Homeಮುಖಪುಟಅಂಬೇಡ್ಕರ್ ನಗರ: ನಿವೃತ್ತ ಮುಸ್ಲಿಂ ಶಿಕ್ಷಕರ 3 ಅಂತಸ್ತಿನ ಮನೆ ನೆಲಸಮ - ಒಂದು...

ಅಂಬೇಡ್ಕರ್ ನಗರ: ನಿವೃತ್ತ ಮುಸ್ಲಿಂ ಶಿಕ್ಷಕರ 3 ಅಂತಸ್ತಿನ ಮನೆ ನೆಲಸಮ – ಒಂದು ಕುಟುಂಬದ ನೋವಿನ ಕಥೆ

- Advertisement -
- Advertisement -

ನವದೆಹಲಿ: ಉತ್ತರಪ್ರದೇಶದ ಅಂಬೇಡ್ಕರ್ ನಗರ ಜಿಲ್ಲೆಯ ಜಲಾಲ್‌ಪುರದಲ್ಲಿ ಗುರುವಾರ, 55 ವರ್ಷದ ನಿವೃತ್ತ ಶಿಕ್ಷಕ ನಬಿ ಅಹ್ಮದ್ ಅವರ ಮೂರು ಅಂತಸ್ತಿನ ಕನಸಿನ ಮನೆ ಒಂದು ಗಂಟೆಗೂ ಕಡಿಮೆ ಅವಧಿಯಲ್ಲಿ ನೆಲಸಮಗೊಳಿಸಲಾಯಿತು. ಬಸ್ಖಾರಿ ರಸ್ತೆಯಲ್ಲಿ ನಡೆದ ಈ ಘಟನೆ, ಜೀವನದುದ್ದಕ್ಕೂ ಕಟ್ಟಿಕೊಂಡ ಕನಸುಗಳು ಮತ್ತು ದುಡಿದ ಹಣದಿಂದ ನಿರ್ಮಿಸಿದ ಮನೆಯು ಕಣ್ಮುಂದೆಯೇ ಕೆಡವಲ್ಪಟ್ಟಿತ್ತು. “ಅಕ್ರಮ ಒತ್ತುವರಿ” ನೆಪದಲ್ಲಿ ಮುಸ್ಲಿಮರ ಮನೆಗಳನ್ನು ಗುರಿಯಾಗಿಸಿಕೊಂಡು ಉತ್ತರಪ್ರದೇಶದಲ್ಲಿ ನಡೆಯುತ್ತಿರುವ ನಿರಂತರ ಅಭಿಯಾನಕ್ಕೆ ಮತ್ತೊಂದು ಉದಾಹರಣೆಯಾಗಿದೆ.

ಲೋಕೋಪಯೋಗಿ ಇಲಾಖೆಯು (PWD) ಈ ನೆಲಸಮ ಕಾರ್ಯವನ್ನು ಹೈಕೋರ್ಟ್ ಆದೇಶದಂತೆ ನಡೆಸಲಾಗಿದೆ ಎಂದು ಹೇಳಿದೆ. ಸರ್ಕಾರಿ ಭೂಮಿ ಎಂದು ಘೋಷಿಸಿದ ನಂತರವೇ ಈ ಮನೆಗೆ ಬುಲ್ಡೋಜರ್ ಹತ್ತಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ತಿಳಿಸಿದೆ. ಜಲಾಲ್‌ಪುರ್ ಕೊತ್ವಾಲ್ ಸಂತೋಷ್ ಕುಮಾರ್ ಸಿಂಗ್ ಸಹ, “ಈ ಕಟ್ಟಡವು ಸರ್ಕಾರಿ ಭೂಮಿಯಲ್ಲಿದ್ದು, ಕಾನೂನುಬದ್ಧ ಅನುಮೋದನೆ ಇರಲಿಲ್ಲ. ನಾವು ಅಹ್ಮದ್‌ಗೆ ಪೂರ್ವ ಸೂಚನೆ ಸೇರಿದಂತೆ ಎಲ್ಲಾ ಕಾರ್ಯವಿಧಾನಗಳನ್ನು ಅನುಸರಿಸಿದ್ದೇವೆ,” ಎಂದು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

