Homeಚಳವಳಿ100 ಗಂಟೆ ಪೂರೈಸಿದ ಅಂಬೇಡ್ಕರ್ ಓದು ಸರಣಿ: ಅಂಬೇಡ್ಕರ್ ಬರಹಗಳನ್ನು ಕೇಳಲು ಇರುವ ಜ್ಞಾನ ಭಂಡಾರವಿದು

100 ಗಂಟೆ ಪೂರೈಸಿದ ಅಂಬೇಡ್ಕರ್ ಓದು ಸರಣಿ: ಅಂಬೇಡ್ಕರ್ ಬರಹಗಳನ್ನು ಕೇಳಲು ಇರುವ ಜ್ಞಾನ ಭಂಡಾರವಿದು

ಶೇ.50 ರಷ್ಟು ಮಹಿಳೆಯರು ಓದಿದ್ದಾರೆ. ಸುಮಾರು 6-7 ಲಕ್ಷ ಜನರು ಕೇಳಿಸಿಕೊಂಡಿದ್ದಾರೆ. ಹಲವರು ಮೊದಲ ಬಾರಿಗೆ ಅಂಬೇಡ್ಕರ್ ಬರಹಗಳನ್ನು ಓದಿದ್ದಾರೆ. ಇದು ಸರಣಿಯ ಯಶಸ್ಸು.

- Advertisement -
- Advertisement -

ಇಂದು ಬಾಬಾ ಸಾಹೇಬ್ ಭೀಮ್‌ರಾವ್ ಅಂಬೇಡ್ಕರ್‌ರವರ 131ನೇ ಜನ್ಮದಿನ. ಅಂಬೇಡ್ಕರ್ ನೆನಪಿನಲ್ಲಿ ಜಗತ್ತಿನಾದ್ಯಂತ ಸಮಾನತೆಯ ದಿನವನ್ನಾಗಿ ಇಂದು ಆಚರಿಸಲಾಗುತ್ತಿದೆ. ಅಂಬೇಡ್ಕರ್ ಬದುಕು, ಬರಹ ಹೋರಾಟದ ಕುರಿತು ಚರ್ಚೆ ನಡೆಸಲಾಗುತ್ತಿದೆ. ಇಂತಹ ಸಂದರ್ಭದಲ್ಲಿಯೇ ಅಂಬೇಡ್ಕರ್‌ರವರ ಮೂಲ ಬರಹಗಳನ್ನು ಕನ್ನಡದಲ್ಲಿ ಕೇಳುವ ವಿಶಿಷ್ಟ ಪ್ರಯತ್ನವಾದ ‘ಅಂಬೇಡ್ಕರ್ ಓದು ಸರಣಿಯು’ 100 ಗಂಟೆಗಳ ಕಾಲ ಪೂರೈಸಿ ಮುನ್ನಡೆಯುತ್ತಿದೆ. ಆ ಮೂಲಕ ಡಿಜಿಟಲ್ ಮಾಧ್ಯಮಗಳಲ್ಲಿಯೂ ಅಂಬೇಡ್ಕರ್ ವಿಚಾರಗಳು ಹರಿದಾಡುವಂತೆ ಮಾಡುವಲ್ಲಿ ಮಹತ್ವದ ಪಾತ್ರ ವಹಿಸಿದೆ.

ಜಾನಪದ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿರುವ ಡಾ. ಅರುಣ್ ಜೋಳದ ಕೂಡ್ಲಿಗಿಯವರು ಸೆಪ್ಟೆಂಬರ್ 7, 2020 ರಂದು ಆರಂಭಿಸಿದ ಈ ಅಂಬೇಡ್ಕರ್ ಓದು ಸರಣಿಯಲ್ಲಿ ಒಟ್ಟು 470 ಸಂಚಿಕೆಗಳು ಯೂಟ್ಯೂಬ್‌ನಲ್ಲಿ ಪ್ರಸಾರವಾಗಿವೆ. 321 ಜನ ಅಂಬೇಡ್ಕರ್‌ರವರ ಬರಹಗಳನ್ನು ಓದಿಕೊಂಡು ನಂತರ ಆಡಿಯೊ ಮಾಡಿ ಇನ್ನಿತರರು ಕೇಳುವಂತೆ ಮಾಡಿದ್ದಾರೆ. ಅದರಲ್ಲಿ 155 ಮಹಿಳೆಯರು ಸಹ ಸಹಭಾಗಿಗಳಾಗಿರುವುದು ವಿಶೇಷವಾಗಿದೆ.

