Homeಕರ್ನಾಟಕಎರಡು ವರ್ಷ ಪೂರೈಸಿದ ಅರುಣ್ ಜೋಳದಕೂಡ್ಲಿಗಿ ಸಂಪಾದಕತ್ವದ ‘ಅಂಬೇಡ್ಕರ್ ಓದು’

ಎರಡು ವರ್ಷ ಪೂರೈಸಿದ ಅರುಣ್ ಜೋಳದಕೂಡ್ಲಿಗಿ ಸಂಪಾದಕತ್ವದ ‘ಅಂಬೇಡ್ಕರ್ ಓದು’

ಈ ತನಕ 351 ಜನರಿಂದ 525 ಸರಣಿಗಳನ್ನು ಓದಿಸಲಾಗಿದ್ದು, ಯೂಟ್ಯೂಬ್‌ನಲ್ಲಿ ಲಭ್ಯವಿರುವ ಈ ಸರಣಿಯನ್ನು ಕನ್ನಡದಲ್ಲಿ 120 ಗಂಟೆಗಳ ಕಾಲ ಕೇಳಬಹುದಾಗಿದೆ

- Advertisement -
- Advertisement -

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಗಳನ್ನು ಅಂತರ್ಜಾಲದ ಮೂಲಕ ಮನೆ-ಮನಗಳಿಗೆ ತಲುಪಿಸುವ ಭಾಗವಾಗಿ ಬರಹಗಾರ, ಪ್ರಾಧ್ಯಾಪಕ ಅರುಣ್ ಜೋಳದಕೂಡ್ಲಿಗಿ ಅವರ ಸಂಪಾದಕತ್ವದಲ್ಲಿ  ನಡೆಯುತ್ತಿರುವ ‘ಅಂಬೇಡ್ಕರ್‌ ಓದು’ ಯೂಟ್ಯೂಬ್‌ ಸರಣಿ ಕಾರ್ಯಕ್ರಮ ತನ್ನ ಎರಡು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ.

ಸೆಪ್ಟಂಬರ್ 7, 2020 ರಂದು ಖ್ಯಾತ ಲೇಖಕಿ ಹೆಚ್.ಎಸ್.ಅನುಪಮಾ ಮೊದಲ ಸಂಚಿಕೆ ಓದುವ ಮೂಲಕ ‘ಅಂಬೇಡ್ಕರ್‌ ಓದು’ ಸರಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. ಈ ಓದು ಸರಣಿಯು ತನ್ನ 525 ನೇ ಸಂಚಿಕೆ ತಲುಪಿದ್ದು, ಅಂಬೇಡ್ಕರ್ ಬೌದ್ಧ ದಮ್ಮ ಸ್ವೀಕರಿಸಿದ ದಿನದ ಅಕ್ಟೋಬರ್-14 ರ ವಿಶೇಷ ಸಂಚಿಕೆಯನ್ನು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಟಿ.ಎಂ.ಭಾಸ್ಕರ್ ಅವರು ಓದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರಣಿ ಓದು ಕಾರ್ಯಕ್ರಮದಲ್ಲಿ ಈ ತನಕ 351 ಜನರಿಂದ 525 ಸರಣಿಗಳನ್ನು ಓದಿಸಲಾಗಿದೆ. ಯೂಟ್ಯೂಬ್‌ನಲ್ಲಿ ಲಭ್ಯವಿರುವ ಈ ಓದಿನ ಸರಣಿಯನ್ನು ಕನ್ನಡದಲ್ಲಿ 120 ಗಂಟೆಗಳ ಕಾಲ ಕೇಳಬಹುದಾಗಿದೆ. ಈತನಕ 167 ಮಹಿಳೆಯರು 300 ಕ್ಕಿಂತ ಹೆಚ್ಚಿನ ಸರಣಿಗಳನ್ನು ಓದಿರುವುದು ಈ ಓದು ಸರಣಿಯ ವಿಶೇಷವಾಗಿದೆ.

