Homeಕರ್ನಾಟಕಎರಡು ವರ್ಷ ಪೂರೈಸಿದ ಅರುಣ್ ಜೋಳದಕೂಡ್ಲಿಗಿ ಸಂಪಾದಕತ್ವದ ‘ಅಂಬೇಡ್ಕರ್ ಓದು’

ಎರಡು ವರ್ಷ ಪೂರೈಸಿದ ಅರುಣ್ ಜೋಳದಕೂಡ್ಲಿಗಿ ಸಂಪಾದಕತ್ವದ ‘ಅಂಬೇಡ್ಕರ್ ಓದು’

ಈ ತನಕ 351 ಜನರಿಂದ 525 ಸರಣಿಗಳನ್ನು ಓದಿಸಲಾಗಿದ್ದು, ಯೂಟ್ಯೂಬ್‌ನಲ್ಲಿ ಲಭ್ಯವಿರುವ ಈ ಸರಣಿಯನ್ನು ಕನ್ನಡದಲ್ಲಿ 120 ಗಂಟೆಗಳ ಕಾಲ ಕೇಳಬಹುದಾಗಿದೆ

- Advertisement -
- Advertisement -

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಗಳನ್ನು ಅಂತರ್ಜಾಲದ ಮೂಲಕ ಮನೆ-ಮನಗಳಿಗೆ ತಲುಪಿಸುವ ಭಾಗವಾಗಿ ಬರಹಗಾರ, ಪ್ರಾಧ್ಯಾಪಕ ಅರುಣ್ ಜೋಳದಕೂಡ್ಲಿಗಿ ಅವರ ಸಂಪಾದಕತ್ವದಲ್ಲಿ  ನಡೆಯುತ್ತಿರುವ ‘ಅಂಬೇಡ್ಕರ್‌ ಓದು’ ಯೂಟ್ಯೂಬ್‌ ಸರಣಿ ಕಾರ್ಯಕ್ರಮ ತನ್ನ ಎರಡು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ.

ಸೆಪ್ಟಂಬರ್ 7, 2020 ರಂದು ಖ್ಯಾತ ಲೇಖಕಿ ಹೆಚ್.ಎಸ್.ಅನುಪಮಾ ಮೊದಲ ಸಂಚಿಕೆ ಓದುವ ಮೂಲಕ ‘ಅಂಬೇಡ್ಕರ್‌ ಓದು’ ಸರಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. ಈ ಓದು ಸರಣಿಯು ತನ್ನ 525 ನೇ ಸಂಚಿಕೆ ತಲುಪಿದ್ದು, ಅಂಬೇಡ್ಕರ್ ಬೌದ್ಧ ದಮ್ಮ ಸ್ವೀಕರಿಸಿದ ದಿನದ ಅಕ್ಟೋಬರ್-14 ರ ವಿಶೇಷ ಸಂಚಿಕೆಯನ್ನು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಟಿ.ಎಂ.ಭಾಸ್ಕರ್ ಅವರು ಓದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರಣಿ ಓದು ಕಾರ್ಯಕ್ರಮದಲ್ಲಿ ಈ ತನಕ 351 ಜನರಿಂದ 525 ಸರಣಿಗಳನ್ನು ಓದಿಸಲಾಗಿದೆ. ಯೂಟ್ಯೂಬ್‌ನಲ್ಲಿ ಲಭ್ಯವಿರುವ ಈ ಓದಿನ ಸರಣಿಯನ್ನು ಕನ್ನಡದಲ್ಲಿ 120 ಗಂಟೆಗಳ ಕಾಲ ಕೇಳಬಹುದಾಗಿದೆ. ಈತನಕ 167 ಮಹಿಳೆಯರು 300 ಕ್ಕಿಂತ ಹೆಚ್ಚಿನ ಸರಣಿಗಳನ್ನು ಓದಿರುವುದು ಈ ಓದು ಸರಣಿಯ ವಿಶೇಷವಾಗಿದೆ.

