Homeಕರ್ನಾಟಕಅಂಬೇಡ್ಕರ್‌ರವರಿಗೆ ಅವಮಾನ ಪ್ರಕರಣ: ಜೈನ್ ವಿವಿಯ ಏಳು ವಿದ್ಯಾರ್ಥಿಗಳ ಬಂಧನ

ಅಂಬೇಡ್ಕರ್‌ರವರಿಗೆ ಅವಮಾನ ಪ್ರಕರಣ: ಜೈನ್ ವಿವಿಯ ಏಳು ವಿದ್ಯಾರ್ಥಿಗಳ ಬಂಧನ

- Advertisement -
- Advertisement -

ಸಂವಿಧಾನಶಿಲ್ಪಿ, ರಾಷ್ಟ್ರನಾಯಕ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಕುರಿತು ಅವಹೇಳನಕಾರಿಯಾಗಿ ಸ್ಕಿಟ್‌ ಪ್ರದರ್ಶನ ಮಾಡಿರುವ ಬೆಂಗಳೂರಿನ ಜೈನ್ ಕಾಲೇಜಿನ ಏಳು ವಿದ್ಯಾರ್ಥಿಗಳನ್ನು ಬಂಧಿಸಿರುವುದಾಗಿ ವರದಿಯಾಗಿದೆ.

ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ನೀಡಿದ ದೂರಿನ ಅನ್ವಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್‌ 3(1)(r), 3(1)(s), 3(1)(v) ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 153A, 149, 295A ಅಡಿಯಲ್ಲಿ ನಾಟಕದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳನ್ನು ಬಂಧಿಸಿರುವುದಾಗಿ ಬೆಂಗಳೂರಿನ ಸಿದ್ದಾಪುರ ಪೊಲೀಸರು ತಿಳಿಸಿದ್ದಾರೆ.

ಸುಜಲ್, ಗೌರವ್ ಪವಾರ್, ನೈಮಾ ನಾಗ್ರಿಯಾ, ಪ್ರಣವ್ ಪಲ್ಲಿಯಿಲ್, ರಿಷಬ್ ಜೈನ್, ಸ್ಮೃತಿ ಆರ್.ಬಿ, ಆಸಿಶ್ ಅಗರ್ವಾಲ್ ಬಂಧಿತ ವಿದ್ಯಾರ್ಥಿಗಳಾಗಿದ್ದಾರೆ. ಇವರೆಲ್ಲರೂ ಬಿಬಿಎ 5 ನೇ ಸೆಮಿಸ್ಟರ್ ನಲ್ಲಿ ಓದುತ್ತಿದ್ದಾರೆ ಎನ್ನಲಾಗಿದೆ.

ಈ ಏಳು ಜನ ಸೇರಿ ಈ ಕಿರು ನಾಟಕ ಪ್ರದರ್ಶಿಸಿದ್ದಾರೆ. ಸೋಮವಾರ ಈ ಏಳು ವಿದ್ಯಾರ್ಥಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿಲಾಗಿದೆ. ವಿಚಾರಣೆ ಬಳಿಕ ಸತ್ಯಾಂಶ ತಿಳಿಯಲಿದೆ ಎಂದು ಸಿದ್ದಾಪುರ ಪೊಲೀಸರು ಮಾಹಿತಿ ನೀಡಿದ್ದಾರೆ.

ಬೆಂಗಳೂರಿನ ಹೊಸೂರು ಮುಖ್ಯ ರಸ್ತೆಯಲ್ಲಿನ ನಿಮಾನ್ಸ್‌ ಕನ್ವೆಷನ್‌ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೈನ್‌ ಕಾಲೇಜಿನ ವಿದ್ಯಾರ್ಥಿಗಳು, “ಡಾ.ಬಿ.ಆರ್‌.ಅಂಬೇಡ್ಕರ್‌, ದಲಿತರು ಮತ್ತು ಮೀಸಲಾತಿ” ಕುರಿತು ಅವಹೇಳನಕಾರಿಯಾಗಿ ಸ್ಕಿಟ್ ಪ್ರದರ್ಶಿಸಿದ್ದರು. ಈ ಸಂಬಂಧ ವಿಡಿಯೊ ತುಣುಕು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಭಾರೀ ವಿರೋಧ ವ್ಯಕ್ತವಾಗಿದೆ. ವಿವಿಯ ವಿರುದ್ಧ ಕ್ರಮ ಜರುಗಿಸಬೇಕೆಂಬ ಆಗ್ರಹಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಕೆ.ಎನ್.ಮಧುಸೂದನ ಅವರು ಪೊಲೀಸರಿಗೆ ದೂರು ನೀಡಿದ್ದರು. ಆ ಸಂಬಂಧ ಕ್ರಮ ಜರುಗಿಸಲಾಗಿದೆ.