ಇದನ್ನೂ ಓದಿ: ಹುಲಿ ಜಾನಪದ; ಕನ್ನಡ ಜಾನಪದ ಪರಂಪರೆಯಲ್ಲಿ ಹುಲಿಯ ಜತೆಗಿನ ಮುಖಾಮುಖಿ- ಅರುಣ್ ಜೋಳದಕೂಡ್ಲಿಗಿ

ವಿಶೇಷವಾಗಿ ಓದಿನ 500 ನೇ ಸಂಚಿಕೆಯನ್ನು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಓದಿದ್ದರು. ಈ ಹಿಂದೆ ರಾಜ್ಯಸಭಾ ಸದಸ್ಯರಾದ ಎಲ್.ಹನುಮಂತಯ್ಯ, ಸಂಗೀತ ನಿರ್ದೇಶಕ ಹಂಸಲೇಖ, ನಟರಾದ ರಮೇಶ್ ಅರವಿಂದ, ಕಿಶೋರ್, ರಂಗಾಯಣ ರಘು, ಅಚ್ಯುತ ಕುಮಾರ್, ಸಿನೆಮಾ ನಿರ್ದೇಶಕರಾದ ಬಿ.ಸುರೇಶ್, ಬಿ.ಎಂ ಗಿರಿರಾಜ, ಮಾಜಿ ಸಚಿವೆ ಮೋಟಮ್ಮ ಓದಿದ್ದರು.

ಅಲ್ಲದೆ ಬಿಜಾಪುರದ ಮಹಿಳಾ ವಿವಿಯ ವಿಶ್ರಾಂತ ಕುಲಪತಿಗಳಾದ ಪ್ರೊ. ಸಬೀಹಾ ಭೂಮಿಗೌಡ, ಹಿರಿಯ ಲೇಖಕರಾ ದೇವನೂರು ಮಹಾದೇವ, ಅಮರೇಶ ನುಗಡೋಣಿ, ನಟರಾಜ ಹುಳಿಯಾರ, ಹೆಚ್.ಎಸ್.ರಾಘವೇಂದ್ರರಾವ್, ಜಾನಪದ ಅಕಾಡೆಮಿ ಅಧ್ಯಕ್ಷರಾದ ಪದ್ಮಶ್ರೀ ಮಂಜಮ್ಮ ಜೋಗತಿ ಪತ್ರಕರ್ತರಾದ ದಿನೇಶ ಅಮಿನಮಟ್ಟು, ರವೀಂದ್ರ ಭಟ್, ವೈ.ಗ ಜಗದೀಶ, ರಶ್ಮಿ ಎಸ್. ಸೇರಿದಂತೆ ಸಾಹಿತಿಗಳು, ಪತ್ರಕರ್ತರು, ನಟರು, ಶಿಕ್ಷರು, ವಿದ್ಯಾರ್ಥಿಗಳು, ರೈತರು ಎಲ್ಲಾ ಹಿನ್ನೆಲೆಯವರೂ ಓದಿನ ಭಾಗವಾಗಿದ್ದಾರೆ.

ಅರುಣ್ ಜೋಳದಕೂಡ್ಲಿಗಿ ಅವರು 2019 ರ ಏಪ್ರಿಲ್ 14 ರಂದು ತಮ್ಮ ಪೇಸ್‌ಬುಕ್ ಪೇಜ್‌ನಲ್ಲಿ ಅಂಬೇಡ್ಕರ್ ಓದನ್ನು ಲೈವ್ ಮಾಡಿದ್ದರು. “ಈ ಓದಿಗೆ ಸಿಕ್ಕ ಪ್ರತಿಕ್ರಿಯೆ ಓದನ್ನು ನಿರಂತರವಾಗಿ ನಡೆಸುವ ಕನಸೊಂದನ್ನು ಹುಟ್ಟಿಸಿತ್ತು” ಎಂದು ಅವರು ಹೇಳುತ್ತಾರೆ.

ಇದನ್ನೂ ಓದಿ: ದಮನಿತರ ಸಿಟ್ಟಿನ ಏಕೀಕರಣ – ಅರುಣ್ ಜೋಳದಕೂಡ್ಲಿಗಿ

“ಖಾಸಗಿ ವಾಹಿನಿಯಲ್ಲಿ ಮಹಾನಾಯಕ ದಾರವಾಹಿ ಶುರುವಾದ ನಂತರ ಅಂತರ್ಜಾಲದಲ್ಲಿ ಕನ್ನಡದಲ್ಲಿ ಅಂಬೇಡ್ಕರ್ ಹುಡುಕಾಟ ಹೆಚ್ಚಾಯಿತು. ಆದರೆ ಅಂತರ್ಜಾಲದಲ್ಲಿ ಕನ್ನಡದಲ್ಲಿ ಅಂಬೇಡ್ಕರ್ ಅರಿವು ಹೆಚ್ಚಾಗಿ ಇರಲಿಲ್ಲ. ಆಗ ಅಂತರ್ಜಾಲದಲ್ಲಿ ಅಂಬೇಡ್ಕರ್ ಚಿಂತನೆಗಳು ಸಿಗುವಂತಾಗಬೇಕು ಎಂದು ಅಂಬೇಡ್ಕರ್ ಓದು ಪ್ರಾರಂಭಿಸಲಾಯಿತು” ಎಂದು ಅರುಣ್ ನೆನಪಿಸಿಕೊಳ್ಳುತ್ತಾರೆ.

