Homeಮುಖಪುಟಅಂಬೇಡ್ಕರ್ ನಗರ: ನಿವೃತ್ತ ಮುಸ್ಲಿಂ ಶಿಕ್ಷಕರ 3 ಅಂತಸ್ತಿನ ಮನೆ ನೆಲಸಮ - ಒಂದು...

ಅಂಬೇಡ್ಕರ್ ನಗರ: ನಿವೃತ್ತ ಮುಸ್ಲಿಂ ಶಿಕ್ಷಕರ 3 ಅಂತಸ್ತಿನ ಮನೆ ನೆಲಸಮ – ಒಂದು ಕುಟುಂಬದ ನೋವಿನ ಕಥೆ

- Advertisement -
- Advertisement -

ನವದೆಹಲಿ: ಉತ್ತರಪ್ರದೇಶದ ಅಂಬೇಡ್ಕರ್ ನಗರ ಜಿಲ್ಲೆಯ ಜಲಾಲ್‌ಪುರದಲ್ಲಿ ಗುರುವಾರ, 55 ವರ್ಷದ ನಿವೃತ್ತ ಶಿಕ್ಷಕ ನಬಿ ಅಹ್ಮದ್ ಅವರ ಮೂರು ಅಂತಸ್ತಿನ ಕನಸಿನ ಮನೆ ಒಂದು ಗಂಟೆಗೂ ಕಡಿಮೆ ಅವಧಿಯಲ್ಲಿ ನೆಲಸಮಗೊಳಿಸಲಾಯಿತು. ಬಸ್ಖಾರಿ ರಸ್ತೆಯಲ್ಲಿ ನಡೆದ ಈ ಘಟನೆ, ಜೀವನದುದ್ದಕ್ಕೂ ಕಟ್ಟಿಕೊಂಡ ಕನಸುಗಳು ಮತ್ತು ದುಡಿದ ಹಣದಿಂದ ನಿರ್ಮಿಸಿದ ಮನೆಯು ಕಣ್ಮುಂದೆಯೇ ಕೆಡವಲ್ಪಟ್ಟಿತ್ತು. “ಅಕ್ರಮ ಒತ್ತುವರಿ” ನೆಪದಲ್ಲಿ ಮುಸ್ಲಿಮರ ಮನೆಗಳನ್ನು ಗುರಿಯಾಗಿಸಿಕೊಂಡು ಉತ್ತರಪ್ರದೇಶದಲ್ಲಿ ನಡೆಯುತ್ತಿರುವ ನಿರಂತರ ಅಭಿಯಾನಕ್ಕೆ ಮತ್ತೊಂದು ಉದಾಹರಣೆಯಾಗಿದೆ.

ಲೋಕೋಪಯೋಗಿ ಇಲಾಖೆಯು (PWD) ಈ ನೆಲಸಮ ಕಾರ್ಯವನ್ನು ಹೈಕೋರ್ಟ್ ಆದೇಶದಂತೆ ನಡೆಸಲಾಗಿದೆ ಎಂದು ಹೇಳಿದೆ. ಸರ್ಕಾರಿ ಭೂಮಿ ಎಂದು ಘೋಷಿಸಿದ ನಂತರವೇ ಈ ಮನೆಗೆ ಬುಲ್ಡೋಜರ್ ಹತ್ತಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ತಿಳಿಸಿದೆ. ಜಲಾಲ್‌ಪುರ್ ಕೊತ್ವಾಲ್ ಸಂತೋಷ್ ಕುಮಾರ್ ಸಿಂಗ್ ಸಹ, “ಈ ಕಟ್ಟಡವು ಸರ್ಕಾರಿ ಭೂಮಿಯಲ್ಲಿದ್ದು, ಕಾನೂನುಬದ್ಧ ಅನುಮೋದನೆ ಇರಲಿಲ್ಲ. ನಾವು ಅಹ್ಮದ್‌ಗೆ ಪೂರ್ವ ಸೂಚನೆ ಸೇರಿದಂತೆ ಎಲ್ಲಾ ಕಾರ್ಯವಿಧಾನಗಳನ್ನು ಅನುಸರಿಸಿದ್ದೇವೆ,” ಎಂದು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

