Homeಮುಖಪುಟಅಂಬೇಡ್ಕರ್ ನಗರ: ನಿವೃತ್ತ ಮುಸ್ಲಿಂ ಶಿಕ್ಷಕರ 3 ಅಂತಸ್ತಿನ ಮನೆ ನೆಲಸಮ - ಒಂದು...

ಅಂಬೇಡ್ಕರ್ ನಗರ: ನಿವೃತ್ತ ಮುಸ್ಲಿಂ ಶಿಕ್ಷಕರ 3 ಅಂತಸ್ತಿನ ಮನೆ ನೆಲಸಮ – ಒಂದು ಕುಟುಂಬದ ನೋವಿನ ಕಥೆ

- Advertisement -
- Advertisement -

ನವದೆಹಲಿ: ಉತ್ತರಪ್ರದೇಶದ ಅಂಬೇಡ್ಕರ್ ನಗರ ಜಿಲ್ಲೆಯ ಜಲಾಲ್‌ಪುರದಲ್ಲಿ ಗುರುವಾರ, 55 ವರ್ಷದ ನಿವೃತ್ತ ಶಿಕ್ಷಕ ನಬಿ ಅಹ್ಮದ್ ಅವರ ಮೂರು ಅಂತಸ್ತಿನ ಕನಸಿನ ಮನೆ ಒಂದು ಗಂಟೆಗೂ ಕಡಿಮೆ ಅವಧಿಯಲ್ಲಿ ನೆಲಸಮಗೊಳಿಸಲಾಯಿತು. ಬಸ್ಖಾರಿ ರಸ್ತೆಯಲ್ಲಿ ನಡೆದ ಈ ಘಟನೆ, ಜೀವನದುದ್ದಕ್ಕೂ ಕಟ್ಟಿಕೊಂಡ ಕನಸುಗಳು ಮತ್ತು ದುಡಿದ ಹಣದಿಂದ ನಿರ್ಮಿಸಿದ ಮನೆಯು ಕಣ್ಮುಂದೆಯೇ ಕೆಡವಲ್ಪಟ್ಟಿತ್ತು. “ಅಕ್ರಮ ಒತ್ತುವರಿ” ನೆಪದಲ್ಲಿ ಮುಸ್ಲಿಮರ ಮನೆಗಳನ್ನು ಗುರಿಯಾಗಿಸಿಕೊಂಡು ಉತ್ತರಪ್ರದೇಶದಲ್ಲಿ ನಡೆಯುತ್ತಿರುವ ನಿರಂತರ ಅಭಿಯಾನಕ್ಕೆ ಮತ್ತೊಂದು ಉದಾಹರಣೆಯಾಗಿದೆ.

ಲೋಕೋಪಯೋಗಿ ಇಲಾಖೆಯು (PWD) ಈ ನೆಲಸಮ ಕಾರ್ಯವನ್ನು ಹೈಕೋರ್ಟ್ ಆದೇಶದಂತೆ ನಡೆಸಲಾಗಿದೆ ಎಂದು ಹೇಳಿದೆ. ಸರ್ಕಾರಿ ಭೂಮಿ ಎಂದು ಘೋಷಿಸಿದ ನಂತರವೇ ಈ ಮನೆಗೆ ಬುಲ್ಡೋಜರ್ ಹತ್ತಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ತಿಳಿಸಿದೆ. ಜಲಾಲ್‌ಪುರ್ ಕೊತ್ವಾಲ್ ಸಂತೋಷ್ ಕುಮಾರ್ ಸಿಂಗ್ ಸಹ, “ಈ ಕಟ್ಟಡವು ಸರ್ಕಾರಿ ಭೂಮಿಯಲ್ಲಿದ್ದು, ಕಾನೂನುಬದ್ಧ ಅನುಮೋದನೆ ಇರಲಿಲ್ಲ. ನಾವು ಅಹ್ಮದ್‌ಗೆ ಪೂರ್ವ ಸೂಚನೆ ಸೇರಿದಂತೆ ಎಲ್ಲಾ ಕಾರ್ಯವಿಧಾನಗಳನ್ನು ಅನುಸರಿಸಿದ್ದೇವೆ,” ಎಂದು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