“ನಾನು ನೆಪಮಾತ್ರನಾಗಿದ್ದು ‘ಇದು ಸಹಭಾಗಿತ್ವದ ಯಶಸ್ಸು’. ‘ಎಲ್ಲರ ಅಂಬೇಡ್ಕರ್’ ಎನ್ನುವ ತತ್ವದಡಿ ಎಲ್ಲರೂ ಅಂಬೇಡ್ಕರ್ ಅವರನ್ನು ಓದುವಂತಾಗಬೇಕು, ಎಲ್ಲರೂ ಕೇಳುವಂತಾಗಬೇಕು. ಅಂಬೇಡ್ಕರ್ ಚಿಂತನೆ ಕನ್ನಡದಲ್ಲಿ ಕೇಳಲು ಅಂತರ್ಜಾಲದಲ್ಲಿ ಸಿಗುವಂತಾಗಬೇಕು ಎನ್ನುವ ಕನಸು ಈ ಸರಣಿಯ ಹಿಂದಿದೆ” ಎಂದು ಅವರು ತಿಳಿಸಿದ್ದಾರೆ.

“ಈ ತರಹದ ಅಂಬೇಡ್ಕರ್ ಆಡಿಯೋ ಆರ್ಖೈವ್ ರೂಪುಗೊಂಡಿರುವುದು ಭಾರತದ ದೇಸಿ ಭಾಷೆಗಳಲ್ಲಿ ಇದು ಮೊದಲ ಪ್ರಯತ್ನ. ಇದು ಇತರೆ ಭಾಷಿಕರಿಗೆ ಮಾದರಿಯಾಗಬೇಕು ಎನ್ನುವುದು ನನ್ನ ಕನಸಾಗಿದೆ. ಈ ತನಕ ಯೂಟೂಬ್ ಚಾನಲ್ಲಿನಲ್ಲಿ ಒಂಬತ್ತು ಲಕ್ಷದಷ್ಟು ಕೇಳುವಿಕೆ ಸಾಧ್ಯವಾಗಿದೆ”

ಇದನ್ನೂ ಓದಿ: ’ಮಹಾನಾಯಕ’ನಿಗೆ ಒಂದು ವರ್ಷ: ಧಾರಾವಾಹಿಯನ್ನು ಜನ ಅಪ್ಪಿಕೊಂಡ ಬಗೆ…

“ಅನೇಕರು ಈ ಓದಿನಿಂದ ಪ್ರೇರಿತರಾಗಿದ್ದಾರೆ. ಇದೀಗ ಅನೇಕರು ಅಂಬೇಡ್ಕರ್ ಓದಿನ ಅವಕಾಶಕ್ಕಾಗಿ ಕೇಳುತ್ತಿದ್ದಾರೆ. ಇದು ಈ ಸರಣಿಯ ರೂಪಾಂತರವಾಗಿದೆ. ಅಂಬೇಡ್ಕರ್ ಅವರ ಸಮಕಾಲೀನವೆನಿಸುವ ಎಲ್ಲಾ ಬರಹಗಳನ್ನು ಓದಿಸುವ ಗುರಿ ಈ ಸರಣಿಗಿದೆ. ಹಾಗಾಗಿ ಅಂಬೇಡ್ಕರ್ ಓದು ಇನ್ನೂ ಮುಂದುವರಿಯಲಿದೆ. ಅಂಬೇಡ್ಕರ್ ಓದಿನ ಸಹಭಾಗಿಗಳಾದ ಎಲ್ಲರಿಗೂ ಮತ್ತೊಮ್ಮೆ ಜೈಭೀಮ್ ನಮನಗಳನ್ನು ಸಲ್ಲಿಸುವೆ” ಎಂದು ಅವರು ಹೇಳಿದ್ದಾರೆ.

ಅರುಣ್ ಜೋಳದಕುಡ್ಲಿಗಿ ಅವರ ಬ್ಲಾಗ್‌ಪೋಸ್ಟ್‌‌‌‌ ಕನ್ನಡ ಜಾನಪದ
ಅರುಣ್ ಜೋಳದಕುಡ್ಲಿಗಿ ಅವರ ಯೂಟ್ಯೂಬ್‌‌ ಚಾನೆಲ್‌ Arun jolad Kudligi

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...