Homeಮುಖಪುಟಕೋನಸೀಮಾ ಜಿಲ್ಲೆಗೆ ಅಂಬೇಡ್ಕರ್‌ ಹೆಸರು: ಹಿಂಸಾಚಾರಕ್ಕೆ ವಾಟ್ಸ್‌ಆಪ್‌ ಗ್ರೂಪ್‌ಗಳಲ್ಲಿ ಪ್ರಚೋದನೆ

ಕೋನಸೀಮಾ ಜಿಲ್ಲೆಗೆ ಅಂಬೇಡ್ಕರ್‌ ಹೆಸರು: ಹಿಂಸಾಚಾರಕ್ಕೆ ವಾಟ್ಸ್‌ಆಪ್‌ ಗ್ರೂಪ್‌ಗಳಲ್ಲಿ ಪ್ರಚೋದನೆ

ಆಂಧ್ರಪ್ರದೇಶದ ಸಚಿವ ಪಿಣಿಪೆ ವಿಶ್ವರೂಪು ಹಾಗೂ ಶಾಸಕ ಪಿ.ಸತೀಶ್ ಅವರ ಮನೆಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರು. ಈಗ ಹತ್ತಾರು ಜನರನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -
- Advertisement -

ಆಂಧ್ರಪ್ರದೇಶದ ಕೋನಸೀಮಾ ಜಿಲ್ಲೆಯ ಅಮಲಾಪುರಂ ಪಟ್ಟಣದಲ್ಲಿ ಹಿಂಸಾಚಾರ ಭುಗಿಲೆದ್ದ ಕೆಲವು ದಿನಗಳ ನಂತರ, “ಇದು ಪೂರ್ವ ಯೋಜಿತ ಮತ್ತು ಸಂಘಟಿತ ಕೃತ್ಯ” ಎಂದು ರಾಜ್ಯ ಪೊಲೀಸರು ಪತ್ತೆ ಪತ್ತೆಹಚ್ಚಿರುವುದಾಗಿ ‘ದಿ ನ್ಯೂಸ್‌ ಮಿನಿಟ್‌’ ಜಾಲತಾಣ ವರದಿ ಮಾಡಿದೆ.

ಕೋನಸೀಮಾ ಜಿಲ್ಲೆಯನ್ನು ಡಾ.ಬಿ.ಆರ್.ಅಂಬೇಡ್ಕರ್ ಕೋನಸೀಮಾ ಜಿಲ್ಲೆ ಎಂದು ಮರುನಾಮಕರಣ ಮಾಡುವ ಜಗನ್ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಮೇ 24 ರಂದು ಕೋನಸೀಮಾ ಜಿಲ್ಲಾಧಿಕಾರಿ ಕಚೇರಿಯ ಹೊರಗೆ ದೊಡ್ಡ ಗುಂಪು ಜಮಾಯಿಸಿತ್ತು. ಜಿಲ್ಲಾಧಿಕಾರಿ ಕಚೇರಿ ಮೇಲೆ ಕಲ್ಲು ತೂರಾಟ ನಡೆದಿದ್ದು, ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದಾದ ಬಳಿಕ ಸಚಿವ ಪಿಣಿಪೆ ವಿಶ್ವರೂಪು ಹಾಗೂ ಶಾಸಕ ಪಿ.ಸತೀಶ್ ಅವರ ಮನೆಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದರು. ಹಿಂಸಾಚಾರದಲ್ಲಿ ಸುಮಾರು 20 ಪೊಲೀಸ್ ಸಿಬ್ಬಂದಿ ಗಾಯಗೊಂಡರು. ಎರಡು ಬಸ್‌ಗಳು ಸೇರಿದಂತೆ ಹಲವಾರು ವಾಹನಗಳು ಬೆಂಕಿಗೆ ಆಹುತಿಯಾದವು.

ಸಚಿವರು ಮತ್ತು ಶಾಸಕರ ಮನೆಯ ಸಿಸಿಟಿವಿ ಕ್ಯಾಮೆರಾಗಳು, ಕಿಮ್ಸ್ ಆಸ್ಪತ್ರೆ ಹಾಗೂ ಈ ಗುಂಪು ಸಂಚರಿಸುವ ಮಾರ್ಗದಲ್ಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸರು ವಶಕ್ಕೆ ಪಡೆದು ಸಾಕ್ಷ್ಯ ಸಂಗ್ರಹಿಸಿದ್ದಾರೆ ಎಂದು ‘ನ್ಯೂಸ್‌ ಮಿನಿಟ್’ ವರದಿ ಮಾಡಿದೆ.

