Homeಮುಖಪುಟಕೋನಸೀಮಾ ಜಿಲ್ಲೆಗೆ ಅಂಬೇಡ್ಕರ್‌ ಹೆಸರು: ಹಿಂಸಾಚಾರಕ್ಕೆ ವಾಟ್ಸ್‌ಆಪ್‌ ಗ್ರೂಪ್‌ಗಳಲ್ಲಿ ಪ್ರಚೋದನೆ

ಕೋನಸೀಮಾ ಜಿಲ್ಲೆಗೆ ಅಂಬೇಡ್ಕರ್‌ ಹೆಸರು: ಹಿಂಸಾಚಾರಕ್ಕೆ ವಾಟ್ಸ್‌ಆಪ್‌ ಗ್ರೂಪ್‌ಗಳಲ್ಲಿ ಪ್ರಚೋದನೆ

ಆಂಧ್ರಪ್ರದೇಶದ ಸಚಿವ ಪಿಣಿಪೆ ವಿಶ್ವರೂಪು ಹಾಗೂ ಶಾಸಕ ಪಿ.ಸತೀಶ್ ಅವರ ಮನೆಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರು. ಈಗ ಹತ್ತಾರು ಜನರನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -
- Advertisement -

ಆಂಧ್ರಪ್ರದೇಶದ ಕೋನಸೀಮಾ ಜಿಲ್ಲೆಯ ಅಮಲಾಪುರಂ ಪಟ್ಟಣದಲ್ಲಿ ಹಿಂಸಾಚಾರ ಭುಗಿಲೆದ್ದ ಕೆಲವು ದಿನಗಳ ನಂತರ, “ಇದು ಪೂರ್ವ ಯೋಜಿತ ಮತ್ತು ಸಂಘಟಿತ ಕೃತ್ಯ” ಎಂದು ರಾಜ್ಯ ಪೊಲೀಸರು ಪತ್ತೆ ಪತ್ತೆಹಚ್ಚಿರುವುದಾಗಿ ‘ದಿ ನ್ಯೂಸ್‌ ಮಿನಿಟ್‌’ ಜಾಲತಾಣ ವರದಿ ಮಾಡಿದೆ.

ಕೋನಸೀಮಾ ಜಿಲ್ಲೆಯನ್ನು ಡಾ.ಬಿ.ಆರ್.ಅಂಬೇಡ್ಕರ್ ಕೋನಸೀಮಾ ಜಿಲ್ಲೆ ಎಂದು ಮರುನಾಮಕರಣ ಮಾಡುವ ಜಗನ್ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಮೇ 24 ರಂದು ಕೋನಸೀಮಾ ಜಿಲ್ಲಾಧಿಕಾರಿ ಕಚೇರಿಯ ಹೊರಗೆ ದೊಡ್ಡ ಗುಂಪು ಜಮಾಯಿಸಿತ್ತು. ಜಿಲ್ಲಾಧಿಕಾರಿ ಕಚೇರಿ ಮೇಲೆ ಕಲ್ಲು ತೂರಾಟ ನಡೆದಿದ್ದು, ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದಾದ ಬಳಿಕ ಸಚಿವ ಪಿಣಿಪೆ ವಿಶ್ವರೂಪು ಹಾಗೂ ಶಾಸಕ ಪಿ.ಸತೀಶ್ ಅವರ ಮನೆಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದರು. ಹಿಂಸಾಚಾರದಲ್ಲಿ ಸುಮಾರು 20 ಪೊಲೀಸ್ ಸಿಬ್ಬಂದಿ ಗಾಯಗೊಂಡರು. ಎರಡು ಬಸ್‌ಗಳು ಸೇರಿದಂತೆ ಹಲವಾರು ವಾಹನಗಳು ಬೆಂಕಿಗೆ ಆಹುತಿಯಾದವು.

ಸಚಿವರು ಮತ್ತು ಶಾಸಕರ ಮನೆಯ ಸಿಸಿಟಿವಿ ಕ್ಯಾಮೆರಾಗಳು, ಕಿಮ್ಸ್ ಆಸ್ಪತ್ರೆ ಹಾಗೂ ಈ ಗುಂಪು ಸಂಚರಿಸುವ ಮಾರ್ಗದಲ್ಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸರು ವಶಕ್ಕೆ ಪಡೆದು ಸಾಕ್ಷ್ಯ ಸಂಗ್ರಹಿಸಿದ್ದಾರೆ ಎಂದು ‘ನ್ಯೂಸ್‌ ಮಿನಿಟ್’ ವರದಿ ಮಾಡಿದೆ.

