Homeಕರ್ನಾಟಕಅಂಬೇಡ್ಕರ್ ಮನುಸ್ಮೃತಿ ಸುಟ್ಟು ದೇಶಕ್ಕೆ ಸಂವಿಧಾನ ಕೊಟ್ಟರು - ಮುಖ್ಯಮಂತ್ರಿ ಸಿದ್ದರಾಮಯ್ಯ

ಅಂಬೇಡ್ಕರ್ ಮನುಸ್ಮೃತಿ ಸುಟ್ಟು ದೇಶಕ್ಕೆ ಸಂವಿಧಾನ ಕೊಟ್ಟರು – ಮುಖ್ಯಮಂತ್ರಿ ಸಿದ್ದರಾಮಯ್ಯ

- Advertisement -
- Advertisement -

ಬಹುಸಂಖ್ಯಾತ ಸಮುದಾಯಗಳ ಅವಕಾಶಗಳನ್ನು ಕಿತ್ತುಕೊಳ್ಳುವ ಉದ್ದೇಶದಿಂದಲೇ ಸಂವಿಧಾನ ಬದಲಾಯಿಸಿ ಮನುಸ್ಮೃತಿ ತರುವ ಹುನ್ನಾರ ನಡೆಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ. ಬಸವಣ್ಣ ಮತ್ತು ಅಂಬೇಡ್ಕರ್ ಅವರ ಉದ್ದೇಶ-ಗುರಿ-ಮೌಲ್ಯಗಳು ಒಂದೇ ಆಗಿದ್ದು, ಅಂಬೇಡ್ಕರ್ ಅವರು ಮನುಸ್ಮೃತಿ ಸುಟ್ಟು ದೇಶಕ್ಕೆ ಸಂವಿಧಾನ ಕೊಟ್ಟರು ಎಂದು ಅವರು ಹೇಳಿದ್ದಾರೆ. ಅಂಬೇಡ್ಕರ್ ಮನುಸ್ಮೃತಿ

ಮೈಸೂರಿನಲ್ಲಿ ನಡೆದ ಆದಿ ಕರ್ನಾಟಕ, ಛಲವಾದಿ ಮಹಾಸಂಸ್ಥಾನ ಗುರುಪೀಠದ ಡಾ. ಬಿ.ಆರ್.ಅಂಬೇಡ್ಕರ್ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಅಂಬೇಡ್ಕರ್ ಅವರು ಸಂವಿಧಾನ ಕೊಡದಿದ್ದರೆ, ಇನ್ನೂ ಮನುಷ್ಯ ವಿರೋಧಿ ಮನುಸ್ಮೃತಿ ಆಡಳಿತವೇ ಇಲ್ಲಿ ಇರುತ್ತಿತ್ತು. ಅದಕ್ಕೇ ಅಂಬೇಡ್ಕರ್ ಅವರು ಮನುಸ್ಮೃತಿ ಸುಟ್ಟು ದೇಶಕ್ಕೆ ಸಂವಿಧಾನ ಕೊಟ್ಟರು ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಸವಣ್ಣ ಮತ್ತು ಅಂಬೇಡ್ಕರ್ ಅವರ ವಿಚಾರ ಮತ್ತು ಮೌಲ್ಯಗಳು ಒಂದೇ ಆಗಿವೆ. ವಿಚಾರಗಳಲ್ಲಿ ಸ್ವಲ್ಪ ವ್ಯತ್ಯಾಸಗಳಿದ್ದರೂ ಮೌಲ್ಯಗಳು ಮತ್ತು ಆಶಯಗಳೆಲ್ಲಾ ಒಂದೇ ಆಗಿವೆ. ಅಂಬೇಡ್ಕರ್ ಅವರು ಓದಿದ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮಾದರಿಯಲ್ಲಿ ರಾಜ್ಯದಲ್ಲಿ ನಾವು ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಮಿಕ್ಸ್ ಆರಂಭಿಸಿದ್ದೇವೆ ಎಂದು ಸಿಎಂ ಹೇಳಿದ್ದಾರೆ.