“ನನ್ನ ಇಡೀ ಜೀವನವನ್ನು ಈ ಮನೆಯನ್ನು ಕಟ್ಟಲು ಕಳೆದಿದ್ದೇನೆ. ಈಗ ನನ್ನ ಬ್ಯಾಗ್‌ನಲ್ಲಿರುವ ಬಟ್ಟೆಗಳನ್ನು ಹೊರತುಪಡಿಸಿ ನನಗೇನೂ ಇಲ್ಲ. ಇಲ್ಲಿ ಯಾವುದೇ ಹಿಂದೂ ಮನೆಗಳನ್ನು ಮುಟ್ಟಿಲ್ಲ; ನಮ್ಮನ್ನು ಮಾತ್ರ ಗುರಿಪಡಿಸಲಾಗುತ್ತಿದೆ,” ಎಂದು ನಬಿ ಅಹ್ಮದ್ ಅವರ ದನಿ ನೋವಿನಿಂದ ನಡುಗಿತು. ಇದು ಕೇವಲ ನಬಿ ಅಹ್ಮದ್ ಅವರೊಬ್ಬರ ಆರ್ತನಾದವಾಗಿರಲಿಲ್ಲ. ಸ್ಥಳೀಯ ಅಂಗಡಿ ಮಾಲೀಕ ಫೈಜಾನ್ ಅಲಿ ಇದೇ ಆತಂಕವನ್ನು ಪ್ರತಿಧ್ವನಿಸುತ್ತಾ, “ಈ ಪ್ರದೇಶದಲ್ಲಿ 50ಕ್ಕೂ ಹೆಚ್ಚು ಮನೆಗಳು ಸರ್ಕಾರಿ ಜಾಗದಲ್ಲಿಯೇ ಇವೆ, ಆದರೆ ಮುಸ್ಲಿಮರ ಮನೆಗಳನ್ನು ಮಾತ್ರ ಏಕೆ ಕೆಡವಲಾಗುತ್ತಿದೆ?” ಎಂದು ಪ್ರಶ್ನಿಸಿದರು. ಲೋಕೋಪಯೋಗಿ ಇಲಾಖೆ (PWD) 53 ಇತರ ಕುಟುಂಬಗಳಿಗೆ ನೋಟಿಸ್ ನೀಡಿದ್ದು, ಈ ಪಟ್ಟಿಯಲ್ಲಿ ಹೆಚ್ಚಿನ ಸಂಖ್ಯೆಯ ಮುಸ್ಲಿಂ ಕುಟುಂಬಗಳಿವೆ ಎಂದು ಅವರು ದೂರುತ್ತಾರೆ.

ಈ ಕ್ರಮಗಳ ಕುರಿತು ಲಕ್ನೋ ಮೂಲದ ಮಾನವ ಹಕ್ಕುಗಳ ವಕೀಲ ಅಡ್ವೊಕೇಟ್ ಫಿರೋಜ್ ಖಾನ್, “ನ್ಯಾಯಾಲಯಗಳು ಆದೇಶಗಳನ್ನು ನೀಡಬಹುದು, ಆದರೆ ಆಡಳಿತದ ಕೆಲಸ ನ್ಯಾಯಯುತವಾಗಿ ವರ್ತಿಸುವುದು. ಮುಸ್ಲಿಂ ಮನೆಗಳನ್ನು ಮಾತ್ರ ಗುರಿಪಡಿಸುವುದು ಏನನ್ನು ಸೂಚಿಸುತ್ತದೆ,” ಎಂದು ನೇರವಾಗಿ ಪ್ರಶ್ನಿಸುತ್ತಾರೆ.

ಬುಲ್ಡೋಜರ್ ಕ್ರಮಗಳನ್ನು ಹಲವರು ಮುಸ್ಲಿಂ ಸಮುದಾಯದ ಮೇಲಿನ ನೇರ ಆಕ್ರಮಣ ಎಂದು ಪರಿಗಣಿಸಿದ್ದಾರೆ. ನಬಿ ಅಹ್ಮದ್ ಅವರ ಪುತ್ರ ಇಮ್ರಾನ್ ಅವರ ನೋವಿನ ನುಡಿಗಳು ಇದಕ್ಕೆ ಸಾಕ್ಷಿಯಾಗಿವೆ: “ನನ್ನ ಮಗಳ ಮದುವೆ ಮುಂದಿನ ತಿಂಗಳು ಇದೆ. ಅವಳ ವರದಕ್ಷಿಣೆ ವಸ್ತುಗಳು ಮನೆಯಲ್ಲಿದ್ದವು – ಈಗ ಎಲ್ಲವೂ ನಾಶವಾಗಿವೆ. ನಮ್ಮ ವಸ್ತುಗಳನ್ನು ತೆಗೆದುಹಾಕಲು ಸಹ ಅವರು ನಮಗೆ ಅವಕಾಶ ನೀಡಲಿಲ್ಲ.ಸರ್ಕಾರ ನಮಗೆ ಏನು ಸಂದೇಶ ಕಳುಹಿಸುತ್ತಿದೆ? ನಾವು ನಮ್ಮ ಸ್ವಂತ ದೇಶಕ್ಕೆ ಸೇರಿಲ್ಲವೇ? ಎಂದು ಕೇಳುತ್ತಾರೆ.

