Homeಮುಖಪುಟಅಂಬೇಡ್ಕರ್ ನಗರ: ನಿವೃತ್ತ ಮುಸ್ಲಿಂ ಶಿಕ್ಷಕರ 3 ಅಂತಸ್ತಿನ ಮನೆ ನೆಲಸಮ - ಒಂದು...

ಅಂಬೇಡ್ಕರ್ ನಗರ: ನಿವೃತ್ತ ಮುಸ್ಲಿಂ ಶಿಕ್ಷಕರ 3 ಅಂತಸ್ತಿನ ಮನೆ ನೆಲಸಮ – ಒಂದು ಕುಟುಂಬದ ನೋವಿನ ಕಥೆ

- Advertisement -
- Advertisement -

ನವದೆಹಲಿ: ಉತ್ತರಪ್ರದೇಶದ ಅಂಬೇಡ್ಕರ್ ನಗರ ಜಿಲ್ಲೆಯ ಜಲಾಲ್‌ಪುರದಲ್ಲಿ ಗುರುವಾರ, 55 ವರ್ಷದ ನಿವೃತ್ತ ಶಿಕ್ಷಕ ನಬಿ ಅಹ್ಮದ್ ಅವರ ಮೂರು ಅಂತಸ್ತಿನ ಕನಸಿನ ಮನೆ ಒಂದು ಗಂಟೆಗೂ ಕಡಿಮೆ ಅವಧಿಯಲ್ಲಿ ನೆಲಸಮಗೊಳಿಸಲಾಯಿತು. ಬಸ್ಖಾರಿ ರಸ್ತೆಯಲ್ಲಿ ನಡೆದ ಈ ಘಟನೆ, ಜೀವನದುದ್ದಕ್ಕೂ ಕಟ್ಟಿಕೊಂಡ ಕನಸುಗಳು ಮತ್ತು ದುಡಿದ ಹಣದಿಂದ ನಿರ್ಮಿಸಿದ ಮನೆಯು ಕಣ್ಮುಂದೆಯೇ ಕೆಡವಲ್ಪಟ್ಟಿತ್ತು. “ಅಕ್ರಮ ಒತ್ತುವರಿ” ನೆಪದಲ್ಲಿ ಮುಸ್ಲಿಮರ ಮನೆಗಳನ್ನು ಗುರಿಯಾಗಿಸಿಕೊಂಡು ಉತ್ತರಪ್ರದೇಶದಲ್ಲಿ ನಡೆಯುತ್ತಿರುವ ನಿರಂತರ ಅಭಿಯಾನಕ್ಕೆ ಮತ್ತೊಂದು ಉದಾಹರಣೆಯಾಗಿದೆ.

ಲೋಕೋಪಯೋಗಿ ಇಲಾಖೆಯು (PWD) ಈ ನೆಲಸಮ ಕಾರ್ಯವನ್ನು ಹೈಕೋರ್ಟ್ ಆದೇಶದಂತೆ ನಡೆಸಲಾಗಿದೆ ಎಂದು ಹೇಳಿದೆ. ಸರ್ಕಾರಿ ಭೂಮಿ ಎಂದು ಘೋಷಿಸಿದ ನಂತರವೇ ಈ ಮನೆಗೆ ಬುಲ್ಡೋಜರ್ ಹತ್ತಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ತಿಳಿಸಿದೆ. ಜಲಾಲ್‌ಪುರ್ ಕೊತ್ವಾಲ್ ಸಂತೋಷ್ ಕುಮಾರ್ ಸಿಂಗ್ ಸಹ, “ಈ ಕಟ್ಟಡವು ಸರ್ಕಾರಿ ಭೂಮಿಯಲ್ಲಿದ್ದು, ಕಾನೂನುಬದ್ಧ ಅನುಮೋದನೆ ಇರಲಿಲ್ಲ. ನಾವು ಅಹ್ಮದ್‌ಗೆ ಪೂರ್ವ ಸೂಚನೆ ಸೇರಿದಂತೆ ಎಲ್ಲಾ ಕಾರ್ಯವಿಧಾನಗಳನ್ನು ಅನುಸರಿಸಿದ್ದೇವೆ,” ಎಂದು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