“ನನ್ನ ಇಡೀ ಜೀವನವನ್ನು ಈ ಮನೆಯನ್ನು ಕಟ್ಟಲು ಕಳೆದಿದ್ದೇನೆ. ಈಗ ನನ್ನ ಬ್ಯಾಗ್‌ನಲ್ಲಿರುವ ಬಟ್ಟೆಗಳನ್ನು ಹೊರತುಪಡಿಸಿ ನನಗೇನೂ ಇಲ್ಲ. ಇಲ್ಲಿ ಯಾವುದೇ ಹಿಂದೂ ಮನೆಗಳನ್ನು ಮುಟ್ಟಿಲ್ಲ; ನಮ್ಮನ್ನು ಮಾತ್ರ ಗುರಿಪಡಿಸಲಾಗುತ್ತಿದೆ,” ಎಂದು ನಬಿ ಅಹ್ಮದ್ ಅವರ ದನಿ ನೋವಿನಿಂದ ನಡುಗಿತು. ಇದು ಕೇವಲ ನಬಿ ಅಹ್ಮದ್ ಅವರೊಬ್ಬರ ಆರ್ತನಾದವಾಗಿರಲಿಲ್ಲ. ಸ್ಥಳೀಯ ಅಂಗಡಿ ಮಾಲೀಕ ಫೈಜಾನ್ ಅಲಿ ಇದೇ ಆತಂಕವನ್ನು ಪ್ರತಿಧ್ವನಿಸುತ್ತಾ, “ಈ ಪ್ರದೇಶದಲ್ಲಿ 50ಕ್ಕೂ ಹೆಚ್ಚು ಮನೆಗಳು ಸರ್ಕಾರಿ ಜಾಗದಲ್ಲಿಯೇ ಇವೆ, ಆದರೆ ಮುಸ್ಲಿಮರ ಮನೆಗಳನ್ನು ಮಾತ್ರ ಏಕೆ ಕೆಡವಲಾಗುತ್ತಿದೆ?” ಎಂದು ಪ್ರಶ್ನಿಸಿದರು. ಲೋಕೋಪಯೋಗಿ ಇಲಾಖೆ (PWD) 53 ಇತರ ಕುಟುಂಬಗಳಿಗೆ ನೋಟಿಸ್ ನೀಡಿದ್ದು, ಈ ಪಟ್ಟಿಯಲ್ಲಿ ಹೆಚ್ಚಿನ ಸಂಖ್ಯೆಯ ಮುಸ್ಲಿಂ ಕುಟುಂಬಗಳಿವೆ ಎಂದು ಅವರು ದೂರುತ್ತಾರೆ.

ಈ ಕ್ರಮಗಳ ಕುರಿತು ಲಕ್ನೋ ಮೂಲದ ಮಾನವ ಹಕ್ಕುಗಳ ವಕೀಲ ಅಡ್ವೊಕೇಟ್ ಫಿರೋಜ್ ಖಾನ್, “ನ್ಯಾಯಾಲಯಗಳು ಆದೇಶಗಳನ್ನು ನೀಡಬಹುದು, ಆದರೆ ಆಡಳಿತದ ಕೆಲಸ ನ್ಯಾಯಯುತವಾಗಿ ವರ್ತಿಸುವುದು. ಮುಸ್ಲಿಂ ಮನೆಗಳನ್ನು ಮಾತ್ರ ಗುರಿಪಡಿಸುವುದು ಏನನ್ನು ಸೂಚಿಸುತ್ತದೆ,” ಎಂದು ನೇರವಾಗಿ ಪ್ರಶ್ನಿಸುತ್ತಾರೆ.

ಬುಲ್ಡೋಜರ್ ಕ್ರಮಗಳನ್ನು ಹಲವರು ಮುಸ್ಲಿಂ ಸಮುದಾಯದ ಮೇಲಿನ ನೇರ ಆಕ್ರಮಣ ಎಂದು ಪರಿಗಣಿಸಿದ್ದಾರೆ. ನಬಿ ಅಹ್ಮದ್ ಅವರ ಪುತ್ರ ಇಮ್ರಾನ್ ಅವರ ನೋವಿನ ನುಡಿಗಳು ಇದಕ್ಕೆ ಸಾಕ್ಷಿಯಾಗಿವೆ: “ನನ್ನ ಮಗಳ ಮದುವೆ ಮುಂದಿನ ತಿಂಗಳು ಇದೆ. ಅವಳ ವರದಕ್ಷಿಣೆ ವಸ್ತುಗಳು ಮನೆಯಲ್ಲಿದ್ದವು – ಈಗ ಎಲ್ಲವೂ ನಾಶವಾಗಿವೆ. ನಮ್ಮ ವಸ್ತುಗಳನ್ನು ತೆಗೆದುಹಾಕಲು ಸಹ ಅವರು ನಮಗೆ ಅವಕಾಶ ನೀಡಲಿಲ್ಲ.ಸರ್ಕಾರ ನಮಗೆ ಏನು ಸಂದೇಶ ಕಳುಹಿಸುತ್ತಿದೆ? ನಾವು ನಮ್ಮ ಸ್ವಂತ ದೇಶಕ್ಕೆ ಸೇರಿಲ್ಲವೇ? ಎಂದು ಕೇಳುತ್ತಾರೆ.