Arun jolad Kudligi ಯೂಟ್ಯೂಬ್ ಚಾನೆಲ್‌ನಲ್ಲಿ ಈ ಎಲ್ಲಾ 470 ಸಂಚಿಕೆಗಳನ್ನು ಯಾರೂ ಬೇಕಾದರೂ ಉಚಿತವಾಗಿ ಕೇಳಬಹುದಾಗಿದೆ. ಅಂಬೇಡ್ಕರ್‌ರವರು ಬರೆದಿರುವ ‘ಹಿಂದೂ ಧರ್ಮದ ತತ್ವಜ್ಞಾನ, ಬುದ್ಧ ಮತ್ತು ಆತನ ಧಮ್ಮ, ಸ್ಟೇಟ್ಸ್ ಅಂಡ್ ಮೈನಾರೀಟಿಸ್’ ಸೇರಿದಂತೆ ಹಲವಾರು ಪುಸ್ತಕಗಳ ಪ್ರಮುಖ ಭಾಗಗಳನ್ನು ಆಡಿಯೋ ಮಾಡುವ ಮೂಲಕ “ಅಂಬೇಡ್ಕರ್ ಕೇಳು” ಎಂಬುದಾಗಿ ಈ ಅಭಿಯಾನ ನಡೆಯುತ್ತಿದೆ. ಅಲ್ಲದೆ ಈ ಸರಣಿಯಲ್ಲಿ ಅಂಬೇಡ್ಕರ್‌ರವರ ಲೇಖನಗಳು- ಬರಹಗಳು, ಪತ್ರಿಕಾ ಹೇಳಿಕೆಗಳು, ಭಾಷಣಗಳು, ಟಿಪ್ಪಣಿಗಳು ಮತ್ತು ಪತ್ರಗಳು ಸಹ ಇದ್ದು, ಅಂಬೇಡ್ಕರ್‌ರವರ ನಿಲುವುಗಳನ್ನು ಅರ್ಥ ಮಾಡಿಕೊಳ್ಳಲು ಸಹಾಯ ಮಾಡುತ್ತವೆ.

“ಇಂದು ಹೆಚ್ಚಿನ ಜನರು ತಮ್ಮ ಹೆಚ್ಚಿನ ಸಮಯವನ್ನು ಡಿಜಿಟಲ್ ಸ್ಪೇಸ್‌ಗಳಲ್ಲಿ ವ್ಯಯಿಸುತ್ತಿದ್ದಾರೆ. ಅಲ್ಲಿಯೂ ಸಹ ಅಂಬೇಡ್ಕರ್‌ ಬರಹಗಳು ಕೇಳಲು, ಓದಲು ಸಿಗುವಂತೆ ಮಾಡಬೇಕು ಎಂಬ ಉದ್ದೇಶದಿಂದ ಈ ಸರಣಿ ಆರಂಭಿಸಿದೆವು. ಎಲ್ಲರ ಅಂಬೇಡ್ಕರ್ ಎನ್ನುವ ತತ್ವದಡಿ ಸಹಭಾಗಿತ್ವದ ಒಳಗೊಳ್ಳುವಿಕೆಯ ಮೂಲಕ ಇದು ಯಶಸ್ಸು ಗಳಿಸಿದೆ. ಹಾಗಾಗಿ ಇದು ಎಲ್ಲರ ಸಹಭಾಗಿತ್ವದ ಗೆಲುವು ಎಂದು ಕರೆಯಬಹುದು” ಎನ್ನುತ್ತಾರೆ ಸರಣಿಯನ್ನು ಆರಂಭಿಸಿದ ಅರುಣ್ ಜೋಳದ ಕೂಡ್ಲಿಗಿಯವರು.

