Homeಮುಖಪುಟಕೋನಸೀಮಾ ಜಿಲ್ಲೆಗೆ ಅಂಬೇಡ್ಕರ್‌ ಹೆಸರು: ಹಿಂಸಾಚಾರಕ್ಕೆ ವಾಟ್ಸ್‌ಆಪ್‌ ಗ್ರೂಪ್‌ಗಳಲ್ಲಿ ಪ್ರಚೋದನೆ

ಕೋನಸೀಮಾ ಜಿಲ್ಲೆಗೆ ಅಂಬೇಡ್ಕರ್‌ ಹೆಸರು: ಹಿಂಸಾಚಾರಕ್ಕೆ ವಾಟ್ಸ್‌ಆಪ್‌ ಗ್ರೂಪ್‌ಗಳಲ್ಲಿ ಪ್ರಚೋದನೆ

ಆಂಧ್ರಪ್ರದೇಶದ ಸಚಿವ ಪಿಣಿಪೆ ವಿಶ್ವರೂಪು ಹಾಗೂ ಶಾಸಕ ಪಿ.ಸತೀಶ್ ಅವರ ಮನೆಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರು. ಈಗ ಹತ್ತಾರು ಜನರನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -
- Advertisement -

ಆಂಧ್ರಪ್ರದೇಶದ ಕೋನಸೀಮಾ ಜಿಲ್ಲೆಯ ಅಮಲಾಪುರಂ ಪಟ್ಟಣದಲ್ಲಿ ಹಿಂಸಾಚಾರ ಭುಗಿಲೆದ್ದ ಕೆಲವು ದಿನಗಳ ನಂತರ, “ಇದು ಪೂರ್ವ ಯೋಜಿತ ಮತ್ತು ಸಂಘಟಿತ ಕೃತ್ಯ” ಎಂದು ರಾಜ್ಯ ಪೊಲೀಸರು ಪತ್ತೆ ಪತ್ತೆಹಚ್ಚಿರುವುದಾಗಿ ‘ದಿ ನ್ಯೂಸ್‌ ಮಿನಿಟ್‌’ ಜಾಲತಾಣ ವರದಿ ಮಾಡಿದೆ.

ಕೋನಸೀಮಾ ಜಿಲ್ಲೆಯನ್ನು ಡಾ.ಬಿ.ಆರ್.ಅಂಬೇಡ್ಕರ್ ಕೋನಸೀಮಾ ಜಿಲ್ಲೆ ಎಂದು ಮರುನಾಮಕರಣ ಮಾಡುವ ಜಗನ್ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಮೇ 24 ರಂದು ಕೋನಸೀಮಾ ಜಿಲ್ಲಾಧಿಕಾರಿ ಕಚೇರಿಯ ಹೊರಗೆ ದೊಡ್ಡ ಗುಂಪು ಜಮಾಯಿಸಿತ್ತು. ಜಿಲ್ಲಾಧಿಕಾರಿ ಕಚೇರಿ ಮೇಲೆ ಕಲ್ಲು ತೂರಾಟ ನಡೆದಿದ್ದು, ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದಾದ ಬಳಿಕ ಸಚಿವ ಪಿಣಿಪೆ ವಿಶ್ವರೂಪು ಹಾಗೂ ಶಾಸಕ ಪಿ.ಸತೀಶ್ ಅವರ ಮನೆಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದರು. ಹಿಂಸಾಚಾರದಲ್ಲಿ ಸುಮಾರು 20 ಪೊಲೀಸ್ ಸಿಬ್ಬಂದಿ ಗಾಯಗೊಂಡರು. ಎರಡು ಬಸ್‌ಗಳು ಸೇರಿದಂತೆ ಹಲವಾರು ವಾಹನಗಳು ಬೆಂಕಿಗೆ ಆಹುತಿಯಾದವು.

ಸಚಿವರು ಮತ್ತು ಶಾಸಕರ ಮನೆಯ ಸಿಸಿಟಿವಿ ಕ್ಯಾಮೆರಾಗಳು, ಕಿಮ್ಸ್ ಆಸ್ಪತ್ರೆ ಹಾಗೂ ಈ ಗುಂಪು ಸಂಚರಿಸುವ ಮಾರ್ಗದಲ್ಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸರು ವಶಕ್ಕೆ ಪಡೆದು ಸಾಕ್ಷ್ಯ ಸಂಗ್ರಹಿಸಿದ್ದಾರೆ ಎಂದು ‘ನ್ಯೂಸ್‌ ಮಿನಿಟ್’ ವರದಿ ಮಾಡಿದೆ.