“ನನ್ನ ಇಡೀ ಜೀವನವನ್ನು ಈ ಮನೆಯನ್ನು ಕಟ್ಟಲು ಕಳೆದಿದ್ದೇನೆ. ಈಗ ನನ್ನ ಬ್ಯಾಗ್‌ನಲ್ಲಿರುವ ಬಟ್ಟೆಗಳನ್ನು ಹೊರತುಪಡಿಸಿ ನನಗೇನೂ ಇಲ್ಲ. ಇಲ್ಲಿ ಯಾವುದೇ ಹಿಂದೂ ಮನೆಗಳನ್ನು ಮುಟ್ಟಿಲ್ಲ; ನಮ್ಮನ್ನು ಮಾತ್ರ ಗುರಿಪಡಿಸಲಾಗುತ್ತಿದೆ,” ಎಂದು ನಬಿ ಅಹ್ಮದ್ ಅವರ ದನಿ ನೋವಿನಿಂದ ನಡುಗಿತು. ಇದು ಕೇವಲ ನಬಿ ಅಹ್ಮದ್ ಅವರೊಬ್ಬರ ಆರ್ತನಾದವಾಗಿರಲಿಲ್ಲ. ಸ್ಥಳೀಯ ಅಂಗಡಿ ಮಾಲೀಕ ಫೈಜಾನ್ ಅಲಿ ಇದೇ ಆತಂಕವನ್ನು ಪ್ರತಿಧ್ವನಿಸುತ್ತಾ, “ಈ ಪ್ರದೇಶದಲ್ಲಿ 50ಕ್ಕೂ ಹೆಚ್ಚು ಮನೆಗಳು ಸರ್ಕಾರಿ ಜಾಗದಲ್ಲಿಯೇ ಇವೆ, ಆದರೆ ಮುಸ್ಲಿಮರ ಮನೆಗಳನ್ನು ಮಾತ್ರ ಏಕೆ ಕೆಡವಲಾಗುತ್ತಿದೆ?” ಎಂದು ಪ್ರಶ್ನಿಸಿದರು. ಲೋಕೋಪಯೋಗಿ ಇಲಾಖೆ (PWD) 53 ಇತರ ಕುಟುಂಬಗಳಿಗೆ ನೋಟಿಸ್ ನೀಡಿದ್ದು, ಈ ಪಟ್ಟಿಯಲ್ಲಿ ಹೆಚ್ಚಿನ ಸಂಖ್ಯೆಯ ಮುಸ್ಲಿಂ ಕುಟುಂಬಗಳಿವೆ ಎಂದು ಅವರು ದೂರುತ್ತಾರೆ.

ಈ ಕ್ರಮಗಳ ಕುರಿತು ಲಕ್ನೋ ಮೂಲದ ಮಾನವ ಹಕ್ಕುಗಳ ವಕೀಲ ಅಡ್ವೊಕೇಟ್ ಫಿರೋಜ್ ಖಾನ್, “ನ್ಯಾಯಾಲಯಗಳು ಆದೇಶಗಳನ್ನು ನೀಡಬಹುದು, ಆದರೆ ಆಡಳಿತದ ಕೆಲಸ ನ್ಯಾಯಯುತವಾಗಿ ವರ್ತಿಸುವುದು. ಮುಸ್ಲಿಂ ಮನೆಗಳನ್ನು ಮಾತ್ರ ಗುರಿಪಡಿಸುವುದು ಏನನ್ನು ಸೂಚಿಸುತ್ತದೆ,” ಎಂದು ನೇರವಾಗಿ ಪ್ರಶ್ನಿಸುತ್ತಾರೆ.

ಬುಲ್ಡೋಜರ್ ಕ್ರಮಗಳನ್ನು ಹಲವರು ಮುಸ್ಲಿಂ ಸಮುದಾಯದ ಮೇಲಿನ ನೇರ ಆಕ್ರಮಣ ಎಂದು ಪರಿಗಣಿಸಿದ್ದಾರೆ. ನಬಿ ಅಹ್ಮದ್ ಅವರ ಪುತ್ರ ಇಮ್ರಾನ್ ಅವರ ನೋವಿನ ನುಡಿಗಳು ಇದಕ್ಕೆ ಸಾಕ್ಷಿಯಾಗಿವೆ: “ನನ್ನ ಮಗಳ ಮದುವೆ ಮುಂದಿನ ತಿಂಗಳು ಇದೆ. ಅವಳ ವರದಕ್ಷಿಣೆ ವಸ್ತುಗಳು ಮನೆಯಲ್ಲಿದ್ದವು – ಈಗ ಎಲ್ಲವೂ ನಾಶವಾಗಿವೆ. ನಮ್ಮ ವಸ್ತುಗಳನ್ನು ತೆಗೆದುಹಾಕಲು ಸಹ ಅವರು ನಮಗೆ ಅವಕಾಶ ನೀಡಲಿಲ್ಲ.ಸರ್ಕಾರ ನಮಗೆ ಏನು ಸಂದೇಶ ಕಳುಹಿಸುತ್ತಿದೆ? ನಾವು ನಮ್ಮ ಸ್ವಂತ ದೇಶಕ್ಕೆ ಸೇರಿಲ್ಲವೇ? ಎಂದು ಕೇಳುತ್ತಾರೆ.