PC: TheNewsMinute

ಹಿಂಸಾಚಾರ ನಡೆದಾಗ ಅಲ್ಲಿದ್ದ ಸಿಬ್ಬಂದಿಯನ್ನು ಹಿಂಸಾಚಾರದಲ್ಲಿ ಭಾಗವಹಿಸಿದವರನ್ನು ಗುರುತಿಸಲು ಕರೆಸಲಾಯಿತು. ಜಿಲ್ಲೆಯ ಪ್ರಬಲ ಜಾತಿಗಳಾದ ಕಾಪುಗಳು, ಸೆಟ್ಟಿ ಬಲಿಜರು ಹಾಗೂ ನಾಗವಂಶದ ಕೆಲವು ಸದಸ್ಯರು ಘಟನೆಯಲ್ಲಿ ಭಾಗವಹಿಸಿದ್ದರು ಎಂದು ಹಿಂದಿನ ತನಿಖಾ ಅಧಿಕಾರಿ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

PC: TheNewsMinute

ಹಿಂಸಾಚಾರಕ್ಕೂ ಮುನ್ನ 20ಕ್ಕೂ ಹೆಚ್ಚು ವಾಟ್ಸಾಪ್ ಗುಂಪುಗಳು ಸಕ್ರಿಯವಾಗಿದ್ದವು ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಹಿಂಸಾಚಾರವನ್ನು ಹೇಗೆ ಆಯೋಜಿಸಬೇಕು ಎಂಬುದರ ಕುರಿತು ನಿರ್ದಿಷ್ಟ ಸೂಚನೆಗಳೊಂದಿಗೆ ಪ್ರಚೋದನಕಾರಿ ಸಂದೇಶಗಳನ್ನು ಗುಂಪುಗಳಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿರಿ: ಆಂಧ್ರಪ್ರದೇಶ: ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ; ತಿಂಗಳುಗಳ ಬಳಿಕ ಪ್ರಕರಣ ಬಯಲು

ಜಿಲ್ಲೆಯ ಹೆಸರು ಕೋನಸೀಮಾ ಎಂದಷ್ಟೇ ಇರಬೇಕೆಂದು ಬಯಸುವ “ಸ್ನೇಹಿತರನ್ನು” ಒಂದುಗೂಡಿಸುವ ಉದ್ದೇಶದಿಂದ ಈ ಗುಂಪುಗಳನ್ನು ರಚಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಜಿಲ್ಲೆಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೆಸರನ್ನು ಸೇರಿಸುವ ಸರ್ಕಾರದ ನಿರ್ಧಾರದಿಂದ ಗುಂಪಿನಲ್ಲಿರುವವರು ಅಸಮಾಧಾನಗೊಂಡಿದ್ದಾರೆ. ಹೊಸದಾಗಿ ರೂಪುಗೊಂಡ ಜಿಲ್ಲೆಗೆ ಏಪ್ರಿಲ್ 4 ರಂದು ಕೋನಸೀಮ ಎಂದು ಹೆಸರಿಸಲಾಗಿದ್ದರೆ, ಡಾ.ಬಿ.ಆರ್.ಅಂಬೇಡ್ಕರ್ ಹೆಸರನ್ನು ಜೊತೆಗೆ ಸೇರಿಸುವ ನಿರ್ಧಾರವನ್ನು ಮೇ 18ರಂದು ಸರ್ಕಾರ ಘೋಷಿಸಿತು.

ಗ್ರೂಪ್‌ ಅಡ್ಮಿನ್‌ಗಳ ಪತ್ತೆ

“ಹಿಂಸಾಚಾರದಲ್ಲಿ ಭಾಗವಹಿಸಿದ 19 ಜನರನ್ನು ಬಂಧಿಸಲಾಗಿದೆ” ಎಂದು ಏಲೂರು ವ್ಯಾಪ್ತಿಯ ಡಿಐಜಿ ಪಾಲ ರಾಜು ‘ನ್ಯೂಸ್‌ ಮಿನಿಟ್‌’ಗೆ ತಿಳಿಸಿದ್ದಾರೆ.