PC: TheNewsMinute

ಹಿಂಸಾಚಾರ ನಡೆದಾಗ ಅಲ್ಲಿದ್ದ ಸಿಬ್ಬಂದಿಯನ್ನು ಹಿಂಸಾಚಾರದಲ್ಲಿ ಭಾಗವಹಿಸಿದವರನ್ನು ಗುರುತಿಸಲು ಕರೆಸಲಾಯಿತು. ಜಿಲ್ಲೆಯ ಪ್ರಬಲ ಜಾತಿಗಳಾದ ಕಾಪುಗಳು, ಸೆಟ್ಟಿ ಬಲಿಜರು ಹಾಗೂ ನಾಗವಂಶದ ಕೆಲವು ಸದಸ್ಯರು ಘಟನೆಯಲ್ಲಿ ಭಾಗವಹಿಸಿದ್ದರು ಎಂದು ಹಿಂದಿನ ತನಿಖಾ ಅಧಿಕಾರಿ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

PC: TheNewsMinute

ಹಿಂಸಾಚಾರಕ್ಕೂ ಮುನ್ನ 20ಕ್ಕೂ ಹೆಚ್ಚು ವಾಟ್ಸಾಪ್ ಗುಂಪುಗಳು ಸಕ್ರಿಯವಾಗಿದ್ದವು ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಹಿಂಸಾಚಾರವನ್ನು ಹೇಗೆ ಆಯೋಜಿಸಬೇಕು ಎಂಬುದರ ಕುರಿತು ನಿರ್ದಿಷ್ಟ ಸೂಚನೆಗಳೊಂದಿಗೆ ಪ್ರಚೋದನಕಾರಿ ಸಂದೇಶಗಳನ್ನು ಗುಂಪುಗಳಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿರಿ: ಆಂಧ್ರಪ್ರದೇಶ: ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ; ತಿಂಗಳುಗಳ ಬಳಿಕ ಪ್ರಕರಣ ಬಯಲು

ಜಿಲ್ಲೆಯ ಹೆಸರು ಕೋನಸೀಮಾ ಎಂದಷ್ಟೇ ಇರಬೇಕೆಂದು ಬಯಸುವ “ಸ್ನೇಹಿತರನ್ನು” ಒಂದುಗೂಡಿಸುವ ಉದ್ದೇಶದಿಂದ ಈ ಗುಂಪುಗಳನ್ನು ರಚಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಜಿಲ್ಲೆಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೆಸರನ್ನು ಸೇರಿಸುವ ಸರ್ಕಾರದ ನಿರ್ಧಾರದಿಂದ ಗುಂಪಿನಲ್ಲಿರುವವರು ಅಸಮಾಧಾನಗೊಂಡಿದ್ದಾರೆ. ಹೊಸದಾಗಿ ರೂಪುಗೊಂಡ ಜಿಲ್ಲೆಗೆ ಏಪ್ರಿಲ್ 4 ರಂದು ಕೋನಸೀಮ ಎಂದು ಹೆಸರಿಸಲಾಗಿದ್ದರೆ, ಡಾ.ಬಿ.ಆರ್.ಅಂಬೇಡ್ಕರ್ ಹೆಸರನ್ನು ಜೊತೆಗೆ ಸೇರಿಸುವ ನಿರ್ಧಾರವನ್ನು ಮೇ 18ರಂದು ಸರ್ಕಾರ ಘೋಷಿಸಿತು.

ಗ್ರೂಪ್‌ ಅಡ್ಮಿನ್‌ಗಳ ಪತ್ತೆ

“ಹಿಂಸಾಚಾರದಲ್ಲಿ ಭಾಗವಹಿಸಿದ 19 ಜನರನ್ನು ಬಂಧಿಸಲಾಗಿದೆ” ಎಂದು ಏಲೂರು ವ್ಯಾಪ್ತಿಯ ಡಿಐಜಿ ಪಾಲ ರಾಜು ‘ನ್ಯೂಸ್‌ ಮಿನಿಟ್‌’ಗೆ ತಿಳಿಸಿದ್ದಾರೆ.

