Homeಕರ್ನಾಟಕಅಂಬೇಡ್ಕರ್ ಮನುಸ್ಮೃತಿ ಸುಟ್ಟು ದೇಶಕ್ಕೆ ಸಂವಿಧಾನ ಕೊಟ್ಟರು - ಮುಖ್ಯಮಂತ್ರಿ ಸಿದ್ದರಾಮಯ್ಯ

ಅಂಬೇಡ್ಕರ್ ಮನುಸ್ಮೃತಿ ಸುಟ್ಟು ದೇಶಕ್ಕೆ ಸಂವಿಧಾನ ಕೊಟ್ಟರು – ಮುಖ್ಯಮಂತ್ರಿ ಸಿದ್ದರಾಮಯ್ಯ

- Advertisement -
- Advertisement -

ಬಹುಸಂಖ್ಯಾತ ಸಮುದಾಯಗಳ ಅವಕಾಶಗಳನ್ನು ಕಿತ್ತುಕೊಳ್ಳುವ ಉದ್ದೇಶದಿಂದಲೇ ಸಂವಿಧಾನ ಬದಲಾಯಿಸಿ ಮನುಸ್ಮೃತಿ ತರುವ ಹುನ್ನಾರ ನಡೆಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ. ಬಸವಣ್ಣ ಮತ್ತು ಅಂಬೇಡ್ಕರ್ ಅವರ ಉದ್ದೇಶ-ಗುರಿ-ಮೌಲ್ಯಗಳು ಒಂದೇ ಆಗಿದ್ದು, ಅಂಬೇಡ್ಕರ್ ಅವರು ಮನುಸ್ಮೃತಿ ಸುಟ್ಟು ದೇಶಕ್ಕೆ ಸಂವಿಧಾನ ಕೊಟ್ಟರು ಎಂದು ಅವರು ಹೇಳಿದ್ದಾರೆ. ಅಂಬೇಡ್ಕರ್ ಮನುಸ್ಮೃತಿ

ಮೈಸೂರಿನಲ್ಲಿ ನಡೆದ ಆದಿ ಕರ್ನಾಟಕ, ಛಲವಾದಿ ಮಹಾಸಂಸ್ಥಾನ ಗುರುಪೀಠದ ಡಾ. ಬಿ.ಆರ್.ಅಂಬೇಡ್ಕರ್ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಅಂಬೇಡ್ಕರ್ ಅವರು ಸಂವಿಧಾನ ಕೊಡದಿದ್ದರೆ, ಇನ್ನೂ ಮನುಷ್ಯ ವಿರೋಧಿ ಮನುಸ್ಮೃತಿ ಆಡಳಿತವೇ ಇಲ್ಲಿ ಇರುತ್ತಿತ್ತು. ಅದಕ್ಕೇ ಅಂಬೇಡ್ಕರ್ ಅವರು ಮನುಸ್ಮೃತಿ ಸುಟ್ಟು ದೇಶಕ್ಕೆ ಸಂವಿಧಾನ ಕೊಟ್ಟರು ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಸವಣ್ಣ ಮತ್ತು ಅಂಬೇಡ್ಕರ್ ಅವರ ವಿಚಾರ ಮತ್ತು ಮೌಲ್ಯಗಳು ಒಂದೇ ಆಗಿವೆ. ವಿಚಾರಗಳಲ್ಲಿ ಸ್ವಲ್ಪ ವ್ಯತ್ಯಾಸಗಳಿದ್ದರೂ ಮೌಲ್ಯಗಳು ಮತ್ತು ಆಶಯಗಳೆಲ್ಲಾ ಒಂದೇ ಆಗಿವೆ. ಅಂಬೇಡ್ಕರ್ ಅವರು ಓದಿದ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮಾದರಿಯಲ್ಲಿ ರಾಜ್ಯದಲ್ಲಿ ನಾವು ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಮಿಕ್ಸ್ ಆರಂಭಿಸಿದ್ದೇವೆ ಎಂದು ಸಿಎಂ ಹೇಳಿದ್ದಾರೆ.

