Homeಮುಖಪುಟಅಂಬೇಡ್ಕರ್ ನಗರ: ನಿವೃತ್ತ ಮುಸ್ಲಿಂ ಶಿಕ್ಷಕರ 3 ಅಂತಸ್ತಿನ ಮನೆ ನೆಲಸಮ - ಒಂದು...

ಅಂಬೇಡ್ಕರ್ ನಗರ: ನಿವೃತ್ತ ಮುಸ್ಲಿಂ ಶಿಕ್ಷಕರ 3 ಅಂತಸ್ತಿನ ಮನೆ ನೆಲಸಮ – ಒಂದು ಕುಟುಂಬದ ನೋವಿನ ಕಥೆ

- Advertisement -
- Advertisement -

ನವದೆಹಲಿ: ಉತ್ತರಪ್ರದೇಶದ ಅಂಬೇಡ್ಕರ್ ನಗರ ಜಿಲ್ಲೆಯ ಜಲಾಲ್‌ಪುರದಲ್ಲಿ ಗುರುವಾರ, 55 ವರ್ಷದ ನಿವೃತ್ತ ಶಿಕ್ಷಕ ನಬಿ ಅಹ್ಮದ್ ಅವರ ಮೂರು ಅಂತಸ್ತಿನ ಕನಸಿನ ಮನೆ ಒಂದು ಗಂಟೆಗೂ ಕಡಿಮೆ ಅವಧಿಯಲ್ಲಿ ನೆಲಸಮಗೊಳಿಸಲಾಯಿತು. ಬಸ್ಖಾರಿ ರಸ್ತೆಯಲ್ಲಿ ನಡೆದ ಈ ಘಟನೆ, ಜೀವನದುದ್ದಕ್ಕೂ ಕಟ್ಟಿಕೊಂಡ ಕನಸುಗಳು ಮತ್ತು ದುಡಿದ ಹಣದಿಂದ ನಿರ್ಮಿಸಿದ ಮನೆಯು ಕಣ್ಮುಂದೆಯೇ ಕೆಡವಲ್ಪಟ್ಟಿತ್ತು. “ಅಕ್ರಮ ಒತ್ತುವರಿ” ನೆಪದಲ್ಲಿ ಮುಸ್ಲಿಮರ ಮನೆಗಳನ್ನು ಗುರಿಯಾಗಿಸಿಕೊಂಡು ಉತ್ತರಪ್ರದೇಶದಲ್ಲಿ ನಡೆಯುತ್ತಿರುವ ನಿರಂತರ ಅಭಿಯಾನಕ್ಕೆ ಮತ್ತೊಂದು ಉದಾಹರಣೆಯಾಗಿದೆ.

ಲೋಕೋಪಯೋಗಿ ಇಲಾಖೆಯು (PWD) ಈ ನೆಲಸಮ ಕಾರ್ಯವನ್ನು ಹೈಕೋರ್ಟ್ ಆದೇಶದಂತೆ ನಡೆಸಲಾಗಿದೆ ಎಂದು ಹೇಳಿದೆ. ಸರ್ಕಾರಿ ಭೂಮಿ ಎಂದು ಘೋಷಿಸಿದ ನಂತರವೇ ಈ ಮನೆಗೆ ಬುಲ್ಡೋಜರ್ ಹತ್ತಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ತಿಳಿಸಿದೆ. ಜಲಾಲ್‌ಪುರ್ ಕೊತ್ವಾಲ್ ಸಂತೋಷ್ ಕುಮಾರ್ ಸಿಂಗ್ ಸಹ, “ಈ ಕಟ್ಟಡವು ಸರ್ಕಾರಿ ಭೂಮಿಯಲ್ಲಿದ್ದು, ಕಾನೂನುಬದ್ಧ ಅನುಮೋದನೆ ಇರಲಿಲ್ಲ. ನಾವು ಅಹ್ಮದ್‌ಗೆ ಪೂರ್ವ ಸೂಚನೆ ಸೇರಿದಂತೆ ಎಲ್ಲಾ ಕಾರ್ಯವಿಧಾನಗಳನ್ನು ಅನುಸರಿಸಿದ್ದೇವೆ,” ಎಂದು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