“ನಾವು ಮೇ 25ರಂದು 46 ಜನರನ್ನು ಬಂಧಿಸಿದ್ದೇವೆ. ಹಿಂಸಾಚಾರದಲ್ಲಿ ಅವರ ಪಾತ್ರವನ್ನು ಸಾಬೀತುಪಡಿಸಲು ನಮಗೆ ಸಾಕಷ್ಟು ಪುರಾವೆಗಳು ದೊರೆತಿವೆ. ನಾವು ಅವರ ಫೋನ್‌ಗಳನ್ನು ಪರಿಶೀಲಿಸಿದ್ದು, ವಿವಿಧ ಗ್ರೂಪ್‌ಗಳಲ್ಲಿನ ಹಲವಾರು ಸಂದೇಶಗಳನ್ನು ಡಿಲೀಟ್ ಮಾಡಲಾಗಿದೆ. ಘಟನೆಯ ನಂತರ ಅನೇಕರು ಗ್ರೂಪ್‌ಗಳಿಂದ ಲೆಫ್ಟ್‌ ಆಗಿದ್ದಾರೆ. ಡಿಲೀಟ್ ಮಾಡಲಾದ ಎಲ್ಲಾ ಸಂದೇಶಗಳನ್ನು ಮತ್ತು ಗುಂಪುಗಳಿಂದ ನಿರ್ಗಮಿಸಿದವರ ವಿವರಗಳನ್ನು ನಾವು ತಂತ್ರಜ್ಞಾನಗಳನ್ನು ಬಳಸಿಕೊಂಡು ಪತ್ತೆಹಚ್ಚಿದ್ದೇವೆ. ನಾವು ಗ್ರೂಪ್ ಅಡ್ಮಿನ್‌ಗಳನ್ನು ಗುರುತಿಸಿದ್ದೇವೆ. ಅವರು ಕೂಡ ಶೀಘ್ರದಲ್ಲೇ ಕಾನೂನಿನ ಕ್ರಮಗಳನ್ನು ಎದುರಿಸಲಿದ್ದಾರೆ” ಎಂದು ಅವರು ಮಾಹಿತಿ ನೀಡಿದ್ದಾರೆ.

ಜಾತಿಯ ವಿಷಯವಾಗಿ ಈ ಗುಂಪುಗಳನ್ನು ರಚಿಸಲಾಗಿತ್ತೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ತನಿಖಾಧಿಕಾರಿ, “ಜಾತಿ ವಿಚಾರವಾಗಿ ಒಗ್ಗೂಡಿರುವ ಕುರಿತು ನಾವಿನ್ನು ವಿಶ್ಲೇಷಣೆ ಮಾಡಿಲ್ಲ. ಈ ವಾಟ್ಸಾಪ್ ಗುಂಪುಗಳು ಮುಖ್ಯವಾಗಿ ಜಿಲ್ಲೆಗೆ ಕೋನಸೀಮಾ ಎಂದು ಹೆಸರಿಸಬೇಕೆಂದು ಬಯಸುವ ಸ್ನೇಹಿತರನ್ನು ಒಳಗೊಂಡಿವೆ. ವಾಟ್ಸಾಪ್ ಗ್ರೂಪ್‌ಗಳ ಹೆಸರು ಗಮನಿಸಿದರೆ ಇದು ಬಹಿರಂಗವಾಗುತ್ತದೆ. ಹೆಚ್ಚಿನವರನ್ನು ಬಂಧಿಸಿದ ಬಳಿಕ, ನಾವು ವಿವಿಧ ಆಯಾಮಗಳನ್ನು ಗುರುತಿಸಲು ಪ್ರಯತ್ನಿಸುತ್ತೇವೆ. ಜಾತಿ ಒಗ್ಗೂಡುವಿಕೆ ಮತ್ತು ರಾಜಕೀಯ ಸಂಬಂಧಗಳನ್ನೂ ವಿಚಾರಣೆ ನಡೆಸುತ್ತೇವೆ” ಎಂದಿದ್ದಾರೆ.

ಮೂಲ: ದಿ ನ್ಯೂಸ್‌ ಮಿನಿಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...