Homeಕರ್ನಾಟಕಎರಡು ವರ್ಷ ಪೂರೈಸಿದ ಅರುಣ್ ಜೋಳದಕೂಡ್ಲಿಗಿ ಸಂಪಾದಕತ್ವದ ‘ಅಂಬೇಡ್ಕರ್ ಓದು’

ಎರಡು ವರ್ಷ ಪೂರೈಸಿದ ಅರುಣ್ ಜೋಳದಕೂಡ್ಲಿಗಿ ಸಂಪಾದಕತ್ವದ ‘ಅಂಬೇಡ್ಕರ್ ಓದು’

ಈ ತನಕ 351 ಜನರಿಂದ 525 ಸರಣಿಗಳನ್ನು ಓದಿಸಲಾಗಿದ್ದು, ಯೂಟ್ಯೂಬ್‌ನಲ್ಲಿ ಲಭ್ಯವಿರುವ ಈ ಸರಣಿಯನ್ನು ಕನ್ನಡದಲ್ಲಿ 120 ಗಂಟೆಗಳ ಕಾಲ ಕೇಳಬಹುದಾಗಿದೆ

- Advertisement -
- Advertisement -

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಗಳನ್ನು ಅಂತರ್ಜಾಲದ ಮೂಲಕ ಮನೆ-ಮನಗಳಿಗೆ ತಲುಪಿಸುವ ಭಾಗವಾಗಿ ಬರಹಗಾರ, ಪ್ರಾಧ್ಯಾಪಕ ಅರುಣ್ ಜೋಳದಕೂಡ್ಲಿಗಿ ಅವರ ಸಂಪಾದಕತ್ವದಲ್ಲಿ  ನಡೆಯುತ್ತಿರುವ ‘ಅಂಬೇಡ್ಕರ್‌ ಓದು’ ಯೂಟ್ಯೂಬ್‌ ಸರಣಿ ಕಾರ್ಯಕ್ರಮ ತನ್ನ ಎರಡು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ.

ಸೆಪ್ಟಂಬರ್ 7, 2020 ರಂದು ಖ್ಯಾತ ಲೇಖಕಿ ಹೆಚ್.ಎಸ್.ಅನುಪಮಾ ಮೊದಲ ಸಂಚಿಕೆ ಓದುವ ಮೂಲಕ ‘ಅಂಬೇಡ್ಕರ್‌ ಓದು’ ಸರಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. ಈ ಓದು ಸರಣಿಯು ತನ್ನ 525 ನೇ ಸಂಚಿಕೆ ತಲುಪಿದ್ದು, ಅಂಬೇಡ್ಕರ್ ಬೌದ್ಧ ದಮ್ಮ ಸ್ವೀಕರಿಸಿದ ದಿನದ ಅಕ್ಟೋಬರ್-14 ರ ವಿಶೇಷ ಸಂಚಿಕೆಯನ್ನು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಟಿ.ಎಂ.ಭಾಸ್ಕರ್ ಅವರು ಓದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರಣಿ ಓದು ಕಾರ್ಯಕ್ರಮದಲ್ಲಿ ಈ ತನಕ 351 ಜನರಿಂದ 525 ಸರಣಿಗಳನ್ನು ಓದಿಸಲಾಗಿದೆ. ಯೂಟ್ಯೂಬ್‌ನಲ್ಲಿ ಲಭ್ಯವಿರುವ ಈ ಓದಿನ ಸರಣಿಯನ್ನು ಕನ್ನಡದಲ್ಲಿ 120 ಗಂಟೆಗಳ ಕಾಲ ಕೇಳಬಹುದಾಗಿದೆ. ಈತನಕ 167 ಮಹಿಳೆಯರು 300 ಕ್ಕಿಂತ ಹೆಚ್ಚಿನ ಸರಣಿಗಳನ್ನು ಓದಿರುವುದು ಈ ಓದು ಸರಣಿಯ ವಿಶೇಷವಾಗಿದೆ.