ನಾಗರಿಕ ಸಮಾಜ ಗುಂಪುಗಳು ಮತ್ತು ಅಖಿಲ ಭಾರತ ಮುಸ್ಲಿಂ ಮಜ್ಲಿಸ್-ಎ-ಮುಶಾವರತ್‌ನಂತಹ ಸಂಘಟನೆಗಳು ಈ ಬುಲ್ಡೋಜರ್ ಕ್ರಮಗಳನ್ನು “ನ್ಯಾಯಯುತ ವಿಚಾರಣೆಗಳಿಲ್ಲದ ಸಾಮೂಹಿಕ ಶಿಕ್ಷೆ” ಎಂದು ಬಲವಾಗಿ ಖಂಡಿಸಿವೆ.

ಅಂಬೇಡ್ಕರ್ ನಗರದ ಮುಸ್ಲಿಂ ನಿವಾಸಿಗಳು ನಿರಂತರ ಭಯದಲ್ಲಿ ದಿನ ದೂಡುತ್ತಿದ್ದಾರೆ. ನಿವಾಸಿ ಶಂಶಾದ್ ಆಲಮ್ ಅವರ ಮಾತುಗಳಲ್ಲಿ ಈ ಆತಂಕ ಸ್ಪಷ್ಟವಾಗಿದೆ: “ನಮ್ಮ ಮಕ್ಕಳು ಕೂಡ ಈಗ ಬುಲ್ಡೋಜರ್‌ಗಳಿಗೆ ಹೆದರುತ್ತಾರೆ. ಅವರು ಇದನ್ನು ಮುಸ್ಲಿಮರನ್ನು ನಾಶಮಾಡಲು ತಯಾರಿಸಿದ ಯಂತ್ರ ಎಂದು ಭಾವಿಸುತ್ತಾರೆ’’ ಎಂದಿದ್ದಾರೆ.

ನಬಿ ಅಹ್ಮದ್ ಮತ್ತು ಅವರಂತೆಯೇ ಅನ್ಯಾಯಕ್ಕೊಳಗಾದವರು ಈಗ ನ್ಯಾಯಾಲಯದ ಮೊರೆ ಹೋಗಲು ಸಿದ್ಧರಾಗಿದ್ದಾರೆ. ಪರಿಹಾರ ಮತ್ತು ಮುಂದಿನ ನೆಲಸಮಗಳಿಗೆ ತಡೆಯಾಜ್ಞೆ ಕೋರಿ ಅವರು ಕಾನೂನು ಹೋರಾಟ ನಡೆಸಲಿದ್ದಾರೆ. ನಮ್ಮ ಸಂವಿಧಾನವು ನಮಗೆ ಆಶ್ರಯ, ಕೇಳುವ ಮತ್ತು ಘನತೆಯ ಹಕ್ಕನ್ನು ನೀಡುತ್ತದೆ. ನಮಗೆ ಇವೆಲ್ಲವನ್ನೂ ಏಕೆ ನಿರಾಕರಿಸಲಾಗುತ್ತಿದೆ?” ಎಂದು ಅಡ್ವೊಕೇಟ್ ಶಕೀಲ್ ಅಹ್ಮದ್ ಅವರ ನೋವಿನ ಪ್ರಶ್ನೆಯಾಗಿದೆ.

ಏರ್ ಇಂಡಿಯಾ ಅಪಘಾತದ ಕುರಿತು ವರದಿ: ವಾಲ್‌ ಸ್ಟ್ರೀಟ್ ಜರ್ನಲ್‌, ರಾಯಿಟರ್ಸ್‌ಗೆ ಲೀಗಲ್ ನೋಟಿಸ್ ನೀಡಿದ ಪೈಲಟ್‌ಗಳ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...