“ಅಂಬೇಡ್ಕರ್ ಅವರು ಒಂದು ಮಾತು ಹೇಳಿದ್ದರು. ನಾವು ಎಳೆದ ಸಾಮಾಜಿಕ ನ್ಯಾಯದ ರಥವನ್ನು ಮತ್ತಷ್ಟು ಮುಂದಕ್ಕೆ ಎಳೆದುಕೊಂಡು ಹೋಗಿ, ಸಾಧ್ಯವಾಗದಿದ್ದರೆ ಹಿಂದಕ್ಕೆ ಮಾತ್ರ ತಳ್ಳಬೇಡಿ. ಅಲ್ಲೇ ಬಿಟ್ಟುಬಿಡಿ ಆದರೆ ಹಿಂದಕ್ಕೆ ತಳ್ಳಬೇಡಿ ಎಂದಿದ್ದರು. ಹೀಗಾಗಿ ಮೌಡ್ಯ, ಕಂದಾಚಾರಗಳಲ್ಲಿ ಮುಳುಗಿ ಅಂಬೇಡ್ಕರ್ , ಬಸವಣ್ಣ ವಿಚಾರಗಳಿಗೆ ದ್ರೋಹ ಎಸಗಬಾರದು” ಎಂದು ಅವರು ತಿಳಿಸಿದ್ದಾರೆ.

“ವ್ಯಾಸ ಮಹಾಭಾರತ ಬರೆದರು. ವಾಲ್ಮೀಕಿ ರಾಮಾಯಣ ಬರೆದರು. ಅವಕಾಶಗಳು ಮುಖ್ಯ. ಜ್ಞಾನ ಪ್ರತಿಯೊಬ್ಬರ ಸ್ವತ್ತು. ಅವಕಾಶಗಳು ಸಿಕ್ಕಾಗ ಜ್ಞಾನ ಹೊರಗೆ ಬರುತ್ತದೆ. ಆದ್ದರಿಂದ ನಮ್ಮ ಅವಕಾಶಗಳನ್ನು ಕಿತ್ತುಕೊಳ್ಳುವ ಉದ್ದೇಶದಿಂದಲೇ ಪಟ್ಟಭದ್ರ ಹಿತಾಸಕ್ತಿಗಳು ಸಂವಿಧಾನವನ್ನೇ ಬದಲಾಯಿಸಲು ಹೊರಟಿದ್ದಾರೆ” ಎಂದು ಅವರು ವಿವರಿಸಿದ್ದಾರೆ.

ಪ್ರೊಫೆಸರ್ ಹುದ್ದೆ ತೊರೆದು ದೀಕ್ಷೆ ಪಡೆದಿರುವ ಆದಿ ಕರ್ನಾಟಕ ಮಹಾಸಂಸ್ಥಾನ ಗುರುಪೀಠದ ಪ್ರೊ.ಜ್ಞಾನ ಸ್ವರೂಪಾನಂದ ಸ್ವಾಮೀಜಿ ಅವರು ಸಮಾಜಕ್ಕೆ ನಿಜವಾದ ಗುರುವಾಗಲಿ. ಸಮಾಜವನ್ನು ಮಾನವೀಯತೆಯ ಹಾದಿಯಲ್ಲಿ ಮುನ್ನಡೆಸಲಿ ಎಂದು ಸಿಎಂ ಹಾರೈಸಿದ್ದಾರೆ.

ನಾನು ಸಿಎಂ ಆಗಲು, ಮಹದೇವಪ್ಪ ಮಂತ್ರಿ ಆಗಲು ಈ ಸಂವಿಧಾನವೇ ಕಾರಣ. ಈಗಲೂ ಮನುಸ್ಮೃತಿ ಪರವಾಗಿರುವ ಮನಸ್ಸುಗಳು ಸಂಚು ನಡೆಸುತ್ತಲೇ ಇವೆ. ಈ ಸಂಚನ್ನು ಸೋಲಿಸೋಣ. ಸಂವಿಧಾನದ ಮೌಲ್ಯಗಳ ಬಗ್ಗೆ ಗೌರವ ಇಲ್ಲದವರ ಕೈಯಲ್ಲಿ, ದುಷ್ಟರ ಕೈಲಿ ಸಂವಿಧಾನ ಉಳಿಯುವುದಿಲ್ಲ. ಆದ್ದರಿಂದ ನಾವು ದುಷ್ಟರ ಹುನ್ನಾರಗಳಿಂದ ಸಂವಿಧಾನ ಉಳಿವಿಗೆ ಬಹಳ ಬದ್ಧತೆಯಿಂದ ಎದ್ದು ನಿಲ್ಲಬೇಕು ಎಂದು ಸಿಎಂ ಕರೆ ನೀಡಿದ್ದಾರೆ.

ಇದನ್ನೂಓದಿ:  ರಾಜ್ಯದಲ್ಲಿ ಎರಡು ದಶಕದ ನಕ್ಸಲ್-ಪೊಲೀಸ್ ಮುಖಾಮುಖಿಯಲ್ಲಿ 38 ಮಂದಿಯ ಹತ್ಯೆ

ರಾಜ್ಯದಲ್ಲಿ ಎರಡು ದಶಕದ ನಕ್ಸಲ್-ಪೊಲೀಸ್ ಮುಖಾಮುಖಿಯಲ್ಲಿ 38 ಮಂದಿಯ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...