Homeಮುಖಪುಟಕೋನಸೀಮಾ ಜಿಲ್ಲೆಗೆ ಅಂಬೇಡ್ಕರ್‌ ಹೆಸರು: ಹಿಂಸಾಚಾರಕ್ಕೆ ವಾಟ್ಸ್‌ಆಪ್‌ ಗ್ರೂಪ್‌ಗಳಲ್ಲಿ ಪ್ರಚೋದನೆ

ಕೋನಸೀಮಾ ಜಿಲ್ಲೆಗೆ ಅಂಬೇಡ್ಕರ್‌ ಹೆಸರು: ಹಿಂಸಾಚಾರಕ್ಕೆ ವಾಟ್ಸ್‌ಆಪ್‌ ಗ್ರೂಪ್‌ಗಳಲ್ಲಿ ಪ್ರಚೋದನೆ

ಆಂಧ್ರಪ್ರದೇಶದ ಸಚಿವ ಪಿಣಿಪೆ ವಿಶ್ವರೂಪು ಹಾಗೂ ಶಾಸಕ ಪಿ.ಸತೀಶ್ ಅವರ ಮನೆಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರು. ಈಗ ಹತ್ತಾರು ಜನರನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -
- Advertisement -

ಆಂಧ್ರಪ್ರದೇಶದ ಕೋನಸೀಮಾ ಜಿಲ್ಲೆಯ ಅಮಲಾಪುರಂ ಪಟ್ಟಣದಲ್ಲಿ ಹಿಂಸಾಚಾರ ಭುಗಿಲೆದ್ದ ಕೆಲವು ದಿನಗಳ ನಂತರ, “ಇದು ಪೂರ್ವ ಯೋಜಿತ ಮತ್ತು ಸಂಘಟಿತ ಕೃತ್ಯ” ಎಂದು ರಾಜ್ಯ ಪೊಲೀಸರು ಪತ್ತೆ ಪತ್ತೆಹಚ್ಚಿರುವುದಾಗಿ ‘ದಿ ನ್ಯೂಸ್‌ ಮಿನಿಟ್‌’ ಜಾಲತಾಣ ವರದಿ ಮಾಡಿದೆ.

ಕೋನಸೀಮಾ ಜಿಲ್ಲೆಯನ್ನು ಡಾ.ಬಿ.ಆರ್.ಅಂಬೇಡ್ಕರ್ ಕೋನಸೀಮಾ ಜಿಲ್ಲೆ ಎಂದು ಮರುನಾಮಕರಣ ಮಾಡುವ ಜಗನ್ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಮೇ 24 ರಂದು ಕೋನಸೀಮಾ ಜಿಲ್ಲಾಧಿಕಾರಿ ಕಚೇರಿಯ ಹೊರಗೆ ದೊಡ್ಡ ಗುಂಪು ಜಮಾಯಿಸಿತ್ತು. ಜಿಲ್ಲಾಧಿಕಾರಿ ಕಚೇರಿ ಮೇಲೆ ಕಲ್ಲು ತೂರಾಟ ನಡೆದಿದ್ದು, ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದಾದ ಬಳಿಕ ಸಚಿವ ಪಿಣಿಪೆ ವಿಶ್ವರೂಪು ಹಾಗೂ ಶಾಸಕ ಪಿ.ಸತೀಶ್ ಅವರ ಮನೆಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದರು. ಹಿಂಸಾಚಾರದಲ್ಲಿ ಸುಮಾರು 20 ಪೊಲೀಸ್ ಸಿಬ್ಬಂದಿ ಗಾಯಗೊಂಡರು. ಎರಡು ಬಸ್‌ಗಳು ಸೇರಿದಂತೆ ಹಲವಾರು ವಾಹನಗಳು ಬೆಂಕಿಗೆ ಆಹುತಿಯಾದವು.

ಸಚಿವರು ಮತ್ತು ಶಾಸಕರ ಮನೆಯ ಸಿಸಿಟಿವಿ ಕ್ಯಾಮೆರಾಗಳು, ಕಿಮ್ಸ್ ಆಸ್ಪತ್ರೆ ಹಾಗೂ ಈ ಗುಂಪು ಸಂಚರಿಸುವ ಮಾರ್ಗದಲ್ಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸರು ವಶಕ್ಕೆ ಪಡೆದು ಸಾಕ್ಷ್ಯ ಸಂಗ್ರಹಿಸಿದ್ದಾರೆ ಎಂದು ‘ನ್ಯೂಸ್‌ ಮಿನಿಟ್’ ವರದಿ ಮಾಡಿದೆ.