PC: TheNewsMinute

ಹಿಂಸಾಚಾರ ನಡೆದಾಗ ಅಲ್ಲಿದ್ದ ಸಿಬ್ಬಂದಿಯನ್ನು ಹಿಂಸಾಚಾರದಲ್ಲಿ ಭಾಗವಹಿಸಿದವರನ್ನು ಗುರುತಿಸಲು ಕರೆಸಲಾಯಿತು. ಜಿಲ್ಲೆಯ ಪ್ರಬಲ ಜಾತಿಗಳಾದ ಕಾಪುಗಳು, ಸೆಟ್ಟಿ ಬಲಿಜರು ಹಾಗೂ ನಾಗವಂಶದ ಕೆಲವು ಸದಸ್ಯರು ಘಟನೆಯಲ್ಲಿ ಭಾಗವಹಿಸಿದ್ದರು ಎಂದು ಹಿಂದಿನ ತನಿಖಾ ಅಧಿಕಾರಿ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

PC: TheNewsMinute

ಹಿಂಸಾಚಾರಕ್ಕೂ ಮುನ್ನ 20ಕ್ಕೂ ಹೆಚ್ಚು ವಾಟ್ಸಾಪ್ ಗುಂಪುಗಳು ಸಕ್ರಿಯವಾಗಿದ್ದವು ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಹಿಂಸಾಚಾರವನ್ನು ಹೇಗೆ ಆಯೋಜಿಸಬೇಕು ಎಂಬುದರ ಕುರಿತು ನಿರ್ದಿಷ್ಟ ಸೂಚನೆಗಳೊಂದಿಗೆ ಪ್ರಚೋದನಕಾರಿ ಸಂದೇಶಗಳನ್ನು ಗುಂಪುಗಳಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿರಿ: ಆಂಧ್ರಪ್ರದೇಶ: ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ; ತಿಂಗಳುಗಳ ಬಳಿಕ ಪ್ರಕರಣ ಬಯಲು

ಜಿಲ್ಲೆಯ ಹೆಸರು ಕೋನಸೀಮಾ ಎಂದಷ್ಟೇ ಇರಬೇಕೆಂದು ಬಯಸುವ “ಸ್ನೇಹಿತರನ್ನು” ಒಂದುಗೂಡಿಸುವ ಉದ್ದೇಶದಿಂದ ಈ ಗುಂಪುಗಳನ್ನು ರಚಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಜಿಲ್ಲೆಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೆಸರನ್ನು ಸೇರಿಸುವ ಸರ್ಕಾರದ ನಿರ್ಧಾರದಿಂದ ಗುಂಪಿನಲ್ಲಿರುವವರು ಅಸಮಾಧಾನಗೊಂಡಿದ್ದಾರೆ. ಹೊಸದಾಗಿ ರೂಪುಗೊಂಡ ಜಿಲ್ಲೆಗೆ ಏಪ್ರಿಲ್ 4 ರಂದು ಕೋನಸೀಮ ಎಂದು ಹೆಸರಿಸಲಾಗಿದ್ದರೆ, ಡಾ.ಬಿ.ಆರ್.ಅಂಬೇಡ್ಕರ್ ಹೆಸರನ್ನು ಜೊತೆಗೆ ಸೇರಿಸುವ ನಿರ್ಧಾರವನ್ನು ಮೇ 18ರಂದು ಸರ್ಕಾರ ಘೋಷಿಸಿತು.

ಗ್ರೂಪ್‌ ಅಡ್ಮಿನ್‌ಗಳ ಪತ್ತೆ

“ಹಿಂಸಾಚಾರದಲ್ಲಿ ಭಾಗವಹಿಸಿದ 19 ಜನರನ್ನು ಬಂಧಿಸಲಾಗಿದೆ” ಎಂದು ಏಲೂರು ವ್ಯಾಪ್ತಿಯ ಡಿಐಜಿ ಪಾಲ ರಾಜು ‘ನ್ಯೂಸ್‌ ಮಿನಿಟ್‌’ಗೆ ತಿಳಿಸಿದ್ದಾರೆ.

