Homeಚಳವಳಿ100 ಗಂಟೆ ಪೂರೈಸಿದ ಅಂಬೇಡ್ಕರ್ ಓದು ಸರಣಿ: ಅಂಬೇಡ್ಕರ್ ಬರಹಗಳನ್ನು ಕೇಳಲು ಇರುವ ಜ್ಞಾನ ಭಂಡಾರವಿದು

100 ಗಂಟೆ ಪೂರೈಸಿದ ಅಂಬೇಡ್ಕರ್ ಓದು ಸರಣಿ: ಅಂಬೇಡ್ಕರ್ ಬರಹಗಳನ್ನು ಕೇಳಲು ಇರುವ ಜ್ಞಾನ ಭಂಡಾರವಿದು

ಶೇ.50 ರಷ್ಟು ಮಹಿಳೆಯರು ಓದಿದ್ದಾರೆ. ಸುಮಾರು 6-7 ಲಕ್ಷ ಜನರು ಕೇಳಿಸಿಕೊಂಡಿದ್ದಾರೆ. ಹಲವರು ಮೊದಲ ಬಾರಿಗೆ ಅಂಬೇಡ್ಕರ್ ಬರಹಗಳನ್ನು ಓದಿದ್ದಾರೆ. ಇದು ಸರಣಿಯ ಯಶಸ್ಸು.

- Advertisement -
- Advertisement -

ಇಂದು ಬಾಬಾ ಸಾಹೇಬ್ ಭೀಮ್‌ರಾವ್ ಅಂಬೇಡ್ಕರ್‌ರವರ 131ನೇ ಜನ್ಮದಿನ. ಅಂಬೇಡ್ಕರ್ ನೆನಪಿನಲ್ಲಿ ಜಗತ್ತಿನಾದ್ಯಂತ ಸಮಾನತೆಯ ದಿನವನ್ನಾಗಿ ಇಂದು ಆಚರಿಸಲಾಗುತ್ತಿದೆ. ಅಂಬೇಡ್ಕರ್ ಬದುಕು, ಬರಹ ಹೋರಾಟದ ಕುರಿತು ಚರ್ಚೆ ನಡೆಸಲಾಗುತ್ತಿದೆ. ಇಂತಹ ಸಂದರ್ಭದಲ್ಲಿಯೇ ಅಂಬೇಡ್ಕರ್‌ರವರ ಮೂಲ ಬರಹಗಳನ್ನು ಕನ್ನಡದಲ್ಲಿ ಕೇಳುವ ವಿಶಿಷ್ಟ ಪ್ರಯತ್ನವಾದ ‘ಅಂಬೇಡ್ಕರ್ ಓದು ಸರಣಿಯು’ 100 ಗಂಟೆಗಳ ಕಾಲ ಪೂರೈಸಿ ಮುನ್ನಡೆಯುತ್ತಿದೆ. ಆ ಮೂಲಕ ಡಿಜಿಟಲ್ ಮಾಧ್ಯಮಗಳಲ್ಲಿಯೂ ಅಂಬೇಡ್ಕರ್ ವಿಚಾರಗಳು ಹರಿದಾಡುವಂತೆ ಮಾಡುವಲ್ಲಿ ಮಹತ್ವದ ಪಾತ್ರ ವಹಿಸಿದೆ.

ಜಾನಪದ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿರುವ ಡಾ. ಅರುಣ್ ಜೋಳದ ಕೂಡ್ಲಿಗಿಯವರು ಸೆಪ್ಟೆಂಬರ್ 7, 2020 ರಂದು ಆರಂಭಿಸಿದ ಈ ಅಂಬೇಡ್ಕರ್ ಓದು ಸರಣಿಯಲ್ಲಿ ಒಟ್ಟು 470 ಸಂಚಿಕೆಗಳು ಯೂಟ್ಯೂಬ್‌ನಲ್ಲಿ ಪ್ರಸಾರವಾಗಿವೆ. 321 ಜನ ಅಂಬೇಡ್ಕರ್‌ರವರ ಬರಹಗಳನ್ನು ಓದಿಕೊಂಡು ನಂತರ ಆಡಿಯೊ ಮಾಡಿ ಇನ್ನಿತರರು ಕೇಳುವಂತೆ ಮಾಡಿದ್ದಾರೆ. ಅದರಲ್ಲಿ 155 ಮಹಿಳೆಯರು ಸಹ ಸಹಭಾಗಿಗಳಾಗಿರುವುದು ವಿಶೇಷವಾಗಿದೆ.