ಇದನ್ನೂ ಓದಿ: ಹುಲಿ ಜಾನಪದ; ಕನ್ನಡ ಜಾನಪದ ಪರಂಪರೆಯಲ್ಲಿ ಹುಲಿಯ ಜತೆಗಿನ ಮುಖಾಮುಖಿ- ಅರುಣ್ ಜೋಳದಕೂಡ್ಲಿಗಿ

ವಿಶೇಷವಾಗಿ ಓದಿನ 500 ನೇ ಸಂಚಿಕೆಯನ್ನು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಓದಿದ್ದರು. ಈ ಹಿಂದೆ ರಾಜ್ಯಸಭಾ ಸದಸ್ಯರಾದ ಎಲ್.ಹನುಮಂತಯ್ಯ, ಸಂಗೀತ ನಿರ್ದೇಶಕ ಹಂಸಲೇಖ, ನಟರಾದ ರಮೇಶ್ ಅರವಿಂದ, ಕಿಶೋರ್, ರಂಗಾಯಣ ರಘು, ಅಚ್ಯುತ ಕುಮಾರ್, ಸಿನೆಮಾ ನಿರ್ದೇಶಕರಾದ ಬಿ.ಸುರೇಶ್, ಬಿ.ಎಂ ಗಿರಿರಾಜ, ಮಾಜಿ ಸಚಿವೆ ಮೋಟಮ್ಮ ಓದಿದ್ದರು.

ಅಲ್ಲದೆ ಬಿಜಾಪುರದ ಮಹಿಳಾ ವಿವಿಯ ವಿಶ್ರಾಂತ ಕುಲಪತಿಗಳಾದ ಪ್ರೊ. ಸಬೀಹಾ ಭೂಮಿಗೌಡ, ಹಿರಿಯ ಲೇಖಕರಾ ದೇವನೂರು ಮಹಾದೇವ, ಅಮರೇಶ ನುಗಡೋಣಿ, ನಟರಾಜ ಹುಳಿಯಾರ, ಹೆಚ್.ಎಸ್.ರಾಘವೇಂದ್ರರಾವ್, ಜಾನಪದ ಅಕಾಡೆಮಿ ಅಧ್ಯಕ್ಷರಾದ ಪದ್ಮಶ್ರೀ ಮಂಜಮ್ಮ ಜೋಗತಿ ಪತ್ರಕರ್ತರಾದ ದಿನೇಶ ಅಮಿನಮಟ್ಟು, ರವೀಂದ್ರ ಭಟ್, ವೈ.ಗ ಜಗದೀಶ, ರಶ್ಮಿ ಎಸ್. ಸೇರಿದಂತೆ ಸಾಹಿತಿಗಳು, ಪತ್ರಕರ್ತರು, ನಟರು, ಶಿಕ್ಷರು, ವಿದ್ಯಾರ್ಥಿಗಳು, ರೈತರು ಎಲ್ಲಾ ಹಿನ್ನೆಲೆಯವರೂ ಓದಿನ ಭಾಗವಾಗಿದ್ದಾರೆ.

ಅರುಣ್ ಜೋಳದಕೂಡ್ಲಿಗಿ ಅವರು 2019 ರ ಏಪ್ರಿಲ್ 14 ರಂದು ತಮ್ಮ ಪೇಸ್‌ಬುಕ್ ಪೇಜ್‌ನಲ್ಲಿ ಅಂಬೇಡ್ಕರ್ ಓದನ್ನು ಲೈವ್ ಮಾಡಿದ್ದರು. “ಈ ಓದಿಗೆ ಸಿಕ್ಕ ಪ್ರತಿಕ್ರಿಯೆ ಓದನ್ನು ನಿರಂತರವಾಗಿ ನಡೆಸುವ ಕನಸೊಂದನ್ನು ಹುಟ್ಟಿಸಿತ್ತು” ಎಂದು ಅವರು ಹೇಳುತ್ತಾರೆ.

ಇದನ್ನೂ ಓದಿ: ದಮನಿತರ ಸಿಟ್ಟಿನ ಏಕೀಕರಣ – ಅರುಣ್ ಜೋಳದಕೂಡ್ಲಿಗಿ

“ಖಾಸಗಿ ವಾಹಿನಿಯಲ್ಲಿ ಮಹಾನಾಯಕ ದಾರವಾಹಿ ಶುರುವಾದ ನಂತರ ಅಂತರ್ಜಾಲದಲ್ಲಿ ಕನ್ನಡದಲ್ಲಿ ಅಂಬೇಡ್ಕರ್ ಹುಡುಕಾಟ ಹೆಚ್ಚಾಯಿತು. ಆದರೆ ಅಂತರ್ಜಾಲದಲ್ಲಿ ಕನ್ನಡದಲ್ಲಿ ಅಂಬೇಡ್ಕರ್ ಅರಿವು ಹೆಚ್ಚಾಗಿ ಇರಲಿಲ್ಲ. ಆಗ ಅಂತರ್ಜಾಲದಲ್ಲಿ ಅಂಬೇಡ್ಕರ್ ಚಿಂತನೆಗಳು ಸಿಗುವಂತಾಗಬೇಕು ಎಂದು ಅಂಬೇಡ್ಕರ್ ಓದು ಪ್ರಾರಂಭಿಸಲಾಯಿತು” ಎಂದು ಅರುಣ್ ನೆನಪಿಸಿಕೊಳ್ಳುತ್ತಾರೆ.

