Homeಕರ್ನಾಟಕಎರಡು ವರ್ಷ ಪೂರೈಸಿದ ಅರುಣ್ ಜೋಳದಕೂಡ್ಲಿಗಿ ಸಂಪಾದಕತ್ವದ ‘ಅಂಬೇಡ್ಕರ್ ಓದು’

ಎರಡು ವರ್ಷ ಪೂರೈಸಿದ ಅರುಣ್ ಜೋಳದಕೂಡ್ಲಿಗಿ ಸಂಪಾದಕತ್ವದ ‘ಅಂಬೇಡ್ಕರ್ ಓದು’

ಈ ತನಕ 351 ಜನರಿಂದ 525 ಸರಣಿಗಳನ್ನು ಓದಿಸಲಾಗಿದ್ದು, ಯೂಟ್ಯೂಬ್‌ನಲ್ಲಿ ಲಭ್ಯವಿರುವ ಈ ಸರಣಿಯನ್ನು ಕನ್ನಡದಲ್ಲಿ 120 ಗಂಟೆಗಳ ಕಾಲ ಕೇಳಬಹುದಾಗಿದೆ

- Advertisement -
- Advertisement -

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಗಳನ್ನು ಅಂತರ್ಜಾಲದ ಮೂಲಕ ಮನೆ-ಮನಗಳಿಗೆ ತಲುಪಿಸುವ ಭಾಗವಾಗಿ ಬರಹಗಾರ, ಪ್ರಾಧ್ಯಾಪಕ ಅರುಣ್ ಜೋಳದಕೂಡ್ಲಿಗಿ ಅವರ ಸಂಪಾದಕತ್ವದಲ್ಲಿ  ನಡೆಯುತ್ತಿರುವ ‘ಅಂಬೇಡ್ಕರ್‌ ಓದು’ ಯೂಟ್ಯೂಬ್‌ ಸರಣಿ ಕಾರ್ಯಕ್ರಮ ತನ್ನ ಎರಡು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ.

ಸೆಪ್ಟಂಬರ್ 7, 2020 ರಂದು ಖ್ಯಾತ ಲೇಖಕಿ ಹೆಚ್.ಎಸ್.ಅನುಪಮಾ ಮೊದಲ ಸಂಚಿಕೆ ಓದುವ ಮೂಲಕ ‘ಅಂಬೇಡ್ಕರ್‌ ಓದು’ ಸರಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. ಈ ಓದು ಸರಣಿಯು ತನ್ನ 525 ನೇ ಸಂಚಿಕೆ ತಲುಪಿದ್ದು, ಅಂಬೇಡ್ಕರ್ ಬೌದ್ಧ ದಮ್ಮ ಸ್ವೀಕರಿಸಿದ ದಿನದ ಅಕ್ಟೋಬರ್-14 ರ ವಿಶೇಷ ಸಂಚಿಕೆಯನ್ನು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಟಿ.ಎಂ.ಭಾಸ್ಕರ್ ಅವರು ಓದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರಣಿ ಓದು ಕಾರ್ಯಕ್ರಮದಲ್ಲಿ ಈ ತನಕ 351 ಜನರಿಂದ 525 ಸರಣಿಗಳನ್ನು ಓದಿಸಲಾಗಿದೆ. ಯೂಟ್ಯೂಬ್‌ನಲ್ಲಿ ಲಭ್ಯವಿರುವ ಈ ಓದಿನ ಸರಣಿಯನ್ನು ಕನ್ನಡದಲ್ಲಿ 120 ಗಂಟೆಗಳ ಕಾಲ ಕೇಳಬಹುದಾಗಿದೆ. ಈತನಕ 167 ಮಹಿಳೆಯರು 300 ಕ್ಕಿಂತ ಹೆಚ್ಚಿನ ಸರಣಿಗಳನ್ನು ಓದಿರುವುದು ಈ ಓದು ಸರಣಿಯ ವಿಶೇಷವಾಗಿದೆ.

