Homeಕರ್ನಾಟಕಅಂಬೇಡ್ಕರ್‌ರವರಿಗೆ ಅವಮಾನ ಪ್ರಕರಣ: ಜೈನ್ ವಿವಿಯ ಏಳು ವಿದ್ಯಾರ್ಥಿಗಳ ಬಂಧನ

ಅಂಬೇಡ್ಕರ್‌ರವರಿಗೆ ಅವಮಾನ ಪ್ರಕರಣ: ಜೈನ್ ವಿವಿಯ ಏಳು ವಿದ್ಯಾರ್ಥಿಗಳ ಬಂಧನ

- Advertisement -
- Advertisement -

ಸಂವಿಧಾನಶಿಲ್ಪಿ, ರಾಷ್ಟ್ರನಾಯಕ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಕುರಿತು ಅವಹೇಳನಕಾರಿಯಾಗಿ ಸ್ಕಿಟ್‌ ಪ್ರದರ್ಶನ ಮಾಡಿರುವ ಬೆಂಗಳೂರಿನ ಜೈನ್ ಕಾಲೇಜಿನ ಏಳು ವಿದ್ಯಾರ್ಥಿಗಳನ್ನು ಬಂಧಿಸಿರುವುದಾಗಿ ವರದಿಯಾಗಿದೆ.

ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ನೀಡಿದ ದೂರಿನ ಅನ್ವಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್‌ 3(1)(r), 3(1)(s), 3(1)(v) ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 153A, 149, 295A ಅಡಿಯಲ್ಲಿ ನಾಟಕದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳನ್ನು ಬಂಧಿಸಿರುವುದಾಗಿ ಬೆಂಗಳೂರಿನ ಸಿದ್ದಾಪುರ ಪೊಲೀಸರು ತಿಳಿಸಿದ್ದಾರೆ.

ಸುಜಲ್, ಗೌರವ್ ಪವಾರ್, ನೈಮಾ ನಾಗ್ರಿಯಾ, ಪ್ರಣವ್ ಪಲ್ಲಿಯಿಲ್, ರಿಷಬ್ ಜೈನ್, ಸ್ಮೃತಿ ಆರ್.ಬಿ, ಆಸಿಶ್ ಅಗರ್ವಾಲ್ ಬಂಧಿತ ವಿದ್ಯಾರ್ಥಿಗಳಾಗಿದ್ದಾರೆ. ಇವರೆಲ್ಲರೂ ಬಿಬಿಎ 5 ನೇ ಸೆಮಿಸ್ಟರ್ ನಲ್ಲಿ ಓದುತ್ತಿದ್ದಾರೆ ಎನ್ನಲಾಗಿದೆ.

ಈ ಏಳು ಜನ ಸೇರಿ ಈ ಕಿರು ನಾಟಕ ಪ್ರದರ್ಶಿಸಿದ್ದಾರೆ. ಸೋಮವಾರ ಈ ಏಳು ವಿದ್ಯಾರ್ಥಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿಲಾಗಿದೆ. ವಿಚಾರಣೆ ಬಳಿಕ ಸತ್ಯಾಂಶ ತಿಳಿಯಲಿದೆ ಎಂದು ಸಿದ್ದಾಪುರ ಪೊಲೀಸರು ಮಾಹಿತಿ ನೀಡಿದ್ದಾರೆ.

ಬೆಂಗಳೂರಿನ ಹೊಸೂರು ಮುಖ್ಯ ರಸ್ತೆಯಲ್ಲಿನ ನಿಮಾನ್ಸ್‌ ಕನ್ವೆಷನ್‌ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೈನ್‌ ಕಾಲೇಜಿನ ವಿದ್ಯಾರ್ಥಿಗಳು, “ಡಾ.ಬಿ.ಆರ್‌.ಅಂಬೇಡ್ಕರ್‌, ದಲಿತರು ಮತ್ತು ಮೀಸಲಾತಿ” ಕುರಿತು ಅವಹೇಳನಕಾರಿಯಾಗಿ ಸ್ಕಿಟ್ ಪ್ರದರ್ಶಿಸಿದ್ದರು. ಈ ಸಂಬಂಧ ವಿಡಿಯೊ ತುಣುಕು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಭಾರೀ ವಿರೋಧ ವ್ಯಕ್ತವಾಗಿದೆ. ವಿವಿಯ ವಿರುದ್ಧ ಕ್ರಮ ಜರುಗಿಸಬೇಕೆಂಬ ಆಗ್ರಹಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಕೆ.ಎನ್.ಮಧುಸೂದನ ಅವರು ಪೊಲೀಸರಿಗೆ ದೂರು ನೀಡಿದ್ದರು. ಆ ಸಂಬಂಧ ಕ್ರಮ ಜರುಗಿಸಲಾಗಿದೆ.