ದೂರಿನಲ್ಲಿ ಏನಿದೆ?

ಜೈನ್‌ ವಿಶ್ವವಿದ್ಯಾನಿಲಯದ ಕಾಲೇಜು ಫೆಸ್ಟ್‌ನಲ್ಲಿ ವಿದ್ಯಾರ್ಥಿಗಳು ಆ ದಿನ ನೀಡಿದ  ಸ್ಕಿಟ್‌ನಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ಮತ್ತು ಮೀಸಲಾತಿಯ ಕುರಿತು ಅವಹೇಳನ ಮಾಡಲಾಗಿದೆ. @sunilhc ಎಂಬ ಟ್ವಿಟರ್ ಖಾತೆಯ ಮೂಲಕ ವಿಡಿಯೊವನ್ನು ಟ್ವೀಟ್ ಮಾಡಲಾಗಿದ್ದು ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಕಮಿಷನರ್‌, ಡಿಜಿಪಿ ಮತ್ತು ಇತರೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆ.

ಸದರಿ ಟ್ವೀಟ್‌ನಲ್ಲಿ ಮಾಡಲಾದ ವಿಡಿಯೊದಲ್ಲಿ ಮೇಲ್ನೋಟಕ್ಕೆ ಆಪಾದನೆಗಳು ಸರಿಯೆಂದು ಕಂಡು ಬಂದಿದೆ. ಸಾರ್ವಜನಿಕ ಸ್ಥಳದಲ್ಲಿ, ಸ್ಕಿಟ್‌ ಮೂಲಕ ಜಾತಿ ನಿಂದನೆ ಮಾಡಿರುವುದರಿಂದ ಇದನ್ನು ನೋಡಿದಲ್ಲಿ ಸಾಮಾಜಿಕ ಸಾಮರಸ್ಯ ಹಾಳಾಗುತ್ತದೆ. ಇದರಿಂದ ಜಾತಿ ಜಾತಿಗಳ ವಿರುದ್ಧ ವಿಷಬೀಜ ಬಿತ್ತಿದಂತಾಗಿರುತ್ತದೆ. ಈ ಹಿನ್ನೆಲೆಯಲ್ಲಿ- ಕಾರ್ಯಕ್ರಮದ ಉಸ್ತುವಾರಿಗಳು ಆದ ಜೈನ್ ವಿಶ್ವವಿದ್ಯಾಲಯದ ಪ್ರಾಂಶುಪಾಲರು (A1), ಡೀನ್ (A2), ಕಾರ್ಯಕ್ರಮದ ಆಯೋಜಕರು (A3), ಸ್ಕಿಟ್‌ನಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು (A4), ಸ್ಕಿಟ್‌ ಬರೆದ ಬರಹಗಾರರು (A5), ಇತರರರು (A6) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಅವಹೇಳನ ಮಾಡಿರುವುದು ಕಂಡುಬಂದಿದೆ. ಇದರಿಂದಾಗಿ ಸದರಿ ಮೇಲೆ ಹೆಸರಿಸಲಾದ ಎಲ್ಲರ ವಿರುದ್ಧ ದೌರ್ಜನ್ಯ ತಡೆ (ಪ್ರತಿಬಂಧಕ) ಕಾಯ್ದೆ 1989ರ ನಿಯಮ 3ರ ಉಪ ನಿಯಮಗಳಡಿ ಹಾಗೂ ಐ.ಪಿ.ಸಿ ಕಾಯ್ದೆಯಡಿ ದೂರು ದಾಖಲಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ಬ್ರಾಹ್ಮಣರ ವಿರುದ್ಧ ಭಾಗವತ್ ಅವಹೇಳನ ಆರೋಪ; ವಿಎಚ್‌ಪಿ ಮುಖಂಡನ ಮೇಲೆ ಗುಂಡು ಹಾರಿಸಿದ ಬಿಜೆಪಿ ಸದಸ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ಶಾಸಕ ಹೆಚ್‌.ಡಿ ರೇವಣ್ಣ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಆರೋಪಕ್ಕೆ ಹೊಂದಿಕೊಂಡಿರುವ ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ನ್ಯಾಯಾಲಯ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ಪಡೆದಿದೆ. ಲೈಂಗಿಕ ದೌರ್ಜನ್ಯ ಪ್ರಕರಣದ...