PC: TheNewsMinute

ಹಿಂಸಾಚಾರ ನಡೆದಾಗ ಅಲ್ಲಿದ್ದ ಸಿಬ್ಬಂದಿಯನ್ನು ಹಿಂಸಾಚಾರದಲ್ಲಿ ಭಾಗವಹಿಸಿದವರನ್ನು ಗುರುತಿಸಲು ಕರೆಸಲಾಯಿತು. ಜಿಲ್ಲೆಯ ಪ್ರಬಲ ಜಾತಿಗಳಾದ ಕಾಪುಗಳು, ಸೆಟ್ಟಿ ಬಲಿಜರು ಹಾಗೂ ನಾಗವಂಶದ ಕೆಲವು ಸದಸ್ಯರು ಘಟನೆಯಲ್ಲಿ ಭಾಗವಹಿಸಿದ್ದರು ಎಂದು ಹಿಂದಿನ ತನಿಖಾ ಅಧಿಕಾರಿ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

PC: TheNewsMinute

ಹಿಂಸಾಚಾರಕ್ಕೂ ಮುನ್ನ 20ಕ್ಕೂ ಹೆಚ್ಚು ವಾಟ್ಸಾಪ್ ಗುಂಪುಗಳು ಸಕ್ರಿಯವಾಗಿದ್ದವು ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಹಿಂಸಾಚಾರವನ್ನು ಹೇಗೆ ಆಯೋಜಿಸಬೇಕು ಎಂಬುದರ ಕುರಿತು ನಿರ್ದಿಷ್ಟ ಸೂಚನೆಗಳೊಂದಿಗೆ ಪ್ರಚೋದನಕಾರಿ ಸಂದೇಶಗಳನ್ನು ಗುಂಪುಗಳಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿರಿ: ಆಂಧ್ರಪ್ರದೇಶ: ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ; ತಿಂಗಳುಗಳ ಬಳಿಕ ಪ್ರಕರಣ ಬಯಲು

ಜಿಲ್ಲೆಯ ಹೆಸರು ಕೋನಸೀಮಾ ಎಂದಷ್ಟೇ ಇರಬೇಕೆಂದು ಬಯಸುವ “ಸ್ನೇಹಿತರನ್ನು” ಒಂದುಗೂಡಿಸುವ ಉದ್ದೇಶದಿಂದ ಈ ಗುಂಪುಗಳನ್ನು ರಚಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಜಿಲ್ಲೆಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೆಸರನ್ನು ಸೇರಿಸುವ ಸರ್ಕಾರದ ನಿರ್ಧಾರದಿಂದ ಗುಂಪಿನಲ್ಲಿರುವವರು ಅಸಮಾಧಾನಗೊಂಡಿದ್ದಾರೆ. ಹೊಸದಾಗಿ ರೂಪುಗೊಂಡ ಜಿಲ್ಲೆಗೆ ಏಪ್ರಿಲ್ 4 ರಂದು ಕೋನಸೀಮ ಎಂದು ಹೆಸರಿಸಲಾಗಿದ್ದರೆ, ಡಾ.ಬಿ.ಆರ್.ಅಂಬೇಡ್ಕರ್ ಹೆಸರನ್ನು ಜೊತೆಗೆ ಸೇರಿಸುವ ನಿರ್ಧಾರವನ್ನು ಮೇ 18ರಂದು ಸರ್ಕಾರ ಘೋಷಿಸಿತು.

ಗ್ರೂಪ್‌ ಅಡ್ಮಿನ್‌ಗಳ ಪತ್ತೆ

“ಹಿಂಸಾಚಾರದಲ್ಲಿ ಭಾಗವಹಿಸಿದ 19 ಜನರನ್ನು ಬಂಧಿಸಲಾಗಿದೆ” ಎಂದು ಏಲೂರು ವ್ಯಾಪ್ತಿಯ ಡಿಐಜಿ ಪಾಲ ರಾಜು ‘ನ್ಯೂಸ್‌ ಮಿನಿಟ್‌’ಗೆ ತಿಳಿಸಿದ್ದಾರೆ.