Arun jolad Kudligi ಯೂಟ್ಯೂಬ್ ಚಾನೆಲ್‌ನಲ್ಲಿ ಈ ಎಲ್ಲಾ 470 ಸಂಚಿಕೆಗಳನ್ನು ಯಾರೂ ಬೇಕಾದರೂ ಉಚಿತವಾಗಿ ಕೇಳಬಹುದಾಗಿದೆ. ಅಂಬೇಡ್ಕರ್‌ರವರು ಬರೆದಿರುವ ‘ಹಿಂದೂ ಧರ್ಮದ ತತ್ವಜ್ಞಾನ, ಬುದ್ಧ ಮತ್ತು ಆತನ ಧಮ್ಮ, ಸ್ಟೇಟ್ಸ್ ಅಂಡ್ ಮೈನಾರೀಟಿಸ್’ ಸೇರಿದಂತೆ ಹಲವಾರು ಪುಸ್ತಕಗಳ ಪ್ರಮುಖ ಭಾಗಗಳನ್ನು ಆಡಿಯೋ ಮಾಡುವ ಮೂಲಕ “ಅಂಬೇಡ್ಕರ್ ಕೇಳು” ಎಂಬುದಾಗಿ ಈ ಅಭಿಯಾನ ನಡೆಯುತ್ತಿದೆ. ಅಲ್ಲದೆ ಈ ಸರಣಿಯಲ್ಲಿ ಅಂಬೇಡ್ಕರ್‌ರವರ ಲೇಖನಗಳು- ಬರಹಗಳು, ಪತ್ರಿಕಾ ಹೇಳಿಕೆಗಳು, ಭಾಷಣಗಳು, ಟಿಪ್ಪಣಿಗಳು ಮತ್ತು ಪತ್ರಗಳು ಸಹ ಇದ್ದು, ಅಂಬೇಡ್ಕರ್‌ರವರ ನಿಲುವುಗಳನ್ನು ಅರ್ಥ ಮಾಡಿಕೊಳ್ಳಲು ಸಹಾಯ ಮಾಡುತ್ತವೆ.

“ಇಂದು ಹೆಚ್ಚಿನ ಜನರು ತಮ್ಮ ಹೆಚ್ಚಿನ ಸಮಯವನ್ನು ಡಿಜಿಟಲ್ ಸ್ಪೇಸ್‌ಗಳಲ್ಲಿ ವ್ಯಯಿಸುತ್ತಿದ್ದಾರೆ. ಅಲ್ಲಿಯೂ ಸಹ ಅಂಬೇಡ್ಕರ್‌ ಬರಹಗಳು ಕೇಳಲು, ಓದಲು ಸಿಗುವಂತೆ ಮಾಡಬೇಕು ಎಂಬ ಉದ್ದೇಶದಿಂದ ಈ ಸರಣಿ ಆರಂಭಿಸಿದೆವು. ಎಲ್ಲರ ಅಂಬೇಡ್ಕರ್ ಎನ್ನುವ ತತ್ವದಡಿ ಸಹಭಾಗಿತ್ವದ ಒಳಗೊಳ್ಳುವಿಕೆಯ ಮೂಲಕ ಇದು ಯಶಸ್ಸು ಗಳಿಸಿದೆ. ಹಾಗಾಗಿ ಇದು ಎಲ್ಲರ ಸಹಭಾಗಿತ್ವದ ಗೆಲುವು ಎಂದು ಕರೆಯಬಹುದು” ಎನ್ನುತ್ತಾರೆ ಸರಣಿಯನ್ನು ಆರಂಭಿಸಿದ ಅರುಣ್ ಜೋಳದ ಕೂಡ್ಲಿಗಿಯವರು.