“ನಾವು ಮೇ 25ರಂದು 46 ಜನರನ್ನು ಬಂಧಿಸಿದ್ದೇವೆ. ಹಿಂಸಾಚಾರದಲ್ಲಿ ಅವರ ಪಾತ್ರವನ್ನು ಸಾಬೀತುಪಡಿಸಲು ನಮಗೆ ಸಾಕಷ್ಟು ಪುರಾವೆಗಳು ದೊರೆತಿವೆ. ನಾವು ಅವರ ಫೋನ್‌ಗಳನ್ನು ಪರಿಶೀಲಿಸಿದ್ದು, ವಿವಿಧ ಗ್ರೂಪ್‌ಗಳಲ್ಲಿನ ಹಲವಾರು ಸಂದೇಶಗಳನ್ನು ಡಿಲೀಟ್ ಮಾಡಲಾಗಿದೆ. ಘಟನೆಯ ನಂತರ ಅನೇಕರು ಗ್ರೂಪ್‌ಗಳಿಂದ ಲೆಫ್ಟ್‌ ಆಗಿದ್ದಾರೆ. ಡಿಲೀಟ್ ಮಾಡಲಾದ ಎಲ್ಲಾ ಸಂದೇಶಗಳನ್ನು ಮತ್ತು ಗುಂಪುಗಳಿಂದ ನಿರ್ಗಮಿಸಿದವರ ವಿವರಗಳನ್ನು ನಾವು ತಂತ್ರಜ್ಞಾನಗಳನ್ನು ಬಳಸಿಕೊಂಡು ಪತ್ತೆಹಚ್ಚಿದ್ದೇವೆ. ನಾವು ಗ್ರೂಪ್ ಅಡ್ಮಿನ್‌ಗಳನ್ನು ಗುರುತಿಸಿದ್ದೇವೆ. ಅವರು ಕೂಡ ಶೀಘ್ರದಲ್ಲೇ ಕಾನೂನಿನ ಕ್ರಮಗಳನ್ನು ಎದುರಿಸಲಿದ್ದಾರೆ” ಎಂದು ಅವರು ಮಾಹಿತಿ ನೀಡಿದ್ದಾರೆ.

ಜಾತಿಯ ವಿಷಯವಾಗಿ ಈ ಗುಂಪುಗಳನ್ನು ರಚಿಸಲಾಗಿತ್ತೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ತನಿಖಾಧಿಕಾರಿ, “ಜಾತಿ ವಿಚಾರವಾಗಿ ಒಗ್ಗೂಡಿರುವ ಕುರಿತು ನಾವಿನ್ನು ವಿಶ್ಲೇಷಣೆ ಮಾಡಿಲ್ಲ. ಈ ವಾಟ್ಸಾಪ್ ಗುಂಪುಗಳು ಮುಖ್ಯವಾಗಿ ಜಿಲ್ಲೆಗೆ ಕೋನಸೀಮಾ ಎಂದು ಹೆಸರಿಸಬೇಕೆಂದು ಬಯಸುವ ಸ್ನೇಹಿತರನ್ನು ಒಳಗೊಂಡಿವೆ. ವಾಟ್ಸಾಪ್ ಗ್ರೂಪ್‌ಗಳ ಹೆಸರು ಗಮನಿಸಿದರೆ ಇದು ಬಹಿರಂಗವಾಗುತ್ತದೆ. ಹೆಚ್ಚಿನವರನ್ನು ಬಂಧಿಸಿದ ಬಳಿಕ, ನಾವು ವಿವಿಧ ಆಯಾಮಗಳನ್ನು ಗುರುತಿಸಲು ಪ್ರಯತ್ನಿಸುತ್ತೇವೆ. ಜಾತಿ ಒಗ್ಗೂಡುವಿಕೆ ಮತ್ತು ರಾಜಕೀಯ ಸಂಬಂಧಗಳನ್ನೂ ವಿಚಾರಣೆ ನಡೆಸುತ್ತೇವೆ” ಎಂದಿದ್ದಾರೆ.

ಮೂಲ: ದಿ ನ್ಯೂಸ್‌ ಮಿನಿಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...