“ನಾನು ನೆಪಮಾತ್ರನಾಗಿದ್ದು ‘ಇದು ಸಹಭಾಗಿತ್ವದ ಯಶಸ್ಸು’. ‘ಎಲ್ಲರ ಅಂಬೇಡ್ಕರ್’ ಎನ್ನುವ ತತ್ವದಡಿ ಎಲ್ಲರೂ ಅಂಬೇಡ್ಕರ್ ಅವರನ್ನು ಓದುವಂತಾಗಬೇಕು, ಎಲ್ಲರೂ ಕೇಳುವಂತಾಗಬೇಕು. ಅಂಬೇಡ್ಕರ್ ಚಿಂತನೆ ಕನ್ನಡದಲ್ಲಿ ಕೇಳಲು ಅಂತರ್ಜಾಲದಲ್ಲಿ ಸಿಗುವಂತಾಗಬೇಕು ಎನ್ನುವ ಕನಸು ಈ ಸರಣಿಯ ಹಿಂದಿದೆ” ಎಂದು ಅವರು ತಿಳಿಸಿದ್ದಾರೆ.

“ಈ ತರಹದ ಅಂಬೇಡ್ಕರ್ ಆಡಿಯೋ ಆರ್ಖೈವ್ ರೂಪುಗೊಂಡಿರುವುದು ಭಾರತದ ದೇಸಿ ಭಾಷೆಗಳಲ್ಲಿ ಇದು ಮೊದಲ ಪ್ರಯತ್ನ. ಇದು ಇತರೆ ಭಾಷಿಕರಿಗೆ ಮಾದರಿಯಾಗಬೇಕು ಎನ್ನುವುದು ನನ್ನ ಕನಸಾಗಿದೆ. ಈ ತನಕ ಯೂಟೂಬ್ ಚಾನಲ್ಲಿನಲ್ಲಿ ಒಂಬತ್ತು ಲಕ್ಷದಷ್ಟು ಕೇಳುವಿಕೆ ಸಾಧ್ಯವಾಗಿದೆ”

ಇದನ್ನೂ ಓದಿ: ’ಮಹಾನಾಯಕ’ನಿಗೆ ಒಂದು ವರ್ಷ: ಧಾರಾವಾಹಿಯನ್ನು ಜನ ಅಪ್ಪಿಕೊಂಡ ಬಗೆ…

“ಅನೇಕರು ಈ ಓದಿನಿಂದ ಪ್ರೇರಿತರಾಗಿದ್ದಾರೆ. ಇದೀಗ ಅನೇಕರು ಅಂಬೇಡ್ಕರ್ ಓದಿನ ಅವಕಾಶಕ್ಕಾಗಿ ಕೇಳುತ್ತಿದ್ದಾರೆ. ಇದು ಈ ಸರಣಿಯ ರೂಪಾಂತರವಾಗಿದೆ. ಅಂಬೇಡ್ಕರ್ ಅವರ ಸಮಕಾಲೀನವೆನಿಸುವ ಎಲ್ಲಾ ಬರಹಗಳನ್ನು ಓದಿಸುವ ಗುರಿ ಈ ಸರಣಿಗಿದೆ. ಹಾಗಾಗಿ ಅಂಬೇಡ್ಕರ್ ಓದು ಇನ್ನೂ ಮುಂದುವರಿಯಲಿದೆ. ಅಂಬೇಡ್ಕರ್ ಓದಿನ ಸಹಭಾಗಿಗಳಾದ ಎಲ್ಲರಿಗೂ ಮತ್ತೊಮ್ಮೆ ಜೈಭೀಮ್ ನಮನಗಳನ್ನು ಸಲ್ಲಿಸುವೆ” ಎಂದು ಅವರು ಹೇಳಿದ್ದಾರೆ.

ಅರುಣ್ ಜೋಳದಕುಡ್ಲಿಗಿ ಅವರ ಬ್ಲಾಗ್‌ಪೋಸ್ಟ್‌‌‌‌ ಕನ್ನಡ ಜಾನಪದ
ಅರುಣ್ ಜೋಳದಕುಡ್ಲಿಗಿ ಅವರ ಯೂಟ್ಯೂಬ್‌‌ ಚಾನೆಲ್‌ Arun jolad Kudligi

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...