ನಾಗರಿಕ ಸಮಾಜ ಗುಂಪುಗಳು ಮತ್ತು ಅಖಿಲ ಭಾರತ ಮುಸ್ಲಿಂ ಮಜ್ಲಿಸ್-ಎ-ಮುಶಾವರತ್‌ನಂತಹ ಸಂಘಟನೆಗಳು ಈ ಬುಲ್ಡೋಜರ್ ಕ್ರಮಗಳನ್ನು “ನ್ಯಾಯಯುತ ವಿಚಾರಣೆಗಳಿಲ್ಲದ ಸಾಮೂಹಿಕ ಶಿಕ್ಷೆ” ಎಂದು ಬಲವಾಗಿ ಖಂಡಿಸಿವೆ.

ಅಂಬೇಡ್ಕರ್ ನಗರದ ಮುಸ್ಲಿಂ ನಿವಾಸಿಗಳು ನಿರಂತರ ಭಯದಲ್ಲಿ ದಿನ ದೂಡುತ್ತಿದ್ದಾರೆ. ನಿವಾಸಿ ಶಂಶಾದ್ ಆಲಮ್ ಅವರ ಮಾತುಗಳಲ್ಲಿ ಈ ಆತಂಕ ಸ್ಪಷ್ಟವಾಗಿದೆ: “ನಮ್ಮ ಮಕ್ಕಳು ಕೂಡ ಈಗ ಬುಲ್ಡೋಜರ್‌ಗಳಿಗೆ ಹೆದರುತ್ತಾರೆ. ಅವರು ಇದನ್ನು ಮುಸ್ಲಿಮರನ್ನು ನಾಶಮಾಡಲು ತಯಾರಿಸಿದ ಯಂತ್ರ ಎಂದು ಭಾವಿಸುತ್ತಾರೆ’’ ಎಂದಿದ್ದಾರೆ.

ನಬಿ ಅಹ್ಮದ್ ಮತ್ತು ಅವರಂತೆಯೇ ಅನ್ಯಾಯಕ್ಕೊಳಗಾದವರು ಈಗ ನ್ಯಾಯಾಲಯದ ಮೊರೆ ಹೋಗಲು ಸಿದ್ಧರಾಗಿದ್ದಾರೆ. ಪರಿಹಾರ ಮತ್ತು ಮುಂದಿನ ನೆಲಸಮಗಳಿಗೆ ತಡೆಯಾಜ್ಞೆ ಕೋರಿ ಅವರು ಕಾನೂನು ಹೋರಾಟ ನಡೆಸಲಿದ್ದಾರೆ. ನಮ್ಮ ಸಂವಿಧಾನವು ನಮಗೆ ಆಶ್ರಯ, ಕೇಳುವ ಮತ್ತು ಘನತೆಯ ಹಕ್ಕನ್ನು ನೀಡುತ್ತದೆ. ನಮಗೆ ಇವೆಲ್ಲವನ್ನೂ ಏಕೆ ನಿರಾಕರಿಸಲಾಗುತ್ತಿದೆ?” ಎಂದು ಅಡ್ವೊಕೇಟ್ ಶಕೀಲ್ ಅಹ್ಮದ್ ಅವರ ನೋವಿನ ಪ್ರಶ್ನೆಯಾಗಿದೆ.

ಏರ್ ಇಂಡಿಯಾ ಅಪಘಾತದ ಕುರಿತು ವರದಿ: ವಾಲ್‌ ಸ್ಟ್ರೀಟ್ ಜರ್ನಲ್‌, ರಾಯಿಟರ್ಸ್‌ಗೆ ಲೀಗಲ್ ನೋಟಿಸ್ ನೀಡಿದ ಪೈಲಟ್‌ಗಳ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...