ಇದನ್ನೂ ಓದಿ: ಹುಲಿ ಜಾನಪದ; ಕನ್ನಡ ಜಾನಪದ ಪರಂಪರೆಯಲ್ಲಿ ಹುಲಿಯ ಜತೆಗಿನ ಮುಖಾಮುಖಿ- ಅರುಣ್ ಜೋಳದಕೂಡ್ಲಿಗಿ

ವಿಶೇಷವಾಗಿ ಓದಿನ 500 ನೇ ಸಂಚಿಕೆಯನ್ನು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಓದಿದ್ದರು. ಈ ಹಿಂದೆ ರಾಜ್ಯಸಭಾ ಸದಸ್ಯರಾದ ಎಲ್.ಹನುಮಂತಯ್ಯ, ಸಂಗೀತ ನಿರ್ದೇಶಕ ಹಂಸಲೇಖ, ನಟರಾದ ರಮೇಶ್ ಅರವಿಂದ, ಕಿಶೋರ್, ರಂಗಾಯಣ ರಘು, ಅಚ್ಯುತ ಕುಮಾರ್, ಸಿನೆಮಾ ನಿರ್ದೇಶಕರಾದ ಬಿ.ಸುರೇಶ್, ಬಿ.ಎಂ ಗಿರಿರಾಜ, ಮಾಜಿ ಸಚಿವೆ ಮೋಟಮ್ಮ ಓದಿದ್ದರು.

ಅಲ್ಲದೆ ಬಿಜಾಪುರದ ಮಹಿಳಾ ವಿವಿಯ ವಿಶ್ರಾಂತ ಕುಲಪತಿಗಳಾದ ಪ್ರೊ. ಸಬೀಹಾ ಭೂಮಿಗೌಡ, ಹಿರಿಯ ಲೇಖಕರಾ ದೇವನೂರು ಮಹಾದೇವ, ಅಮರೇಶ ನುಗಡೋಣಿ, ನಟರಾಜ ಹುಳಿಯಾರ, ಹೆಚ್.ಎಸ್.ರಾಘವೇಂದ್ರರಾವ್, ಜಾನಪದ ಅಕಾಡೆಮಿ ಅಧ್ಯಕ್ಷರಾದ ಪದ್ಮಶ್ರೀ ಮಂಜಮ್ಮ ಜೋಗತಿ ಪತ್ರಕರ್ತರಾದ ದಿನೇಶ ಅಮಿನಮಟ್ಟು, ರವೀಂದ್ರ ಭಟ್, ವೈ.ಗ ಜಗದೀಶ, ರಶ್ಮಿ ಎಸ್. ಸೇರಿದಂತೆ ಸಾಹಿತಿಗಳು, ಪತ್ರಕರ್ತರು, ನಟರು, ಶಿಕ್ಷರು, ವಿದ್ಯಾರ್ಥಿಗಳು, ರೈತರು ಎಲ್ಲಾ ಹಿನ್ನೆಲೆಯವರೂ ಓದಿನ ಭಾಗವಾಗಿದ್ದಾರೆ.

ಅರುಣ್ ಜೋಳದಕೂಡ್ಲಿಗಿ ಅವರು 2019 ರ ಏಪ್ರಿಲ್ 14 ರಂದು ತಮ್ಮ ಪೇಸ್‌ಬುಕ್ ಪೇಜ್‌ನಲ್ಲಿ ಅಂಬೇಡ್ಕರ್ ಓದನ್ನು ಲೈವ್ ಮಾಡಿದ್ದರು. “ಈ ಓದಿಗೆ ಸಿಕ್ಕ ಪ್ರತಿಕ್ರಿಯೆ ಓದನ್ನು ನಿರಂತರವಾಗಿ ನಡೆಸುವ ಕನಸೊಂದನ್ನು ಹುಟ್ಟಿಸಿತ್ತು” ಎಂದು ಅವರು ಹೇಳುತ್ತಾರೆ.

ಇದನ್ನೂ ಓದಿ: ದಮನಿತರ ಸಿಟ್ಟಿನ ಏಕೀಕರಣ – ಅರುಣ್ ಜೋಳದಕೂಡ್ಲಿಗಿ

“ಖಾಸಗಿ ವಾಹಿನಿಯಲ್ಲಿ ಮಹಾನಾಯಕ ದಾರವಾಹಿ ಶುರುವಾದ ನಂತರ ಅಂತರ್ಜಾಲದಲ್ಲಿ ಕನ್ನಡದಲ್ಲಿ ಅಂಬೇಡ್ಕರ್ ಹುಡುಕಾಟ ಹೆಚ್ಚಾಯಿತು. ಆದರೆ ಅಂತರ್ಜಾಲದಲ್ಲಿ ಕನ್ನಡದಲ್ಲಿ ಅಂಬೇಡ್ಕರ್ ಅರಿವು ಹೆಚ್ಚಾಗಿ ಇರಲಿಲ್ಲ. ಆಗ ಅಂತರ್ಜಾಲದಲ್ಲಿ ಅಂಬೇಡ್ಕರ್ ಚಿಂತನೆಗಳು ಸಿಗುವಂತಾಗಬೇಕು ಎಂದು ಅಂಬೇಡ್ಕರ್ ಓದು ಪ್ರಾರಂಭಿಸಲಾಯಿತು” ಎಂದು ಅರುಣ್ ನೆನಪಿಸಿಕೊಳ್ಳುತ್ತಾರೆ.

