿದ್ದಾರೆ. ಜಗತ್ತಿನಲ್ಲಿಯೇ ಶ್ರೇಷ್ಠ ಲಿಖಿತ ಸಂವಿಧಾನವೆಂದು ನಮ್ಮ ಸಂವಿಧಾನ ಖ್ಯಾತಿ ಪಡೆದಿದೆ. ‘ಸಂವಿಧಾನದ ಶ್ರೇಷ್ಠತೆ ತಿಳಿಯಬೇಕಾದರೆ ಒಳ್ಳೆಯವರ ಕೈಯಲ್ಲಿ ಅನುಷ್ಟಾನವಾಗಬೇಕು. ಕೆಟ್ಟವರ ಕೈಗೆ ಹೋದರೆ ಕೆಟ್ಟದಾಗುತ್ತದೆ’ ಎಂದು ಅಂಬೇಡ್ಕರ್ ಅವರು ಸ್ಪಷ್ಟವಾಗಿ ಈ ದೇಶದ ಜನರಿಗೆ ಎಚ್ಚರಿಕೆಯನ್ನು ಕೊಟ್ಟಿದ್ದರು” ಎಂದರು.

“ಕೇವಲ ದಲಿತರಿಗಷ್ಟೇ ಅಲ್ಲ, ಎಲ್ಲರಿಗೂ ಸಾಮಾಜಿಕ ಅವಕಾಶಗಳನ್ನು ದೊರಕಿಸಲು ಅವರು ಶ್ರಮಿಸಿದರು. ಅವಕಾಶ ವಂಚಿತರು, ಶೋಷಣೆ, ಅನ್ಯಾಯಕ್ಕೆ, ಅವಮಾನಕ್ಕೆ, ದೌರ್ಜನ್ಯಕ್ಕೆ ಒಳಪಟ್ಟ ಎಲ್ಲಾ ಜನರ ಪರವಾಗಿ ಕೆಲಸ ಅವರು ಮಾಡಿದ್ದರು. ಸಮಾಜದಲ್ಲಿ ಸಮಾನತೆ ಬಯಸಿ ಅದನ್ನೇ ನಿರ್ಮಿಸಲು ಬಹಳ ಸ್ಪಷ್ಟವಾಗಿ ಹೇಳಿದ್ದರು. ಸಂವಿಧಾನದ ಧ್ಯೇಯೋದ್ದೇಶಗಳೂ ಅದನ್ನೇ ಹೇಳುತ್ತದೆ. ಸಂವಿಧಾನದಿಂದ ಅನುಕೂಲ ಪಡೆದವರು ಅವರ ಸೋದರ ಜನಾಂಗಗಳಿಗೆ ಸಹಾಯ ಮಾಡಬೇಕು. ಎಲ್ಲರೂ ಸಂವಿಧಾನವನ್ನು ಅರ್ಥ ಮಾಡಿಕೊಳ್ಳಬೇಕೆಂದು ಬಯಸಿದ್ದರು” ಎಂದರು.

“ಬಹಳ ಜನ ಸಂವಿಧಾನವನ್ನು ವಿರೋಧಿಸುತ್ತಾರೆ. ಭಾರತ ಬಹುಸಂಸ್ಕೃತಿಯ, ಬಹುತ್ವದ ದೇಶ. ಅನೇಕ ಜಾತಿ, ಧರ್ಮಗಳಿವೆ. ಅನೇಕ ಭಾಷೆಗಳೂ ಇವೆ; ಇದಕ್ಕೆ ಯೋಗ್ಯವಾದ ಸಂವಿಧಾನವನ್ನು ಕೊಟ್ಟವರು ಅಂಬೇಡ್ಕರ್. ಎಲ್ಲಾ ಧರ್ಮಗಳೂ, ಜಾರಿಗಳೂ ಸಮಾನವಾದುದು. ಮಾನವ ಧರ್ಮಕ್ಕೆ ಒತ್ತು ನೀಡಿದ್ದರು. ಮೂಲಭೂತವಾಗಿ ನಾವೆಲ್ಲಾ ಮನುಷ್ಯರು. ಮಾನವರು ಪರಸ್ಪರ ಪ್ರೀತಿಸಬೇಕೇ ಹೊರತು ದ್ವೇಷ ಸಲ್ಲದು. ಇದನ್ನು ಅಂಬೇಡ್ಕರ್ ಅವರು ತಮ್ಮ ಬದುಕಿನಲ್ಲಿ ಸಾರಿದ್ದರು” ಎಂದು ತಿಳಿಸಿದರು.

“ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ್ದ ನಾನು ಹಿಂದೂ ಆಗಿ ಹುಟ್ಟಿದ್ದು, ಹಿಂದೂ ಆಗಿ ಸಾಯುವುದಿಲ್ಲ ಎಂದು ತಮ್ಮ ಕಡೇ ದಿನಗಳಲ್ಲಿ ಬೌದ್ಧ ಧರ್ಮ ಸ್ವೀಕಾರ ಮಾಡಿದರು. ಸ್ವೀಕಾರ ಮಾಡಿದ ನಂತರ ಬಹಳ ದಿನಗಳ ಕಾಲ ಉಳಿಯಲಿಲ್ಲ. ಅವರು ಕೊಟ್ಟ ಸಂವಿಧಾನದ ಪ್ರಕಾರ ಮತ್ತು ಅವರ ಹೋರಾಟದ ದಾರಿಯಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡುವುದೇ ಅವರಿಗೆ ನಾವು ಸಲ್ಲಿಸುವ ಗೌರವ. ಅದೇ ರೀತಿಯಲ್ಲಿ ಸಂವಿಧಾನ, ಪ್ರಜಾಪ್ರಭುತ್ವ, ಸಮಾನತೆ ತರುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ” ಎಂದರು.

ಇದನ್ನೂ ಓದಿ; ದ್ವೇಷಪೂರಿತ ಭಾಷಣ: ಬಿಜೆಪಿ ಉಚ್ಛಾಟಿತ ನಾಯಕ ಕೆಎಸ್ ಈಶ್ವರಪ್ಪ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...