Homeಚಳವಳಿ100 ಗಂಟೆ ಪೂರೈಸಿದ ಅಂಬೇಡ್ಕರ್ ಓದು ಸರಣಿ: ಅಂಬೇಡ್ಕರ್ ಬರಹಗಳನ್ನು ಕೇಳಲು ಇರುವ ಜ್ಞಾನ ಭಂಡಾರವಿದು

100 ಗಂಟೆ ಪೂರೈಸಿದ ಅಂಬೇಡ್ಕರ್ ಓದು ಸರಣಿ: ಅಂಬೇಡ್ಕರ್ ಬರಹಗಳನ್ನು ಕೇಳಲು ಇರುವ ಜ್ಞಾನ ಭಂಡಾರವಿದು

ಶೇ.50 ರಷ್ಟು ಮಹಿಳೆಯರು ಓದಿದ್ದಾರೆ. ಸುಮಾರು 6-7 ಲಕ್ಷ ಜನರು ಕೇಳಿಸಿಕೊಂಡಿದ್ದಾರೆ. ಹಲವರು ಮೊದಲ ಬಾರಿಗೆ ಅಂಬೇಡ್ಕರ್ ಬರಹಗಳನ್ನು ಓದಿದ್ದಾರೆ. ಇದು ಸರಣಿಯ ಯಶಸ್ಸು.

- Advertisement -
- Advertisement -

ಇಂದು ಬಾಬಾ ಸಾಹೇಬ್ ಭೀಮ್‌ರಾವ್ ಅಂಬೇಡ್ಕರ್‌ರವರ 131ನೇ ಜನ್ಮದಿನ. ಅಂಬೇಡ್ಕರ್ ನೆನಪಿನಲ್ಲಿ ಜಗತ್ತಿನಾದ್ಯಂತ ಸಮಾನತೆಯ ದಿನವನ್ನಾಗಿ ಇಂದು ಆಚರಿಸಲಾಗುತ್ತಿದೆ. ಅಂಬೇಡ್ಕರ್ ಬದುಕು, ಬರಹ ಹೋರಾಟದ ಕುರಿತು ಚರ್ಚೆ ನಡೆಸಲಾಗುತ್ತಿದೆ. ಇಂತಹ ಸಂದರ್ಭದಲ್ಲಿಯೇ ಅಂಬೇಡ್ಕರ್‌ರವರ ಮೂಲ ಬರಹಗಳನ್ನು ಕನ್ನಡದಲ್ಲಿ ಕೇಳುವ ವಿಶಿಷ್ಟ ಪ್ರಯತ್ನವಾದ ‘ಅಂಬೇಡ್ಕರ್ ಓದು ಸರಣಿಯು’ 100 ಗಂಟೆಗಳ ಕಾಲ ಪೂರೈಸಿ ಮುನ್ನಡೆಯುತ್ತಿದೆ. ಆ ಮೂಲಕ ಡಿಜಿಟಲ್ ಮಾಧ್ಯಮಗಳಲ್ಲಿಯೂ ಅಂಬೇಡ್ಕರ್ ವಿಚಾರಗಳು ಹರಿದಾಡುವಂತೆ ಮಾಡುವಲ್ಲಿ ಮಹತ್ವದ ಪಾತ್ರ ವಹಿಸಿದೆ.

ಜಾನಪದ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿರುವ ಡಾ. ಅರುಣ್ ಜೋಳದ ಕೂಡ್ಲಿಗಿಯವರು ಸೆಪ್ಟೆಂಬರ್ 7, 2020 ರಂದು ಆರಂಭಿಸಿದ ಈ ಅಂಬೇಡ್ಕರ್ ಓದು ಸರಣಿಯಲ್ಲಿ ಒಟ್ಟು 470 ಸಂಚಿಕೆಗಳು ಯೂಟ್ಯೂಬ್‌ನಲ್ಲಿ ಪ್ರಸಾರವಾಗಿವೆ. 321 ಜನ ಅಂಬೇಡ್ಕರ್‌ರವರ ಬರಹಗಳನ್ನು ಓದಿಕೊಂಡು ನಂತರ ಆಡಿಯೊ ಮಾಡಿ ಇನ್ನಿತರರು ಕೇಳುವಂತೆ ಮಾಡಿದ್ದಾರೆ. ಅದರಲ್ಲಿ 155 ಮಹಿಳೆಯರು ಸಹ ಸಹಭಾಗಿಗಳಾಗಿರುವುದು ವಿಶೇಷವಾಗಿದೆ.