ದೂರಿನಲ್ಲಿ ಏನಿದೆ?

ಜೈನ್‌ ವಿಶ್ವವಿದ್ಯಾನಿಲಯದ ಕಾಲೇಜು ಫೆಸ್ಟ್‌ನಲ್ಲಿ ವಿದ್ಯಾರ್ಥಿಗಳು ಆ ದಿನ ನೀಡಿದ  ಸ್ಕಿಟ್‌ನಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ಮತ್ತು ಮೀಸಲಾತಿಯ ಕುರಿತು ಅವಹೇಳನ ಮಾಡಲಾಗಿದೆ. @sunilhc ಎಂಬ ಟ್ವಿಟರ್ ಖಾತೆಯ ಮೂಲಕ ವಿಡಿಯೊವನ್ನು ಟ್ವೀಟ್ ಮಾಡಲಾಗಿದ್ದು ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಕಮಿಷನರ್‌, ಡಿಜಿಪಿ ಮತ್ತು ಇತರೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆ.

ಸದರಿ ಟ್ವೀಟ್‌ನಲ್ಲಿ ಮಾಡಲಾದ ವಿಡಿಯೊದಲ್ಲಿ ಮೇಲ್ನೋಟಕ್ಕೆ ಆಪಾದನೆಗಳು ಸರಿಯೆಂದು ಕಂಡು ಬಂದಿದೆ. ಸಾರ್ವಜನಿಕ ಸ್ಥಳದಲ್ಲಿ, ಸ್ಕಿಟ್‌ ಮೂಲಕ ಜಾತಿ ನಿಂದನೆ ಮಾಡಿರುವುದರಿಂದ ಇದನ್ನು ನೋಡಿದಲ್ಲಿ ಸಾಮಾಜಿಕ ಸಾಮರಸ್ಯ ಹಾಳಾಗುತ್ತದೆ. ಇದರಿಂದ ಜಾತಿ ಜಾತಿಗಳ ವಿರುದ್ಧ ವಿಷಬೀಜ ಬಿತ್ತಿದಂತಾಗಿರುತ್ತದೆ. ಈ ಹಿನ್ನೆಲೆಯಲ್ಲಿ- ಕಾರ್ಯಕ್ರಮದ ಉಸ್ತುವಾರಿಗಳು ಆದ ಜೈನ್ ವಿಶ್ವವಿದ್ಯಾಲಯದ ಪ್ರಾಂಶುಪಾಲರು (A1), ಡೀನ್ (A2), ಕಾರ್ಯಕ್ರಮದ ಆಯೋಜಕರು (A3), ಸ್ಕಿಟ್‌ನಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು (A4), ಸ್ಕಿಟ್‌ ಬರೆದ ಬರಹಗಾರರು (A5), ಇತರರರು (A6) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಅವಹೇಳನ ಮಾಡಿರುವುದು ಕಂಡುಬಂದಿದೆ. ಇದರಿಂದಾಗಿ ಸದರಿ ಮೇಲೆ ಹೆಸರಿಸಲಾದ ಎಲ್ಲರ ವಿರುದ್ಧ ದೌರ್ಜನ್ಯ ತಡೆ (ಪ್ರತಿಬಂಧಕ) ಕಾಯ್ದೆ 1989ರ ನಿಯಮ 3ರ ಉಪ ನಿಯಮಗಳಡಿ ಹಾಗೂ ಐ.ಪಿ.ಸಿ ಕಾಯ್ದೆಯಡಿ ದೂರು ದಾಖಲಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ಬ್ರಾಹ್ಮಣರ ವಿರುದ್ಧ ಭಾಗವತ್ ಅವಹೇಳನ ಆರೋಪ; ವಿಎಚ್‌ಪಿ ಮುಖಂಡನ ಮೇಲೆ ಗುಂಡು ಹಾರಿಸಿದ ಬಿಜೆಪಿ ಸದಸ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...