ಇದನ್ನೂ ಓದಿ: ಹುಲಿ ಜಾನಪದ; ಕನ್ನಡ ಜಾನಪದ ಪರಂಪರೆಯಲ್ಲಿ ಹುಲಿಯ ಜತೆಗಿನ ಮುಖಾಮುಖಿ- ಅರುಣ್ ಜೋಳದಕೂಡ್ಲಿಗಿ

ವಿಶೇಷವಾಗಿ ಓದಿನ 500 ನೇ ಸಂಚಿಕೆಯನ್ನು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಓದಿದ್ದರು. ಈ ಹಿಂದೆ ರಾಜ್ಯಸಭಾ ಸದಸ್ಯರಾದ ಎಲ್.ಹನುಮಂತಯ್ಯ, ಸಂಗೀತ ನಿರ್ದೇಶಕ ಹಂಸಲೇಖ, ನಟರಾದ ರಮೇಶ್ ಅರವಿಂದ, ಕಿಶೋರ್, ರಂಗಾಯಣ ರಘು, ಅಚ್ಯುತ ಕುಮಾರ್, ಸಿನೆಮಾ ನಿರ್ದೇಶಕರಾದ ಬಿ.ಸುರೇಶ್, ಬಿ.ಎಂ ಗಿರಿರಾಜ, ಮಾಜಿ ಸಚಿವೆ ಮೋಟಮ್ಮ ಓದಿದ್ದರು.

ಅಲ್ಲದೆ ಬಿಜಾಪುರದ ಮಹಿಳಾ ವಿವಿಯ ವಿಶ್ರಾಂತ ಕುಲಪತಿಗಳಾದ ಪ್ರೊ. ಸಬೀಹಾ ಭೂಮಿಗೌಡ, ಹಿರಿಯ ಲೇಖಕರಾ ದೇವನೂರು ಮಹಾದೇವ, ಅಮರೇಶ ನುಗಡೋಣಿ, ನಟರಾಜ ಹುಳಿಯಾರ, ಹೆಚ್.ಎಸ್.ರಾಘವೇಂದ್ರರಾವ್, ಜಾನಪದ ಅಕಾಡೆಮಿ ಅಧ್ಯಕ್ಷರಾದ ಪದ್ಮಶ್ರೀ ಮಂಜಮ್ಮ ಜೋಗತಿ ಪತ್ರಕರ್ತರಾದ ದಿನೇಶ ಅಮಿನಮಟ್ಟು, ರವೀಂದ್ರ ಭಟ್, ವೈ.ಗ ಜಗದೀಶ, ರಶ್ಮಿ ಎಸ್. ಸೇರಿದಂತೆ ಸಾಹಿತಿಗಳು, ಪತ್ರಕರ್ತರು, ನಟರು, ಶಿಕ್ಷರು, ವಿದ್ಯಾರ್ಥಿಗಳು, ರೈತರು ಎಲ್ಲಾ ಹಿನ್ನೆಲೆಯವರೂ ಓದಿನ ಭಾಗವಾಗಿದ್ದಾರೆ.

ಅರುಣ್ ಜೋಳದಕೂಡ್ಲಿಗಿ ಅವರು 2019 ರ ಏಪ್ರಿಲ್ 14 ರಂದು ತಮ್ಮ ಪೇಸ್‌ಬುಕ್ ಪೇಜ್‌ನಲ್ಲಿ ಅಂಬೇಡ್ಕರ್ ಓದನ್ನು ಲೈವ್ ಮಾಡಿದ್ದರು. “ಈ ಓದಿಗೆ ಸಿಕ್ಕ ಪ್ರತಿಕ್ರಿಯೆ ಓದನ್ನು ನಿರಂತರವಾಗಿ ನಡೆಸುವ ಕನಸೊಂದನ್ನು ಹುಟ್ಟಿಸಿತ್ತು” ಎಂದು ಅವರು ಹೇಳುತ್ತಾರೆ.

ಇದನ್ನೂ ಓದಿ: ದಮನಿತರ ಸಿಟ್ಟಿನ ಏಕೀಕರಣ – ಅರುಣ್ ಜೋಳದಕೂಡ್ಲಿಗಿ

“ಖಾಸಗಿ ವಾಹಿನಿಯಲ್ಲಿ ಮಹಾನಾಯಕ ದಾರವಾಹಿ ಶುರುವಾದ ನಂತರ ಅಂತರ್ಜಾಲದಲ್ಲಿ ಕನ್ನಡದಲ್ಲಿ ಅಂಬೇಡ್ಕರ್ ಹುಡುಕಾಟ ಹೆಚ್ಚಾಯಿತು. ಆದರೆ ಅಂತರ್ಜಾಲದಲ್ಲಿ ಕನ್ನಡದಲ್ಲಿ ಅಂಬೇಡ್ಕರ್ ಅರಿವು ಹೆಚ್ಚಾಗಿ ಇರಲಿಲ್ಲ. ಆಗ ಅಂತರ್ಜಾಲದಲ್ಲಿ ಅಂಬೇಡ್ಕರ್ ಚಿಂತನೆಗಳು ಸಿಗುವಂತಾಗಬೇಕು ಎಂದು ಅಂಬೇಡ್ಕರ್ ಓದು ಪ್ರಾರಂಭಿಸಲಾಯಿತು” ಎಂದು ಅರುಣ್ ನೆನಪಿಸಿಕೊಳ್ಳುತ್ತಾರೆ.