Arun jolad Kudligi ಯೂಟ್ಯೂಬ್ ಚಾನೆಲ್‌ನಲ್ಲಿ ಈ ಎಲ್ಲಾ 470 ಸಂಚಿಕೆಗಳನ್ನು ಯಾರೂ ಬೇಕಾದರೂ ಉಚಿತವಾಗಿ ಕೇಳಬಹುದಾಗಿದೆ. ಅಂಬೇಡ್ಕರ್‌ರವರು ಬರೆದಿರುವ ‘ಹಿಂದೂ ಧರ್ಮದ ತತ್ವಜ್ಞಾನ, ಬುದ್ಧ ಮತ್ತು ಆತನ ಧಮ್ಮ, ಸ್ಟೇಟ್ಸ್ ಅಂಡ್ ಮೈನಾರೀಟಿಸ್’ ಸೇರಿದಂತೆ ಹಲವಾರು ಪುಸ್ತಕಗಳ ಪ್ರಮುಖ ಭಾಗಗಳನ್ನು ಆಡಿಯೋ ಮಾಡುವ ಮೂಲಕ “ಅಂಬೇಡ್ಕರ್ ಕೇಳು” ಎಂಬುದಾಗಿ ಈ ಅಭಿಯಾನ ನಡೆಯುತ್ತಿದೆ. ಅಲ್ಲದೆ ಈ ಸರಣಿಯಲ್ಲಿ ಅಂಬೇಡ್ಕರ್‌ರವರ ಲೇಖನಗಳು- ಬರಹಗಳು, ಪತ್ರಿಕಾ ಹೇಳಿಕೆಗಳು, ಭಾಷಣಗಳು, ಟಿಪ್ಪಣಿಗಳು ಮತ್ತು ಪತ್ರಗಳು ಸಹ ಇದ್ದು, ಅಂಬೇಡ್ಕರ್‌ರವರ ನಿಲುವುಗಳನ್ನು ಅರ್ಥ ಮಾಡಿಕೊಳ್ಳಲು ಸಹಾಯ ಮಾಡುತ್ತವೆ.

“ಇಂದು ಹೆಚ್ಚಿನ ಜನರು ತಮ್ಮ ಹೆಚ್ಚಿನ ಸಮಯವನ್ನು ಡಿಜಿಟಲ್ ಸ್ಪೇಸ್‌ಗಳಲ್ಲಿ ವ್ಯಯಿಸುತ್ತಿದ್ದಾರೆ. ಅಲ್ಲಿಯೂ ಸಹ ಅಂಬೇಡ್ಕರ್‌ ಬರಹಗಳು ಕೇಳಲು, ಓದಲು ಸಿಗುವಂತೆ ಮಾಡಬೇಕು ಎಂಬ ಉದ್ದೇಶದಿಂದ ಈ ಸರಣಿ ಆರಂಭಿಸಿದೆವು. ಎಲ್ಲರ ಅಂಬೇಡ್ಕರ್ ಎನ್ನುವ ತತ್ವದಡಿ ಸಹಭಾಗಿತ್ವದ ಒಳಗೊಳ್ಳುವಿಕೆಯ ಮೂಲಕ ಇದು ಯಶಸ್ಸು ಗಳಿಸಿದೆ. ಹಾಗಾಗಿ ಇದು ಎಲ್ಲರ ಸಹಭಾಗಿತ್ವದ ಗೆಲುವು ಎಂದು ಕರೆಯಬಹುದು” ಎನ್ನುತ್ತಾರೆ ಸರಣಿಯನ್ನು ಆರಂಭಿಸಿದ ಅರುಣ್ ಜೋಳದ ಕೂಡ್ಲಿಗಿಯವರು.