“ನನ್ನ ಇಡೀ ಜೀವನವನ್ನು ಈ ಮನೆಯನ್ನು ಕಟ್ಟಲು ಕಳೆದಿದ್ದೇನೆ. ಈಗ ನನ್ನ ಬ್ಯಾಗ್‌ನಲ್ಲಿರುವ ಬಟ್ಟೆಗಳನ್ನು ಹೊರತುಪಡಿಸಿ ನನಗೇನೂ ಇಲ್ಲ. ಇಲ್ಲಿ ಯಾವುದೇ ಹಿಂದೂ ಮನೆಗಳನ್ನು ಮುಟ್ಟಿಲ್ಲ; ನಮ್ಮನ್ನು ಮಾತ್ರ ಗುರಿಪಡಿಸಲಾಗುತ್ತಿದೆ,” ಎಂದು ನಬಿ ಅಹ್ಮದ್ ಅವರ ದನಿ ನೋವಿನಿಂದ ನಡುಗಿತು. ಇದು ಕೇವಲ ನಬಿ ಅಹ್ಮದ್ ಅವರೊಬ್ಬರ ಆರ್ತನಾದವಾಗಿರಲಿಲ್ಲ. ಸ್ಥಳೀಯ ಅಂಗಡಿ ಮಾಲೀಕ ಫೈಜಾನ್ ಅಲಿ ಇದೇ ಆತಂಕವನ್ನು ಪ್ರತಿಧ್ವನಿಸುತ್ತಾ, “ಈ ಪ್ರದೇಶದಲ್ಲಿ 50ಕ್ಕೂ ಹೆಚ್ಚು ಮನೆಗಳು ಸರ್ಕಾರಿ ಜಾಗದಲ್ಲಿಯೇ ಇವೆ, ಆದರೆ ಮುಸ್ಲಿಮರ ಮನೆಗಳನ್ನು ಮಾತ್ರ ಏಕೆ ಕೆಡವಲಾಗುತ್ತಿದೆ?” ಎಂದು ಪ್ರಶ್ನಿಸಿದರು. ಲೋಕೋಪಯೋಗಿ ಇಲಾಖೆ (PWD) 53 ಇತರ ಕುಟುಂಬಗಳಿಗೆ ನೋಟಿಸ್ ನೀಡಿದ್ದು, ಈ ಪಟ್ಟಿಯಲ್ಲಿ ಹೆಚ್ಚಿನ ಸಂಖ್ಯೆಯ ಮುಸ್ಲಿಂ ಕುಟುಂಬಗಳಿವೆ ಎಂದು ಅವರು ದೂರುತ್ತಾರೆ.

ಈ ಕ್ರಮಗಳ ಕುರಿತು ಲಕ್ನೋ ಮೂಲದ ಮಾನವ ಹಕ್ಕುಗಳ ವಕೀಲ ಅಡ್ವೊಕೇಟ್ ಫಿರೋಜ್ ಖಾನ್, “ನ್ಯಾಯಾಲಯಗಳು ಆದೇಶಗಳನ್ನು ನೀಡಬಹುದು, ಆದರೆ ಆಡಳಿತದ ಕೆಲಸ ನ್ಯಾಯಯುತವಾಗಿ ವರ್ತಿಸುವುದು. ಮುಸ್ಲಿಂ ಮನೆಗಳನ್ನು ಮಾತ್ರ ಗುರಿಪಡಿಸುವುದು ಏನನ್ನು ಸೂಚಿಸುತ್ತದೆ,” ಎಂದು ನೇರವಾಗಿ ಪ್ರಶ್ನಿಸುತ್ತಾರೆ.

ಬುಲ್ಡೋಜರ್ ಕ್ರಮಗಳನ್ನು ಹಲವರು ಮುಸ್ಲಿಂ ಸಮುದಾಯದ ಮೇಲಿನ ನೇರ ಆಕ್ರಮಣ ಎಂದು ಪರಿಗಣಿಸಿದ್ದಾರೆ. ನಬಿ ಅಹ್ಮದ್ ಅವರ ಪುತ್ರ ಇಮ್ರಾನ್ ಅವರ ನೋವಿನ ನುಡಿಗಳು ಇದಕ್ಕೆ ಸಾಕ್ಷಿಯಾಗಿವೆ: “ನನ್ನ ಮಗಳ ಮದುವೆ ಮುಂದಿನ ತಿಂಗಳು ಇದೆ. ಅವಳ ವರದಕ್ಷಿಣೆ ವಸ್ತುಗಳು ಮನೆಯಲ್ಲಿದ್ದವು – ಈಗ ಎಲ್ಲವೂ ನಾಶವಾಗಿವೆ. ನಮ್ಮ ವಸ್ತುಗಳನ್ನು ತೆಗೆದುಹಾಕಲು ಸಹ ಅವರು ನಮಗೆ ಅವಕಾಶ ನೀಡಲಿಲ್ಲ.ಸರ್ಕಾರ ನಮಗೆ ಏನು ಸಂದೇಶ ಕಳುಹಿಸುತ್ತಿದೆ? ನಾವು ನಮ್ಮ ಸ್ವಂತ ದೇಶಕ್ಕೆ ಸೇರಿಲ್ಲವೇ? ಎಂದು ಕೇಳುತ್ತಾರೆ.