“ಅಂಬೇಡ್ಕರ್ ಅವರು ಒಂದು ಮಾತು ಹೇಳಿದ್ದರು. ನಾವು ಎಳೆದ ಸಾಮಾಜಿಕ ನ್ಯಾಯದ ರಥವನ್ನು ಮತ್ತಷ್ಟು ಮುಂದಕ್ಕೆ ಎಳೆದುಕೊಂಡು ಹೋಗಿ, ಸಾಧ್ಯವಾಗದಿದ್ದರೆ ಹಿಂದಕ್ಕೆ ಮಾತ್ರ ತಳ್ಳಬೇಡಿ. ಅಲ್ಲೇ ಬಿಟ್ಟುಬಿಡಿ ಆದರೆ ಹಿಂದಕ್ಕೆ ತಳ್ಳಬೇಡಿ ಎಂದಿದ್ದರು. ಹೀಗಾಗಿ ಮೌಡ್ಯ, ಕಂದಾಚಾರಗಳಲ್ಲಿ ಮುಳುಗಿ ಅಂಬೇಡ್ಕರ್ , ಬಸವಣ್ಣ ವಿಚಾರಗಳಿಗೆ ದ್ರೋಹ ಎಸಗಬಾರದು” ಎಂದು ಅವರು ತಿಳಿಸಿದ್ದಾರೆ.

“ವ್ಯಾಸ ಮಹಾಭಾರತ ಬರೆದರು. ವಾಲ್ಮೀಕಿ ರಾಮಾಯಣ ಬರೆದರು. ಅವಕಾಶಗಳು ಮುಖ್ಯ. ಜ್ಞಾನ ಪ್ರತಿಯೊಬ್ಬರ ಸ್ವತ್ತು. ಅವಕಾಶಗಳು ಸಿಕ್ಕಾಗ ಜ್ಞಾನ ಹೊರಗೆ ಬರುತ್ತದೆ. ಆದ್ದರಿಂದ ನಮ್ಮ ಅವಕಾಶಗಳನ್ನು ಕಿತ್ತುಕೊಳ್ಳುವ ಉದ್ದೇಶದಿಂದಲೇ ಪಟ್ಟಭದ್ರ ಹಿತಾಸಕ್ತಿಗಳು ಸಂವಿಧಾನವನ್ನೇ ಬದಲಾಯಿಸಲು ಹೊರಟಿದ್ದಾರೆ” ಎಂದು ಅವರು ವಿವರಿಸಿದ್ದಾರೆ.

ಪ್ರೊಫೆಸರ್ ಹುದ್ದೆ ತೊರೆದು ದೀಕ್ಷೆ ಪಡೆದಿರುವ ಆದಿ ಕರ್ನಾಟಕ ಮಹಾಸಂಸ್ಥಾನ ಗುರುಪೀಠದ ಪ್ರೊ.ಜ್ಞಾನ ಸ್ವರೂಪಾನಂದ ಸ್ವಾಮೀಜಿ ಅವರು ಸಮಾಜಕ್ಕೆ ನಿಜವಾದ ಗುರುವಾಗಲಿ. ಸಮಾಜವನ್ನು ಮಾನವೀಯತೆಯ ಹಾದಿಯಲ್ಲಿ ಮುನ್ನಡೆಸಲಿ ಎಂದು ಸಿಎಂ ಹಾರೈಸಿದ್ದಾರೆ.

ನಾನು ಸಿಎಂ ಆಗಲು, ಮಹದೇವಪ್ಪ ಮಂತ್ರಿ ಆಗಲು ಈ ಸಂವಿಧಾನವೇ ಕಾರಣ. ಈಗಲೂ ಮನುಸ್ಮೃತಿ ಪರವಾಗಿರುವ ಮನಸ್ಸುಗಳು ಸಂಚು ನಡೆಸುತ್ತಲೇ ಇವೆ. ಈ ಸಂಚನ್ನು ಸೋಲಿಸೋಣ. ಸಂವಿಧಾನದ ಮೌಲ್ಯಗಳ ಬಗ್ಗೆ ಗೌರವ ಇಲ್ಲದವರ ಕೈಯಲ್ಲಿ, ದುಷ್ಟರ ಕೈಲಿ ಸಂವಿಧಾನ ಉಳಿಯುವುದಿಲ್ಲ. ಆದ್ದರಿಂದ ನಾವು ದುಷ್ಟರ ಹುನ್ನಾರಗಳಿಂದ ಸಂವಿಧಾನ ಉಳಿವಿಗೆ ಬಹಳ ಬದ್ಧತೆಯಿಂದ ಎದ್ದು ನಿಲ್ಲಬೇಕು ಎಂದು ಸಿಎಂ ಕರೆ ನೀಡಿದ್ದಾರೆ.

ಇದನ್ನೂಓದಿ:  ರಾಜ್ಯದಲ್ಲಿ ಎರಡು ದಶಕದ ನಕ್ಸಲ್-ಪೊಲೀಸ್ ಮುಖಾಮುಖಿಯಲ್ಲಿ 38 ಮಂದಿಯ ಹತ್ಯೆ

ರಾಜ್ಯದಲ್ಲಿ ಎರಡು ದಶಕದ ನಕ್ಸಲ್-ಪೊಲೀಸ್ ಮುಖಾಮುಖಿಯಲ್ಲಿ 38 ಮಂದಿಯ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...