ಶೇ.50 ರಷ್ಟು ಮಹಿಳೆಯರು ಈ ಅಭಿಯಾನದ ಭಾಗವಾಗಿದ್ದಾರೆ. ಸುಮಾರು 6-7 ಲಕ್ಷ ಜನರು ಈ ಬರಹಗಳನ್ನು ಕೇಳಿಸಿಕೊಂಡಿದ್ದಾರೆ. ಇದುವರೆಗೂ ಅಂಬೇಡ್ಕರ್ ಬರಹಗಳನ್ನು ಓದಲು ಸಾಧ್ಯವಾಗದಿದ್ದವರು ಈ ಸರಣಿ ಆರಂಭವಾದ ನಂತರ ಮೊದಲ ಬಾರಿಗೆ ಅಂಬೇಡ್ಕರ್ ಬರಹಗಳನ್ನು ಓದಿದ್ದಾರೆ. ಅಂಬೇಡ್ಕರ್ ಚಿಂತನೆಗೆ ಪ್ರವೇಶ ಮಾಡಲಾಗದಿರುವವರನ್ನು ಗುರುತಿಸಿ ಒಳಗೊಳ್ಳುತ್ತಿದ್ದೇವೆ, ಇದೆಲ್ಲವೂ ಈ ಸರಣಿಯ ಸಾಧನೆ ಎಂದು ಅವರು ಹೇಳುತ್ತಾರೆ.

ಇನ್ನು ಮುಂದೆ ಅಂಬೇಡ್ಕರ್‌ರವರ ಬಹುಮುಖ್ಯವಾದ ದೊಡ್ಡ ಪುಸ್ತಕಗಳನ್ನು ಓದುವ ಯೋಜನೆ ಹಾಕಿಕೊಂಡಿದ್ದೇವೆ. ಹಿಂದೂ ಧರ್ಮದ ತತ್ವಜ್ಞಾನ ಎಂಬ 100 ಪುಟದ ಪುಸ್ತಕವನ್ನು 20 ಜನರು ಓದಲು ಹಂಚಿಕೊಂಡಿದ್ದೇವೆ. ಅಂಬೇಡ್ಕರ್‌ರವರ ಎಲ್ಲಾ ಬರಹಗಳನ್ನು ಇಲ್ಲಿ ತರಲು ಸಾಧ್ಯವಾಗದಿದ್ದರೂ ಅಂಬೇಡ್ಕರ್‌ರವರು ಬರೆದ, ಆಲೋಚಿಸಿದ ನೂರಾರು ಕ್ಷೇತ್ರಗಳ ಪ್ರಮುಖ ಭಾಗಗಳನ್ನು ಇಲ್ಲಿ ತರಲು ಉದ್ದೇಶಿಸಿದ್ದೇವೆ ಎಂದರು.

ಅಂಬೇಡ್ಕರ್ ಬರಹಗಳನ್ನು ಕೇಳಲು ಇರುವ ಅದ್ಭುತ ಜ್ಞಾನ ಭಂಡಾರವಾಗಿ ಈ ಅಂಬೇಡ್ಕರ್ ಓದು ಸರಣಿ ರೂಪುಗೊಂಡಿದೆ ಮತ್ತು ಮುಂದುವರೆಯುತ್ತಿದೆ. ನಿಮ್ಮ ಮೊಬೈಲ್‌ಗೆ ಒಂದು ಹೆಡ್‌ಫೋನ್ ಸಿಕ್ಕಿಸಿ ನಿಮ್ಮ ನಿಮ್ಮ ಕೆಲಸ ಮಾಡುತ್ತಲೇ ಅಂಬೇಡ್ಕರ್ ಚಿಂತನೆಗಳನ್ನು ಕೇಳಿಸಿಕೊಂಡು ಮನಸ್ಸಿಗೆ ಇಳಿಸಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ. ಮುಂದೆಯು ಕೇಳಲು ಚಾನೆಲ್ ಸಬ್‌ಸ್ಕ್ರೈಬ್‌ ಮಾಡಿ. ಅದೇ ರೀತಿಯಾಗಿ ನೀವು ಸಹ ಅಂಬೇಡ್ಕರ್ ಬರಹಗಳನ್ನು ಓದಿ ಸರಣಿಗೆ ಕೊಡುಗೆ ನೀಡಲು ಬಯಸಿದರೆ ಆಯೋಜಕರಾದ ಡಾ. ಅರುಣ್ ಜೋಳದ ಕೂಡ್ಲಿಗಿಯವರನ್ನು (9901445702) ಸಂಪರ್ಕಿಸಬಹುದು.


ಇದನ್ನೂ ಓದಿ: ಹಲವು ಧ್ವನಿಗಳಲ್ಲಿ ಅಂಬೇಡ್ಕರ್ ವಿಚಾರಗಳನ್ನು ಹಿಡಿದಿಡುತ್ತಿರುವ ಓದು ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...