“ನನ್ನ ಇಡೀ ಜೀವನವನ್ನು ಈ ಮನೆಯನ್ನು ಕಟ್ಟಲು ಕಳೆದಿದ್ದೇನೆ. ಈಗ ನನ್ನ ಬ್ಯಾಗ್‌ನಲ್ಲಿರುವ ಬಟ್ಟೆಗಳನ್ನು ಹೊರತುಪಡಿಸಿ ನನಗೇನೂ ಇಲ್ಲ. ಇಲ್ಲಿ ಯಾವುದೇ ಹಿಂದೂ ಮನೆಗಳನ್ನು ಮುಟ್ಟಿಲ್ಲ; ನಮ್ಮನ್ನು ಮಾತ್ರ ಗುರಿಪಡಿಸಲಾಗುತ್ತಿದೆ,” ಎಂದು ನಬಿ ಅಹ್ಮದ್ ಅವರ ದನಿ ನೋವಿನಿಂದ ನಡುಗಿತು. ಇದು ಕೇವಲ ನಬಿ ಅಹ್ಮದ್ ಅವರೊಬ್ಬರ ಆರ್ತನಾದವಾಗಿರಲಿಲ್ಲ. ಸ್ಥಳೀಯ ಅಂಗಡಿ ಮಾಲೀಕ ಫೈಜಾನ್ ಅಲಿ ಇದೇ ಆತಂಕವನ್ನು ಪ್ರತಿಧ್ವನಿಸುತ್ತಾ, “ಈ ಪ್ರದೇಶದಲ್ಲಿ 50ಕ್ಕೂ ಹೆಚ್ಚು ಮನೆಗಳು ಸರ್ಕಾರಿ ಜಾಗದಲ್ಲಿಯೇ ಇವೆ, ಆದರೆ ಮುಸ್ಲಿಮರ ಮನೆಗಳನ್ನು ಮಾತ್ರ ಏಕೆ ಕೆಡವಲಾಗುತ್ತಿದೆ?” ಎಂದು ಪ್ರಶ್ನಿಸಿದರು. ಲೋಕೋಪಯೋಗಿ ಇಲಾಖೆ (PWD) 53 ಇತರ ಕುಟುಂಬಗಳಿಗೆ ನೋಟಿಸ್ ನೀಡಿದ್ದು, ಈ ಪಟ್ಟಿಯಲ್ಲಿ ಹೆಚ್ಚಿನ ಸಂಖ್ಯೆಯ ಮುಸ್ಲಿಂ ಕುಟುಂಬಗಳಿವೆ ಎಂದು ಅವರು ದೂರುತ್ತಾರೆ.

ಈ ಕ್ರಮಗಳ ಕುರಿತು ಲಕ್ನೋ ಮೂಲದ ಮಾನವ ಹಕ್ಕುಗಳ ವಕೀಲ ಅಡ್ವೊಕೇಟ್ ಫಿರೋಜ್ ಖಾನ್, “ನ್ಯಾಯಾಲಯಗಳು ಆದೇಶಗಳನ್ನು ನೀಡಬಹುದು, ಆದರೆ ಆಡಳಿತದ ಕೆಲಸ ನ್ಯಾಯಯುತವಾಗಿ ವರ್ತಿಸುವುದು. ಮುಸ್ಲಿಂ ಮನೆಗಳನ್ನು ಮಾತ್ರ ಗುರಿಪಡಿಸುವುದು ಏನನ್ನು ಸೂಚಿಸುತ್ತದೆ,” ಎಂದು ನೇರವಾಗಿ ಪ್ರಶ್ನಿಸುತ್ತಾರೆ.

ಬುಲ್ಡೋಜರ್ ಕ್ರಮಗಳನ್ನು ಹಲವರು ಮುಸ್ಲಿಂ ಸಮುದಾಯದ ಮೇಲಿನ ನೇರ ಆಕ್ರಮಣ ಎಂದು ಪರಿಗಣಿಸಿದ್ದಾರೆ. ನಬಿ ಅಹ್ಮದ್ ಅವರ ಪುತ್ರ ಇಮ್ರಾನ್ ಅವರ ನೋವಿನ ನುಡಿಗಳು ಇದಕ್ಕೆ ಸಾಕ್ಷಿಯಾಗಿವೆ: “ನನ್ನ ಮಗಳ ಮದುವೆ ಮುಂದಿನ ತಿಂಗಳು ಇದೆ. ಅವಳ ವರದಕ್ಷಿಣೆ ವಸ್ತುಗಳು ಮನೆಯಲ್ಲಿದ್ದವು – ಈಗ ಎಲ್ಲವೂ ನಾಶವಾಗಿವೆ. ನಮ್ಮ ವಸ್ತುಗಳನ್ನು ತೆಗೆದುಹಾಕಲು ಸಹ ಅವರು ನಮಗೆ ಅವಕಾಶ ನೀಡಲಿಲ್ಲ.ಸರ್ಕಾರ ನಮಗೆ ಏನು ಸಂದೇಶ ಕಳುಹಿಸುತ್ತಿದೆ? ನಾವು ನಮ್ಮ ಸ್ವಂತ ದೇಶಕ್ಕೆ ಸೇರಿಲ್ಲವೇ? ಎಂದು ಕೇಳುತ್ತಾರೆ.