“ನಾವು ಮೇ 25ರಂದು 46 ಜನರನ್ನು ಬಂಧಿಸಿದ್ದೇವೆ. ಹಿಂಸಾಚಾರದಲ್ಲಿ ಅವರ ಪಾತ್ರವನ್ನು ಸಾಬೀತುಪಡಿಸಲು ನಮಗೆ ಸಾಕಷ್ಟು ಪುರಾವೆಗಳು ದೊರೆತಿವೆ. ನಾವು ಅವರ ಫೋನ್‌ಗಳನ್ನು ಪರಿಶೀಲಿಸಿದ್ದು, ವಿವಿಧ ಗ್ರೂಪ್‌ಗಳಲ್ಲಿನ ಹಲವಾರು ಸಂದೇಶಗಳನ್ನು ಡಿಲೀಟ್ ಮಾಡಲಾಗಿದೆ. ಘಟನೆಯ ನಂತರ ಅನೇಕರು ಗ್ರೂಪ್‌ಗಳಿಂದ ಲೆಫ್ಟ್‌ ಆಗಿದ್ದಾರೆ. ಡಿಲೀಟ್ ಮಾಡಲಾದ ಎಲ್ಲಾ ಸಂದೇಶಗಳನ್ನು ಮತ್ತು ಗುಂಪುಗಳಿಂದ ನಿರ್ಗಮಿಸಿದವರ ವಿವರಗಳನ್ನು ನಾವು ತಂತ್ರಜ್ಞಾನಗಳನ್ನು ಬಳಸಿಕೊಂಡು ಪತ್ತೆಹಚ್ಚಿದ್ದೇವೆ. ನಾವು ಗ್ರೂಪ್ ಅಡ್ಮಿನ್‌ಗಳನ್ನು ಗುರುತಿಸಿದ್ದೇವೆ. ಅವರು ಕೂಡ ಶೀಘ್ರದಲ್ಲೇ ಕಾನೂನಿನ ಕ್ರಮಗಳನ್ನು ಎದುರಿಸಲಿದ್ದಾರೆ” ಎಂದು ಅವರು ಮಾಹಿತಿ ನೀಡಿದ್ದಾರೆ.

ಜಾತಿಯ ವಿಷಯವಾಗಿ ಈ ಗುಂಪುಗಳನ್ನು ರಚಿಸಲಾಗಿತ್ತೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ತನಿಖಾಧಿಕಾರಿ, “ಜಾತಿ ವಿಚಾರವಾಗಿ ಒಗ್ಗೂಡಿರುವ ಕುರಿತು ನಾವಿನ್ನು ವಿಶ್ಲೇಷಣೆ ಮಾಡಿಲ್ಲ. ಈ ವಾಟ್ಸಾಪ್ ಗುಂಪುಗಳು ಮುಖ್ಯವಾಗಿ ಜಿಲ್ಲೆಗೆ ಕೋನಸೀಮಾ ಎಂದು ಹೆಸರಿಸಬೇಕೆಂದು ಬಯಸುವ ಸ್ನೇಹಿತರನ್ನು ಒಳಗೊಂಡಿವೆ. ವಾಟ್ಸಾಪ್ ಗ್ರೂಪ್‌ಗಳ ಹೆಸರು ಗಮನಿಸಿದರೆ ಇದು ಬಹಿರಂಗವಾಗುತ್ತದೆ. ಹೆಚ್ಚಿನವರನ್ನು ಬಂಧಿಸಿದ ಬಳಿಕ, ನಾವು ವಿವಿಧ ಆಯಾಮಗಳನ್ನು ಗುರುತಿಸಲು ಪ್ರಯತ್ನಿಸುತ್ತೇವೆ. ಜಾತಿ ಒಗ್ಗೂಡುವಿಕೆ ಮತ್ತು ರಾಜಕೀಯ ಸಂಬಂಧಗಳನ್ನೂ ವಿಚಾರಣೆ ನಡೆಸುತ್ತೇವೆ” ಎಂದಿದ್ದಾರೆ.

ಮೂಲ: ದಿ ನ್ಯೂಸ್‌ ಮಿನಿಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...