ನಾಗರಿಕ ಸಮಾಜ ಗುಂಪುಗಳು ಮತ್ತು ಅಖಿಲ ಭಾರತ ಮುಸ್ಲಿಂ ಮಜ್ಲಿಸ್-ಎ-ಮುಶಾವರತ್‌ನಂತಹ ಸಂಘಟನೆಗಳು ಈ ಬುಲ್ಡೋಜರ್ ಕ್ರಮಗಳನ್ನು “ನ್ಯಾಯಯುತ ವಿಚಾರಣೆಗಳಿಲ್ಲದ ಸಾಮೂಹಿಕ ಶಿಕ್ಷೆ” ಎಂದು ಬಲವಾಗಿ ಖಂಡಿಸಿವೆ.

ಅಂಬೇಡ್ಕರ್ ನಗರದ ಮುಸ್ಲಿಂ ನಿವಾಸಿಗಳು ನಿರಂತರ ಭಯದಲ್ಲಿ ದಿನ ದೂಡುತ್ತಿದ್ದಾರೆ. ನಿವಾಸಿ ಶಂಶಾದ್ ಆಲಮ್ ಅವರ ಮಾತುಗಳಲ್ಲಿ ಈ ಆತಂಕ ಸ್ಪಷ್ಟವಾಗಿದೆ: “ನಮ್ಮ ಮಕ್ಕಳು ಕೂಡ ಈಗ ಬುಲ್ಡೋಜರ್‌ಗಳಿಗೆ ಹೆದರುತ್ತಾರೆ. ಅವರು ಇದನ್ನು ಮುಸ್ಲಿಮರನ್ನು ನಾಶಮಾಡಲು ತಯಾರಿಸಿದ ಯಂತ್ರ ಎಂದು ಭಾವಿಸುತ್ತಾರೆ’’ ಎಂದಿದ್ದಾರೆ.

ನಬಿ ಅಹ್ಮದ್ ಮತ್ತು ಅವರಂತೆಯೇ ಅನ್ಯಾಯಕ್ಕೊಳಗಾದವರು ಈಗ ನ್ಯಾಯಾಲಯದ ಮೊರೆ ಹೋಗಲು ಸಿದ್ಧರಾಗಿದ್ದಾರೆ. ಪರಿಹಾರ ಮತ್ತು ಮುಂದಿನ ನೆಲಸಮಗಳಿಗೆ ತಡೆಯಾಜ್ಞೆ ಕೋರಿ ಅವರು ಕಾನೂನು ಹೋರಾಟ ನಡೆಸಲಿದ್ದಾರೆ. ನಮ್ಮ ಸಂವಿಧಾನವು ನಮಗೆ ಆಶ್ರಯ, ಕೇಳುವ ಮತ್ತು ಘನತೆಯ ಹಕ್ಕನ್ನು ನೀಡುತ್ತದೆ. ನಮಗೆ ಇವೆಲ್ಲವನ್ನೂ ಏಕೆ ನಿರಾಕರಿಸಲಾಗುತ್ತಿದೆ?” ಎಂದು ಅಡ್ವೊಕೇಟ್ ಶಕೀಲ್ ಅಹ್ಮದ್ ಅವರ ನೋವಿನ ಪ್ರಶ್ನೆಯಾಗಿದೆ.

ಏರ್ ಇಂಡಿಯಾ ಅಪಘಾತದ ಕುರಿತು ವರದಿ: ವಾಲ್‌ ಸ್ಟ್ರೀಟ್ ಜರ್ನಲ್‌, ರಾಯಿಟರ್ಸ್‌ಗೆ ಲೀಗಲ್ ನೋಟಿಸ್ ನೀಡಿದ ಪೈಲಟ್‌ಗಳ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...