“ನಾವು ಮೇ 25ರಂದು 46 ಜನರನ್ನು ಬಂಧಿಸಿದ್ದೇವೆ. ಹಿಂಸಾಚಾರದಲ್ಲಿ ಅವರ ಪಾತ್ರವನ್ನು ಸಾಬೀತುಪಡಿಸಲು ನಮಗೆ ಸಾಕಷ್ಟು ಪುರಾವೆಗಳು ದೊರೆತಿವೆ. ನಾವು ಅವರ ಫೋನ್‌ಗಳನ್ನು ಪರಿಶೀಲಿಸಿದ್ದು, ವಿವಿಧ ಗ್ರೂಪ್‌ಗಳಲ್ಲಿನ ಹಲವಾರು ಸಂದೇಶಗಳನ್ನು ಡಿಲೀಟ್ ಮಾಡಲಾಗಿದೆ. ಘಟನೆಯ ನಂತರ ಅನೇಕರು ಗ್ರೂಪ್‌ಗಳಿಂದ ಲೆಫ್ಟ್‌ ಆಗಿದ್ದಾರೆ. ಡಿಲೀಟ್ ಮಾಡಲಾದ ಎಲ್ಲಾ ಸಂದೇಶಗಳನ್ನು ಮತ್ತು ಗುಂಪುಗಳಿಂದ ನಿರ್ಗಮಿಸಿದವರ ವಿವರಗಳನ್ನು ನಾವು ತಂತ್ರಜ್ಞಾನಗಳನ್ನು ಬಳಸಿಕೊಂಡು ಪತ್ತೆಹಚ್ಚಿದ್ದೇವೆ. ನಾವು ಗ್ರೂಪ್ ಅಡ್ಮಿನ್‌ಗಳನ್ನು ಗುರುತಿಸಿದ್ದೇವೆ. ಅವರು ಕೂಡ ಶೀಘ್ರದಲ್ಲೇ ಕಾನೂನಿನ ಕ್ರಮಗಳನ್ನು ಎದುರಿಸಲಿದ್ದಾರೆ” ಎಂದು ಅವರು ಮಾಹಿತಿ ನೀಡಿದ್ದಾರೆ.

ಜಾತಿಯ ವಿಷಯವಾಗಿ ಈ ಗುಂಪುಗಳನ್ನು ರಚಿಸಲಾಗಿತ್ತೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ತನಿಖಾಧಿಕಾರಿ, “ಜಾತಿ ವಿಚಾರವಾಗಿ ಒಗ್ಗೂಡಿರುವ ಕುರಿತು ನಾವಿನ್ನು ವಿಶ್ಲೇಷಣೆ ಮಾಡಿಲ್ಲ. ಈ ವಾಟ್ಸಾಪ್ ಗುಂಪುಗಳು ಮುಖ್ಯವಾಗಿ ಜಿಲ್ಲೆಗೆ ಕೋನಸೀಮಾ ಎಂದು ಹೆಸರಿಸಬೇಕೆಂದು ಬಯಸುವ ಸ್ನೇಹಿತರನ್ನು ಒಳಗೊಂಡಿವೆ. ವಾಟ್ಸಾಪ್ ಗ್ರೂಪ್‌ಗಳ ಹೆಸರು ಗಮನಿಸಿದರೆ ಇದು ಬಹಿರಂಗವಾಗುತ್ತದೆ. ಹೆಚ್ಚಿನವರನ್ನು ಬಂಧಿಸಿದ ಬಳಿಕ, ನಾವು ವಿವಿಧ ಆಯಾಮಗಳನ್ನು ಗುರುತಿಸಲು ಪ್ರಯತ್ನಿಸುತ್ತೇವೆ. ಜಾತಿ ಒಗ್ಗೂಡುವಿಕೆ ಮತ್ತು ರಾಜಕೀಯ ಸಂಬಂಧಗಳನ್ನೂ ವಿಚಾರಣೆ ನಡೆಸುತ್ತೇವೆ” ಎಂದಿದ್ದಾರೆ.

ಮೂಲ: ದಿ ನ್ಯೂಸ್‌ ಮಿನಿಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...