ನಾಗರಿಕ ಸಮಾಜ ಗುಂಪುಗಳು ಮತ್ತು ಅಖಿಲ ಭಾರತ ಮುಸ್ಲಿಂ ಮಜ್ಲಿಸ್-ಎ-ಮುಶಾವರತ್‌ನಂತಹ ಸಂಘಟನೆಗಳು ಈ ಬುಲ್ಡೋಜರ್ ಕ್ರಮಗಳನ್ನು “ನ್ಯಾಯಯುತ ವಿಚಾರಣೆಗಳಿಲ್ಲದ ಸಾಮೂಹಿಕ ಶಿಕ್ಷೆ” ಎಂದು ಬಲವಾಗಿ ಖಂಡಿಸಿವೆ.

ಅಂಬೇಡ್ಕರ್ ನಗರದ ಮುಸ್ಲಿಂ ನಿವಾಸಿಗಳು ನಿರಂತರ ಭಯದಲ್ಲಿ ದಿನ ದೂಡುತ್ತಿದ್ದಾರೆ. ನಿವಾಸಿ ಶಂಶಾದ್ ಆಲಮ್ ಅವರ ಮಾತುಗಳಲ್ಲಿ ಈ ಆತಂಕ ಸ್ಪಷ್ಟವಾಗಿದೆ: “ನಮ್ಮ ಮಕ್ಕಳು ಕೂಡ ಈಗ ಬುಲ್ಡೋಜರ್‌ಗಳಿಗೆ ಹೆದರುತ್ತಾರೆ. ಅವರು ಇದನ್ನು ಮುಸ್ಲಿಮರನ್ನು ನಾಶಮಾಡಲು ತಯಾರಿಸಿದ ಯಂತ್ರ ಎಂದು ಭಾವಿಸುತ್ತಾರೆ’’ ಎಂದಿದ್ದಾರೆ.

ನಬಿ ಅಹ್ಮದ್ ಮತ್ತು ಅವರಂತೆಯೇ ಅನ್ಯಾಯಕ್ಕೊಳಗಾದವರು ಈಗ ನ್ಯಾಯಾಲಯದ ಮೊರೆ ಹೋಗಲು ಸಿದ್ಧರಾಗಿದ್ದಾರೆ. ಪರಿಹಾರ ಮತ್ತು ಮುಂದಿನ ನೆಲಸಮಗಳಿಗೆ ತಡೆಯಾಜ್ಞೆ ಕೋರಿ ಅವರು ಕಾನೂನು ಹೋರಾಟ ನಡೆಸಲಿದ್ದಾರೆ. ನಮ್ಮ ಸಂವಿಧಾನವು ನಮಗೆ ಆಶ್ರಯ, ಕೇಳುವ ಮತ್ತು ಘನತೆಯ ಹಕ್ಕನ್ನು ನೀಡುತ್ತದೆ. ನಮಗೆ ಇವೆಲ್ಲವನ್ನೂ ಏಕೆ ನಿರಾಕರಿಸಲಾಗುತ್ತಿದೆ?” ಎಂದು ಅಡ್ವೊಕೇಟ್ ಶಕೀಲ್ ಅಹ್ಮದ್ ಅವರ ನೋವಿನ ಪ್ರಶ್ನೆಯಾಗಿದೆ.

ಏರ್ ಇಂಡಿಯಾ ಅಪಘಾತದ ಕುರಿತು ವರದಿ: ವಾಲ್‌ ಸ್ಟ್ರೀಟ್ ಜರ್ನಲ್‌, ರಾಯಿಟರ್ಸ್‌ಗೆ ಲೀಗಲ್ ನೋಟಿಸ್ ನೀಡಿದ ಪೈಲಟ್‌ಗಳ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...