ಶೇ.50 ರಷ್ಟು ಮಹಿಳೆಯರು ಈ ಅಭಿಯಾನದ ಭಾಗವಾಗಿದ್ದಾರೆ. ಸುಮಾರು 6-7 ಲಕ್ಷ ಜನರು ಈ ಬರಹಗಳನ್ನು ಕೇಳಿಸಿಕೊಂಡಿದ್ದಾರೆ. ಇದುವರೆಗೂ ಅಂಬೇಡ್ಕರ್ ಬರಹಗಳನ್ನು ಓದಲು ಸಾಧ್ಯವಾಗದಿದ್ದವರು ಈ ಸರಣಿ ಆರಂಭವಾದ ನಂತರ ಮೊದಲ ಬಾರಿಗೆ ಅಂಬೇಡ್ಕರ್ ಬರಹಗಳನ್ನು ಓದಿದ್ದಾರೆ. ಅಂಬೇಡ್ಕರ್ ಚಿಂತನೆಗೆ ಪ್ರವೇಶ ಮಾಡಲಾಗದಿರುವವರನ್ನು ಗುರುತಿಸಿ ಒಳಗೊಳ್ಳುತ್ತಿದ್ದೇವೆ, ಇದೆಲ್ಲವೂ ಈ ಸರಣಿಯ ಸಾಧನೆ ಎಂದು ಅವರು ಹೇಳುತ್ತಾರೆ.

ಇನ್ನು ಮುಂದೆ ಅಂಬೇಡ್ಕರ್‌ರವರ ಬಹುಮುಖ್ಯವಾದ ದೊಡ್ಡ ಪುಸ್ತಕಗಳನ್ನು ಓದುವ ಯೋಜನೆ ಹಾಕಿಕೊಂಡಿದ್ದೇವೆ. ಹಿಂದೂ ಧರ್ಮದ ತತ್ವಜ್ಞಾನ ಎಂಬ 100 ಪುಟದ ಪುಸ್ತಕವನ್ನು 20 ಜನರು ಓದಲು ಹಂಚಿಕೊಂಡಿದ್ದೇವೆ. ಅಂಬೇಡ್ಕರ್‌ರವರ ಎಲ್ಲಾ ಬರಹಗಳನ್ನು ಇಲ್ಲಿ ತರಲು ಸಾಧ್ಯವಾಗದಿದ್ದರೂ ಅಂಬೇಡ್ಕರ್‌ರವರು ಬರೆದ, ಆಲೋಚಿಸಿದ ನೂರಾರು ಕ್ಷೇತ್ರಗಳ ಪ್ರಮುಖ ಭಾಗಗಳನ್ನು ಇಲ್ಲಿ ತರಲು ಉದ್ದೇಶಿಸಿದ್ದೇವೆ ಎಂದರು.

ಅಂಬೇಡ್ಕರ್ ಬರಹಗಳನ್ನು ಕೇಳಲು ಇರುವ ಅದ್ಭುತ ಜ್ಞಾನ ಭಂಡಾರವಾಗಿ ಈ ಅಂಬೇಡ್ಕರ್ ಓದು ಸರಣಿ ರೂಪುಗೊಂಡಿದೆ ಮತ್ತು ಮುಂದುವರೆಯುತ್ತಿದೆ. ನಿಮ್ಮ ಮೊಬೈಲ್‌ಗೆ ಒಂದು ಹೆಡ್‌ಫೋನ್ ಸಿಕ್ಕಿಸಿ ನಿಮ್ಮ ನಿಮ್ಮ ಕೆಲಸ ಮಾಡುತ್ತಲೇ ಅಂಬೇಡ್ಕರ್ ಚಿಂತನೆಗಳನ್ನು ಕೇಳಿಸಿಕೊಂಡು ಮನಸ್ಸಿಗೆ ಇಳಿಸಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ. ಮುಂದೆಯು ಕೇಳಲು ಚಾನೆಲ್ ಸಬ್‌ಸ್ಕ್ರೈಬ್‌ ಮಾಡಿ. ಅದೇ ರೀತಿಯಾಗಿ ನೀವು ಸಹ ಅಂಬೇಡ್ಕರ್ ಬರಹಗಳನ್ನು ಓದಿ ಸರಣಿಗೆ ಕೊಡುಗೆ ನೀಡಲು ಬಯಸಿದರೆ ಆಯೋಜಕರಾದ ಡಾ. ಅರುಣ್ ಜೋಳದ ಕೂಡ್ಲಿಗಿಯವರನ್ನು (9901445702) ಸಂಪರ್ಕಿಸಬಹುದು.


ಇದನ್ನೂ ಓದಿ: ಹಲವು ಧ್ವನಿಗಳಲ್ಲಿ ಅಂಬೇಡ್ಕರ್ ವಿಚಾರಗಳನ್ನು ಹಿಡಿದಿಡುತ್ತಿರುವ ಓದು ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...