ನಾಗರಿಕ ಸಮಾಜ ಗುಂಪುಗಳು ಮತ್ತು ಅಖಿಲ ಭಾರತ ಮುಸ್ಲಿಂ ಮಜ್ಲಿಸ್-ಎ-ಮುಶಾವರತ್‌ನಂತಹ ಸಂಘಟನೆಗಳು ಈ ಬುಲ್ಡೋಜರ್ ಕ್ರಮಗಳನ್ನು “ನ್ಯಾಯಯುತ ವಿಚಾರಣೆಗಳಿಲ್ಲದ ಸಾಮೂಹಿಕ ಶಿಕ್ಷೆ” ಎಂದು ಬಲವಾಗಿ ಖಂಡಿಸಿವೆ.

ಅಂಬೇಡ್ಕರ್ ನಗರದ ಮುಸ್ಲಿಂ ನಿವಾಸಿಗಳು ನಿರಂತರ ಭಯದಲ್ಲಿ ದಿನ ದೂಡುತ್ತಿದ್ದಾರೆ. ನಿವಾಸಿ ಶಂಶಾದ್ ಆಲಮ್ ಅವರ ಮಾತುಗಳಲ್ಲಿ ಈ ಆತಂಕ ಸ್ಪಷ್ಟವಾಗಿದೆ: “ನಮ್ಮ ಮಕ್ಕಳು ಕೂಡ ಈಗ ಬುಲ್ಡೋಜರ್‌ಗಳಿಗೆ ಹೆದರುತ್ತಾರೆ. ಅವರು ಇದನ್ನು ಮುಸ್ಲಿಮರನ್ನು ನಾಶಮಾಡಲು ತಯಾರಿಸಿದ ಯಂತ್ರ ಎಂದು ಭಾವಿಸುತ್ತಾರೆ’’ ಎಂದಿದ್ದಾರೆ.

ನಬಿ ಅಹ್ಮದ್ ಮತ್ತು ಅವರಂತೆಯೇ ಅನ್ಯಾಯಕ್ಕೊಳಗಾದವರು ಈಗ ನ್ಯಾಯಾಲಯದ ಮೊರೆ ಹೋಗಲು ಸಿದ್ಧರಾಗಿದ್ದಾರೆ. ಪರಿಹಾರ ಮತ್ತು ಮುಂದಿನ ನೆಲಸಮಗಳಿಗೆ ತಡೆಯಾಜ್ಞೆ ಕೋರಿ ಅವರು ಕಾನೂನು ಹೋರಾಟ ನಡೆಸಲಿದ್ದಾರೆ. ನಮ್ಮ ಸಂವಿಧಾನವು ನಮಗೆ ಆಶ್ರಯ, ಕೇಳುವ ಮತ್ತು ಘನತೆಯ ಹಕ್ಕನ್ನು ನೀಡುತ್ತದೆ. ನಮಗೆ ಇವೆಲ್ಲವನ್ನೂ ಏಕೆ ನಿರಾಕರಿಸಲಾಗುತ್ತಿದೆ?” ಎಂದು ಅಡ್ವೊಕೇಟ್ ಶಕೀಲ್ ಅಹ್ಮದ್ ಅವರ ನೋವಿನ ಪ್ರಶ್ನೆಯಾಗಿದೆ.

ಏರ್ ಇಂಡಿಯಾ ಅಪಘಾತದ ಕುರಿತು ವರದಿ: ವಾಲ್‌ ಸ್ಟ್ರೀಟ್ ಜರ್ನಲ್‌, ರಾಯಿಟರ್ಸ್‌ಗೆ ಲೀಗಲ್ ನೋಟಿಸ್ ನೀಡಿದ ಪೈಲಟ್‌ಗಳ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...