“ನಾನು ನೆಪಮಾತ್ರನಾಗಿದ್ದು ‘ಇದು ಸಹಭಾಗಿತ್ವದ ಯಶಸ್ಸು’. ‘ಎಲ್ಲರ ಅಂಬೇಡ್ಕರ್’ ಎನ್ನುವ ತತ್ವದಡಿ ಎಲ್ಲರೂ ಅಂಬೇಡ್ಕರ್ ಅವರನ್ನು ಓದುವಂತಾಗಬೇಕು, ಎಲ್ಲರೂ ಕೇಳುವಂತಾಗಬೇಕು. ಅಂಬೇಡ್ಕರ್ ಚಿಂತನೆ ಕನ್ನಡದಲ್ಲಿ ಕೇಳಲು ಅಂತರ್ಜಾಲದಲ್ಲಿ ಸಿಗುವಂತಾಗಬೇಕು ಎನ್ನುವ ಕನಸು ಈ ಸರಣಿಯ ಹಿಂದಿದೆ” ಎಂದು ಅವರು ತಿಳಿಸಿದ್ದಾರೆ.

“ಈ ತರಹದ ಅಂಬೇಡ್ಕರ್ ಆಡಿಯೋ ಆರ್ಖೈವ್ ರೂಪುಗೊಂಡಿರುವುದು ಭಾರತದ ದೇಸಿ ಭಾಷೆಗಳಲ್ಲಿ ಇದು ಮೊದಲ ಪ್ರಯತ್ನ. ಇದು ಇತರೆ ಭಾಷಿಕರಿಗೆ ಮಾದರಿಯಾಗಬೇಕು ಎನ್ನುವುದು ನನ್ನ ಕನಸಾಗಿದೆ. ಈ ತನಕ ಯೂಟೂಬ್ ಚಾನಲ್ಲಿನಲ್ಲಿ ಒಂಬತ್ತು ಲಕ್ಷದಷ್ಟು ಕೇಳುವಿಕೆ ಸಾಧ್ಯವಾಗಿದೆ”

ಇದನ್ನೂ ಓದಿ: ’ಮಹಾನಾಯಕ’ನಿಗೆ ಒಂದು ವರ್ಷ: ಧಾರಾವಾಹಿಯನ್ನು ಜನ ಅಪ್ಪಿಕೊಂಡ ಬಗೆ…

“ಅನೇಕರು ಈ ಓದಿನಿಂದ ಪ್ರೇರಿತರಾಗಿದ್ದಾರೆ. ಇದೀಗ ಅನೇಕರು ಅಂಬೇಡ್ಕರ್ ಓದಿನ ಅವಕಾಶಕ್ಕಾಗಿ ಕೇಳುತ್ತಿದ್ದಾರೆ. ಇದು ಈ ಸರಣಿಯ ರೂಪಾಂತರವಾಗಿದೆ. ಅಂಬೇಡ್ಕರ್ ಅವರ ಸಮಕಾಲೀನವೆನಿಸುವ ಎಲ್ಲಾ ಬರಹಗಳನ್ನು ಓದಿಸುವ ಗುರಿ ಈ ಸರಣಿಗಿದೆ. ಹಾಗಾಗಿ ಅಂಬೇಡ್ಕರ್ ಓದು ಇನ್ನೂ ಮುಂದುವರಿಯಲಿದೆ. ಅಂಬೇಡ್ಕರ್ ಓದಿನ ಸಹಭಾಗಿಗಳಾದ ಎಲ್ಲರಿಗೂ ಮತ್ತೊಮ್ಮೆ ಜೈಭೀಮ್ ನಮನಗಳನ್ನು ಸಲ್ಲಿಸುವೆ” ಎಂದು ಅವರು ಹೇಳಿದ್ದಾರೆ.

ಅರುಣ್ ಜೋಳದಕುಡ್ಲಿಗಿ ಅವರ ಬ್ಲಾಗ್‌ಪೋಸ್ಟ್‌‌‌‌ ಕನ್ನಡ ಜಾನಪದ
ಅರುಣ್ ಜೋಳದಕುಡ್ಲಿಗಿ ಅವರ ಯೂಟ್ಯೂಬ್‌‌ ಚಾನೆಲ್‌ Arun jolad Kudligi

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...