ಶೇ.50 ರಷ್ಟು ಮಹಿಳೆಯರು ಈ ಅಭಿಯಾನದ ಭಾಗವಾಗಿದ್ದಾರೆ. ಸುಮಾರು 6-7 ಲಕ್ಷ ಜನರು ಈ ಬರಹಗಳನ್ನು ಕೇಳಿಸಿಕೊಂಡಿದ್ದಾರೆ. ಇದುವರೆಗೂ ಅಂಬೇಡ್ಕರ್ ಬರಹಗಳನ್ನು ಓದಲು ಸಾಧ್ಯವಾಗದಿದ್ದವರು ಈ ಸರಣಿ ಆರಂಭವಾದ ನಂತರ ಮೊದಲ ಬಾರಿಗೆ ಅಂಬೇಡ್ಕರ್ ಬರಹಗಳನ್ನು ಓದಿದ್ದಾರೆ. ಅಂಬೇಡ್ಕರ್ ಚಿಂತನೆಗೆ ಪ್ರವೇಶ ಮಾಡಲಾಗದಿರುವವರನ್ನು ಗುರುತಿಸಿ ಒಳಗೊಳ್ಳುತ್ತಿದ್ದೇವೆ, ಇದೆಲ್ಲವೂ ಈ ಸರಣಿಯ ಸಾಧನೆ ಎಂದು ಅವರು ಹೇಳುತ್ತಾರೆ.

ಇನ್ನು ಮುಂದೆ ಅಂಬೇಡ್ಕರ್‌ರವರ ಬಹುಮುಖ್ಯವಾದ ದೊಡ್ಡ ಪುಸ್ತಕಗಳನ್ನು ಓದುವ ಯೋಜನೆ ಹಾಕಿಕೊಂಡಿದ್ದೇವೆ. ಹಿಂದೂ ಧರ್ಮದ ತತ್ವಜ್ಞಾನ ಎಂಬ 100 ಪುಟದ ಪುಸ್ತಕವನ್ನು 20 ಜನರು ಓದಲು ಹಂಚಿಕೊಂಡಿದ್ದೇವೆ. ಅಂಬೇಡ್ಕರ್‌ರವರ ಎಲ್ಲಾ ಬರಹಗಳನ್ನು ಇಲ್ಲಿ ತರಲು ಸಾಧ್ಯವಾಗದಿದ್ದರೂ ಅಂಬೇಡ್ಕರ್‌ರವರು ಬರೆದ, ಆಲೋಚಿಸಿದ ನೂರಾರು ಕ್ಷೇತ್ರಗಳ ಪ್ರಮುಖ ಭಾಗಗಳನ್ನು ಇಲ್ಲಿ ತರಲು ಉದ್ದೇಶಿಸಿದ್ದೇವೆ ಎಂದರು.

ಅಂಬೇಡ್ಕರ್ ಬರಹಗಳನ್ನು ಕೇಳಲು ಇರುವ ಅದ್ಭುತ ಜ್ಞಾನ ಭಂಡಾರವಾಗಿ ಈ ಅಂಬೇಡ್ಕರ್ ಓದು ಸರಣಿ ರೂಪುಗೊಂಡಿದೆ ಮತ್ತು ಮುಂದುವರೆಯುತ್ತಿದೆ. ನಿಮ್ಮ ಮೊಬೈಲ್‌ಗೆ ಒಂದು ಹೆಡ್‌ಫೋನ್ ಸಿಕ್ಕಿಸಿ ನಿಮ್ಮ ನಿಮ್ಮ ಕೆಲಸ ಮಾಡುತ್ತಲೇ ಅಂಬೇಡ್ಕರ್ ಚಿಂತನೆಗಳನ್ನು ಕೇಳಿಸಿಕೊಂಡು ಮನಸ್ಸಿಗೆ ಇಳಿಸಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ. ಮುಂದೆಯು ಕೇಳಲು ಚಾನೆಲ್ ಸಬ್‌ಸ್ಕ್ರೈಬ್‌ ಮಾಡಿ. ಅದೇ ರೀತಿಯಾಗಿ ನೀವು ಸಹ ಅಂಬೇಡ್ಕರ್ ಬರಹಗಳನ್ನು ಓದಿ ಸರಣಿಗೆ ಕೊಡುಗೆ ನೀಡಲು ಬಯಸಿದರೆ ಆಯೋಜಕರಾದ ಡಾ. ಅರುಣ್ ಜೋಳದ ಕೂಡ್ಲಿಗಿಯವರನ್ನು (9901445702) ಸಂಪರ್ಕಿಸಬಹುದು.


ಇದನ್ನೂ ಓದಿ: ಹಲವು ಧ್ವನಿಗಳಲ್ಲಿ ಅಂಬೇಡ್ಕರ್ ವಿಚಾರಗಳನ್ನು ಹಿಡಿದಿಡುತ್ತಿರುವ ಓದು ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...