“ನಾನು ನೆಪಮಾತ್ರನಾಗಿದ್ದು ‘ಇದು ಸಹಭಾಗಿತ್ವದ ಯಶಸ್ಸು’. ‘ಎಲ್ಲರ ಅಂಬೇಡ್ಕರ್’ ಎನ್ನುವ ತತ್ವದಡಿ ಎಲ್ಲರೂ ಅಂಬೇಡ್ಕರ್ ಅವರನ್ನು ಓದುವಂತಾಗಬೇಕು, ಎಲ್ಲರೂ ಕೇಳುವಂತಾಗಬೇಕು. ಅಂಬೇಡ್ಕರ್ ಚಿಂತನೆ ಕನ್ನಡದಲ್ಲಿ ಕೇಳಲು ಅಂತರ್ಜಾಲದಲ್ಲಿ ಸಿಗುವಂತಾಗಬೇಕು ಎನ್ನುವ ಕನಸು ಈ ಸರಣಿಯ ಹಿಂದಿದೆ” ಎಂದು ಅವರು ತಿಳಿಸಿದ್ದಾರೆ.

“ಈ ತರಹದ ಅಂಬೇಡ್ಕರ್ ಆಡಿಯೋ ಆರ್ಖೈವ್ ರೂಪುಗೊಂಡಿರುವುದು ಭಾರತದ ದೇಸಿ ಭಾಷೆಗಳಲ್ಲಿ ಇದು ಮೊದಲ ಪ್ರಯತ್ನ. ಇದು ಇತರೆ ಭಾಷಿಕರಿಗೆ ಮಾದರಿಯಾಗಬೇಕು ಎನ್ನುವುದು ನನ್ನ ಕನಸಾಗಿದೆ. ಈ ತನಕ ಯೂಟೂಬ್ ಚಾನಲ್ಲಿನಲ್ಲಿ ಒಂಬತ್ತು ಲಕ್ಷದಷ್ಟು ಕೇಳುವಿಕೆ ಸಾಧ್ಯವಾಗಿದೆ”

ಇದನ್ನೂ ಓದಿ: ’ಮಹಾನಾಯಕ’ನಿಗೆ ಒಂದು ವರ್ಷ: ಧಾರಾವಾಹಿಯನ್ನು ಜನ ಅಪ್ಪಿಕೊಂಡ ಬಗೆ…

“ಅನೇಕರು ಈ ಓದಿನಿಂದ ಪ್ರೇರಿತರಾಗಿದ್ದಾರೆ. ಇದೀಗ ಅನೇಕರು ಅಂಬೇಡ್ಕರ್ ಓದಿನ ಅವಕಾಶಕ್ಕಾಗಿ ಕೇಳುತ್ತಿದ್ದಾರೆ. ಇದು ಈ ಸರಣಿಯ ರೂಪಾಂತರವಾಗಿದೆ. ಅಂಬೇಡ್ಕರ್ ಅವರ ಸಮಕಾಲೀನವೆನಿಸುವ ಎಲ್ಲಾ ಬರಹಗಳನ್ನು ಓದಿಸುವ ಗುರಿ ಈ ಸರಣಿಗಿದೆ. ಹಾಗಾಗಿ ಅಂಬೇಡ್ಕರ್ ಓದು ಇನ್ನೂ ಮುಂದುವರಿಯಲಿದೆ. ಅಂಬೇಡ್ಕರ್ ಓದಿನ ಸಹಭಾಗಿಗಳಾದ ಎಲ್ಲರಿಗೂ ಮತ್ತೊಮ್ಮೆ ಜೈಭೀಮ್ ನಮನಗಳನ್ನು ಸಲ್ಲಿಸುವೆ” ಎಂದು ಅವರು ಹೇಳಿದ್ದಾರೆ.

ಅರುಣ್ ಜೋಳದಕುಡ್ಲಿಗಿ ಅವರ ಬ್ಲಾಗ್‌ಪೋಸ್ಟ್‌‌‌‌ ಕನ್ನಡ ಜಾನಪದ
ಅರುಣ್ ಜೋಳದಕುಡ್ಲಿಗಿ ಅವರ ಯೂಟ್ಯೂಬ್‌‌ ಚಾನೆಲ್‌ Arun jolad Kudligi

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...